Homeಮುಖಪುಟಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

ಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

- Advertisement -
- Advertisement -

ಅಕ್ಟೋಬರ್‌ 7ರಂದು ಇಸ್ರೇಲ್‌-ಹಮಾಸ್ ನಡುವೆ ಸಂಘರ್ಷ ಪ್ರಾರಂಭವಾದಾಗಿನಿಂದ ಇದುವರೆಗೆ (ಡಿ.26) ಯುಎಸ್ 230 ಸರಕು ವಿಮಾನಗಳು ಮತ್ತು 20 ಹಡಗುಗಳಲ್ಲಿ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಉಪಕರಣಗಳನ್ನು ಕಳುಹಿಸಿಕೊಟ್ಟಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮ ವರದಿಗಳು ತಿಳಿಸಿವೆ.

ಯುಎಸ್ ಮಿಲಿಟರಿ ನೆರವು ಫಿರಂಗಿ ಶೆಲ್‌ಗಳು, ಶಸ್ತ್ರಸಜ್ಜಿತ ವಾಹನಗಳು ಮತ್ತು ಸೈನಿಕರಿಗೆ ಬೇಕಾದ ಮೂಲಭೂತ ಯುದ್ಧ ಸಾಧನಗಳನ್ನು ಒಳಗೊಂಡಿತ್ತು ಎಂದು ಇಸ್ರೇಲ್ ಮೂಲದ ಯೆಡಿಯಟ್ ಅಹ್ರೊನೊತ್ ಪತ್ರಿಕೆ ವರದಿ ಮಾಡಿದೆ.

ಇಸ್ರೇಲ್‌ನ ರಕ್ಷಣಾ ಸಚಿವಾಲಯವು ಗಾಝಾ ಪಟ್ಟಿಯ ಮೇಲಿನ ಪ್ರಸ್ತುತ ಯುದ್ಧದ ವೆಚ್ಚವನ್ನು ಸುಮಾರು 65 ಶತಕೋಟಿ ಶೆಕೆಲ್‌ಗಳು ($17 ಶತಕೋಟಿ) ಎಂದು ಅಂದಾಜಿಸಿದೆ.

ಯುದ್ದದ ಆರಂಭದಲ್ಲಿ ಇಸ್ರೇಲ್ ತನ್ನ ಗೋದಾಮಿನಲ್ಲಿ ಶೇಖರಿಸಿಟ್ಟ ಯುದ್ದ ಸಾಮಾಗ್ರಿಗಳು, ಮದ್ದು ಗುಂಡುಗಳನ್ನು ಬಳಸಿತ್ತು. ಅದನ್ನು ತುಂಬಿಸುವ ಸಲುವಾಗಿ ಯುಎಸ್‌ನ ನೆರವು ಪಡೆದುಕೊಂಡಿದೆ. ಲೆಬಾನಾನಿನ ಹಿಝ್ಬುಲ್ಲಾ ಗುಂಪಿನ ಜೊತೆ ಯುದ್ಧ ನಡೆಯುವ ಸಾಧ್ಯತೆಗಳು ಇರುವ ಹಿನ್ನೆಲೆ, ಇಸ್ರೇಲ್ ತನ್ನ ಸೇನಾ ಗೋದಾಮನ್ನು ತುಂಬಿಸುತ್ತಿದೆ ಎಂದು ಯೆಡಿಯಟ್ ಅಹ್ರೊನೊತ್ ವರದಿ ಹೇಳಿದೆ.

ಅಂದರೆ, ಇಸ್ರೇಲ್‌ನ ರಕ್ತದಾಹ ಇನ್ನೂ ನೀಗಿಲ್ಲ. ಹಮಾಸ್‌ನಂತೆ ಹಿಝ್ಬುಲ್ಲಾದ ಹೆಸರೇಳಿಕೊಂಡು ಲೆಬಾನಾನಿನ ಮಣ್ಣಿನಲ್ಲಿ ರಕ್ತ ಹರಿಸುವ ಉತ್ಸಾಹದಲ್ಲಿದೆ ಎಂಬುವುದು ಇದರಿಂದ ಖಾತ್ರಿಯಾಗುತ್ತಿದೆ.

ಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದಾಗಿನಿಂದ ಯುಎಸ್ ಇಸ್ರೇಲ್ ಪರವಾಗಿ ನಿಂತಿದೆ. ಹಮಾಸ್‌ ಅನ್ನು ಭಯೋತ್ಪಾದಕ ಸಂಘಟನೆ ಎಂದು ಪರಿಗಣಿಸಿರುವ ಯುಎಸ್, ಅದನ್ನು ನಿರ್ಣಾಮ ಮಾಡಲು ಹೊರಟಿರುವ ಇಸ್ರೇಲ್‌ಗೆ ನಮ್ಮ ಬೆಂಬಲ ಎಂದು ಹೇಳಿಕೊಳ್ಳುತ್ತಿದೆ.

ವರದಿಗಳನ್ನು ಗಮನಿಸಿದರೆ, ಇದುವರೆಗೆ 8 ಸಾವಿರ ಹಮಾಸ್ ಸದಸ್ಯರನ್ನು ಹತ್ಯೆಗೈದಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಈ ನಡುವೆ ಇಸ್ರೇಲ್ ದಾಳಿಗೆ ಬಲಿಯಾದ ಗಾಝಾದ ಅಮಾಯಕ ನಾಗರಿಕರ ಸಂಖ್ಯೆ 20 ಸಾವಿರ ದಾಟಿದೆ.

ನಾವು ಹಮಾಸ್ ಭಯೋತ್ಪಾದಕರನ್ನು ನಿರ್ಣಾಮ ಮಾಡಲು ಇಸ್ರೇಲ್‌ಗೆ ಸಹಾಯ ಮಾಡಿದ್ದೇವೆ ಎಂದು ಹೇಳಿಕೊಳ್ಳುವ ಯುಎಸ್‌, ಮೇಲೆ ತಿಳಿಸಿದ ಪುಟ್ಟ ಕಂದಮ್ಮಗಳೂ ಸೇರಿದಂತೆ 20 ಸಾವಿರಕ್ಕಿಂತಲೂ ಅಧಿಕ ಅಮಾಯಕ ನಾಗರಿಕರ ರಕ್ತವನ್ನು ತನ್ನ ಕೈಯಲ್ಲಿ ಮೆತ್ತಿಕೊಂಡಿದೆ.

ಶಾಂತಿಗೆ ದೊಡ್ಡಣ್ಣನ ಸ್ಥಾನದಲ್ಲಿ ನಿಂತು ಪಾಠ ಮಾಡುವ ಯುಎಸ್‌ನಲ್ಲಿ, ಜನಾಂಗೀಯ ದ್ವೇಷ ಹರಡುವ ಡೊನಾಲ್ಡ್ ಟ್ರಂಪ್‌ನ ಆಡಳಿತ ಹೋಗಿ ಜೋ ಬೈಡೆನ್‌ ಅಧ್ಯಕ್ಷಗಾದಿಗೆ ಏರಿದಾಗ ಇಡೀ ಮಾನವ ಜಗತ್ತು ಖುಷಿ ಪಟ್ಟಿತ್ತು. ಆರಂಭದಲ್ಲಿ ಮಾಧ್ಯಮಗಳ ಮುಂದೆ ಮುಸ್ಲಿಂ ಮಕ್ಕಳನ್ನು ಮುದ್ದಿಸಿ ಜೋ ಬೈಡೆನ್ ಭರವಸೆ ಮೂಡಿಸಿದ್ದರು. ಆದರೆ, ಗಾಝಾದಲ್ಲಿ ಸಾವಿರಾರು ಕಂದಮ್ಮಗಳು ಇದೇ ಬೈಡೆನ್ ಆಡಳಿತ ನೆರವಿನಿಂದ ಬಲಿಯಾಗಿವೆ, ಆಗುತ್ತಿವೆ ಎಂಬುವುದು ದುಖಃದ ಸಂಗತಿ.

ಇಸ್ರೇಲಿ ಮಿಲಿಟರಿ ಅಂಕಿ ಅಂಶಗಳ ಪ್ರಕಾರ, ಅಕ್ಟೋಬರ್ 7 ರಿಂದ ಗಾಝಾ ಪಟ್ಟಿಯ ನಡೆದ ಘರ್ಷಣೆಯಲ್ಲಿ ಕನಿಷ್ಠ 489 ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯಲ್ಲಿ 1,200 ಇಸ್ರೇಲಿಗಳು ಸಾವನ್ನಪ್ಪಿದ್ದಾರೆ.

ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ನಿರಂತರ ದಾಳಿಯಿಂದ ಇದುವರೆಗೆ 20,674 ಪ್ಯಾಲೆಸ್ತೀನಿಯರು ಬಲಿಯಾಗಿದ್ದಾರೆ ಮತ್ತು 54,536 ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಇಸ್ರೇಲ್‌ ದಾಳಿಯಿಂದ ಸುಂದರ ಗಾಝಾ ಪಾಳುಬಿದ್ದಿದೆ. ಇಲ್ಲಿನ ಕರಾವಳಿ ಪ್ರದೇಶದ ಅರ್ಧದಷ್ಟು ವಸತಿ ಕಟ್ಟಡಗಳು ಹಾನಿಗೊಳಗಾಗಿವೆ ಅಥವಾ ನಾಶವಾಗಿವೆ. ಆಹಾರ ಮತ್ತು ಶುದ್ಧ ನೀರಿನ ಕೊರತೆಯ ನಡುವೆ ಸುಮಾರು 2 ಮಿಲಿಯನ್ ಜನರು ಜನನಿಬಿಡ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಇದನ್ನೂ ಓದಿ : ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...