HomeUncategorizedGaza Ceasefire: ಇಸ್ರೇಲಿನಿಂದ 110 ಫೆಲೆಸ್ತೀನಿಯನ್ನರ ಬಿಡುಗಡೆ

Gaza Ceasefire: ಇಸ್ರೇಲಿನಿಂದ 110 ಫೆಲೆಸ್ತೀನಿಯನ್ನರ ಬಿಡುಗಡೆ

- Advertisement -
- Advertisement -

ಗುರುವಾರ ರಾತ್ರಿಯಾಗುತ್ತಿದ್ದಂತೆ, ಇಸ್ರೇಲಿ ಜೈಲು ಪ್ರಾಧಿಕಾರವು ಆಕ್ರಮಿತ ಪಶ್ಚಿಮ ದಂಡೆಯ ಓಫರ್ ಜೈಲಿನಿಂದ 110 ಫೆಲೆಸ್ತೀನಿಯನ್ನರನ್ನು ಬಿಡುಗಡೆ ಮಾಡಿದೆ. ಅವರಲ್ಲಿ ಜೆನಿನ್ ಎಂಬ ಸಂಘರ್ಷ ಪೀಡಿತ ನಗರದ ಪ್ರಮುಖ ಮಾಜಿ ಹಮಾಸ್ ನಾಯಕನೂ ಸೇರಿದ್ದಾನೆ.

ಓಫರ್ ಜೈಲಿನ ಮೇಲಿರುವ ಪಶ್ಚಿಮ ದಂಡೆಯ ಬೀಟುನಿಯಾ ಪಟ್ಟಣದಲ್ಲಿ ಗುರುವಾರ ಇಸ್ರೇಲಿ ಮಿಲಿಟರಿ ಬಂಧಿತರ ಬಿಡುಗಡೆಯ ಕುರಿತು ಫೆಲೆಸ್ತೀನಿಯನ್ನರು ನಡೆಸುತ್ತಿದ್ದ ಸಾರ್ವಜನಿಕ ಆಚರಣೆಗಳನ್ನು ಸ್ಥಗಿತಗೊಳಿಸಿದೆ.

ಇಸ್ರೇಲಿ ಪಡೆಗಳು ರಬ್ಬರ್-ಲೇಪಿತ ಉಕ್ಕಿನ ಗುಂಡುಗಳನ್ನು ಹಾರಿಸಿದವು ಮತ್ತು ಸಣ್ಣ ಗುಂಪನ್ನು ತೆರವುಗೊಳಿಸಲು ಅಶ್ರುವಾಯು ಮತ್ತು ಸ್ಟನ್ ಗ್ರೆನೇಡ್‌ಗಳನ್ನು ಬಳಸಿದವು. “ಭದ್ರತಾ ಪಡೆಗಳು ಹಮಾಸ್ ಸಂಘಟನೆಗಳನ್ನು ಬೆಂಬಲಿಸುವ ಪ್ರದರ್ಶನಗಳನ್ನು ಅನುಮತಿಸುವುದಿಲ್ಲ” ಎಂದು ನೋಡುಗರಿಗೆ ಎಚ್ಚರಿಕೆ ನೀಡುವ ಅರೇಬಿಕ್ ಭಾಷೆಯ ಕರಪತ್ರಗಳನ್ನು ಅವರು ತೂರಿದರು.

ಸ್ಥಳೀಯ ಅರೆವೈದ್ಯರ ಪ್ರಕಾರ ಈ ಸಂದರ್ಭ ಕನಿಷ್ಠ 61 ಪ್ಯಾಲೆಸ್ತೇನಿಯನ್ನರು ಗಾಯಗೊಂಡಿದ್ದಾರೆ. ಫೆಲೆಸ್ತೀನ್ ರೆಡ್ ಕ್ರೆಸೆಂಟ್ ಸೊಸೈಟಿ ತನ್ನ ಸದಸ್ಯರು ಲೈವ್ ಗುಂಡುಗಳು, ರಬ್ಬರ್ ಗುಂಡುಗಳು ಮತ್ತು ಅಶ್ರುವಾಯುಗಳಿಂದ ಗಾಯಗೊಂಡ ರೋಗಿಗಳಿಗೆ ಮತ್ತು ಕೆಳಗೆ ಬಿದ್ದವರಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ಹೇಳಿದೆ.

ರಮಲ್ಲಾದ ಬೀದಿಗಳಲ್ಲಿ ಫೆಲೆಸ್ತೀನ್ ಯನ್ನರು ಬಿಡುಗಡೆಯಾದ ನಂತರ ಹರ್ಷೋದ್ಗಾರಗಳು ಕೇಳಿಬಂದವು. ಅಲ್ಲಿ ಬಿಡುಗಡೆಯಾದ ಕೆಲವು ಬಂಧಿತರನ್ನು ಭೇಟಿ ಮಾಡಲು ನೂರಾರು ಜನರು ಸೇರಿದ್ದರು. ಅಲ್ಲಿ ನೆರೆದಿದ್ದವರಲ್ಲಿ ಅನೇಕರು ಹಮಾಸ್‌ನ ಮಿಲಿಟರಿ ವಿಭಾಗವಾದ ಅಲ್-ಕಸ್ಸಾಮ್ ಬ್ರಿಗೇಡ್‌ಗಳಿಗೆ ಬೆಂಬಲವಾಗಿ ಘೋಷಣೆಗಳನ್ನು ಕೂಗಿದರು. ಹತ್ತಿರದ ಬೆಟ್ಟದ ಮೇಲೆ ಫತಾ ಬೆಂಬಲಿಗರ ಸಣ್ಣ ಗುಂಪು ಜಮಾಯಿಸಿತ್ತು.

ಬಿಡುಗಡೆಯಾದವರಲ್ಲಿ 30 ಮಕ್ಕಳಿದ್ದರು – ಕೆಲವರು ಆರೋಪವಿಲ್ಲದೆ ಬಂಧಿಸಲ್ಪಟ್ಟಿದ್ದರು ಮತ್ತು ಯಾರಿಗೂ ಶಿಕ್ಷೆಯಾಗಿಲ್ಲ ಎಂದು ಕಾನೂನು ನೆರವು ಸಂಸ್ಥೆಯಾದ ಅದಾಲಾ ತಿಳಿಸಿದೆ. ಜೀವಾವಧಿ ಶಿಕ್ಷೆ ವಿಧಿಸಲಾದ 32 ಕೈದಿಗಳು ಮತ್ತು “ಹೆಚ್ಚಿನ ಶಿಕ್ಷೆ” ವಿಧಿಸಲಾದ 48 ಕೈದಿಗಳು ಸಹ ಬಿಡುಗಡೆಯಾಗಿದ್ದಾರೆ. ಗಂಭೀರ ಶಿಕ್ಷೆ ವಿಧಿಸಲಾದ ಕೆಲವರನ್ನು ದೋಹಾದಲ್ಲಿ ಒಪ್ಪಿಕೊಂಡ ಕದನ ವಿರಾಮ ಒಪ್ಪಂದದ ನಿಯಮಗಳ ಪ್ರಕಾರ ಈಜಿಪ್ಟ್‌ಗೆ ಬಿಡುಗಡೆ ಮಾಡಲಾಗಿದೆ.

ಗುರುವಾರ ಬಿಡುಗಡೆಯಾದ ಪ್ರಮುಖ ವ್ಯಕ್ತಿಯೂ ಆಗಿರುವ  ಪಶ್ಚಿಮದಂಡೆಯನ್ನು ಆಳುವ ಫತಾಹ್ ಪಕ್ಷದ ಮಿಲಿಟರಿ ವಿಭಾಗವಾದ ಅಲ್-ಅಕ್ಸಾ ಹುತಾತ್ಮರ ಬ್ರಿಗೇಡ್‌ನ ಮಾಜಿ ಕಮಾಂಡರ್ ಜಕಾರಿಯಾ ಜುಬೇದಿಯ ಒಬ್ಬರಾಗಿದ್ದಾರೆ. ಅವರ ತಾಯಿ, ಸಹೋದರ ಮತ್ತು ಮಗ ಎಲ್ಲರೂ ಇಸ್ರೇಲಿ ಮಿಲಿಟರಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಮಾಜಿ ಬಾಲನಟ ಜುಬೇದಿ, ಆ ಸಂಘರ್ಷದ ನಂತರ ತಮ್ಮ ತವರು ಜೆನಿನ್ ನಿರಾಶ್ರಿತರ ಶಿಬಿರದಲ್ಲಿ ದಿ ಫ್ರೀಡಂ ಥಿಯೇಟರ್ ಅನ್ನು ಸಹ-ಸ್ಥಾಪಿಸಿದರು. ಇವರನ್ನು 2019ರಲ್ಲಿ ಬಂಧಿಸಲಾಯಿತು ಮತ್ತು ಇಸ್ರೇಲಿಗಳ ವಿರುದ್ಧ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಆರೋಪ ಹೊರಿಸಲಾಗಿತ್ತು. 2021ರಲ್ಲಿ ಇಸ್ರೇಲ್‌ನ ಹೆಚ್ಚಿನ ಭದ್ರತೆಯ ಗಿಲ್ಬೋವಾ ಜೈಲಿನಿಂದ ಹೊರಬಂದ ಗುಂಪಿನಲ್ಲಿ ಒಬ್ಬರಾದ ನಂತರ, ಹಲವಾರು ದಿನಗಳ ನಂತರ ಮತ್ತೆ ಬಂಧಿಸಲ್ಪಟ್ಟರು. ಇದರ ನಂತರ ಅವರು ಅನೇಕ ಪ್ಯಾಲೆಸ್ತೇನಿಯನ್ನರಲ್ಲಿ ಆರಾಧನಾ ಸ್ಥಾನಮಾನವನ್ನು ಗಳಿಸಿದರು.

ಇಸ್ರೇಲಿನಿಂದ 8 ಒತ್ತೆಯಾಳುಗಳ ಬಿಡುಗಡೆ

ಇದಕ್ಕೂ ಮೊದಲು ಹಮಾಸ್ 8 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು.  ಗಾಝಾ ಕದನ ವಿರಾಮ ಒಪ್ಪಂದದ ಅಡಿಯಲ್ಲಿ 3ನೇ ಹಂತದ ಒತ್ತೆಯಾಳು-ಕೈದಿಗಳ ವಿನಿಮಯ ನಡೆದಂತಾಗಿದೆ.

ಹಮಾಸ್ ನಿಂದ ಗುರುವಾರ ಮೂರು ಇಸ್ರೇಲಿ ಒತ್ತೆಯಾಳುಗಳನ್ನು ಮತ್ತು ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಸೆರೆಹಿಡಿಯಲಾದ ಐದು ವಿದೇಶಿಯರನ್ನು ಬಿಡುಗಡೆ ಮಾಡಲಾಗಿದೆ. ಇವರನ್ನು ರೆಡ್ ಕ್ರಾಸ್ ಅಂತರ್ ರಾಷ್ಟ್ರೀಯ ಸಮಿತಿಗೆ ಹಮಾಸ್ ಹಸ್ತಾಂತರಿಸಿದೆ. ಇದಕ್ಕೆ ಪ್ರತಿಯಾಗಿ 110 ಫೆಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡುವುದಾಗಿ ಇಸ್ರೇಲ್ ಹೇಳಿತ್ತು.

ಹಮಾಸ್ ನಿಂದ ಒಟ್ಟು 8 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ. ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಝಾ ಪಟ್ಟಿಯಲ್ಲಿ ಯುದ್ಧವನ್ನು ಕೊನೆಗೊಳಿಸುವ ಗುರಿಯೊಂದಿಗೆ ಕದನ ವಿರಾಮ ಒಪ್ಪಂದಕ್ಕೆ ಮುಂದಾದರು. ಅದರ ಭಾಗವಾಗಿ ಹಂತ ಹಂತವಾಗಿ ಎರಡೂ ಕಡೆ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ.

ಮೊದಲು ಬಿಡುಗಡೆಯಾದ ಇಸ್ರೇಲಿ ಮಹಿಳಾ ಸೈನಿಕೆ ಆಗಮ್ ಬರ್ಗರ್ (20) ಫೆಲೆಸ್ತೀನಿಯನ್ ಪ್ರದೇಶದ ಉತ್ತರದಲ್ಲಿರುವ ಜಬಾಲಿಯಾದಲ್ಲಿ ರೆಡ್‌ಕ್ರಾಸ್‌ನ ಅಂತರರಾಷ್ಟ್ರೀಯ ಸಮಿತಿಯ ಅಧಿಕಾರಿಗಳಿಗೆ ಹಸ್ತಾಂತರಿಸಲ್ಪಟ್ಟರು. ಬರ್ಗರ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿತ್ತು. ನಂತರ ಇಬ್ಬರು ಇಸ್ರೇಲಿಗಳು ಮತ್ತು ಐವರು ವಿದೇಶಿಯರನ್ನು ರೆಡ್‌ಕ್ರಾಸ್‌ಗೆ ಹಸ್ತಾಂತರಿಸಲಾಯಿತು.

ಜನವರಿ 25ರಂದು ಇಸ್ರೇಲ್​-ಹಮಾಸ್​ ಬಂಡುಕೋರರ ನಡುವಿನ ಗಾಝಾ ಪಟ್ಟಿ ಕದನ ವಿರಾಮ ಒಪ್ಪಂದದ ಅನುಸಾರ 2ನೇ ಹಂತದಲ್ಲಿ ಮತ್ತಷ್ಟು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದ್ದರು. ಗಾಝಾದಲ್ಲಿ ಸುಮಾರು 16 ತಿಂಗಳ ಸೆರೆಯಲ್ಲಿದ್ದ ನಾಲ್ಕು ಇಸ್ರೇಲಿ ಮಹಿಳಾ ಸೈನಿಕರನ್ನು ಹಮಾಸ್ ಬಿಡುಗಡೆ ಮಾಡಿದೆ.

ವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...