HomeUncategorizedGaza Ceasefire: ಇಸ್ರೇಲಿನಿಂದ 110 ಫೆಲೆಸ್ತೀನಿಯನ್ನರ ಬಿಡುಗಡೆ

Gaza Ceasefire: ಇಸ್ರೇಲಿನಿಂದ 110 ಫೆಲೆಸ್ತೀನಿಯನ್ನರ ಬಿಡುಗಡೆ

- Advertisement -
- Advertisement -

ಗುರುವಾರ ರಾತ್ರಿಯಾಗುತ್ತಿದ್ದಂತೆ, ಇಸ್ರೇಲಿ ಜೈಲು ಪ್ರಾಧಿಕಾರವು ಆಕ್ರಮಿತ ಪಶ್ಚಿಮ ದಂಡೆಯ ಓಫರ್ ಜೈಲಿನಿಂದ 110 ಫೆಲೆಸ್ತೀನಿಯನ್ನರನ್ನು ಬಿಡುಗಡೆ ಮಾಡಿದೆ. ಅವರಲ್ಲಿ ಜೆನಿನ್ ಎಂಬ ಸಂಘರ್ಷ ಪೀಡಿತ ನಗರದ ಪ್ರಮುಖ ಮಾಜಿ ಹಮಾಸ್ ನಾಯಕನೂ ಸೇರಿದ್ದಾನೆ.

ಓಫರ್ ಜೈಲಿನ ಮೇಲಿರುವ ಪಶ್ಚಿಮ ದಂಡೆಯ ಬೀಟುನಿಯಾ ಪಟ್ಟಣದಲ್ಲಿ ಗುರುವಾರ ಇಸ್ರೇಲಿ ಮಿಲಿಟರಿ ಬಂಧಿತರ ಬಿಡುಗಡೆಯ ಕುರಿತು ಫೆಲೆಸ್ತೀನಿಯನ್ನರು ನಡೆಸುತ್ತಿದ್ದ ಸಾರ್ವಜನಿಕ ಆಚರಣೆಗಳನ್ನು ಸ್ಥಗಿತಗೊಳಿಸಿದೆ.

ಇಸ್ರೇಲಿ ಪಡೆಗಳು ರಬ್ಬರ್-ಲೇಪಿತ ಉಕ್ಕಿನ ಗುಂಡುಗಳನ್ನು ಹಾರಿಸಿದವು ಮತ್ತು ಸಣ್ಣ ಗುಂಪನ್ನು ತೆರವುಗೊಳಿಸಲು ಅಶ್ರುವಾಯು ಮತ್ತು ಸ್ಟನ್ ಗ್ರೆನೇಡ್‌ಗಳನ್ನು ಬಳಸಿದವು. “ಭದ್ರತಾ ಪಡೆಗಳು ಹಮಾಸ್ ಸಂಘಟನೆಗಳನ್ನು ಬೆಂಬಲಿಸುವ ಪ್ರದರ್ಶನಗಳನ್ನು ಅನುಮತಿಸುವುದಿಲ್ಲ” ಎಂದು ನೋಡುಗರಿಗೆ ಎಚ್ಚರಿಕೆ ನೀಡುವ ಅರೇಬಿಕ್ ಭಾಷೆಯ ಕರಪತ್ರಗಳನ್ನು ಅವರು ತೂರಿದರು.

ಸ್ಥಳೀಯ ಅರೆವೈದ್ಯರ ಪ್ರಕಾರ ಈ ಸಂದರ್ಭ ಕನಿಷ್ಠ 61 ಪ್ಯಾಲೆಸ್ತೇನಿಯನ್ನರು ಗಾಯಗೊಂಡಿದ್ದಾರೆ. ಫೆಲೆಸ್ತೀನ್ ರೆಡ್ ಕ್ರೆಸೆಂಟ್ ಸೊಸೈಟಿ ತನ್ನ ಸದಸ್ಯರು ಲೈವ್ ಗುಂಡುಗಳು, ರಬ್ಬರ್ ಗುಂಡುಗಳು ಮತ್ತು ಅಶ್ರುವಾಯುಗಳಿಂದ ಗಾಯಗೊಂಡ ರೋಗಿಗಳಿಗೆ ಮತ್ತು ಕೆಳಗೆ ಬಿದ್ದವರಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ಹೇಳಿದೆ.

ರಮಲ್ಲಾದ ಬೀದಿಗಳಲ್ಲಿ ಫೆಲೆಸ್ತೀನ್ ಯನ್ನರು ಬಿಡುಗಡೆಯಾದ ನಂತರ ಹರ್ಷೋದ್ಗಾರಗಳು ಕೇಳಿಬಂದವು. ಅಲ್ಲಿ ಬಿಡುಗಡೆಯಾದ ಕೆಲವು ಬಂಧಿತರನ್ನು ಭೇಟಿ ಮಾಡಲು ನೂರಾರು ಜನರು ಸೇರಿದ್ದರು. ಅಲ್ಲಿ ನೆರೆದಿದ್ದವರಲ್ಲಿ ಅನೇಕರು ಹಮಾಸ್‌ನ ಮಿಲಿಟರಿ ವಿಭಾಗವಾದ ಅಲ್-ಕಸ್ಸಾಮ್ ಬ್ರಿಗೇಡ್‌ಗಳಿಗೆ ಬೆಂಬಲವಾಗಿ ಘೋಷಣೆಗಳನ್ನು ಕೂಗಿದರು. ಹತ್ತಿರದ ಬೆಟ್ಟದ ಮೇಲೆ ಫತಾ ಬೆಂಬಲಿಗರ ಸಣ್ಣ ಗುಂಪು ಜಮಾಯಿಸಿತ್ತು.

ಬಿಡುಗಡೆಯಾದವರಲ್ಲಿ 30 ಮಕ್ಕಳಿದ್ದರು – ಕೆಲವರು ಆರೋಪವಿಲ್ಲದೆ ಬಂಧಿಸಲ್ಪಟ್ಟಿದ್ದರು ಮತ್ತು ಯಾರಿಗೂ ಶಿಕ್ಷೆಯಾಗಿಲ್ಲ ಎಂದು ಕಾನೂನು ನೆರವು ಸಂಸ್ಥೆಯಾದ ಅದಾಲಾ ತಿಳಿಸಿದೆ. ಜೀವಾವಧಿ ಶಿಕ್ಷೆ ವಿಧಿಸಲಾದ 32 ಕೈದಿಗಳು ಮತ್ತು “ಹೆಚ್ಚಿನ ಶಿಕ್ಷೆ” ವಿಧಿಸಲಾದ 48 ಕೈದಿಗಳು ಸಹ ಬಿಡುಗಡೆಯಾಗಿದ್ದಾರೆ. ಗಂಭೀರ ಶಿಕ್ಷೆ ವಿಧಿಸಲಾದ ಕೆಲವರನ್ನು ದೋಹಾದಲ್ಲಿ ಒಪ್ಪಿಕೊಂಡ ಕದನ ವಿರಾಮ ಒಪ್ಪಂದದ ನಿಯಮಗಳ ಪ್ರಕಾರ ಈಜಿಪ್ಟ್‌ಗೆ ಬಿಡುಗಡೆ ಮಾಡಲಾಗಿದೆ.

ಗುರುವಾರ ಬಿಡುಗಡೆಯಾದ ಪ್ರಮುಖ ವ್ಯಕ್ತಿಯೂ ಆಗಿರುವ  ಪಶ್ಚಿಮದಂಡೆಯನ್ನು ಆಳುವ ಫತಾಹ್ ಪಕ್ಷದ ಮಿಲಿಟರಿ ವಿಭಾಗವಾದ ಅಲ್-ಅಕ್ಸಾ ಹುತಾತ್ಮರ ಬ್ರಿಗೇಡ್‌ನ ಮಾಜಿ ಕಮಾಂಡರ್ ಜಕಾರಿಯಾ ಜುಬೇದಿಯ ಒಬ್ಬರಾಗಿದ್ದಾರೆ. ಅವರ ತಾಯಿ, ಸಹೋದರ ಮತ್ತು ಮಗ ಎಲ್ಲರೂ ಇಸ್ರೇಲಿ ಮಿಲಿಟರಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಮಾಜಿ ಬಾಲನಟ ಜುಬೇದಿ, ಆ ಸಂಘರ್ಷದ ನಂತರ ತಮ್ಮ ತವರು ಜೆನಿನ್ ನಿರಾಶ್ರಿತರ ಶಿಬಿರದಲ್ಲಿ ದಿ ಫ್ರೀಡಂ ಥಿಯೇಟರ್ ಅನ್ನು ಸಹ-ಸ್ಥಾಪಿಸಿದರು. ಇವರನ್ನು 2019ರಲ್ಲಿ ಬಂಧಿಸಲಾಯಿತು ಮತ್ತು ಇಸ್ರೇಲಿಗಳ ವಿರುದ್ಧ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಆರೋಪ ಹೊರಿಸಲಾಗಿತ್ತು. 2021ರಲ್ಲಿ ಇಸ್ರೇಲ್‌ನ ಹೆಚ್ಚಿನ ಭದ್ರತೆಯ ಗಿಲ್ಬೋವಾ ಜೈಲಿನಿಂದ ಹೊರಬಂದ ಗುಂಪಿನಲ್ಲಿ ಒಬ್ಬರಾದ ನಂತರ, ಹಲವಾರು ದಿನಗಳ ನಂತರ ಮತ್ತೆ ಬಂಧಿಸಲ್ಪಟ್ಟರು. ಇದರ ನಂತರ ಅವರು ಅನೇಕ ಪ್ಯಾಲೆಸ್ತೇನಿಯನ್ನರಲ್ಲಿ ಆರಾಧನಾ ಸ್ಥಾನಮಾನವನ್ನು ಗಳಿಸಿದರು.

ಇಸ್ರೇಲಿನಿಂದ 8 ಒತ್ತೆಯಾಳುಗಳ ಬಿಡುಗಡೆ

ಇದಕ್ಕೂ ಮೊದಲು ಹಮಾಸ್ 8 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು.  ಗಾಝಾ ಕದನ ವಿರಾಮ ಒಪ್ಪಂದದ ಅಡಿಯಲ್ಲಿ 3ನೇ ಹಂತದ ಒತ್ತೆಯಾಳು-ಕೈದಿಗಳ ವಿನಿಮಯ ನಡೆದಂತಾಗಿದೆ.

ಹಮಾಸ್ ನಿಂದ ಗುರುವಾರ ಮೂರು ಇಸ್ರೇಲಿ ಒತ್ತೆಯಾಳುಗಳನ್ನು ಮತ್ತು ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಸೆರೆಹಿಡಿಯಲಾದ ಐದು ವಿದೇಶಿಯರನ್ನು ಬಿಡುಗಡೆ ಮಾಡಲಾಗಿದೆ. ಇವರನ್ನು ರೆಡ್ ಕ್ರಾಸ್ ಅಂತರ್ ರಾಷ್ಟ್ರೀಯ ಸಮಿತಿಗೆ ಹಮಾಸ್ ಹಸ್ತಾಂತರಿಸಿದೆ. ಇದಕ್ಕೆ ಪ್ರತಿಯಾಗಿ 110 ಫೆಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡುವುದಾಗಿ ಇಸ್ರೇಲ್ ಹೇಳಿತ್ತು.

ಹಮಾಸ್ ನಿಂದ ಒಟ್ಟು 8 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ. ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಝಾ ಪಟ್ಟಿಯಲ್ಲಿ ಯುದ್ಧವನ್ನು ಕೊನೆಗೊಳಿಸುವ ಗುರಿಯೊಂದಿಗೆ ಕದನ ವಿರಾಮ ಒಪ್ಪಂದಕ್ಕೆ ಮುಂದಾದರು. ಅದರ ಭಾಗವಾಗಿ ಹಂತ ಹಂತವಾಗಿ ಎರಡೂ ಕಡೆ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ.

ಮೊದಲು ಬಿಡುಗಡೆಯಾದ ಇಸ್ರೇಲಿ ಮಹಿಳಾ ಸೈನಿಕೆ ಆಗಮ್ ಬರ್ಗರ್ (20) ಫೆಲೆಸ್ತೀನಿಯನ್ ಪ್ರದೇಶದ ಉತ್ತರದಲ್ಲಿರುವ ಜಬಾಲಿಯಾದಲ್ಲಿ ರೆಡ್‌ಕ್ರಾಸ್‌ನ ಅಂತರರಾಷ್ಟ್ರೀಯ ಸಮಿತಿಯ ಅಧಿಕಾರಿಗಳಿಗೆ ಹಸ್ತಾಂತರಿಸಲ್ಪಟ್ಟರು. ಬರ್ಗರ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿತ್ತು. ನಂತರ ಇಬ್ಬರು ಇಸ್ರೇಲಿಗಳು ಮತ್ತು ಐವರು ವಿದೇಶಿಯರನ್ನು ರೆಡ್‌ಕ್ರಾಸ್‌ಗೆ ಹಸ್ತಾಂತರಿಸಲಾಯಿತು.

ಜನವರಿ 25ರಂದು ಇಸ್ರೇಲ್​-ಹಮಾಸ್​ ಬಂಡುಕೋರರ ನಡುವಿನ ಗಾಝಾ ಪಟ್ಟಿ ಕದನ ವಿರಾಮ ಒಪ್ಪಂದದ ಅನುಸಾರ 2ನೇ ಹಂತದಲ್ಲಿ ಮತ್ತಷ್ಟು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದ್ದರು. ಗಾಝಾದಲ್ಲಿ ಸುಮಾರು 16 ತಿಂಗಳ ಸೆರೆಯಲ್ಲಿದ್ದ ನಾಲ್ಕು ಇಸ್ರೇಲಿ ಮಹಿಳಾ ಸೈನಿಕರನ್ನು ಹಮಾಸ್ ಬಿಡುಗಡೆ ಮಾಡಿದೆ.

ವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...