HomeUncategorizedGaza Ceasefire: ಇಸ್ರೇಲಿನಿಂದ 110 ಫೆಲೆಸ್ತೀನಿಯನ್ನರ ಬಿಡುಗಡೆ

Gaza Ceasefire: ಇಸ್ರೇಲಿನಿಂದ 110 ಫೆಲೆಸ್ತೀನಿಯನ್ನರ ಬಿಡುಗಡೆ

- Advertisement -
- Advertisement -

ಗುರುವಾರ ರಾತ್ರಿಯಾಗುತ್ತಿದ್ದಂತೆ, ಇಸ್ರೇಲಿ ಜೈಲು ಪ್ರಾಧಿಕಾರವು ಆಕ್ರಮಿತ ಪಶ್ಚಿಮ ದಂಡೆಯ ಓಫರ್ ಜೈಲಿನಿಂದ 110 ಫೆಲೆಸ್ತೀನಿಯನ್ನರನ್ನು ಬಿಡುಗಡೆ ಮಾಡಿದೆ. ಅವರಲ್ಲಿ ಜೆನಿನ್ ಎಂಬ ಸಂಘರ್ಷ ಪೀಡಿತ ನಗರದ ಪ್ರಮುಖ ಮಾಜಿ ಹಮಾಸ್ ನಾಯಕನೂ ಸೇರಿದ್ದಾನೆ.

ಓಫರ್ ಜೈಲಿನ ಮೇಲಿರುವ ಪಶ್ಚಿಮ ದಂಡೆಯ ಬೀಟುನಿಯಾ ಪಟ್ಟಣದಲ್ಲಿ ಗುರುವಾರ ಇಸ್ರೇಲಿ ಮಿಲಿಟರಿ ಬಂಧಿತರ ಬಿಡುಗಡೆಯ ಕುರಿತು ಫೆಲೆಸ್ತೀನಿಯನ್ನರು ನಡೆಸುತ್ತಿದ್ದ ಸಾರ್ವಜನಿಕ ಆಚರಣೆಗಳನ್ನು ಸ್ಥಗಿತಗೊಳಿಸಿದೆ.

ಇಸ್ರೇಲಿ ಪಡೆಗಳು ರಬ್ಬರ್-ಲೇಪಿತ ಉಕ್ಕಿನ ಗುಂಡುಗಳನ್ನು ಹಾರಿಸಿದವು ಮತ್ತು ಸಣ್ಣ ಗುಂಪನ್ನು ತೆರವುಗೊಳಿಸಲು ಅಶ್ರುವಾಯು ಮತ್ತು ಸ್ಟನ್ ಗ್ರೆನೇಡ್‌ಗಳನ್ನು ಬಳಸಿದವು. “ಭದ್ರತಾ ಪಡೆಗಳು ಹಮಾಸ್ ಸಂಘಟನೆಗಳನ್ನು ಬೆಂಬಲಿಸುವ ಪ್ರದರ್ಶನಗಳನ್ನು ಅನುಮತಿಸುವುದಿಲ್ಲ” ಎಂದು ನೋಡುಗರಿಗೆ ಎಚ್ಚರಿಕೆ ನೀಡುವ ಅರೇಬಿಕ್ ಭಾಷೆಯ ಕರಪತ್ರಗಳನ್ನು ಅವರು ತೂರಿದರು.

ಸ್ಥಳೀಯ ಅರೆವೈದ್ಯರ ಪ್ರಕಾರ ಈ ಸಂದರ್ಭ ಕನಿಷ್ಠ 61 ಪ್ಯಾಲೆಸ್ತೇನಿಯನ್ನರು ಗಾಯಗೊಂಡಿದ್ದಾರೆ. ಫೆಲೆಸ್ತೀನ್ ರೆಡ್ ಕ್ರೆಸೆಂಟ್ ಸೊಸೈಟಿ ತನ್ನ ಸದಸ್ಯರು ಲೈವ್ ಗುಂಡುಗಳು, ರಬ್ಬರ್ ಗುಂಡುಗಳು ಮತ್ತು ಅಶ್ರುವಾಯುಗಳಿಂದ ಗಾಯಗೊಂಡ ರೋಗಿಗಳಿಗೆ ಮತ್ತು ಕೆಳಗೆ ಬಿದ್ದವರಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ಹೇಳಿದೆ.

ರಮಲ್ಲಾದ ಬೀದಿಗಳಲ್ಲಿ ಫೆಲೆಸ್ತೀನ್ ಯನ್ನರು ಬಿಡುಗಡೆಯಾದ ನಂತರ ಹರ್ಷೋದ್ಗಾರಗಳು ಕೇಳಿಬಂದವು. ಅಲ್ಲಿ ಬಿಡುಗಡೆಯಾದ ಕೆಲವು ಬಂಧಿತರನ್ನು ಭೇಟಿ ಮಾಡಲು ನೂರಾರು ಜನರು ಸೇರಿದ್ದರು. ಅಲ್ಲಿ ನೆರೆದಿದ್ದವರಲ್ಲಿ ಅನೇಕರು ಹಮಾಸ್‌ನ ಮಿಲಿಟರಿ ವಿಭಾಗವಾದ ಅಲ್-ಕಸ್ಸಾಮ್ ಬ್ರಿಗೇಡ್‌ಗಳಿಗೆ ಬೆಂಬಲವಾಗಿ ಘೋಷಣೆಗಳನ್ನು ಕೂಗಿದರು. ಹತ್ತಿರದ ಬೆಟ್ಟದ ಮೇಲೆ ಫತಾ ಬೆಂಬಲಿಗರ ಸಣ್ಣ ಗುಂಪು ಜಮಾಯಿಸಿತ್ತು.

ಬಿಡುಗಡೆಯಾದವರಲ್ಲಿ 30 ಮಕ್ಕಳಿದ್ದರು – ಕೆಲವರು ಆರೋಪವಿಲ್ಲದೆ ಬಂಧಿಸಲ್ಪಟ್ಟಿದ್ದರು ಮತ್ತು ಯಾರಿಗೂ ಶಿಕ್ಷೆಯಾಗಿಲ್ಲ ಎಂದು ಕಾನೂನು ನೆರವು ಸಂಸ್ಥೆಯಾದ ಅದಾಲಾ ತಿಳಿಸಿದೆ. ಜೀವಾವಧಿ ಶಿಕ್ಷೆ ವಿಧಿಸಲಾದ 32 ಕೈದಿಗಳು ಮತ್ತು “ಹೆಚ್ಚಿನ ಶಿಕ್ಷೆ” ವಿಧಿಸಲಾದ 48 ಕೈದಿಗಳು ಸಹ ಬಿಡುಗಡೆಯಾಗಿದ್ದಾರೆ. ಗಂಭೀರ ಶಿಕ್ಷೆ ವಿಧಿಸಲಾದ ಕೆಲವರನ್ನು ದೋಹಾದಲ್ಲಿ ಒಪ್ಪಿಕೊಂಡ ಕದನ ವಿರಾಮ ಒಪ್ಪಂದದ ನಿಯಮಗಳ ಪ್ರಕಾರ ಈಜಿಪ್ಟ್‌ಗೆ ಬಿಡುಗಡೆ ಮಾಡಲಾಗಿದೆ.

ಗುರುವಾರ ಬಿಡುಗಡೆಯಾದ ಪ್ರಮುಖ ವ್ಯಕ್ತಿಯೂ ಆಗಿರುವ  ಪಶ್ಚಿಮದಂಡೆಯನ್ನು ಆಳುವ ಫತಾಹ್ ಪಕ್ಷದ ಮಿಲಿಟರಿ ವಿಭಾಗವಾದ ಅಲ್-ಅಕ್ಸಾ ಹುತಾತ್ಮರ ಬ್ರಿಗೇಡ್‌ನ ಮಾಜಿ ಕಮಾಂಡರ್ ಜಕಾರಿಯಾ ಜುಬೇದಿಯ ಒಬ್ಬರಾಗಿದ್ದಾರೆ. ಅವರ ತಾಯಿ, ಸಹೋದರ ಮತ್ತು ಮಗ ಎಲ್ಲರೂ ಇಸ್ರೇಲಿ ಮಿಲಿಟರಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಮಾಜಿ ಬಾಲನಟ ಜುಬೇದಿ, ಆ ಸಂಘರ್ಷದ ನಂತರ ತಮ್ಮ ತವರು ಜೆನಿನ್ ನಿರಾಶ್ರಿತರ ಶಿಬಿರದಲ್ಲಿ ದಿ ಫ್ರೀಡಂ ಥಿಯೇಟರ್ ಅನ್ನು ಸಹ-ಸ್ಥಾಪಿಸಿದರು. ಇವರನ್ನು 2019ರಲ್ಲಿ ಬಂಧಿಸಲಾಯಿತು ಮತ್ತು ಇಸ್ರೇಲಿಗಳ ವಿರುದ್ಧ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಆರೋಪ ಹೊರಿಸಲಾಗಿತ್ತು. 2021ರಲ್ಲಿ ಇಸ್ರೇಲ್‌ನ ಹೆಚ್ಚಿನ ಭದ್ರತೆಯ ಗಿಲ್ಬೋವಾ ಜೈಲಿನಿಂದ ಹೊರಬಂದ ಗುಂಪಿನಲ್ಲಿ ಒಬ್ಬರಾದ ನಂತರ, ಹಲವಾರು ದಿನಗಳ ನಂತರ ಮತ್ತೆ ಬಂಧಿಸಲ್ಪಟ್ಟರು. ಇದರ ನಂತರ ಅವರು ಅನೇಕ ಪ್ಯಾಲೆಸ್ತೇನಿಯನ್ನರಲ್ಲಿ ಆರಾಧನಾ ಸ್ಥಾನಮಾನವನ್ನು ಗಳಿಸಿದರು.

ಇಸ್ರೇಲಿನಿಂದ 8 ಒತ್ತೆಯಾಳುಗಳ ಬಿಡುಗಡೆ

ಇದಕ್ಕೂ ಮೊದಲು ಹಮಾಸ್ 8 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು.  ಗಾಝಾ ಕದನ ವಿರಾಮ ಒಪ್ಪಂದದ ಅಡಿಯಲ್ಲಿ 3ನೇ ಹಂತದ ಒತ್ತೆಯಾಳು-ಕೈದಿಗಳ ವಿನಿಮಯ ನಡೆದಂತಾಗಿದೆ.

ಹಮಾಸ್ ನಿಂದ ಗುರುವಾರ ಮೂರು ಇಸ್ರೇಲಿ ಒತ್ತೆಯಾಳುಗಳನ್ನು ಮತ್ತು ಅಕ್ಟೋಬರ್ 7, 2023 ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಸೆರೆಹಿಡಿಯಲಾದ ಐದು ವಿದೇಶಿಯರನ್ನು ಬಿಡುಗಡೆ ಮಾಡಲಾಗಿದೆ. ಇವರನ್ನು ರೆಡ್ ಕ್ರಾಸ್ ಅಂತರ್ ರಾಷ್ಟ್ರೀಯ ಸಮಿತಿಗೆ ಹಮಾಸ್ ಹಸ್ತಾಂತರಿಸಿದೆ. ಇದಕ್ಕೆ ಪ್ರತಿಯಾಗಿ 110 ಫೆಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡುವುದಾಗಿ ಇಸ್ರೇಲ್ ಹೇಳಿತ್ತು.

ಹಮಾಸ್ ನಿಂದ ಒಟ್ಟು 8 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ. ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಝಾ ಪಟ್ಟಿಯಲ್ಲಿ ಯುದ್ಧವನ್ನು ಕೊನೆಗೊಳಿಸುವ ಗುರಿಯೊಂದಿಗೆ ಕದನ ವಿರಾಮ ಒಪ್ಪಂದಕ್ಕೆ ಮುಂದಾದರು. ಅದರ ಭಾಗವಾಗಿ ಹಂತ ಹಂತವಾಗಿ ಎರಡೂ ಕಡೆ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ.

ಮೊದಲು ಬಿಡುಗಡೆಯಾದ ಇಸ್ರೇಲಿ ಮಹಿಳಾ ಸೈನಿಕೆ ಆಗಮ್ ಬರ್ಗರ್ (20) ಫೆಲೆಸ್ತೀನಿಯನ್ ಪ್ರದೇಶದ ಉತ್ತರದಲ್ಲಿರುವ ಜಬಾಲಿಯಾದಲ್ಲಿ ರೆಡ್‌ಕ್ರಾಸ್‌ನ ಅಂತರರಾಷ್ಟ್ರೀಯ ಸಮಿತಿಯ ಅಧಿಕಾರಿಗಳಿಗೆ ಹಸ್ತಾಂತರಿಸಲ್ಪಟ್ಟರು. ಬರ್ಗರ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿತ್ತು. ನಂತರ ಇಬ್ಬರು ಇಸ್ರೇಲಿಗಳು ಮತ್ತು ಐವರು ವಿದೇಶಿಯರನ್ನು ರೆಡ್‌ಕ್ರಾಸ್‌ಗೆ ಹಸ್ತಾಂತರಿಸಲಾಯಿತು.

ಜನವರಿ 25ರಂದು ಇಸ್ರೇಲ್​-ಹಮಾಸ್​ ಬಂಡುಕೋರರ ನಡುವಿನ ಗಾಝಾ ಪಟ್ಟಿ ಕದನ ವಿರಾಮ ಒಪ್ಪಂದದ ಅನುಸಾರ 2ನೇ ಹಂತದಲ್ಲಿ ಮತ್ತಷ್ಟು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದ್ದರು. ಗಾಝಾದಲ್ಲಿ ಸುಮಾರು 16 ತಿಂಗಳ ಸೆರೆಯಲ್ಲಿದ್ದ ನಾಲ್ಕು ಇಸ್ರೇಲಿ ಮಹಿಳಾ ಸೈನಿಕರನ್ನು ಹಮಾಸ್ ಬಿಡುಗಡೆ ಮಾಡಿದೆ.

ವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ : ಎಲ್ಲಾ 67 ಪ್ರಯಾಣಿಕರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...