Homeಮುಖಪುಟಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

ಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

- Advertisement -
- Advertisement -

ಅಕ್ಟೋಬರ್‌ 7ರಂದು ಇಸ್ರೇಲ್‌-ಹಮಾಸ್ ನಡುವೆ ಸಂಘರ್ಷ ಪ್ರಾರಂಭವಾದಾಗಿನಿಂದ ಇದುವರೆಗೆ (ಡಿ.26) ಯುಎಸ್ 230 ಸರಕು ವಿಮಾನಗಳು ಮತ್ತು 20 ಹಡಗುಗಳಲ್ಲಿ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಉಪಕರಣಗಳನ್ನು ಕಳುಹಿಸಿಕೊಟ್ಟಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮ ವರದಿಗಳು ತಿಳಿಸಿವೆ.

ಯುಎಸ್ ಮಿಲಿಟರಿ ನೆರವು ಫಿರಂಗಿ ಶೆಲ್‌ಗಳು, ಶಸ್ತ್ರಸಜ್ಜಿತ ವಾಹನಗಳು ಮತ್ತು ಸೈನಿಕರಿಗೆ ಬೇಕಾದ ಮೂಲಭೂತ ಯುದ್ಧ ಸಾಧನಗಳನ್ನು ಒಳಗೊಂಡಿತ್ತು ಎಂದು ಇಸ್ರೇಲ್ ಮೂಲದ ಯೆಡಿಯಟ್ ಅಹ್ರೊನೊತ್ ಪತ್ರಿಕೆ ವರದಿ ಮಾಡಿದೆ.

ಇಸ್ರೇಲ್‌ನ ರಕ್ಷಣಾ ಸಚಿವಾಲಯವು ಗಾಝಾ ಪಟ್ಟಿಯ ಮೇಲಿನ ಪ್ರಸ್ತುತ ಯುದ್ಧದ ವೆಚ್ಚವನ್ನು ಸುಮಾರು 65 ಶತಕೋಟಿ ಶೆಕೆಲ್‌ಗಳು ($17 ಶತಕೋಟಿ) ಎಂದು ಅಂದಾಜಿಸಿದೆ.

ಯುದ್ದದ ಆರಂಭದಲ್ಲಿ ಇಸ್ರೇಲ್ ತನ್ನ ಗೋದಾಮಿನಲ್ಲಿ ಶೇಖರಿಸಿಟ್ಟ ಯುದ್ದ ಸಾಮಾಗ್ರಿಗಳು, ಮದ್ದು ಗುಂಡುಗಳನ್ನು ಬಳಸಿತ್ತು. ಅದನ್ನು ತುಂಬಿಸುವ ಸಲುವಾಗಿ ಯುಎಸ್‌ನ ನೆರವು ಪಡೆದುಕೊಂಡಿದೆ. ಲೆಬಾನಾನಿನ ಹಿಝ್ಬುಲ್ಲಾ ಗುಂಪಿನ ಜೊತೆ ಯುದ್ಧ ನಡೆಯುವ ಸಾಧ್ಯತೆಗಳು ಇರುವ ಹಿನ್ನೆಲೆ, ಇಸ್ರೇಲ್ ತನ್ನ ಸೇನಾ ಗೋದಾಮನ್ನು ತುಂಬಿಸುತ್ತಿದೆ ಎಂದು ಯೆಡಿಯಟ್ ಅಹ್ರೊನೊತ್ ವರದಿ ಹೇಳಿದೆ.

ಅಂದರೆ, ಇಸ್ರೇಲ್‌ನ ರಕ್ತದಾಹ ಇನ್ನೂ ನೀಗಿಲ್ಲ. ಹಮಾಸ್‌ನಂತೆ ಹಿಝ್ಬುಲ್ಲಾದ ಹೆಸರೇಳಿಕೊಂಡು ಲೆಬಾನಾನಿನ ಮಣ್ಣಿನಲ್ಲಿ ರಕ್ತ ಹರಿಸುವ ಉತ್ಸಾಹದಲ್ಲಿದೆ ಎಂಬುವುದು ಇದರಿಂದ ಖಾತ್ರಿಯಾಗುತ್ತಿದೆ.

ಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದಾಗಿನಿಂದ ಯುಎಸ್ ಇಸ್ರೇಲ್ ಪರವಾಗಿ ನಿಂತಿದೆ. ಹಮಾಸ್‌ ಅನ್ನು ಭಯೋತ್ಪಾದಕ ಸಂಘಟನೆ ಎಂದು ಪರಿಗಣಿಸಿರುವ ಯುಎಸ್, ಅದನ್ನು ನಿರ್ಣಾಮ ಮಾಡಲು ಹೊರಟಿರುವ ಇಸ್ರೇಲ್‌ಗೆ ನಮ್ಮ ಬೆಂಬಲ ಎಂದು ಹೇಳಿಕೊಳ್ಳುತ್ತಿದೆ.

ವರದಿಗಳನ್ನು ಗಮನಿಸಿದರೆ, ಇದುವರೆಗೆ 8 ಸಾವಿರ ಹಮಾಸ್ ಸದಸ್ಯರನ್ನು ಹತ್ಯೆಗೈದಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಈ ನಡುವೆ ಇಸ್ರೇಲ್ ದಾಳಿಗೆ ಬಲಿಯಾದ ಗಾಝಾದ ಅಮಾಯಕ ನಾಗರಿಕರ ಸಂಖ್ಯೆ 20 ಸಾವಿರ ದಾಟಿದೆ.

ನಾವು ಹಮಾಸ್ ಭಯೋತ್ಪಾದಕರನ್ನು ನಿರ್ಣಾಮ ಮಾಡಲು ಇಸ್ರೇಲ್‌ಗೆ ಸಹಾಯ ಮಾಡಿದ್ದೇವೆ ಎಂದು ಹೇಳಿಕೊಳ್ಳುವ ಯುಎಸ್‌, ಮೇಲೆ ತಿಳಿಸಿದ ಪುಟ್ಟ ಕಂದಮ್ಮಗಳೂ ಸೇರಿದಂತೆ 20 ಸಾವಿರಕ್ಕಿಂತಲೂ ಅಧಿಕ ಅಮಾಯಕ ನಾಗರಿಕರ ರಕ್ತವನ್ನು ತನ್ನ ಕೈಯಲ್ಲಿ ಮೆತ್ತಿಕೊಂಡಿದೆ.

ಶಾಂತಿಗೆ ದೊಡ್ಡಣ್ಣನ ಸ್ಥಾನದಲ್ಲಿ ನಿಂತು ಪಾಠ ಮಾಡುವ ಯುಎಸ್‌ನಲ್ಲಿ, ಜನಾಂಗೀಯ ದ್ವೇಷ ಹರಡುವ ಡೊನಾಲ್ಡ್ ಟ್ರಂಪ್‌ನ ಆಡಳಿತ ಹೋಗಿ ಜೋ ಬೈಡೆನ್‌ ಅಧ್ಯಕ್ಷಗಾದಿಗೆ ಏರಿದಾಗ ಇಡೀ ಮಾನವ ಜಗತ್ತು ಖುಷಿ ಪಟ್ಟಿತ್ತು. ಆರಂಭದಲ್ಲಿ ಮಾಧ್ಯಮಗಳ ಮುಂದೆ ಮುಸ್ಲಿಂ ಮಕ್ಕಳನ್ನು ಮುದ್ದಿಸಿ ಜೋ ಬೈಡೆನ್ ಭರವಸೆ ಮೂಡಿಸಿದ್ದರು. ಆದರೆ, ಗಾಝಾದಲ್ಲಿ ಸಾವಿರಾರು ಕಂದಮ್ಮಗಳು ಇದೇ ಬೈಡೆನ್ ಆಡಳಿತ ನೆರವಿನಿಂದ ಬಲಿಯಾಗಿವೆ, ಆಗುತ್ತಿವೆ ಎಂಬುವುದು ದುಖಃದ ಸಂಗತಿ.

ಇಸ್ರೇಲಿ ಮಿಲಿಟರಿ ಅಂಕಿ ಅಂಶಗಳ ಪ್ರಕಾರ, ಅಕ್ಟೋಬರ್ 7 ರಿಂದ ಗಾಝಾ ಪಟ್ಟಿಯ ನಡೆದ ಘರ್ಷಣೆಯಲ್ಲಿ ಕನಿಷ್ಠ 489 ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯಲ್ಲಿ 1,200 ಇಸ್ರೇಲಿಗಳು ಸಾವನ್ನಪ್ಪಿದ್ದಾರೆ.

ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ನಿರಂತರ ದಾಳಿಯಿಂದ ಇದುವರೆಗೆ 20,674 ಪ್ಯಾಲೆಸ್ತೀನಿಯರು ಬಲಿಯಾಗಿದ್ದಾರೆ ಮತ್ತು 54,536 ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಇಸ್ರೇಲ್‌ ದಾಳಿಯಿಂದ ಸುಂದರ ಗಾಝಾ ಪಾಳುಬಿದ್ದಿದೆ. ಇಲ್ಲಿನ ಕರಾವಳಿ ಪ್ರದೇಶದ ಅರ್ಧದಷ್ಟು ವಸತಿ ಕಟ್ಟಡಗಳು ಹಾನಿಗೊಳಗಾಗಿವೆ ಅಥವಾ ನಾಶವಾಗಿವೆ. ಆಹಾರ ಮತ್ತು ಶುದ್ಧ ನೀರಿನ ಕೊರತೆಯ ನಡುವೆ ಸುಮಾರು 2 ಮಿಲಿಯನ್ ಜನರು ಜನನಿಬಿಡ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಇದನ್ನೂ ಓದಿ : ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...