Homeಅಂತರಾಷ್ಟ್ರೀಯಉತ್ತರ ಲೆಬನಾನ್ ಗುರಿಯಾಗಿರಿಸಿಕೊಂಡ ಇಸ್ರೇಲ್; ಇತ್ತೀಚಿನ ವೈಮಾನಿಕ ದಾಳಿಯಲ್ಲಿ ಹಮಾಸ್ ನಾಯಕನ ಹತ್ಯೆ

ಉತ್ತರ ಲೆಬನಾನ್ ಗುರಿಯಾಗಿರಿಸಿಕೊಂಡ ಇಸ್ರೇಲ್; ಇತ್ತೀಚಿನ ವೈಮಾನಿಕ ದಾಳಿಯಲ್ಲಿ ಹಮಾಸ್ ನಾಯಕನ ಹತ್ಯೆ

- Advertisement -
- Advertisement -

ಇಸ್ರೇಲಿ ಸೈನ್ಯವು ಶನಿವಾರ ಉತ್ತರ ಲೆಬನಾನ್‌ಗೆ ತನ್ನ ವೈಮಾನಿಕ ದಾಳಿಯನ್ನು ವಿಸ್ತರಿಸಿದೆ. ಬೈರುತ್ ಮತ್ತು ದಕ್ಷಿಣದ ನಗರಗಳಲ್ಲಿ ಬಾಂಬ್ ದಾಳಿಗಳು ಮುಂದುವರೆದಿದ್ದು, ಇಸ್ರೇಲಿ ಸೈನ್ಯವು ಹೆಜ್ಬುಲ್ಲಾವನ್ನು ಗುರಿಯಾಗಿಸಿ ತನ್ನ ಆಕ್ರಮಣವನ್ನು ತೀವ್ರಗೊಳಿಸಿದೆ. ಶನಿವಾರ ಮುಂಜಾನೆ ಉತ್ತರ ನಗರವಾದ ಟ್ರಿಪೋಲಿಯಲ್ಲಿ ದಾಳಿಗಳು ನಡೆದಿದ್ದು, ಅಲ್ಲಿ ಹಮಾಸ್ ಉನ್ನತ ನಾಯಕ ಮತ್ತು ಅವರ ಕುಟುಂಬವನ್ನು ಹತ್ಯೆ ಮಾಡಲಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇಸ್ರೇಲಿ ಸೇನೆಯು ಮೂರು ಎಚ್ಚರಿಕೆಗಳನ್ನು ನೀಡಿದ್ದು, ಆ ಪ್ರದೇಶದ ನಿವಾಸಿಗಳನ್ನು ತಕ್ಷಣವೇ ಸ್ಥಳಾಂತರಿಸುವಂತೆ ಒತ್ತಾಯಿಸಿದೆ. ರಾತ್ರಿಯಲ್ಲಿ ಬೈರುತ್‌ನ ವಿಮಾನ ನಿಲ್ದಾಣದ ಬಳಿ ವಿಮಾನಗಳು ಆಗಮಿಸುತ್ತಿದ್ದಂತೆ ಸ್ಫೋಟಗಳು ಮತ್ತು ವೈಮಾನಿಕ ದಾಳಿಗಳು ಸಂಭವಿಸಿದವು.

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ತಮ್ಮ ಶುಕ್ರವಾರದ ಧರ್ಮೋಪದೇಶದಲ್ಲಿ “ಇಸ್ರೇಲ್ ಹೆಚ್ಚು ಕಾಲ ಉಳಿಯುವುದಿಲ್ಲ, ಇರಾನ್ ಹಿಂದೆ ಸರಿಯುವುದಿಲ್ಲ” ಎಂದು ಎಚ್ಚರಿಸಿದ ನಂತರ ಹೊಸ ಸುತ್ತಿನ ತೀವ್ರವಾದ ದಾಳಿಗಳು ನಡೆದಿವೆ.

ಇಸ್ರೇಲ್ ಡಿಫೆನ್ಸ್ ಫೋರ್ಸಸ್ (ಐಡಿಎಫ್‌f) ಸುಮಾರು ಮೂರು ವಾರಗಳ ಕಾಲ ದಕ್ಷಿಣ ಲೆಬನಾನ್ ಮೇಲೆ ದಾಳಿ ನಡೆಸುತ್ತಿದೆ, ಹಲವಾರು ಜನರನ್ನು ಕೊಂದು 1.2 ಮಿಲಿಯನ್ ಲೆಬನಾನ್ನರನ್ನು ಅವರ ಮನೆಗಳಿಂದ ಹೊರಹೋಗುವಂತೆ ಮಾಡಿದೆ.

ಹಮಾಸ್‌ನ ಸಶಸ್ತ್ರ ವಿಭಾಗ, ಅಲ್-ಕಸ್ಸಾಮ್ ಬ್ರಿಗೇಡ್‌ಗಳ ನಾಯಕ ಸಯೀದ್ ಅತಲ್ಲಾ, ಉತ್ತರ ಲೆಬನಾನಿನ ನಗರವಾದ ಟ್ರಿಪೋಲಿಯಲ್ಲಿರುವ ಪ್ಯಾಲೇಸ್ಟಿನಿಯನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲಿ ನಡೆಸಿದ ದಾಳಿಯಲ್ಲಿ ಮೂರು ಕುಟುಂಬ ಸದಸ್ಯರೊಂದಿಗೆ ಕೊಲ್ಲಲ್ಪಟ್ಟರು ಎಂದು ಹಮಾಸ್ ಸಂಯೋಜಿತ ಮಾಧ್ಯಮಗಳು ತಿಳಿಸಿವೆ. ದಾಳಿಯ ಬಗ್ಗೆ ಇಸ್ರೇಲ್ ಸೇನೆಯು ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ದಕ್ಷಿಣ ಲೆಬನಾನ್‌ನ ಮಸೀದಿಯೊಂದರಲ್ಲಿ ಭಯೋತ್ಪಾದಕ ಗುಂಪಿನ ಸದಸ್ಯರು ಕಾರ್ಯನಿರ್ವಹಿಸುತ್ತಿರುವ ಹಿಜ್ಬುಲ್ಲಾ ಪ್ರಧಾನ ಕಛೇರಿಯನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಲಾಗಿದೆ ಎಂದು ಐಡಿಎಫ್‌ ಘೋಷಿಸಿದೆ. “ದಕ್ಷಿಣದಲ್ಲಿರುವ ‘ಸಲಾಹ್ ಎಹಂಡೋರ್’ ಆಸ್ಪತ್ರೆಯ ಬಳಿಯ ಮಸೀದಿಯಲ್ಲಿ ಸ್ಥಾಪಿಸಲಾದ ಪ್ರಧಾನ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಯೋತ್ಪಾದಕ ಸಂಘಟನೆ ಹೆಜ್ಬುಲ್ಲಾದ ಕಾರ್ಯಕರ್ತರ ವಿರುದ್ಧ ವಾಯುಪಡೆಯ ವಿಮಾನಗಳು ರಾತ್ರಿಯಲ್ಲಿ ಅಮ್ಮನ್ ಮತ್ತು ಉತ್ತರ ಕಮಾಂಡ್‌ನ ಗುಪ್ತಚರ ಮಾರ್ಗದರ್ಶನದಲ್ಲಿ ಉದ್ದೇಶಿತ ದಾಳಿಗಳನ್ನು ನಡೆಸಿತು ಎಂದು ಇಸ್ರೇಲ್‌ ಸೇನೆ ಟ್ವೀಟ್ ಮಾಡಿದೆ.

ಗುರುವಾರ ರಾತ್ರಿ ಇಸ್ರೇಲಿ ದಾಳಿಯಲ್ಲಿ ಗುರಿಯಾಗಿರುವ ವರದಿಯಾದ ಹಿಜ್ಬುಲ್ಲಾ ಮುಖ್ಯಸ್ಥರಾಗಿ ಹಸನ್ ನಸ್ರಲ್ಲಾಹ್ ಅವರ ಉತ್ತರಾಧಿಕಾರಿಯಾದ ಹಶೆಮ್ ಸಫೀದಿನ್ ಅವರ ಭವಿಷ್ಯವು ಅಸ್ಪಷ್ಟವಾಗಿದೆ. ಇಸ್ರೇಲ್ ಅಥವಾ ಹಿಜ್ಬುಲ್ಲಾ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಅವರು ಸಫಿಯದ್ದೀನ್ ಮತ್ತು ನಸ್ರಲ್ಲಾ ಅವರ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. “ನಿಮ್ಮ ಪ್ರಾಕ್ಸಿಗಳನ್ನು ತೆಗೆದುಕೊಂಡು ಲೆಬನಾನ್ ತೊರೆಯಿರಿ” ಎಂದು ಖಮೇನಿಯನ್ನು ಒತ್ತಾಯಿಸಿದರು.

ಇಸ್ರೇಲಿ ಸೇನೆಯು ದಕ್ಷಿಣ ಲೆಬನಾನಿನ ಒಡೈಸ್ಸೆಹ್ ಪಟ್ಟಣಕ್ಕೆ ನುಸುಳಲು ಪ್ರಯತ್ನಿಸುತ್ತಿದೆ ಎಂದು ಹಿಜ್ಬೊಲ್ಲಾಹ್ ಹೇಳಿಕೆ ನೀಡಿದ್ದು, ಘರ್ಷಣೆಗಳು ನಡೆಯುತ್ತಿವೆ ಎಂದು ಹೇಳಿದರು. ಇಸ್ರೇಲಿ ಸೇನೆಯು ಖಿಯಾಮ್ ನಗರ ಮತ್ತು ದಕ್ಷಿಣ ಲೆಬನಾನ್‌ನ ಕಾಫರ್ ಕಿಲಾ ಹೊರವಲಯದಲ್ಲಿ ಫಿರಂಗಿ ಶೆಲ್ ದಾಳಿ ನಡೆಸಿತು.

ಮಂಗಳವಾರ ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಗೆ ಪ್ರತಿಕ್ರಿಯೆಯಾಗಿ ಇಸ್ರೇಲ್ ತನ್ನ ದಾಳಿಯ ಆಯ್ಕೆಗಳನ್ನು ಪರಿಗಣಿಸುತ್ತಿದೆ ಎಂದು ವರದಿಯಾಗಿದೆ. ಇದು ಲೆಬನಾನ್‌ನಲ್ಲಿ ಇಸ್ರೇಲ್‌ನ ಮಿಲಿಟರಿ ಕ್ರಮ ಮತ್ತು ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆಗೆ ಪ್ರತೀಕಾರವಾಗಿ ಎಂದು ಟೆಹ್ರಾನ್ ಹೇಳಿಕೊಂಡಿದೆ.

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಕ್ಚಿ ಲೆಬನಾನ್ ಭೇಟಿಯ ನಂತರ ಮಾತುಕತೆಗಾಗಿ ಸಿರಿಯಾಕ್ಕೆ ಬಂದಿಳಿದರು, ಇದರಲ್ಲಿ ಅವರು ಲೆಬನಾನ್ ಮತ್ತು ಹೆಜ್ಬೊಲ್ಲಾಗೆ ಬೆಂಬಲವನ್ನು ಪುನರುಚ್ಚರಿಸಿದರು.

ಲೆಬನಾನ್ ಮತ್ತು ಸಂಘರ್ಷ ಪೀಡಿತ ನಾಗರಿಕರನ್ನು ಬೆಂಬಲಿಸಲು ಸುಮಾರು 157 ಮಿಲಿಯನ್ ಯುಎಸ್ ಡಾಲರ್‌ಗಳನ್ನು ಹೊಸ ಮಾನವೀಯ ನೆರವು ನೀಡುವುದಾಗಿ ಯುನೈಟೆಡ್ ಸ್ಟೇಟ್ಸ್ ಘೋಷಿಸಿತು. “ಈ ನಿಧಿಯು ಆಂತರಿಕವಾಗಿ ಸ್ಥಳಾಂತರಗೊಂಡ ವ್ಯಕ್ತಿಗಳು, ಲೆಬನಾನ್‌ನೊಳಗಿನ ನಿರಾಶ್ರಿತರ ಜನಸಂಖ್ಯೆಯ ಹೊಸ ಮತ್ತು ಅಸ್ತಿತ್ವದಲ್ಲಿರುವ ಅಗತ್ಯಗಳನ್ನು ಪರಿಹರಿಸುತ್ತದೆ. ಈ ನೆರವು ನೆರೆಯ ಸಿರಿಯಾಕ್ಕೆ ಪಲಾಯನ ಮಾಡುವವರನ್ನು ಸಹ ಬೆಂಬಲಿಸುತ್ತದೆ” ಎಂದು ಯುಎಸ್ ಸ್ಟೇಟ್ಸ್‌ ಡಿಪಾರ್ಟ್‌ಮೆಂಟ್ ಹೇಳಿದೆ.

ಈ ಬೆಳವಣಿಗೆಗಳ ನಡುವೆಯೇ, ಯುಎಸ್ ಮಿಲಿಟರಿ ಶುಕ್ರವಾರ ಯೆಮೆನ್‌ನ ಹೌತಿ ನಿಯಂತ್ರಿತ ಪ್ರದೇಶಗಳಲ್ಲಿ 15 ಹೌತಿ ಗುರಿಗಳ ಮೇಲೆ ದಾಳಿ ನಡೆಸಿತು. ವಿಮಾನಗಳು ಮತ್ತು ಯುದ್ಧನೌಕೆಗಳು ಈ ಪ್ರದೇಶದಲ್ಲಿ ಬಾಂಬ್ ದಾಳಿ ನಡೆಸಿದ್ದರಿಂದ ಮಿಲಿಟರಿ ಹೊರಠಾಣೆಗಳು ಮತ್ತು ವಿಮಾನ ನಿಲ್ದಾಣದಲ್ಲಿ ಸ್ಫೋಟಗಳು ಸಂಭವಿಸಿವೆ ಎಂದು ನಿವಾಸಿಗಳು ವರದಿ ಮಾಡಿದ್ದಾರೆ. ಬ್ರಿಟಿಷ್ ಸೈನ್ಯವೂ ದಾಳಿಯಲ್ಲಿ ಭಾಗವಹಿಸಿತು ಎಂದು ವರಿಯಿಂದ ಮಾಧ್ಯಮಗಳ ವರದಿಯಿಂದ ತಿಳಿದುಬಂದಿದೆ.

ಇದನ್ನೂ ಓದಿ; ”ಇಸ್ರೇಲ್ ಹೆಚ್ಚು ಕಾಲ ಉಳಿಯುವುದಿಲ್ಲ” | ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...