Homeಮುಖಪುಟಇಸ್ರೇಲ್ ಮಿಲಿಟರಿಯಿಂದ ಆಸ್ಪತ್ರೆಗಳ ಮೇಲೆ ದಾಳಿ: ಗಾಜಾ ಅಧಿಕಾರಿಗಳು

ಇಸ್ರೇಲ್ ಮಿಲಿಟರಿಯಿಂದ ಆಸ್ಪತ್ರೆಗಳ ಮೇಲೆ ದಾಳಿ: ಗಾಜಾ ಅಧಿಕಾರಿಗಳು

- Advertisement -
- Advertisement -

ಇಸ್ರೇಲ್ ಕನಿಷ್ಠ ಮೂರು ಆಸ್ಪತ್ರೆಗಳ ಮೇಲೆ ಅಥವಾ ಅದರ ಸಮೀಪ ವೈಮಾನಿಕ ದಾಳಿ ನಡೆಸಿತು ಎಂದು ಪ್ಯಾಲೆಸ್ತೀನ್ ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

”ಏಕಕಾಲದಲ್ಲಿಯೇ ಇಸ್ರೇಲಿ ಮಿಲಿಟರಿ ಹಲವಾರು ಆಸ್ಪತ್ರೆಗಳ ಮೇಲೆ ದಾಳಿ ಪ್ರಾರಂಭಿಸಿತು” ಎಂದು ಗಾಜಾ ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕಿದ್ರಾ ಅಲ್ ಜಜೀರಾಗೆ ತಿಳಿಸಿದರು.

ಗಾಜಾ ನಗರದ ಅತಿದೊಡ್ಡ ಆಸ್ಪತ್ರೆಯಾದ ಅಲ್ ಶಿಫಾ ಅಂಗಳದ ಮೇಲೆ ವೈಮಾನಿಕ ದಾಳಿ ನಡೆಸಲಾಯಿತು. ಅಲ್ ಶಿಫಾ ಆಸ್ಪತ್ರೆಯ ಕೆಳಗೆ ಹಮಾಸ್ ಕಮಾಂಡ್ ಸೆಂಟರ್‌ಗಳು ಮತ್ತು ಸುರಂಗಗಳನ್ನು ಹೊಂದಿದೆ ಎಂದು ಇಸ್ರೇಲ್ ಹೇಳಿದೆ. ಅಲ್-ರಾಂಟಿಸಿ ಪೀಡಿಯಾಟ್ರಿಕ್ ಆಸ್ಪತ್ರೆ ಮತ್ತು ಅಲ್-ನಾಸ್ರ್ ಮಕ್ಕಳ ಆಸ್ಪತ್ರೆಯನ್ನೂ ಇಸ್ರೇಲ್ ಗುರಿಯಾಗಿಸಿದೆ.

ಇಸ್ರೇಲ್ ಕದನ ವಿರಾಮವನ್ನು ಒಪ್ಪಿಕೊಂಡಿಲ್ಲ ಆದರೆ ಮಾನವೀಯ ನೆರವು ನೀಡಲು ಗಾಜಾದಲ್ಲಿ ತನ್ನ ಸಶಸ್ತ್ರ ಕಾರ್ಯಾಚರಣೆಗಳಲ್ಲಿ ನಾಲ್ಕು ಗಂಟೆಗಳ ಸ್ಥಳೀಯ ವಿರಾಮಗಳನ್ನು ಅನುಮತಿಸುತ್ತದೆ ಎಂದು ದೇಶದ ಮಿಲಿಟರಿ ಗುರುವಾರ ತಿಳಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಪ್ಯಾಲೆಸ್ತೀನ್‌ನ ಹಮಾಸ್ ಸಶಸ್ತ್ರ ಗುಂಪನ್ನು ಹತ್ತಿಕ್ಕಲು ಇಸ್ರೇಲಿ ಮಿಲಿಟರಿ ಗಾಜಾ ನಗರವನ್ನು ಸುತ್ತುವರಿಯುತ್ತಿದ್ದಂತೆ ಇದು ಸಂಭವಿಸುತ್ತದೆ. ಪ್ರತಿ ದಿನ ಮೂರು ಗಂಟೆಗಳ ಕಾಲ ನಾಗರಿಕರು ಸುರಕ್ಷಿತ ಮಾರ್ಗಗಳಲ್ಲಿ ಓಡಾಡಬಹುದು ಎಂದು ಇಸ್ರೇಲಿ ಮಿಲಿಟರಿ ಹೇಳಿದೆ.

ಫೆಲೆಸ್ತೀನಿಯರು ದಕ್ಷಿಣ ಗಾಜಾಕ್ಕೆ ಪಲಾಯನ ಮಾಡಲು ಎರಡು ಮಾನವೀಯ ಕಾರಿಡಾರ್‌ಗಳಿವೆ ಎಂದು ಯುನೈಟೆಡ್ ಸ್ಟೇಟ್ಸ್ ರಾಷ್ಟ್ರೀಯ ಭದ್ರತಾ ವಕ್ತಾರ ಜಾನ್ ಕಿರ್ಬಿ ಗುರುವಾರ ಹೇಳಿದ್ದಾರೆ.

ಯುದ್ಧದ ನಂತರ ಗಾಜಾವನ್ನು ವಶಪಡಿಸಿಕೊಳ್ಳಲು, ಅಥವಾ ಆಡಳಿತ ನಡೆಸಲುನಾವು ಪ್ರಯತ್ನಿಸುವುದಿಲ್ಲ ಎಂದು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ ಹೇಳಿದ್ದಾರೆ.

ಅಕ್ಟೋಬರ್ 7 ರಿಂದ ಪ್ಯಾಲೇಸ್ಟಿನಿಯನ್‌ನ 4,412 ಮಕ್ಕಳು ಸೇರಿದಂತೆ 10,812 ಸಾವಿಗೀಡಾಗಿದ್ದಾರೆ. ಗಾಜಾ ಅಲ್ಲದೆ, ಅಕ್ಟೋಬರ್ 7 ರಿಂದ ಇಸ್ರೇಲಿ ಮಿಲಿಟರಿ ವೆಸ್ಟ್ ಬ್ಯಾಂಕ್ ಪ್ರದೇಶದಲ್ಲಿ ಕನಿಷ್ಠ 182 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದೆ ಎಂದು ಅಲ್ ಜಜೀರಾ ವರದಿ ಮಾಡಿದೆ.

ಇದನ್ನೂ ಓದಿ: ಗಾಜಾ ದಾಳಿಗೆ ತಾತ್ಕಾಲಿಕ ವಿರಾಮ, ಕದನ ವಿರಾಮ ಇಲ್ಲ ಎಂದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...