HomeUncategorizedGaza Ceasefire: ಇಸ್ರೇಲಿನಿಂದ 110 ಫೆಲೆಸ್ತೀನಿಯನ್ನರ ಬಿಡುಗಡೆ

Gaza Ceasefire: ಇಸ್ರೇಲಿನಿಂದ 110 ಫೆಲೆಸ್ತೀನಿಯನ್ನರ ಬಿಡುಗಡೆ

- Advertisement -
- Advertisement -

ಗುರುವಾರ ರಾತ್ರಿಯಾಗುತ್ತಿದ್ದಂತೆ, ಇಸ್ರೇಲಿ ಜೈಲು ಪ್ರಾಧಿಕಾರವು ಆಕ್ರಮಿತ ಪಶ್ಚಿಮ ದಂಡೆಯ ಓಫರ್ ಜೈಲಿನಿಂದ 110 ಫೆಲೆಸ್ತೀನಿಯನ್ನರನ್ನು ಬಿಡುಗಡೆ ಮಾಡಿದೆ. ಅವರಲ್ಲಿ ಜೆನಿನ್ ಎಂಬ ಸಂಘರ್ಷ ಪೀಡಿತ ನಗರದ ಪ್ರಮುಖ ಮಾಜಿ ಹಮಾಸ್ ನಾಯಕನೂ ಸೇರಿದ್ದಾನೆ.

ಓಫರ್ ಜೈಲಿನ ಮೇಲಿರುವ ಪಶ್ಚಿಮ ದಂಡೆಯ ಬೀಟುನಿಯಾ ಪಟ್ಟಣದಲ್ಲಿ ಗುರುವಾರ ಇಸ್ರೇಲಿ ಮಿಲಿಟರಿ ಬಂಧಿತರ ಬಿಡುಗಡೆಯ ಕುರಿತು ಫೆಲೆಸ್ತೀನಿಯನ್ನರು ನಡೆಸುತ್ತಿದ್ದ ಸಾರ್ವಜನಿಕ ಆಚರಣೆಗಳನ್ನು ಸ್ಥಗಿತಗೊಳಿಸಿದೆ.

ಇಸ್ರೇಲಿ ಪಡೆಗಳು ರಬ್ಬರ್-ಲೇಪಿತ ಉಕ್ಕಿನ ಗುಂಡುಗಳನ್ನು ಹಾರಿಸಿದವು ಮತ್ತು ಸಣ್ಣ ಗುಂಪನ್ನು ತೆರವುಗೊಳಿಸಲು ಅಶ್ರುವಾಯು ಮತ್ತು ಸ್ಟನ್ ಗ್ರೆನೇಡ್‌ಗಳನ್ನು ಬಳಸಿದವು. “ಭದ್ರತಾ ಪಡೆಗಳು ಹಮಾಸ್ ಸಂಘಟನೆಗಳನ್ನು ಬೆಂಬಲಿಸುವ ಪ್ರದರ್ಶನಗಳನ್ನು ಅನುಮತಿಸುವುದಿಲ್ಲ” ಎಂದು ನೋಡುಗರಿಗೆ ಎಚ್ಚರಿಕೆ ನೀಡುವ ಅರೇಬಿಕ್ ಭಾಷೆಯ ಕರಪತ್ರಗಳನ್ನು ಅವರು ತೂರಿದರು.

ಸ್ಥಳೀಯ ಅರೆವೈದ್ಯರ ಪ್ರಕಾರ ಈ ಸಂದರ್ಭ ಕನಿಷ್ಠ 61 ಪ್ಯಾಲೆಸ್ತೇನಿಯನ್ನರು ಗಾಯಗೊಂಡಿದ್ದಾರೆ. ಫೆಲೆಸ್ತೀನ್ ರೆಡ್ ಕ್ರೆಸೆಂಟ್ ಸೊಸೈಟಿ ತನ್ನ ಸದಸ್ಯರು ಲೈವ್ ಗುಂಡುಗಳು, ರಬ್ಬರ್ ಗುಂಡುಗಳು ಮತ್ತು ಅಶ್ರುವಾಯುಗಳಿಂದ ಗಾಯಗೊಂಡ ರೋಗಿಗಳಿಗೆ ಮತ್ತು ಕೆಳಗೆ ಬಿದ್ದವರಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ಹೇಳಿದೆ.

ರಮಲ್ಲಾದ ಬೀದಿಗಳಲ್ಲಿ ಫೆಲೆಸ್ತೀನ್ ಯನ್ನರು ಬಿಡುಗಡೆಯಾದ ನಂತರ ಹರ್ಷೋದ್ಗಾರಗಳು ಕೇಳಿಬಂದವು. ಅಲ್ಲಿ ಬಿಡುಗಡೆಯಾದ ಕೆಲವು ಬಂಧಿತರನ್ನು ಭೇಟಿ ಮಾಡಲು ನೂರಾರು ಜನರು ಸೇರಿದ್ದರು. ಅಲ್ಲಿ ನೆರೆದಿದ್ದವರಲ್ಲಿ ಅನೇಕರು ಹಮಾಸ್‌ನ ಮಿಲಿಟರಿ ವಿಭಾಗವಾದ ಅಲ್-ಕಸ್ಸಾಮ್ ಬ್ರಿಗೇಡ್‌ಗಳಿಗೆ ಬೆಂಬಲವಾಗಿ ಘೋಷಣೆಗಳನ್ನು ಕೂಗಿದರು. ಹತ್ತಿರದ ಬೆಟ್ಟದ ಮೇಲೆ ಫತಾ ಬೆಂಬಲಿಗರ ಸಣ್ಣ ಗುಂಪು ಜಮಾಯಿಸಿತ್ತು.

ಬಿಡುಗಡೆಯಾದವರಲ್ಲಿ 30 ಮಕ್ಕಳಿದ್ದರು – ಕೆಲವರು ಆರೋಪವಿಲ್ಲದೆ ಬಂಧಿಸಲ್ಪಟ್ಟಿದ್ದರು ಮತ್ತು ಯಾರಿಗೂ ಶಿಕ್ಷೆಯಾಗಿಲ್ಲ ಎಂದು ಕಾನೂನು ನೆರವು ಸಂಸ್ಥೆಯಾದ ಅದಾಲಾ ತಿಳಿಸಿದೆ. ಜೀವಾವಧಿ ಶಿಕ್ಷೆ ವಿಧಿಸಲಾದ 32 ಕೈದಿಗಳು ಮತ್ತು “ಹೆಚ್ಚಿನ ಶಿಕ್ಷೆ” ವಿಧಿಸಲಾದ 48 ಕೈದಿಗಳು ಸಹ ಬಿಡುಗಡೆಯಾಗಿದ್ದಾರೆ. ಗಂಭೀರ ಶಿಕ್ಷೆ ವಿಧಿಸಲಾದ ಕೆಲವರನ್ನು ದೋಹಾದಲ್ಲಿ ಒಪ್ಪಿಕೊಂಡ ಕದನ ವಿರಾಮ ಒಪ್ಪಂದದ ನಿಯಮಗಳ ಪ್ರಕಾರ ಈಜಿಪ್ಟ್‌ಗೆ ಬಿಡುಗಡೆ ಮಾಡಲಾಗಿದೆ.

ಗುರುವಾರ ಬಿಡುಗಡೆಯಾದ ಪ್ರಮುಖ ವ್ಯಕ್ತಿಯೂ ಆಗಿರುವ  ಪಶ್ಚಿಮದಂಡೆಯನ್ನು ಆಳುವ ಫತಾಹ್ ಪಕ್ಷದ ಮಿಲಿಟರಿ ವಿಭಾಗವಾದ ಅಲ್-ಅಕ್ಸಾ ಹುತಾತ್ಮರ ಬ್ರಿಗೇಡ್‌ನ ಮಾಜಿ ಕಮಾಂಡರ್ ಜಕಾರಿಯಾ ಜುಬೇದಿಯ ಒಬ್ಬರಾಗಿದ್ದಾರೆ. ಅವರ ತಾಯಿ, ಸಹೋದರ ಮತ್ತು ಮಗ ಎಲ್ಲರೂ ಇಸ್ರೇಲಿ ಮಿಲಿಟರಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಮಾಜಿ ಬಾಲನಟ ಜುಬೇದಿ, ಆ ಸಂಘರ್ಷದ ನಂತರ ತಮ್ಮ ತವರು ಜೆನಿನ್ ನಿರಾಶ್ರಿತರ ಶಿಬಿರದಲ್ಲಿ ದಿ ಫ್ರೀಡಂ ಥಿಯೇಟರ್ ಅನ್ನು ಸಹ-ಸ್ಥಾಪಿಸಿದರು. ಇವರನ್ನು 2019ರಲ್ಲಿ ಬಂಧಿಸಲಾಯಿತು ಮತ್ತು ಇಸ್ರೇಲಿಗಳ ವಿರುದ್ಧ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಆರೋಪ ಹೊರಿಸಲಾಗಿತ್ತು. 2021ರಲ್ಲಿ ಇಸ್ರೇಲ್‌ನ ಹೆಚ್ಚಿನ ಭದ್ರತೆಯ ಗಿಲ್ಬೋವಾ ಜೈಲಿನಿಂದ ಹೊರಬಂದ ಗುಂಪಿನಲ್ಲಿ ಒಬ್ಬರಾದ ನಂತರ, ಹಲವಾರು ದಿನಗಳ ನಂತರ ಮತ್ತೆ ಬಂಧಿಸಲ್ಪಟ್ಟರು. ಇದರ ನಂತರ ಅವರು ಅನೇಕ ಪ್ಯಾಲೆಸ್ತೇನಿಯನ್ನರಲ್ಲಿ ಆರಾಧನಾ ಸ್ಥಾನಮಾನವನ್ನು ಗಳಿಸಿದರು.

ಇಸ್ರೇಲಿನಿಂದ 8 ಒತ್ತೆಯಾಳುಗಳ ಬಿಡುಗಡೆ

ಇದಕ್ಕೂ ಮೊದಲು ಹಮಾಸ್ 8 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು.  ಗಾಝಾ ಕದನ ವಿರಾಮ ಒಪ್ಪಂದದ ಅಡಿಯಲ್ಲಿ 3ನೇ ಹಂತದ ಒತ್ತೆಯಾಳು-ಕೈದಿಗಳ ವಿನಿಮಯ ನಡೆದಂತಾಗಿದೆ.

ಹಮಾಸ್ ನಿಂದ ಗುರುವಾರ ಮೂರು ಇಸ್ರೇಲಿ ಒತ್ತೆಯಾಳುಗಳನ್ನು ಮತ್ತು ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಸೆರೆಹಿಡಿಯಲಾದ ಐದು ವಿದೇಶಿಯರನ್ನು ಬಿಡುಗಡೆ ಮಾಡಲಾಗಿದೆ. ಇವರನ್ನು ರೆಡ್ ಕ್ರಾಸ್ ಅಂತರ್ ರಾಷ್ಟ್ರೀಯ ಸಮಿತಿಗೆ ಹಮಾಸ್ ಹಸ್ತಾಂತರಿಸಿದೆ. ಇದಕ್ಕೆ ಪ್ರತಿಯಾಗಿ 110 ಫೆಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡುವುದಾಗಿ ಇಸ್ರೇಲ್ ಹೇಳಿತ್ತು.

ಹಮಾಸ್ ನಿಂದ ಒಟ್ಟು 8 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ. ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಝಾ ಪಟ್ಟಿಯಲ್ಲಿ ಯುದ್ಧವನ್ನು ಕೊನೆಗೊಳಿಸುವ ಗುರಿಯೊಂದಿಗೆ ಕದನ ವಿರಾಮ ಒಪ್ಪಂದಕ್ಕೆ ಮುಂದಾದರು. ಅದರ ಭಾಗವಾಗಿ ಹಂತ ಹಂತವಾಗಿ ಎರಡೂ ಕಡೆ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ.

ಮೊದಲು ಬಿಡುಗಡೆಯಾದ ಇಸ್ರೇಲಿ ಮಹಿಳಾ ಸೈನಿಕೆ ಆಗಮ್ ಬರ್ಗರ್ (20) ಫೆಲೆಸ್ತೀನಿಯನ್ ಪ್ರದೇಶದ ಉತ್ತರದಲ್ಲಿರುವ ಜಬಾಲಿಯಾದಲ್ಲಿ ರೆಡ್‌ಕ್ರಾಸ್‌ನ ಅಂತರರಾಷ್ಟ್ರೀಯ ಸಮಿತಿಯ ಅಧಿಕಾರಿಗಳಿಗೆ ಹಸ್ತಾಂತರಿಸಲ್ಪಟ್ಟರು. ಬರ್ಗರ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿತ್ತು. ನಂತರ ಇಬ್ಬರು ಇಸ್ರೇಲಿಗಳು ಮತ್ತು ಐವರು ವಿದೇಶಿಯರನ್ನು ರೆಡ್‌ಕ್ರಾಸ್‌ಗೆ ಹಸ್ತಾಂತರಿಸಲಾಯಿತು.

ಜನವರಿ 25ರಂದು ಇಸ್ರೇಲ್​-ಹಮಾಸ್​ ಬಂಡುಕೋರರ ನಡುವಿನ ಗಾಝಾ ಪಟ್ಟಿ ಕದನ ವಿರಾಮ ಒಪ್ಪಂದದ ಅನುಸಾರ 2ನೇ ಹಂತದಲ್ಲಿ ಮತ್ತಷ್ಟು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದ್ದರು. ಗಾಝಾದಲ್ಲಿ ಸುಮಾರು 16 ತಿಂಗಳ ಸೆರೆಯಲ್ಲಿದ್ದ ನಾಲ್ಕು ಇಸ್ರೇಲಿ ಮಹಿಳಾ ಸೈನಿಕರನ್ನು ಹಮಾಸ್ ಬಿಡುಗಡೆ ಮಾಡಿದೆ.

ವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...