Homeಅಂತರಾಷ್ಟ್ರೀಯಇರಾನ್ ಮೇಲಿನ ದಾಳಿ ನಿಲ್ಲಿಸಲ್ಲ: ವಿಶ್ವಸಂಸ್ಥೆಗೆ ತಿಳಿಸಿದ ಇಸ್ರೇಲ್

ಇರಾನ್ ಮೇಲಿನ ದಾಳಿ ನಿಲ್ಲಿಸಲ್ಲ: ವಿಶ್ವಸಂಸ್ಥೆಗೆ ತಿಳಿಸಿದ ಇಸ್ರೇಲ್

- Advertisement -
- Advertisement -

ಟೆಹ್ರಾನ್‌ನ ಪರಮಾಣು ಕಾರ್ಯಕ್ರಮವನ್ನು ನಾಶ ಮಾಡುವವರೆಗೆ ಇರಾನ್ ಮೇಲಿನ ದಾಳಿಯನ್ನು ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಶುಕ್ರವಾರ ಪ್ರತಿಜ್ಞೆ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಈ ಹೇಳಿಕೆ ನೀಡಲಾಗಿದೆ ಎಂದು ವರದಿ ಹೇಳಿದೆ. ಇರಾನ್ ಮೇಲಿನ ದಾಳಿ

“ನಮ್ಮ ಮನೆಗಳು, ನಮ್ಮ ಕುಟುಂಬಗಳು ಮತ್ತು ನಮ್ಮ ಮಕ್ಕಳಿಗೆ ಬೆದರಿಕೆಯಿದ್ದರೂ, ನಾವು ದಾಳಿ ನಿಲ್ಲಿಸುವುದಿಲ್ಲ. ಇರಾನ್‌ನ ಪರಮಾಣು ಬೆದರಿಕೆಯನ್ನು ನಾಶ ಮಾಡುವವರೆಗೆ, ಅದರ ಯುದ್ಧ ಯಂತ್ರವನ್ನು ನಿಶ್ಯಸ್ತ್ರಗೊಳಿಸುವವರೆಗೆ, ನಮ್ಮ ಜನರು ಮತ್ತು ನಿಮ್ಮ ಜನರು ಸುರಕ್ಷಿತವಾಗಿರುವರೆಗೆ ದಾಳಿ ನಿಲ್ಲಿಸುವುದಿಲ್ಲ” ಎಂದು ಇಸ್ರೇಲಿ ವಿಶ್ವಸಂಸ್ಥೆಯ ರಾಯಭಾರಿ ಡ್ಯಾನಿ ಡ್ಯಾನನ್ ಹೇಳಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಇರಾನಿನ ರಾಯಭಾರಿ ಅಮೀರ್ ಸಯೀದ್ ಇರಾವನಿ, ಇಸ್ರೇಲಿ ದಾಳಿಗಳನ್ನು ನಿಲ್ಲಿಸಲು ಭದ್ರತಾ ಮಂಡಳಿಯು ಕ್ರಮ ಕೈಗೊಳ್ಳಬೇಕೆಂದು ಈ ವೇಳೆ ಒತ್ತಾಯಿಸಿದ್ದಾರೆ.

“ಈ ದಾಳಿಯನ್ನು ಇಸ್ರೇಲ್ ಎಷ್ಟು ದಿನಗಳವರೆಗೆ ಮುಂದುವರಿಸುತ್ತದೆ ಎಂದು ಸ್ಪಷ್ಟವಾಗಿ ಘೋಷಿಸಿದೆ. ಅಮೆರಿಕ ಈ ಯುದ್ಧಕ್ಕೆ ಸೇರುವ ಸಾಧ್ಯತೆಯಿದೆ ಎಂಬ ವಿಶ್ವಾಸಾರ್ಹ ವರದಿಯ ಬಗ್ಗೆ ನಮಗೆ ಎಚ್ಚರಿಕೆ ಬಂದಿದೆ” ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಅಮೆರಿಕ ಭಾಗಿಯಾಗುತ್ತದೆಯೇ ಅಥವಾ ಇಲ್ಲವೆ ಎಂಬುವುದನ್ನು ಎರಡು ವಾರಗಳಲ್ಲಿ ನಿರ್ಧರಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಹೇಳಿದ್ದಾರೆ ಎಂದು ಅವರ ಕಚೇರಿ ಹೇಳಿತ್ತು.

ಇರಾನ್‌ ಮೇಲೆ ಇಸ್ರೇಲಿ ಮಿಲಿಟರಿ ನಡೆಸುತ್ತಿರುವ ದಾಳಿಗೆ ಅಮೆರಿಕ ಸೇರಿಕೊಳ್ಳಲಿದೆ ಎಂಬ ಊಹಾಪೋಹಗಳ ನಡುವೆ ಈ ಹೇಳಿಕೆಗಳು ಬಂದಿವೆ. ವಾಷಿಂಗ್ಟನ್ ಇಸ್ರೇಲ್‌ನ ಮಿತ್ರ ರಾಷ್ಟ್ರವಾಗಿದ್ದು, ದೇಶದ ಭದ್ರತೆಯ ಖಾತರಿದಾರನಾಗಿ ಕಾರ್ಯನಿರ್ವಹಿಸುತ್ತದೆ.

ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಅಭಿವೃದ್ಧಿಪಡಿಸದಂತೆ ನೋಡಿಕೊಳ್ಳುವುದು ಟ್ರಂಪ್ ಅವರ ಆದ್ಯತೆಯಾಗಿತ್ತು ಎಂದು ಶ್ವೇತಭವನ ತಿಳಿಸಿದೆ.

ಇಸ್ರೇಲ್ ದಾಳಿಗಳು ನಿಂತ ನಂತರವೇ ರಾಜತಾಂತ್ರಿಕತೆಯನ್ನು ಪರಿಗಣಿಸಲು ಸಿದ್ಧ: ಇರಾನ್

ಇಸ್ರೇಲ್ ಆಕ್ರಮಣಶೀಲತೆ ನಿಲ್ಲಿಸಿದ ನಂತರವೇ ಸಂಘರ್ಷವನ್ನು ಕೊನೆಗೊಳಿಸಲು ರಾಜತಾಂತ್ರಿಕತೆಯನ್ನು ಪರಿಗಣಿಸಲು ಸಿದ್ಧ ಎಂದು ಇರಾನ್ ಹೇಳಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಶುಕ್ರವಾರ ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿ ಯುರೋಪಿಯನ್ ವಿದೇಶಾಂಗ ಸಚಿವರೊಂದಿಗೆ ತಮ್ಮ ದೇಶದ ಪರಮಾಣು ಕಾರ್ಯಕ್ರಮದ ಕುರಿತು ಮಾತನಾಡಿದ ನಂತರ ಈ ಹೇಳಿಕೆ ನೀಡಿದ್ದಾರೆ.

“ಆಕ್ರಮಣಶೀಲತೆಯನ್ನು ನಿಲ್ಲಿಸಿದ ನಂತರ ಮತ್ತು ಆಕ್ರಮಣಕಾರನನ್ನು ಮಾಡಿದ ಅಪರಾಧಗಳಿಗೆ ಹೊಣೆಗಾರರನ್ನಾಗಿ ಮಾಡಿದ ನಂತರ ಇರಾನ್ ಮತ್ತೊಮ್ಮೆ ರಾಜತಾಂತ್ರಿಕತೆಯನ್ನು ಪರಿಗಣಿಸಲು ಸಿದ್ಧವಾಗಿದೆ” ಎಂದು ಅರಾಘ್ಚಿ ವರದಿಗಾರರಿಗೆ ತಿಳಿಸಿದ್ದಾರೆ.

“[ಯುನೈಟೆಡ್ ಕಿಂಗ್‌ಡಮ್, ಫ್ರಾನ್ಸ್, ಜರ್ಮನಿ ಮತ್ತು ಯುರೋಪಿಯನ್ ಒಕ್ಕೂಟ] ಜೊತೆ ಚರ್ಚೆಯ ಮುಂದುವರಿಕೆಯನ್ನು ನಾವು ಬೆಂಬಲಿಸುತ್ತೇವೆ ಮತ್ತು ಮುಂದಿನ ದಿನಗಳಲ್ಲಿ ಮತ್ತೆ ಭೇಟಿಯಾಗಲು ನಮ್ಮ ಸಿದ್ಧತೆಯನ್ನು ವ್ಯಕ್ತಪಡಿಸುತ್ತೇವೆ.” ಎಂದು ಅವರು ಹೇಳಿದ್ದಾರೆ. ಇಸ್ರೇಲ್ ಮತ್ತು ಇರಾನ್ ಗುಂಡಿನ ಚಕಮಕಿ ಮುಂದುವರಿದಂತೆ ಈ ಬೆಳವಣಿಗೆಗಳು ಸಂಭವಿಸಿದವು.

ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಸುತ್ತಿನ ಸಂಘರ್ಷ ಜೂನ್ 13 ರಂದು ಪ್ರಾರಂಭವಾಯಿತು. ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಉದ್ದೇಶದಿಂದ ಇರಾನ್‌ನಲ್ಲಿ ಪರಮಾಣು ಗುರಿಗಳೆಂದು ಹೇಳಿಕೊಂಡ ಸ್ಥಳಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡಿತು. ಇದಕ್ಕೆ ಪ್ರತಿಯಾಗಿ ಇರಾನ್ ಸೇನೆಯು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಯ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ನಿರಂತರ ದಾಳಿಗಳು ಈ ಪ್ರದೇಶದಲ್ಲಿ ವ್ಯಾಪಕ ಸಂಘರ್ಷದ ಆತಂಕಗಳಿಗೆ ಕಾರಣವಾಗಿವೆ.

ಜೂನ್ 15 ರ ಸಂಘರ್ಷದಲ್ಲಿ 224 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಹೇಳಿತ್ತು. ಇಸ್ರೇಲ್‌ನಲ್ಲಿ, ಇಲ್ಲಿಯವರೆಗೆ ಕನಿಷ್ಠ 24 ಜನರು ಇರಾನಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಇರಾನ್ ಮೇಲಿನ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಜಾಗೊಂಡ ಬೋಧಕೇತರ ಸಿಬ್ಬಂದಿಗೆ ಮಾಸಿಕ ಸ್ಟೈಫಂಡ್ ನೀಡದಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹೈಕೋರ್ಟ್ ನಿರ್ಬಂಧ

ವಜಾಗೊಂಡ ಬೋಧಕೇತರ ಸಿಬ್ಬಂದಿಗೆ ಮಾಸಿಕ ಸ್ಟೈಫಂಡ್ ನೀಡದಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹೈಕೋರ್ಟ್ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...