Homeಮುಖಪುಟಇಸ್ರೇಲ್ ಮಿಲಿಟರಿಯಿಂದ ಆಸ್ಪತ್ರೆಗಳ ಮೇಲೆ ದಾಳಿ: ಗಾಜಾ ಅಧಿಕಾರಿಗಳು

ಇಸ್ರೇಲ್ ಮಿಲಿಟರಿಯಿಂದ ಆಸ್ಪತ್ರೆಗಳ ಮೇಲೆ ದಾಳಿ: ಗಾಜಾ ಅಧಿಕಾರಿಗಳು

- Advertisement -
- Advertisement -

ಇಸ್ರೇಲ್ ಕನಿಷ್ಠ ಮೂರು ಆಸ್ಪತ್ರೆಗಳ ಮೇಲೆ ಅಥವಾ ಅದರ ಸಮೀಪ ವೈಮಾನಿಕ ದಾಳಿ ನಡೆಸಿತು ಎಂದು ಪ್ಯಾಲೆಸ್ತೀನ್ ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

”ಏಕಕಾಲದಲ್ಲಿಯೇ ಇಸ್ರೇಲಿ ಮಿಲಿಟರಿ ಹಲವಾರು ಆಸ್ಪತ್ರೆಗಳ ಮೇಲೆ ದಾಳಿ ಪ್ರಾರಂಭಿಸಿತು” ಎಂದು ಗಾಜಾ ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕಿದ್ರಾ ಅಲ್ ಜಜೀರಾಗೆ ತಿಳಿಸಿದರು.

ಗಾಜಾ ನಗರದ ಅತಿದೊಡ್ಡ ಆಸ್ಪತ್ರೆಯಾದ ಅಲ್ ಶಿಫಾ ಅಂಗಳದ ಮೇಲೆ ವೈಮಾನಿಕ ದಾಳಿ ನಡೆಸಲಾಯಿತು. ಅಲ್ ಶಿಫಾ ಆಸ್ಪತ್ರೆಯ ಕೆಳಗೆ ಹಮಾಸ್ ಕಮಾಂಡ್ ಸೆಂಟರ್‌ಗಳು ಮತ್ತು ಸುರಂಗಗಳನ್ನು ಹೊಂದಿದೆ ಎಂದು ಇಸ್ರೇಲ್ ಹೇಳಿದೆ. ಅಲ್-ರಾಂಟಿಸಿ ಪೀಡಿಯಾಟ್ರಿಕ್ ಆಸ್ಪತ್ರೆ ಮತ್ತು ಅಲ್-ನಾಸ್ರ್ ಮಕ್ಕಳ ಆಸ್ಪತ್ರೆಯನ್ನೂ ಇಸ್ರೇಲ್ ಗುರಿಯಾಗಿಸಿದೆ.

ಇಸ್ರೇಲ್ ಕದನ ವಿರಾಮವನ್ನು ಒಪ್ಪಿಕೊಂಡಿಲ್ಲ ಆದರೆ ಮಾನವೀಯ ನೆರವು ನೀಡಲು ಗಾಜಾದಲ್ಲಿ ತನ್ನ ಸಶಸ್ತ್ರ ಕಾರ್ಯಾಚರಣೆಗಳಲ್ಲಿ ನಾಲ್ಕು ಗಂಟೆಗಳ ಸ್ಥಳೀಯ ವಿರಾಮಗಳನ್ನು ಅನುಮತಿಸುತ್ತದೆ ಎಂದು ದೇಶದ ಮಿಲಿಟರಿ ಗುರುವಾರ ತಿಳಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಪ್ಯಾಲೆಸ್ತೀನ್‌ನ ಹಮಾಸ್ ಸಶಸ್ತ್ರ ಗುಂಪನ್ನು ಹತ್ತಿಕ್ಕಲು ಇಸ್ರೇಲಿ ಮಿಲಿಟರಿ ಗಾಜಾ ನಗರವನ್ನು ಸುತ್ತುವರಿಯುತ್ತಿದ್ದಂತೆ ಇದು ಸಂಭವಿಸುತ್ತದೆ. ಪ್ರತಿ ದಿನ ಮೂರು ಗಂಟೆಗಳ ಕಾಲ ನಾಗರಿಕರು ಸುರಕ್ಷಿತ ಮಾರ್ಗಗಳಲ್ಲಿ ಓಡಾಡಬಹುದು ಎಂದು ಇಸ್ರೇಲಿ ಮಿಲಿಟರಿ ಹೇಳಿದೆ.

ಫೆಲೆಸ್ತೀನಿಯರು ದಕ್ಷಿಣ ಗಾಜಾಕ್ಕೆ ಪಲಾಯನ ಮಾಡಲು ಎರಡು ಮಾನವೀಯ ಕಾರಿಡಾರ್‌ಗಳಿವೆ ಎಂದು ಯುನೈಟೆಡ್ ಸ್ಟೇಟ್ಸ್ ರಾಷ್ಟ್ರೀಯ ಭದ್ರತಾ ವಕ್ತಾರ ಜಾನ್ ಕಿರ್ಬಿ ಗುರುವಾರ ಹೇಳಿದ್ದಾರೆ.

ಯುದ್ಧದ ನಂತರ ಗಾಜಾವನ್ನು ವಶಪಡಿಸಿಕೊಳ್ಳಲು, ಅಥವಾ ಆಡಳಿತ ನಡೆಸಲುನಾವು ಪ್ರಯತ್ನಿಸುವುದಿಲ್ಲ ಎಂದು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ ಹೇಳಿದ್ದಾರೆ.

ಅಕ್ಟೋಬರ್ 7 ರಿಂದ ಪ್ಯಾಲೇಸ್ಟಿನಿಯನ್‌ನ 4,412 ಮಕ್ಕಳು ಸೇರಿದಂತೆ 10,812 ಸಾವಿಗೀಡಾಗಿದ್ದಾರೆ. ಗಾಜಾ ಅಲ್ಲದೆ, ಅಕ್ಟೋಬರ್ 7 ರಿಂದ ಇಸ್ರೇಲಿ ಮಿಲಿಟರಿ ವೆಸ್ಟ್ ಬ್ಯಾಂಕ್ ಪ್ರದೇಶದಲ್ಲಿ ಕನಿಷ್ಠ 182 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದೆ ಎಂದು ಅಲ್ ಜಜೀರಾ ವರದಿ ಮಾಡಿದೆ.

ಇದನ್ನೂ ಓದಿ: ಗಾಜಾ ದಾಳಿಗೆ ತಾತ್ಕಾಲಿಕ ವಿರಾಮ, ಕದನ ವಿರಾಮ ಇಲ್ಲ ಎಂದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...