HomeUncategorizedGaza Ceasefire: ಇಸ್ರೇಲಿನಿಂದ 110 ಫೆಲೆಸ್ತೀನಿಯನ್ನರ ಬಿಡುಗಡೆ

Gaza Ceasefire: ಇಸ್ರೇಲಿನಿಂದ 110 ಫೆಲೆಸ್ತೀನಿಯನ್ನರ ಬಿಡುಗಡೆ

- Advertisement -
- Advertisement -

ಗುರುವಾರ ರಾತ್ರಿಯಾಗುತ್ತಿದ್ದಂತೆ, ಇಸ್ರೇಲಿ ಜೈಲು ಪ್ರಾಧಿಕಾರವು ಆಕ್ರಮಿತ ಪಶ್ಚಿಮ ದಂಡೆಯ ಓಫರ್ ಜೈಲಿನಿಂದ 110 ಫೆಲೆಸ್ತೀನಿಯನ್ನರನ್ನು ಬಿಡುಗಡೆ ಮಾಡಿದೆ. ಅವರಲ್ಲಿ ಜೆನಿನ್ ಎಂಬ ಸಂಘರ್ಷ ಪೀಡಿತ ನಗರದ ಪ್ರಮುಖ ಮಾಜಿ ಹಮಾಸ್ ನಾಯಕನೂ ಸೇರಿದ್ದಾನೆ.

ಓಫರ್ ಜೈಲಿನ ಮೇಲಿರುವ ಪಶ್ಚಿಮ ದಂಡೆಯ ಬೀಟುನಿಯಾ ಪಟ್ಟಣದಲ್ಲಿ ಗುರುವಾರ ಇಸ್ರೇಲಿ ಮಿಲಿಟರಿ ಬಂಧಿತರ ಬಿಡುಗಡೆಯ ಕುರಿತು ಫೆಲೆಸ್ತೀನಿಯನ್ನರು ನಡೆಸುತ್ತಿದ್ದ ಸಾರ್ವಜನಿಕ ಆಚರಣೆಗಳನ್ನು ಸ್ಥಗಿತಗೊಳಿಸಿದೆ.

ಇಸ್ರೇಲಿ ಪಡೆಗಳು ರಬ್ಬರ್-ಲೇಪಿತ ಉಕ್ಕಿನ ಗುಂಡುಗಳನ್ನು ಹಾರಿಸಿದವು ಮತ್ತು ಸಣ್ಣ ಗುಂಪನ್ನು ತೆರವುಗೊಳಿಸಲು ಅಶ್ರುವಾಯು ಮತ್ತು ಸ್ಟನ್ ಗ್ರೆನೇಡ್‌ಗಳನ್ನು ಬಳಸಿದವು. “ಭದ್ರತಾ ಪಡೆಗಳು ಹಮಾಸ್ ಸಂಘಟನೆಗಳನ್ನು ಬೆಂಬಲಿಸುವ ಪ್ರದರ್ಶನಗಳನ್ನು ಅನುಮತಿಸುವುದಿಲ್ಲ” ಎಂದು ನೋಡುಗರಿಗೆ ಎಚ್ಚರಿಕೆ ನೀಡುವ ಅರೇಬಿಕ್ ಭಾಷೆಯ ಕರಪತ್ರಗಳನ್ನು ಅವರು ತೂರಿದರು.

ಸ್ಥಳೀಯ ಅರೆವೈದ್ಯರ ಪ್ರಕಾರ ಈ ಸಂದರ್ಭ ಕನಿಷ್ಠ 61 ಪ್ಯಾಲೆಸ್ತೇನಿಯನ್ನರು ಗಾಯಗೊಂಡಿದ್ದಾರೆ. ಫೆಲೆಸ್ತೀನ್ ರೆಡ್ ಕ್ರೆಸೆಂಟ್ ಸೊಸೈಟಿ ತನ್ನ ಸದಸ್ಯರು ಲೈವ್ ಗುಂಡುಗಳು, ರಬ್ಬರ್ ಗುಂಡುಗಳು ಮತ್ತು ಅಶ್ರುವಾಯುಗಳಿಂದ ಗಾಯಗೊಂಡ ರೋಗಿಗಳಿಗೆ ಮತ್ತು ಕೆಳಗೆ ಬಿದ್ದವರಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ಹೇಳಿದೆ.

ರಮಲ್ಲಾದ ಬೀದಿಗಳಲ್ಲಿ ಫೆಲೆಸ್ತೀನ್ ಯನ್ನರು ಬಿಡುಗಡೆಯಾದ ನಂತರ ಹರ್ಷೋದ್ಗಾರಗಳು ಕೇಳಿಬಂದವು. ಅಲ್ಲಿ ಬಿಡುಗಡೆಯಾದ ಕೆಲವು ಬಂಧಿತರನ್ನು ಭೇಟಿ ಮಾಡಲು ನೂರಾರು ಜನರು ಸೇರಿದ್ದರು. ಅಲ್ಲಿ ನೆರೆದಿದ್ದವರಲ್ಲಿ ಅನೇಕರು ಹಮಾಸ್‌ನ ಮಿಲಿಟರಿ ವಿಭಾಗವಾದ ಅಲ್-ಕಸ್ಸಾಮ್ ಬ್ರಿಗೇಡ್‌ಗಳಿಗೆ ಬೆಂಬಲವಾಗಿ ಘೋಷಣೆಗಳನ್ನು ಕೂಗಿದರು. ಹತ್ತಿರದ ಬೆಟ್ಟದ ಮೇಲೆ ಫತಾ ಬೆಂಬಲಿಗರ ಸಣ್ಣ ಗುಂಪು ಜಮಾಯಿಸಿತ್ತು.

ಬಿಡುಗಡೆಯಾದವರಲ್ಲಿ 30 ಮಕ್ಕಳಿದ್ದರು – ಕೆಲವರು ಆರೋಪವಿಲ್ಲದೆ ಬಂಧಿಸಲ್ಪಟ್ಟಿದ್ದರು ಮತ್ತು ಯಾರಿಗೂ ಶಿಕ್ಷೆಯಾಗಿಲ್ಲ ಎಂದು ಕಾನೂನು ನೆರವು ಸಂಸ್ಥೆಯಾದ ಅದಾಲಾ ತಿಳಿಸಿದೆ. ಜೀವಾವಧಿ ಶಿಕ್ಷೆ ವಿಧಿಸಲಾದ 32 ಕೈದಿಗಳು ಮತ್ತು “ಹೆಚ್ಚಿನ ಶಿಕ್ಷೆ” ವಿಧಿಸಲಾದ 48 ಕೈದಿಗಳು ಸಹ ಬಿಡುಗಡೆಯಾಗಿದ್ದಾರೆ. ಗಂಭೀರ ಶಿಕ್ಷೆ ವಿಧಿಸಲಾದ ಕೆಲವರನ್ನು ದೋಹಾದಲ್ಲಿ ಒಪ್ಪಿಕೊಂಡ ಕದನ ವಿರಾಮ ಒಪ್ಪಂದದ ನಿಯಮಗಳ ಪ್ರಕಾರ ಈಜಿಪ್ಟ್‌ಗೆ ಬಿಡುಗಡೆ ಮಾಡಲಾಗಿದೆ.

ಗುರುವಾರ ಬಿಡುಗಡೆಯಾದ ಪ್ರಮುಖ ವ್ಯಕ್ತಿಯೂ ಆಗಿರುವ  ಪಶ್ಚಿಮದಂಡೆಯನ್ನು ಆಳುವ ಫತಾಹ್ ಪಕ್ಷದ ಮಿಲಿಟರಿ ವಿಭಾಗವಾದ ಅಲ್-ಅಕ್ಸಾ ಹುತಾತ್ಮರ ಬ್ರಿಗೇಡ್‌ನ ಮಾಜಿ ಕಮಾಂಡರ್ ಜಕಾರಿಯಾ ಜುಬೇದಿಯ ಒಬ್ಬರಾಗಿದ್ದಾರೆ. ಅವರ ತಾಯಿ, ಸಹೋದರ ಮತ್ತು ಮಗ ಎಲ್ಲರೂ ಇಸ್ರೇಲಿ ಮಿಲಿಟರಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಮಾಜಿ ಬಾಲನಟ ಜುಬೇದಿ, ಆ ಸಂಘರ್ಷದ ನಂತರ ತಮ್ಮ ತವರು ಜೆನಿನ್ ನಿರಾಶ್ರಿತರ ಶಿಬಿರದಲ್ಲಿ ದಿ ಫ್ರೀಡಂ ಥಿಯೇಟರ್ ಅನ್ನು ಸಹ-ಸ್ಥಾಪಿಸಿದರು. ಇವರನ್ನು 2019ರಲ್ಲಿ ಬಂಧಿಸಲಾಯಿತು ಮತ್ತು ಇಸ್ರೇಲಿಗಳ ವಿರುದ್ಧ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಆರೋಪ ಹೊರಿಸಲಾಗಿತ್ತು. 2021ರಲ್ಲಿ ಇಸ್ರೇಲ್‌ನ ಹೆಚ್ಚಿನ ಭದ್ರತೆಯ ಗಿಲ್ಬೋವಾ ಜೈಲಿನಿಂದ ಹೊರಬಂದ ಗುಂಪಿನಲ್ಲಿ ಒಬ್ಬರಾದ ನಂತರ, ಹಲವಾರು ದಿನಗಳ ನಂತರ ಮತ್ತೆ ಬಂಧಿಸಲ್ಪಟ್ಟರು. ಇದರ ನಂತರ ಅವರು ಅನೇಕ ಪ್ಯಾಲೆಸ್ತೇನಿಯನ್ನರಲ್ಲಿ ಆರಾಧನಾ ಸ್ಥಾನಮಾನವನ್ನು ಗಳಿಸಿದರು.

ಇಸ್ರೇಲಿನಿಂದ 8 ಒತ್ತೆಯಾಳುಗಳ ಬಿಡುಗಡೆ

ಇದಕ್ಕೂ ಮೊದಲು ಹಮಾಸ್ 8 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು.  ಗಾಝಾ ಕದನ ವಿರಾಮ ಒಪ್ಪಂದದ ಅಡಿಯಲ್ಲಿ 3ನೇ ಹಂತದ ಒತ್ತೆಯಾಳು-ಕೈದಿಗಳ ವಿನಿಮಯ ನಡೆದಂತಾಗಿದೆ.

ಹಮಾಸ್ ನಿಂದ ಗುರುವಾರ ಮೂರು ಇಸ್ರೇಲಿ ಒತ್ತೆಯಾಳುಗಳನ್ನು ಮತ್ತು ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಸೆರೆಹಿಡಿಯಲಾದ ಐದು ವಿದೇಶಿಯರನ್ನು ಬಿಡುಗಡೆ ಮಾಡಲಾಗಿದೆ. ಇವರನ್ನು ರೆಡ್ ಕ್ರಾಸ್ ಅಂತರ್ ರಾಷ್ಟ್ರೀಯ ಸಮಿತಿಗೆ ಹಮಾಸ್ ಹಸ್ತಾಂತರಿಸಿದೆ. ಇದಕ್ಕೆ ಪ್ರತಿಯಾಗಿ 110 ಫೆಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡುವುದಾಗಿ ಇಸ್ರೇಲ್ ಹೇಳಿತ್ತು.

ಹಮಾಸ್ ನಿಂದ ಒಟ್ಟು 8 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ. ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಝಾ ಪಟ್ಟಿಯಲ್ಲಿ ಯುದ್ಧವನ್ನು ಕೊನೆಗೊಳಿಸುವ ಗುರಿಯೊಂದಿಗೆ ಕದನ ವಿರಾಮ ಒಪ್ಪಂದಕ್ಕೆ ಮುಂದಾದರು. ಅದರ ಭಾಗವಾಗಿ ಹಂತ ಹಂತವಾಗಿ ಎರಡೂ ಕಡೆ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ.

ಮೊದಲು ಬಿಡುಗಡೆಯಾದ ಇಸ್ರೇಲಿ ಮಹಿಳಾ ಸೈನಿಕೆ ಆಗಮ್ ಬರ್ಗರ್ (20) ಫೆಲೆಸ್ತೀನಿಯನ್ ಪ್ರದೇಶದ ಉತ್ತರದಲ್ಲಿರುವ ಜಬಾಲಿಯಾದಲ್ಲಿ ರೆಡ್‌ಕ್ರಾಸ್‌ನ ಅಂತರರಾಷ್ಟ್ರೀಯ ಸಮಿತಿಯ ಅಧಿಕಾರಿಗಳಿಗೆ ಹಸ್ತಾಂತರಿಸಲ್ಪಟ್ಟರು. ಬರ್ಗರ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿತ್ತು. ನಂತರ ಇಬ್ಬರು ಇಸ್ರೇಲಿಗಳು ಮತ್ತು ಐವರು ವಿದೇಶಿಯರನ್ನು ರೆಡ್‌ಕ್ರಾಸ್‌ಗೆ ಹಸ್ತಾಂತರಿಸಲಾಯಿತು.

ಜನವರಿ 25ರಂದು ಇಸ್ರೇಲ್​-ಹಮಾಸ್​ ಬಂಡುಕೋರರ ನಡುವಿನ ಗಾಝಾ ಪಟ್ಟಿ ಕದನ ವಿರಾಮ ಒಪ್ಪಂದದ ಅನುಸಾರ 2ನೇ ಹಂತದಲ್ಲಿ ಮತ್ತಷ್ಟು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದ್ದರು. ಗಾಝಾದಲ್ಲಿ ಸುಮಾರು 16 ತಿಂಗಳ ಸೆರೆಯಲ್ಲಿದ್ದ ನಾಲ್ಕು ಇಸ್ರೇಲಿ ಮಹಿಳಾ ಸೈನಿಕರನ್ನು ಹಮಾಸ್ ಬಿಡುಗಡೆ ಮಾಡಿದೆ.

ವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...