Homeಮುಖಪುಟಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

ಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

- Advertisement -
- Advertisement -

ಅಕ್ಟೋಬರ್‌ 7ರಂದು ಇಸ್ರೇಲ್‌-ಹಮಾಸ್ ನಡುವೆ ಸಂಘರ್ಷ ಪ್ರಾರಂಭವಾದಾಗಿನಿಂದ ಇದುವರೆಗೆ (ಡಿ.26) ಯುಎಸ್ 230 ಸರಕು ವಿಮಾನಗಳು ಮತ್ತು 20 ಹಡಗುಗಳಲ್ಲಿ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಉಪಕರಣಗಳನ್ನು ಕಳುಹಿಸಿಕೊಟ್ಟಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮ ವರದಿಗಳು ತಿಳಿಸಿವೆ.

ಯುಎಸ್ ಮಿಲಿಟರಿ ನೆರವು ಫಿರಂಗಿ ಶೆಲ್‌ಗಳು, ಶಸ್ತ್ರಸಜ್ಜಿತ ವಾಹನಗಳು ಮತ್ತು ಸೈನಿಕರಿಗೆ ಬೇಕಾದ ಮೂಲಭೂತ ಯುದ್ಧ ಸಾಧನಗಳನ್ನು ಒಳಗೊಂಡಿತ್ತು ಎಂದು ಇಸ್ರೇಲ್ ಮೂಲದ ಯೆಡಿಯಟ್ ಅಹ್ರೊನೊತ್ ಪತ್ರಿಕೆ ವರದಿ ಮಾಡಿದೆ.

ಇಸ್ರೇಲ್‌ನ ರಕ್ಷಣಾ ಸಚಿವಾಲಯವು ಗಾಝಾ ಪಟ್ಟಿಯ ಮೇಲಿನ ಪ್ರಸ್ತುತ ಯುದ್ಧದ ವೆಚ್ಚವನ್ನು ಸುಮಾರು 65 ಶತಕೋಟಿ ಶೆಕೆಲ್‌ಗಳು ($17 ಶತಕೋಟಿ) ಎಂದು ಅಂದಾಜಿಸಿದೆ.

ಯುದ್ದದ ಆರಂಭದಲ್ಲಿ ಇಸ್ರೇಲ್ ತನ್ನ ಗೋದಾಮಿನಲ್ಲಿ ಶೇಖರಿಸಿಟ್ಟ ಯುದ್ದ ಸಾಮಾಗ್ರಿಗಳು, ಮದ್ದು ಗುಂಡುಗಳನ್ನು ಬಳಸಿತ್ತು. ಅದನ್ನು ತುಂಬಿಸುವ ಸಲುವಾಗಿ ಯುಎಸ್‌ನ ನೆರವು ಪಡೆದುಕೊಂಡಿದೆ. ಲೆಬಾನಾನಿನ ಹಿಝ್ಬುಲ್ಲಾ ಗುಂಪಿನ ಜೊತೆ ಯುದ್ಧ ನಡೆಯುವ ಸಾಧ್ಯತೆಗಳು ಇರುವ ಹಿನ್ನೆಲೆ, ಇಸ್ರೇಲ್ ತನ್ನ ಸೇನಾ ಗೋದಾಮನ್ನು ತುಂಬಿಸುತ್ತಿದೆ ಎಂದು ಯೆಡಿಯಟ್ ಅಹ್ರೊನೊತ್ ವರದಿ ಹೇಳಿದೆ.

ಅಂದರೆ, ಇಸ್ರೇಲ್‌ನ ರಕ್ತದಾಹ ಇನ್ನೂ ನೀಗಿಲ್ಲ. ಹಮಾಸ್‌ನಂತೆ ಹಿಝ್ಬುಲ್ಲಾದ ಹೆಸರೇಳಿಕೊಂಡು ಲೆಬಾನಾನಿನ ಮಣ್ಣಿನಲ್ಲಿ ರಕ್ತ ಹರಿಸುವ ಉತ್ಸಾಹದಲ್ಲಿದೆ ಎಂಬುವುದು ಇದರಿಂದ ಖಾತ್ರಿಯಾಗುತ್ತಿದೆ.

ಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದಾಗಿನಿಂದ ಯುಎಸ್ ಇಸ್ರೇಲ್ ಪರವಾಗಿ ನಿಂತಿದೆ. ಹಮಾಸ್‌ ಅನ್ನು ಭಯೋತ್ಪಾದಕ ಸಂಘಟನೆ ಎಂದು ಪರಿಗಣಿಸಿರುವ ಯುಎಸ್, ಅದನ್ನು ನಿರ್ಣಾಮ ಮಾಡಲು ಹೊರಟಿರುವ ಇಸ್ರೇಲ್‌ಗೆ ನಮ್ಮ ಬೆಂಬಲ ಎಂದು ಹೇಳಿಕೊಳ್ಳುತ್ತಿದೆ.

ವರದಿಗಳನ್ನು ಗಮನಿಸಿದರೆ, ಇದುವರೆಗೆ 8 ಸಾವಿರ ಹಮಾಸ್ ಸದಸ್ಯರನ್ನು ಹತ್ಯೆಗೈದಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಈ ನಡುವೆ ಇಸ್ರೇಲ್ ದಾಳಿಗೆ ಬಲಿಯಾದ ಗಾಝಾದ ಅಮಾಯಕ ನಾಗರಿಕರ ಸಂಖ್ಯೆ 20 ಸಾವಿರ ದಾಟಿದೆ.

ನಾವು ಹಮಾಸ್ ಭಯೋತ್ಪಾದಕರನ್ನು ನಿರ್ಣಾಮ ಮಾಡಲು ಇಸ್ರೇಲ್‌ಗೆ ಸಹಾಯ ಮಾಡಿದ್ದೇವೆ ಎಂದು ಹೇಳಿಕೊಳ್ಳುವ ಯುಎಸ್‌, ಮೇಲೆ ತಿಳಿಸಿದ ಪುಟ್ಟ ಕಂದಮ್ಮಗಳೂ ಸೇರಿದಂತೆ 20 ಸಾವಿರಕ್ಕಿಂತಲೂ ಅಧಿಕ ಅಮಾಯಕ ನಾಗರಿಕರ ರಕ್ತವನ್ನು ತನ್ನ ಕೈಯಲ್ಲಿ ಮೆತ್ತಿಕೊಂಡಿದೆ.

ಶಾಂತಿಗೆ ದೊಡ್ಡಣ್ಣನ ಸ್ಥಾನದಲ್ಲಿ ನಿಂತು ಪಾಠ ಮಾಡುವ ಯುಎಸ್‌ನಲ್ಲಿ, ಜನಾಂಗೀಯ ದ್ವೇಷ ಹರಡುವ ಡೊನಾಲ್ಡ್ ಟ್ರಂಪ್‌ನ ಆಡಳಿತ ಹೋಗಿ ಜೋ ಬೈಡೆನ್‌ ಅಧ್ಯಕ್ಷಗಾದಿಗೆ ಏರಿದಾಗ ಇಡೀ ಮಾನವ ಜಗತ್ತು ಖುಷಿ ಪಟ್ಟಿತ್ತು. ಆರಂಭದಲ್ಲಿ ಮಾಧ್ಯಮಗಳ ಮುಂದೆ ಮುಸ್ಲಿಂ ಮಕ್ಕಳನ್ನು ಮುದ್ದಿಸಿ ಜೋ ಬೈಡೆನ್ ಭರವಸೆ ಮೂಡಿಸಿದ್ದರು. ಆದರೆ, ಗಾಝಾದಲ್ಲಿ ಸಾವಿರಾರು ಕಂದಮ್ಮಗಳು ಇದೇ ಬೈಡೆನ್ ಆಡಳಿತ ನೆರವಿನಿಂದ ಬಲಿಯಾಗಿವೆ, ಆಗುತ್ತಿವೆ ಎಂಬುವುದು ದುಖಃದ ಸಂಗತಿ.

ಇಸ್ರೇಲಿ ಮಿಲಿಟರಿ ಅಂಕಿ ಅಂಶಗಳ ಪ್ರಕಾರ, ಅಕ್ಟೋಬರ್ 7 ರಿಂದ ಗಾಝಾ ಪಟ್ಟಿಯ ನಡೆದ ಘರ್ಷಣೆಯಲ್ಲಿ ಕನಿಷ್ಠ 489 ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯಲ್ಲಿ 1,200 ಇಸ್ರೇಲಿಗಳು ಸಾವನ್ನಪ್ಪಿದ್ದಾರೆ.

ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ನಿರಂತರ ದಾಳಿಯಿಂದ ಇದುವರೆಗೆ 20,674 ಪ್ಯಾಲೆಸ್ತೀನಿಯರು ಬಲಿಯಾಗಿದ್ದಾರೆ ಮತ್ತು 54,536 ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಇಸ್ರೇಲ್‌ ದಾಳಿಯಿಂದ ಸುಂದರ ಗಾಝಾ ಪಾಳುಬಿದ್ದಿದೆ. ಇಲ್ಲಿನ ಕರಾವಳಿ ಪ್ರದೇಶದ ಅರ್ಧದಷ್ಟು ವಸತಿ ಕಟ್ಟಡಗಳು ಹಾನಿಗೊಳಗಾಗಿವೆ ಅಥವಾ ನಾಶವಾಗಿವೆ. ಆಹಾರ ಮತ್ತು ಶುದ್ಧ ನೀರಿನ ಕೊರತೆಯ ನಡುವೆ ಸುಮಾರು 2 ಮಿಲಿಯನ್ ಜನರು ಜನನಿಬಿಡ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಇದನ್ನೂ ಓದಿ : ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...