Homeಮುಖಪುಟಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

ಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

- Advertisement -
- Advertisement -

ಅಕ್ಟೋಬರ್‌ 7ರಂದು ಇಸ್ರೇಲ್‌-ಹಮಾಸ್ ನಡುವೆ ಸಂಘರ್ಷ ಪ್ರಾರಂಭವಾದಾಗಿನಿಂದ ಇದುವರೆಗೆ (ಡಿ.26) ಯುಎಸ್ 230 ಸರಕು ವಿಮಾನಗಳು ಮತ್ತು 20 ಹಡಗುಗಳಲ್ಲಿ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಉಪಕರಣಗಳನ್ನು ಕಳುಹಿಸಿಕೊಟ್ಟಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮ ವರದಿಗಳು ತಿಳಿಸಿವೆ.

ಯುಎಸ್ ಮಿಲಿಟರಿ ನೆರವು ಫಿರಂಗಿ ಶೆಲ್‌ಗಳು, ಶಸ್ತ್ರಸಜ್ಜಿತ ವಾಹನಗಳು ಮತ್ತು ಸೈನಿಕರಿಗೆ ಬೇಕಾದ ಮೂಲಭೂತ ಯುದ್ಧ ಸಾಧನಗಳನ್ನು ಒಳಗೊಂಡಿತ್ತು ಎಂದು ಇಸ್ರೇಲ್ ಮೂಲದ ಯೆಡಿಯಟ್ ಅಹ್ರೊನೊತ್ ಪತ್ರಿಕೆ ವರದಿ ಮಾಡಿದೆ.

ಇಸ್ರೇಲ್‌ನ ರಕ್ಷಣಾ ಸಚಿವಾಲಯವು ಗಾಝಾ ಪಟ್ಟಿಯ ಮೇಲಿನ ಪ್ರಸ್ತುತ ಯುದ್ಧದ ವೆಚ್ಚವನ್ನು ಸುಮಾರು 65 ಶತಕೋಟಿ ಶೆಕೆಲ್‌ಗಳು ($17 ಶತಕೋಟಿ) ಎಂದು ಅಂದಾಜಿಸಿದೆ.

ಯುದ್ದದ ಆರಂಭದಲ್ಲಿ ಇಸ್ರೇಲ್ ತನ್ನ ಗೋದಾಮಿನಲ್ಲಿ ಶೇಖರಿಸಿಟ್ಟ ಯುದ್ದ ಸಾಮಾಗ್ರಿಗಳು, ಮದ್ದು ಗುಂಡುಗಳನ್ನು ಬಳಸಿತ್ತು. ಅದನ್ನು ತುಂಬಿಸುವ ಸಲುವಾಗಿ ಯುಎಸ್‌ನ ನೆರವು ಪಡೆದುಕೊಂಡಿದೆ. ಲೆಬಾನಾನಿನ ಹಿಝ್ಬುಲ್ಲಾ ಗುಂಪಿನ ಜೊತೆ ಯುದ್ಧ ನಡೆಯುವ ಸಾಧ್ಯತೆಗಳು ಇರುವ ಹಿನ್ನೆಲೆ, ಇಸ್ರೇಲ್ ತನ್ನ ಸೇನಾ ಗೋದಾಮನ್ನು ತುಂಬಿಸುತ್ತಿದೆ ಎಂದು ಯೆಡಿಯಟ್ ಅಹ್ರೊನೊತ್ ವರದಿ ಹೇಳಿದೆ.

ಅಂದರೆ, ಇಸ್ರೇಲ್‌ನ ರಕ್ತದಾಹ ಇನ್ನೂ ನೀಗಿಲ್ಲ. ಹಮಾಸ್‌ನಂತೆ ಹಿಝ್ಬುಲ್ಲಾದ ಹೆಸರೇಳಿಕೊಂಡು ಲೆಬಾನಾನಿನ ಮಣ್ಣಿನಲ್ಲಿ ರಕ್ತ ಹರಿಸುವ ಉತ್ಸಾಹದಲ್ಲಿದೆ ಎಂಬುವುದು ಇದರಿಂದ ಖಾತ್ರಿಯಾಗುತ್ತಿದೆ.

ಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದಾಗಿನಿಂದ ಯುಎಸ್ ಇಸ್ರೇಲ್ ಪರವಾಗಿ ನಿಂತಿದೆ. ಹಮಾಸ್‌ ಅನ್ನು ಭಯೋತ್ಪಾದಕ ಸಂಘಟನೆ ಎಂದು ಪರಿಗಣಿಸಿರುವ ಯುಎಸ್, ಅದನ್ನು ನಿರ್ಣಾಮ ಮಾಡಲು ಹೊರಟಿರುವ ಇಸ್ರೇಲ್‌ಗೆ ನಮ್ಮ ಬೆಂಬಲ ಎಂದು ಹೇಳಿಕೊಳ್ಳುತ್ತಿದೆ.

ವರದಿಗಳನ್ನು ಗಮನಿಸಿದರೆ, ಇದುವರೆಗೆ 8 ಸಾವಿರ ಹಮಾಸ್ ಸದಸ್ಯರನ್ನು ಹತ್ಯೆಗೈದಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಈ ನಡುವೆ ಇಸ್ರೇಲ್ ದಾಳಿಗೆ ಬಲಿಯಾದ ಗಾಝಾದ ಅಮಾಯಕ ನಾಗರಿಕರ ಸಂಖ್ಯೆ 20 ಸಾವಿರ ದಾಟಿದೆ.

ನಾವು ಹಮಾಸ್ ಭಯೋತ್ಪಾದಕರನ್ನು ನಿರ್ಣಾಮ ಮಾಡಲು ಇಸ್ರೇಲ್‌ಗೆ ಸಹಾಯ ಮಾಡಿದ್ದೇವೆ ಎಂದು ಹೇಳಿಕೊಳ್ಳುವ ಯುಎಸ್‌, ಮೇಲೆ ತಿಳಿಸಿದ ಪುಟ್ಟ ಕಂದಮ್ಮಗಳೂ ಸೇರಿದಂತೆ 20 ಸಾವಿರಕ್ಕಿಂತಲೂ ಅಧಿಕ ಅಮಾಯಕ ನಾಗರಿಕರ ರಕ್ತವನ್ನು ತನ್ನ ಕೈಯಲ್ಲಿ ಮೆತ್ತಿಕೊಂಡಿದೆ.

ಶಾಂತಿಗೆ ದೊಡ್ಡಣ್ಣನ ಸ್ಥಾನದಲ್ಲಿ ನಿಂತು ಪಾಠ ಮಾಡುವ ಯುಎಸ್‌ನಲ್ಲಿ, ಜನಾಂಗೀಯ ದ್ವೇಷ ಹರಡುವ ಡೊನಾಲ್ಡ್ ಟ್ರಂಪ್‌ನ ಆಡಳಿತ ಹೋಗಿ ಜೋ ಬೈಡೆನ್‌ ಅಧ್ಯಕ್ಷಗಾದಿಗೆ ಏರಿದಾಗ ಇಡೀ ಮಾನವ ಜಗತ್ತು ಖುಷಿ ಪಟ್ಟಿತ್ತು. ಆರಂಭದಲ್ಲಿ ಮಾಧ್ಯಮಗಳ ಮುಂದೆ ಮುಸ್ಲಿಂ ಮಕ್ಕಳನ್ನು ಮುದ್ದಿಸಿ ಜೋ ಬೈಡೆನ್ ಭರವಸೆ ಮೂಡಿಸಿದ್ದರು. ಆದರೆ, ಗಾಝಾದಲ್ಲಿ ಸಾವಿರಾರು ಕಂದಮ್ಮಗಳು ಇದೇ ಬೈಡೆನ್ ಆಡಳಿತ ನೆರವಿನಿಂದ ಬಲಿಯಾಗಿವೆ, ಆಗುತ್ತಿವೆ ಎಂಬುವುದು ದುಖಃದ ಸಂಗತಿ.

ಇಸ್ರೇಲಿ ಮಿಲಿಟರಿ ಅಂಕಿ ಅಂಶಗಳ ಪ್ರಕಾರ, ಅಕ್ಟೋಬರ್ 7 ರಿಂದ ಗಾಝಾ ಪಟ್ಟಿಯ ನಡೆದ ಘರ್ಷಣೆಯಲ್ಲಿ ಕನಿಷ್ಠ 489 ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯಲ್ಲಿ 1,200 ಇಸ್ರೇಲಿಗಳು ಸಾವನ್ನಪ್ಪಿದ್ದಾರೆ.

ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ನಿರಂತರ ದಾಳಿಯಿಂದ ಇದುವರೆಗೆ 20,674 ಪ್ಯಾಲೆಸ್ತೀನಿಯರು ಬಲಿಯಾಗಿದ್ದಾರೆ ಮತ್ತು 54,536 ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಇಸ್ರೇಲ್‌ ದಾಳಿಯಿಂದ ಸುಂದರ ಗಾಝಾ ಪಾಳುಬಿದ್ದಿದೆ. ಇಲ್ಲಿನ ಕರಾವಳಿ ಪ್ರದೇಶದ ಅರ್ಧದಷ್ಟು ವಸತಿ ಕಟ್ಟಡಗಳು ಹಾನಿಗೊಳಗಾಗಿವೆ ಅಥವಾ ನಾಶವಾಗಿವೆ. ಆಹಾರ ಮತ್ತು ಶುದ್ಧ ನೀರಿನ ಕೊರತೆಯ ನಡುವೆ ಸುಮಾರು 2 ಮಿಲಿಯನ್ ಜನರು ಜನನಿಬಿಡ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಇದನ್ನೂ ಓದಿ : ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....