Homeಅಂತರಾಷ್ಟ್ರೀಯಇರಾನ್ ಮೇಲಿನ ದಾಳಿ ನಿಲ್ಲಿಸಲ್ಲ: ವಿಶ್ವಸಂಸ್ಥೆಗೆ ತಿಳಿಸಿದ ಇಸ್ರೇಲ್

ಇರಾನ್ ಮೇಲಿನ ದಾಳಿ ನಿಲ್ಲಿಸಲ್ಲ: ವಿಶ್ವಸಂಸ್ಥೆಗೆ ತಿಳಿಸಿದ ಇಸ್ರೇಲ್

- Advertisement -
- Advertisement -

ಟೆಹ್ರಾನ್‌ನ ಪರಮಾಣು ಕಾರ್ಯಕ್ರಮವನ್ನು ನಾಶ ಮಾಡುವವರೆಗೆ ಇರಾನ್ ಮೇಲಿನ ದಾಳಿಯನ್ನು ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಶುಕ್ರವಾರ ಪ್ರತಿಜ್ಞೆ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಈ ಹೇಳಿಕೆ ನೀಡಲಾಗಿದೆ ಎಂದು ವರದಿ ಹೇಳಿದೆ. ಇರಾನ್ ಮೇಲಿನ ದಾಳಿ

“ನಮ್ಮ ಮನೆಗಳು, ನಮ್ಮ ಕುಟುಂಬಗಳು ಮತ್ತು ನಮ್ಮ ಮಕ್ಕಳಿಗೆ ಬೆದರಿಕೆಯಿದ್ದರೂ, ನಾವು ದಾಳಿ ನಿಲ್ಲಿಸುವುದಿಲ್ಲ. ಇರಾನ್‌ನ ಪರಮಾಣು ಬೆದರಿಕೆಯನ್ನು ನಾಶ ಮಾಡುವವರೆಗೆ, ಅದರ ಯುದ್ಧ ಯಂತ್ರವನ್ನು ನಿಶ್ಯಸ್ತ್ರಗೊಳಿಸುವವರೆಗೆ, ನಮ್ಮ ಜನರು ಮತ್ತು ನಿಮ್ಮ ಜನರು ಸುರಕ್ಷಿತವಾಗಿರುವರೆಗೆ ದಾಳಿ ನಿಲ್ಲಿಸುವುದಿಲ್ಲ” ಎಂದು ಇಸ್ರೇಲಿ ವಿಶ್ವಸಂಸ್ಥೆಯ ರಾಯಭಾರಿ ಡ್ಯಾನಿ ಡ್ಯಾನನ್ ಹೇಳಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಇರಾನಿನ ರಾಯಭಾರಿ ಅಮೀರ್ ಸಯೀದ್ ಇರಾವನಿ, ಇಸ್ರೇಲಿ ದಾಳಿಗಳನ್ನು ನಿಲ್ಲಿಸಲು ಭದ್ರತಾ ಮಂಡಳಿಯು ಕ್ರಮ ಕೈಗೊಳ್ಳಬೇಕೆಂದು ಈ ವೇಳೆ ಒತ್ತಾಯಿಸಿದ್ದಾರೆ.

“ಈ ದಾಳಿಯನ್ನು ಇಸ್ರೇಲ್ ಎಷ್ಟು ದಿನಗಳವರೆಗೆ ಮುಂದುವರಿಸುತ್ತದೆ ಎಂದು ಸ್ಪಷ್ಟವಾಗಿ ಘೋಷಿಸಿದೆ. ಅಮೆರಿಕ ಈ ಯುದ್ಧಕ್ಕೆ ಸೇರುವ ಸಾಧ್ಯತೆಯಿದೆ ಎಂಬ ವಿಶ್ವಾಸಾರ್ಹ ವರದಿಯ ಬಗ್ಗೆ ನಮಗೆ ಎಚ್ಚರಿಕೆ ಬಂದಿದೆ” ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಅಮೆರಿಕ ಭಾಗಿಯಾಗುತ್ತದೆಯೇ ಅಥವಾ ಇಲ್ಲವೆ ಎಂಬುವುದನ್ನು ಎರಡು ವಾರಗಳಲ್ಲಿ ನಿರ್ಧರಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಹೇಳಿದ್ದಾರೆ ಎಂದು ಅವರ ಕಚೇರಿ ಹೇಳಿತ್ತು.

ಇರಾನ್‌ ಮೇಲೆ ಇಸ್ರೇಲಿ ಮಿಲಿಟರಿ ನಡೆಸುತ್ತಿರುವ ದಾಳಿಗೆ ಅಮೆರಿಕ ಸೇರಿಕೊಳ್ಳಲಿದೆ ಎಂಬ ಊಹಾಪೋಹಗಳ ನಡುವೆ ಈ ಹೇಳಿಕೆಗಳು ಬಂದಿವೆ. ವಾಷಿಂಗ್ಟನ್ ಇಸ್ರೇಲ್‌ನ ಮಿತ್ರ ರಾಷ್ಟ್ರವಾಗಿದ್ದು, ದೇಶದ ಭದ್ರತೆಯ ಖಾತರಿದಾರನಾಗಿ ಕಾರ್ಯನಿರ್ವಹಿಸುತ್ತದೆ.

ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಅಭಿವೃದ್ಧಿಪಡಿಸದಂತೆ ನೋಡಿಕೊಳ್ಳುವುದು ಟ್ರಂಪ್ ಅವರ ಆದ್ಯತೆಯಾಗಿತ್ತು ಎಂದು ಶ್ವೇತಭವನ ತಿಳಿಸಿದೆ.

ಇಸ್ರೇಲ್ ದಾಳಿಗಳು ನಿಂತ ನಂತರವೇ ರಾಜತಾಂತ್ರಿಕತೆಯನ್ನು ಪರಿಗಣಿಸಲು ಸಿದ್ಧ: ಇರಾನ್

ಇಸ್ರೇಲ್ ಆಕ್ರಮಣಶೀಲತೆ ನಿಲ್ಲಿಸಿದ ನಂತರವೇ ಸಂಘರ್ಷವನ್ನು ಕೊನೆಗೊಳಿಸಲು ರಾಜತಾಂತ್ರಿಕತೆಯನ್ನು ಪರಿಗಣಿಸಲು ಸಿದ್ಧ ಎಂದು ಇರಾನ್ ಹೇಳಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಶುಕ್ರವಾರ ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿ ಯುರೋಪಿಯನ್ ವಿದೇಶಾಂಗ ಸಚಿವರೊಂದಿಗೆ ತಮ್ಮ ದೇಶದ ಪರಮಾಣು ಕಾರ್ಯಕ್ರಮದ ಕುರಿತು ಮಾತನಾಡಿದ ನಂತರ ಈ ಹೇಳಿಕೆ ನೀಡಿದ್ದಾರೆ.

“ಆಕ್ರಮಣಶೀಲತೆಯನ್ನು ನಿಲ್ಲಿಸಿದ ನಂತರ ಮತ್ತು ಆಕ್ರಮಣಕಾರನನ್ನು ಮಾಡಿದ ಅಪರಾಧಗಳಿಗೆ ಹೊಣೆಗಾರರನ್ನಾಗಿ ಮಾಡಿದ ನಂತರ ಇರಾನ್ ಮತ್ತೊಮ್ಮೆ ರಾಜತಾಂತ್ರಿಕತೆಯನ್ನು ಪರಿಗಣಿಸಲು ಸಿದ್ಧವಾಗಿದೆ” ಎಂದು ಅರಾಘ್ಚಿ ವರದಿಗಾರರಿಗೆ ತಿಳಿಸಿದ್ದಾರೆ.

“[ಯುನೈಟೆಡ್ ಕಿಂಗ್‌ಡಮ್, ಫ್ರಾನ್ಸ್, ಜರ್ಮನಿ ಮತ್ತು ಯುರೋಪಿಯನ್ ಒಕ್ಕೂಟ] ಜೊತೆ ಚರ್ಚೆಯ ಮುಂದುವರಿಕೆಯನ್ನು ನಾವು ಬೆಂಬಲಿಸುತ್ತೇವೆ ಮತ್ತು ಮುಂದಿನ ದಿನಗಳಲ್ಲಿ ಮತ್ತೆ ಭೇಟಿಯಾಗಲು ನಮ್ಮ ಸಿದ್ಧತೆಯನ್ನು ವ್ಯಕ್ತಪಡಿಸುತ್ತೇವೆ.” ಎಂದು ಅವರು ಹೇಳಿದ್ದಾರೆ. ಇಸ್ರೇಲ್ ಮತ್ತು ಇರಾನ್ ಗುಂಡಿನ ಚಕಮಕಿ ಮುಂದುವರಿದಂತೆ ಈ ಬೆಳವಣಿಗೆಗಳು ಸಂಭವಿಸಿದವು.

ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಸುತ್ತಿನ ಸಂಘರ್ಷ ಜೂನ್ 13 ರಂದು ಪ್ರಾರಂಭವಾಯಿತು. ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಉದ್ದೇಶದಿಂದ ಇರಾನ್‌ನಲ್ಲಿ ಪರಮಾಣು ಗುರಿಗಳೆಂದು ಹೇಳಿಕೊಂಡ ಸ್ಥಳಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡಿತು. ಇದಕ್ಕೆ ಪ್ರತಿಯಾಗಿ ಇರಾನ್ ಸೇನೆಯು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಯ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ನಿರಂತರ ದಾಳಿಗಳು ಈ ಪ್ರದೇಶದಲ್ಲಿ ವ್ಯಾಪಕ ಸಂಘರ್ಷದ ಆತಂಕಗಳಿಗೆ ಕಾರಣವಾಗಿವೆ.

ಜೂನ್ 15 ರ ಸಂಘರ್ಷದಲ್ಲಿ 224 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಹೇಳಿತ್ತು. ಇಸ್ರೇಲ್‌ನಲ್ಲಿ, ಇಲ್ಲಿಯವರೆಗೆ ಕನಿಷ್ಠ 24 ಜನರು ಇರಾನಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಇರಾನ್ ಮೇಲಿನ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಜಾಗೊಂಡ ಬೋಧಕೇತರ ಸಿಬ್ಬಂದಿಗೆ ಮಾಸಿಕ ಸ್ಟೈಫಂಡ್ ನೀಡದಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹೈಕೋರ್ಟ್ ನಿರ್ಬಂಧ

ವಜಾಗೊಂಡ ಬೋಧಕೇತರ ಸಿಬ್ಬಂದಿಗೆ ಮಾಸಿಕ ಸ್ಟೈಫಂಡ್ ನೀಡದಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹೈಕೋರ್ಟ್ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...