Homeಮುಖಪುಟಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

ಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

- Advertisement -
- Advertisement -

ಅಕ್ಟೋಬರ್‌ 7ರಂದು ಇಸ್ರೇಲ್‌-ಹಮಾಸ್ ನಡುವೆ ಸಂಘರ್ಷ ಪ್ರಾರಂಭವಾದಾಗಿನಿಂದ ಇದುವರೆಗೆ (ಡಿ.26) ಯುಎಸ್ 230 ಸರಕು ವಿಮಾನಗಳು ಮತ್ತು 20 ಹಡಗುಗಳಲ್ಲಿ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಉಪಕರಣಗಳನ್ನು ಕಳುಹಿಸಿಕೊಟ್ಟಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮ ವರದಿಗಳು ತಿಳಿಸಿವೆ.

ಯುಎಸ್ ಮಿಲಿಟರಿ ನೆರವು ಫಿರಂಗಿ ಶೆಲ್‌ಗಳು, ಶಸ್ತ್ರಸಜ್ಜಿತ ವಾಹನಗಳು ಮತ್ತು ಸೈನಿಕರಿಗೆ ಬೇಕಾದ ಮೂಲಭೂತ ಯುದ್ಧ ಸಾಧನಗಳನ್ನು ಒಳಗೊಂಡಿತ್ತು ಎಂದು ಇಸ್ರೇಲ್ ಮೂಲದ ಯೆಡಿಯಟ್ ಅಹ್ರೊನೊತ್ ಪತ್ರಿಕೆ ವರದಿ ಮಾಡಿದೆ.

ಇಸ್ರೇಲ್‌ನ ರಕ್ಷಣಾ ಸಚಿವಾಲಯವು ಗಾಝಾ ಪಟ್ಟಿಯ ಮೇಲಿನ ಪ್ರಸ್ತುತ ಯುದ್ಧದ ವೆಚ್ಚವನ್ನು ಸುಮಾರು 65 ಶತಕೋಟಿ ಶೆಕೆಲ್‌ಗಳು ($17 ಶತಕೋಟಿ) ಎಂದು ಅಂದಾಜಿಸಿದೆ.

ಯುದ್ದದ ಆರಂಭದಲ್ಲಿ ಇಸ್ರೇಲ್ ತನ್ನ ಗೋದಾಮಿನಲ್ಲಿ ಶೇಖರಿಸಿಟ್ಟ ಯುದ್ದ ಸಾಮಾಗ್ರಿಗಳು, ಮದ್ದು ಗುಂಡುಗಳನ್ನು ಬಳಸಿತ್ತು. ಅದನ್ನು ತುಂಬಿಸುವ ಸಲುವಾಗಿ ಯುಎಸ್‌ನ ನೆರವು ಪಡೆದುಕೊಂಡಿದೆ. ಲೆಬಾನಾನಿನ ಹಿಝ್ಬುಲ್ಲಾ ಗುಂಪಿನ ಜೊತೆ ಯುದ್ಧ ನಡೆಯುವ ಸಾಧ್ಯತೆಗಳು ಇರುವ ಹಿನ್ನೆಲೆ, ಇಸ್ರೇಲ್ ತನ್ನ ಸೇನಾ ಗೋದಾಮನ್ನು ತುಂಬಿಸುತ್ತಿದೆ ಎಂದು ಯೆಡಿಯಟ್ ಅಹ್ರೊನೊತ್ ವರದಿ ಹೇಳಿದೆ.

ಅಂದರೆ, ಇಸ್ರೇಲ್‌ನ ರಕ್ತದಾಹ ಇನ್ನೂ ನೀಗಿಲ್ಲ. ಹಮಾಸ್‌ನಂತೆ ಹಿಝ್ಬುಲ್ಲಾದ ಹೆಸರೇಳಿಕೊಂಡು ಲೆಬಾನಾನಿನ ಮಣ್ಣಿನಲ್ಲಿ ರಕ್ತ ಹರಿಸುವ ಉತ್ಸಾಹದಲ್ಲಿದೆ ಎಂಬುವುದು ಇದರಿಂದ ಖಾತ್ರಿಯಾಗುತ್ತಿದೆ.

ಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದಾಗಿನಿಂದ ಯುಎಸ್ ಇಸ್ರೇಲ್ ಪರವಾಗಿ ನಿಂತಿದೆ. ಹಮಾಸ್‌ ಅನ್ನು ಭಯೋತ್ಪಾದಕ ಸಂಘಟನೆ ಎಂದು ಪರಿಗಣಿಸಿರುವ ಯುಎಸ್, ಅದನ್ನು ನಿರ್ಣಾಮ ಮಾಡಲು ಹೊರಟಿರುವ ಇಸ್ರೇಲ್‌ಗೆ ನಮ್ಮ ಬೆಂಬಲ ಎಂದು ಹೇಳಿಕೊಳ್ಳುತ್ತಿದೆ.

ವರದಿಗಳನ್ನು ಗಮನಿಸಿದರೆ, ಇದುವರೆಗೆ 8 ಸಾವಿರ ಹಮಾಸ್ ಸದಸ್ಯರನ್ನು ಹತ್ಯೆಗೈದಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಈ ನಡುವೆ ಇಸ್ರೇಲ್ ದಾಳಿಗೆ ಬಲಿಯಾದ ಗಾಝಾದ ಅಮಾಯಕ ನಾಗರಿಕರ ಸಂಖ್ಯೆ 20 ಸಾವಿರ ದಾಟಿದೆ.

ನಾವು ಹಮಾಸ್ ಭಯೋತ್ಪಾದಕರನ್ನು ನಿರ್ಣಾಮ ಮಾಡಲು ಇಸ್ರೇಲ್‌ಗೆ ಸಹಾಯ ಮಾಡಿದ್ದೇವೆ ಎಂದು ಹೇಳಿಕೊಳ್ಳುವ ಯುಎಸ್‌, ಮೇಲೆ ತಿಳಿಸಿದ ಪುಟ್ಟ ಕಂದಮ್ಮಗಳೂ ಸೇರಿದಂತೆ 20 ಸಾವಿರಕ್ಕಿಂತಲೂ ಅಧಿಕ ಅಮಾಯಕ ನಾಗರಿಕರ ರಕ್ತವನ್ನು ತನ್ನ ಕೈಯಲ್ಲಿ ಮೆತ್ತಿಕೊಂಡಿದೆ.

ಶಾಂತಿಗೆ ದೊಡ್ಡಣ್ಣನ ಸ್ಥಾನದಲ್ಲಿ ನಿಂತು ಪಾಠ ಮಾಡುವ ಯುಎಸ್‌ನಲ್ಲಿ, ಜನಾಂಗೀಯ ದ್ವೇಷ ಹರಡುವ ಡೊನಾಲ್ಡ್ ಟ್ರಂಪ್‌ನ ಆಡಳಿತ ಹೋಗಿ ಜೋ ಬೈಡೆನ್‌ ಅಧ್ಯಕ್ಷಗಾದಿಗೆ ಏರಿದಾಗ ಇಡೀ ಮಾನವ ಜಗತ್ತು ಖುಷಿ ಪಟ್ಟಿತ್ತು. ಆರಂಭದಲ್ಲಿ ಮಾಧ್ಯಮಗಳ ಮುಂದೆ ಮುಸ್ಲಿಂ ಮಕ್ಕಳನ್ನು ಮುದ್ದಿಸಿ ಜೋ ಬೈಡೆನ್ ಭರವಸೆ ಮೂಡಿಸಿದ್ದರು. ಆದರೆ, ಗಾಝಾದಲ್ಲಿ ಸಾವಿರಾರು ಕಂದಮ್ಮಗಳು ಇದೇ ಬೈಡೆನ್ ಆಡಳಿತ ನೆರವಿನಿಂದ ಬಲಿಯಾಗಿವೆ, ಆಗುತ್ತಿವೆ ಎಂಬುವುದು ದುಖಃದ ಸಂಗತಿ.

ಇಸ್ರೇಲಿ ಮಿಲಿಟರಿ ಅಂಕಿ ಅಂಶಗಳ ಪ್ರಕಾರ, ಅಕ್ಟೋಬರ್ 7 ರಿಂದ ಗಾಝಾ ಪಟ್ಟಿಯ ನಡೆದ ಘರ್ಷಣೆಯಲ್ಲಿ ಕನಿಷ್ಠ 489 ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯಲ್ಲಿ 1,200 ಇಸ್ರೇಲಿಗಳು ಸಾವನ್ನಪ್ಪಿದ್ದಾರೆ.

ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ನಿರಂತರ ದಾಳಿಯಿಂದ ಇದುವರೆಗೆ 20,674 ಪ್ಯಾಲೆಸ್ತೀನಿಯರು ಬಲಿಯಾಗಿದ್ದಾರೆ ಮತ್ತು 54,536 ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಇಸ್ರೇಲ್‌ ದಾಳಿಯಿಂದ ಸುಂದರ ಗಾಝಾ ಪಾಳುಬಿದ್ದಿದೆ. ಇಲ್ಲಿನ ಕರಾವಳಿ ಪ್ರದೇಶದ ಅರ್ಧದಷ್ಟು ವಸತಿ ಕಟ್ಟಡಗಳು ಹಾನಿಗೊಳಗಾಗಿವೆ ಅಥವಾ ನಾಶವಾಗಿವೆ. ಆಹಾರ ಮತ್ತು ಶುದ್ಧ ನೀರಿನ ಕೊರತೆಯ ನಡುವೆ ಸುಮಾರು 2 ಮಿಲಿಯನ್ ಜನರು ಜನನಿಬಿಡ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಇದನ್ನೂ ಓದಿ : ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...