Homeಅಂತರಾಷ್ಟ್ರೀಯಇಸ್ರೇಲ್: ಫಿರಂಗಿಗಳು ಘರ್ಜಿಸುತ್ತಿರುವಾಗಲೂ ನಡೆಯುತ್ತಿವೆ ಮುಸ್ಲೀಮರು ಮತ್ತು ಯಹೂದಿಗಳ ಸೌಹಾರ್ದ ಕಾರ್ಯಕ್ರಮಗಳು!

ಇಸ್ರೇಲ್: ಫಿರಂಗಿಗಳು ಘರ್ಜಿಸುತ್ತಿರುವಾಗಲೂ ನಡೆಯುತ್ತಿವೆ ಮುಸ್ಲೀಮರು ಮತ್ತು ಯಹೂದಿಗಳ ಸೌಹಾರ್ದ ಕಾರ್ಯಕ್ರಮಗಳು!

ದೇಶದ ಪ್ರಧಾನಿಯೇ ಒಂದು ಸಮುದಾಯವನ್ನು ಅಪರಾಧ ಮತ್ತು ಹಿಂಸಾಚಾರಕ್ಕೆ ಪ್ರಚೋದಿಸಿದಾಗ ಸೌಹಾರ್ದತೆಯನ್ನು ಹುಟ್ಟಿಸುವ ಮತ್ತು ಹರಡುವ ಈ ಮೌಲ್ಯಯುತ ಕೆಲಸವನ್ನು ಜನರೇ ಖುದ್ದಾಗಿ ಮಾಡಬೇಕಿದೆ...

- Advertisement -
- Advertisement -

ಮಧ್ಯಪ್ರಾಚ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಲವರು ಶಾಂತಿಗಾಗಿ ಪ್ರಾರ್ಥಿಸುತ್ತಿರುವಾಗಲೇ ಕೆಲವರು ಐ ಸ್ಟ್ಯಾಂಡ್ ವಿತ್ ಇಸ್ರೇಲ್ ಎಂದು ಹಿಂಸಾಚಾರವನ್ನು ಬೆಂಬಲಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಇಸ್ರೇಲ್ ನ ಅತೀ ಹೆಚ್ಚು ಪ್ರಸರಣಾ ಸಂಖ್ಯೆ ಹೊಂದಿರುವ HAARETZ (ಭೂಮಿ) ಪತ್ರಿಕೆ ಅತ್ಯುತ್ತಮ ಸಂಪಾಕೀಯ ಪ್ರಕಟಿಸಿದೆ. HAARETZ ನ ಪ್ರಧಾನ ಸಂಪಾದಕ ಅಲುಫ್ ಬೆನ್ ಬರೆದ ಸಂಪಾದಕೀಯವನ್ನು ಕನ್ನಡದ ಜನಪರ ಪತ್ರಕರ್ತ ನವೀನ್ ಸೂರಿಂಜೆ ಅನುವಾದಿಸಿದ್ದಾರೆ. ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ಪ್ರಕಟಿಸುತ್ತಿದ್ದೇವೆ.

ಕಳೆದ ಹಲವು ದಿನಗಳಿಂದ ಇಸ್ರೇಲ್‌ನಲ್ಲಿ ಅರಬ್ಬರು ಮತ್ತು ಯಹೂದಿಗಳ ನಡುವಿನ ನೋವಿನ ಘರ್ಷಣೆಯ ಉತ್ತುಂಗಕ್ಕೆ ಏರಿದೆ. ಇವೆಲ್ಲವನ್ನೂ ಹೊರತುಪಡಿಸಿ ಸಮಾಜದ ಗಣ್ಯರೂ ಸೇರಿದಂತೆ ಸಾವಿರಾರು ಅರಬ್ ಮತ್ತು ಯಹೂದಿ ನಾಗರಿಕರು ಇಸ್ರೇಲಿ ನಗರಗಳಲ್ಲಿ, ಹಳ್ಳಿಗಳಲ್ಲಿ ನಡೆಸಿದ ಜಂಟಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಅರಬರು, ಯಹೂದಿಗಳು ಎಂಬ ಯಾವ ವ್ಯತ್ಯಾಸವು ಇಸ್ರೇಲಿನ ಸಾಮಾನ್ಯ ಜನರ ಮಧ್ಯೆ ಇಲ್ಲ. ಮುಸ್ಲೀಮರು ಮತ್ತು ಯಹೂದಿಗಳು ಜೊತೆಗೂಡಿ ನಡೆಸುತ್ತಿರುವ ಹತ್ತಾರು ಕಾರ್ಯಕ್ರಮಗಳ ವಿಶೇಷತೆಯೆಂದರೆ ಅವು “ಫಿರಂಗಿಗಳು ಘರ್ಜಿಸುತ್ತಿರುವಾಗಲೂ” ನಡೆಯುತ್ತಿವೆ ಎಂಬುದೇ ಆಗಿದೆ. ಗಲಭೆಗಳು ಮತ್ತು ಆಕ್ರಮಣಗಳು ಇಸ್ರೇಲ್ ದೇಶದ ಸಾಮಾನ್ಯ ಯಹೂದಿ-ಅರಬ್ ಸಮುದಾಯಗಳಲ್ಲಿ ಯಾವ ವ್ಯತ್ಯಾಸವನ್ನು ಮಾಡಕೂಡದು. ಇದೊಂದೇ ನಮ್ಮ ಮುಂದಿರುವ ಅತೀ ದೊಡ್ಡ ಭರವಸೆಯಾಗಿದೆ. ಈ ಹಿಂದೆಯೂ ಇದೇ ರೀತಿ ಮುಸ್ಲಿಂ ಮತ್ತು ಯಹೂದಿಗಳ ಸೌಹಾರ್ದ ಕಾರ್ಯಕ್ರಮಗಳು ನಡೆದಿತ್ತು. ಆ ಕಾರ್ಯಕ್ರಮಗಳು ಗಲಭೆಗಳ ನಂತರ ನಡೆದಿದ್ದರೆ ಈ ಬಾರಿ ಸಂಘರ್ಷಗಳು ಜಾರಿಯಲ್ಲಿರುವಂತೆಯೇ ಮುಸ್ಲಿಂ ಮತ್ತು ಯಹೂದಿ ಸೌಹಾರ್ದ ಕಾರ್ಯಕ್ರಮಗಳೂ ಜಾರಿಯಲ್ಲಿದೆ.

ಹಾಗಾಗಿ, ಈ ಭಯಾನಕ ಘಟನಗಳು, ಸಾವು ನೋವುಗಳು, ಹತಾಶೆಯಿಂದ ಅಘಾತಕ್ಕೊಳಗಾಗಿರುವ ಇಸ್ರೇಲ್‌ನಲ್ಲಿ ಎಲ್ಲವೂ ಕಳೆದು ಹೋಗಿಲ್ಲ ಎಂಬ ಆಶಾಭಾವ ಮೂಡುತ್ತಿದೆ. ಸಂಘರ್ಷದ ಮಧ್ಯೆಯೇ ಹಲವು ಸಮಾಜಿಕ ಸಂಘಟನೆಗಳ ನೇತೃತ್ವದಲ್ಲಿ ಮುಸ್ಲಿಂ ಮತ್ತು ಯಹೂದಿಗಳ ಸಹ ಜೀವನ ನಡೆಸಲು ಬೇಕಾಗುವ ವಾತಾವರಣ ನಿರ್ಮಿಸುತ್ತಿರುವುದು ಸಮಾನತೆ ಮತ್ತು ಪರಸ್ಪರ ಗೌರವ ಹುಟ್ಟಿಸುವ ಮೊದಲ ಬೀಜಗಳೆಂದು ನಾವು ನೋಡಬಹುದು. ದೇಶದಲ್ಲಿ ಎಲ್ಲವೂ ಸರಿಯಿದ್ದಾಗ ಸೌಹಾರ್ದತೆಯಿಂದ ವಾಸಿಸುವುದು ದೊಡ್ಡ ವಿಚಾರವಲ್ಲ. ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದಾಗಲೇ ಜನರ ಸೌಹಾರ್ದ ಮನಸ್ಥಿತಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಈ ದೇಶದ ಅಭಿವೃದ್ದಿಗೆ ಎಲ್ಲಾ ಸಮುದಾಯಗಳ ಕೊಡುಗೆಯಿದೆ. ಅರಬರು/ಮುಸ್ಲಿಮರು/ಯಹೂದಿಗಳು ಸೇರಿದಂತೆ ಸಮುದಾಯಗಳ ಅಭಿವೃದ್ದಿಯ ಕೊಡುಗೆಯಿಂದ ಇಸ್ರೇಲ್ ಗಟ್ಟಿಗೊಂಡಿದೆ. ಕೆಲ ಮಾನವ ಹಕ್ಕು ನಾಗರಿಕ ಸಂಘಟನೆಗಳು ಸೌಹಾರ್ದತೆಗಾಗಿ ಕೆಲಸ ಮಾಡಿದೆ. ಸಮ ಸಮಾಜಕ್ಕಾಗಿ ಕೆಲಸ ಮಾಡುವ ಅಂತಹ ಸಂಘಟನೆಗಳ ಕೆಲಸ ಫಲಿತಾಂಶ ಈಗ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇಷ್ಟೊಂದು ಸಂಘರ್ಷಗಳ ಮಧ್ಯೆಯೂ ನಮಗೂ ಅದಕ್ಕೂ ಯಾವ ಸಂಬಂಧವಿಲ್ಲ ಎಂಬಂತೆ ಸೌಹಾರ್ದಯುತವಾಗಿ ಬದುಕುವ ಇಸ್ರೇಲಿನ ಹಲವು ಪ್ರದೇಶಗಳು ಇದಕ್ಕೆ ನಿದರ್ಶನವಾಗಿದೆ. ಯಾರು ಏನೇ ಪ್ರಯತ್ನಪಟ್ಟರೂ ನಾವುಗಳು ಹಂಚಿಕೊಂಡು ಬದುಕುವುದನ್ನು ತಪ್ಪಿಸಲಾಗದು.

ಕೆಲವೇ ಕೆಲವು ತಿಂಗಳುಗಳ ಹಿಂದೆ ಹೊರಳಿ ನೋಡಿ, ದೇಶಾದ್ಯಂತದ ಅರಬ್-ಯಹೂದಿ ವೈದ್ಯಕೀಯ ತಂಡಗಳು ಕರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಒಟ್ಟಾಗಿ ಹೋರಾಡಿದ್ದವು. ವೈರಸ್ ವಿರುದ್ಧ ಜನಸಮುದಾಯದ ಮಧ್ಯೆ ಸೌಹಾರ್ದಯುತವಾಗಿ ಕೆಲಸ ಮಾಡಿದ್ದನ್ನು ಎಂಬುದನ್ನು ನಾವು ನೆನಪಿನಲ್ಲಿಡಬೇಕು. ಈಗ ಅದೇ ತಂಡಗಳು ಹಿಂಸಾಚಾರದ ವಿರುದ್ಧ ಮತ್ತು ಪರಸ್ಪರ ಸೌಹಾರ್ಧಕ್ಕಾಗಿ ಕರೆ ನೀಡುತ್ತಿದ್ದಾರೆ.

ಕೆಲವು ರಾಜಕಾರಣಿಗಳು, ಸಮುದಾಯದ ಮುಖಂಡರು ಮತ್ತು ಮಾಧ್ಯಮಗಳು ಜನರನ್ನು ಪ್ರಚೋದಿಸುವ ಪ್ರಯತ್ನಗಳನ್ನು ಮಾಡುತ್ತಿವೆ. ಇಂತಹ ಕಂದಕಗಳನ್ನು ಸೃಷ್ಟಿಸುವವರ ಮಧ್ಯೆ ಮಾನವ ಹಕ್ಕುಗಳ ಪರವಾಗಿನ ಕೆಲ ಅರಬ್ ಮತ್ತು ಯಹೂದಿ ರಾಜಕೀಯ ಮುಖಂಡರು ಸಮುದಾಯಗಳ ಮಧ್ಯೆ ಸಂವಾದವನ್ನು ನಡೆಸುತ್ತಿದ್ದಾರೆ. ಇದು ಮನುಷ್ಯರ ಮಧ್ಯೆ ಇರುವ ಜ್ವಾಲೆಗಳನ್ನು ತಣಿಸುತ್ತಿದೆ.

ಇಸ್ರೇಲಿನಲ್ಲಿ ಸಮುದಾಯಗಳ ಮಧ್ಯೆ ಇರುವ ಆಳವಾದ ಭಿನ್ನಾಭಿಪ್ರಾಯಗಳನ್ನು ಅಲ್ಲಗಳೆಯುವಂತಿಲ್ಲ. ಜೆರುಸಲೆಮ್, ಗಾಜಾ ಪಟ್ಟಿ ಮತ್ತು ಪಶ್ಚಿಮ ದಂಡೆಯಲ್ಲಿನ ಘಟನೆಗಳು ಅರಬ್ ಮತ್ತು ಯಹೂದಿ ಸಮುದಾಯಗಳ ಮಧ್ಯೆ ಇರುವ ಸಂಘರ್ಷವನ್ನೇ ಸೂಚಿಸುತ್ತದೆ. ಇದ್ಯಾವುದಕ್ಕೂ ಯುದ್ದ, ಗಲಭೆಗಳು ಪರಿಹಾರವಲ್ಲ. ಪರಸ್ಪರ ಮಾತುಕತೆಗಳೇ ಈ ಸಂಘರ್ಷಕ್ಕೆ ಇರುವ ಪರಿಹಾರ. ಪರಸ್ಪರ ಸೌಹಾರ್ಧ ಸಂಬಂಧಗಳೇ ಈಗಿರುವ ಇಸ್ರೇಲಿನ ದುಗುಡಯುಕ್ತ ವಾತಾವರಣಕ್ಕೆ ಏಕೈಕ ಪರಿಹಾರವಾಗಿದೆ.

ಇಸ್ರೇಲಿನಲ್ಲಿ ಅರಬ್ಬರು ಮತ್ತು ಯಹೂದಿಗಳು ಒಂದೇ ನಗರಗಳಲ್ಲಿ ಅಕ್ಕಪಕ್ಕದಲ್ಲೇ ವಾಸಿಸುತ್ತಾರೆ. ವಿಶೇಷವಾಗಿ ಅಪಾರ್ಟ್ಮೆಂಟ್ ಕಟ್ಟಡಗಳು ಮತ್ತು ಸೈಟುಗಳನ್ನು ಹಂಚಿಕೊಳ್ಳುವುದರಲ್ಲಿ ಈವರೆಗೂ ತಾರತಮ್ಯ ಮಾಡಿಲ್ಲ. ಆದರೆ ಕಳೆದ ಕೆಲ ದಿನಗಳು ಎರಡೂ ಜನಸಮುದಾಯಗಳು ಭಯ ಮತ್ತು ಅಪನಂಬಿಕೆಯ ವಾತಾವರಣದಲ್ಲಿ ಬದುಕುತ್ತಿದೆ. ಇದು ಎಷ್ಟು ಅಪಾಯಕಾರಿ ಮತ್ತು ಜನರನ್ನು ಮಾನಸಿಕತೆಯ ಮೇಲೆ ಹೊಡೆತ ಬೀರುತ್ತೆ ಎಂಬುದನ್ನು ನಾವು ಅರ್ಥೈಸಿಕೊಳ್ಳಬೇಕು. ಅದಕ್ಕಾಗಿಯೇ ನೆರೆಹೊರೆಯವರನ್ನು, ಬೇರೆ ಬೇರೆ ಸಮುದಾಯಗಳನ್ನು ಒಂದುಗೂಡಿಸುವ ಕಾರ್ಯಚಟುವಟಿಕೆಗಳು ಇಸ್ರೇಲಿನ ಸಧ್ಯದ ಅವಶ್ಯಕತೆಯಾಗಿದೆ.

ಸೌಹಾರ್ದತೆಯನ್ನು ಹುಟ್ಟಿಸುವ ಮತ್ತು ಹರಡುವ ಈ ಮೌಲ್ಯಯುತ ಕೆಲಸವನ್ನು ಜನರೇ ಖುದ್ದಾಗಿ ಮಾಡಬೇಕಿದೆ. ಏಕೆಂದರೆ ದೇಶದ ಪ್ರಧಾನಿಯೇ ಒಂದು ಸಮುದಾಯವನ್ನು ಅಪರಾಧ ಮತ್ತು ಹಿಂಸಾಚಾರಕ್ಕೆ ಪ್ರಚೋದಿಸಿದಾಗ ಈ ನೆಲ ಮೂಲವೇ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕಿದೆ‌.

******

ಅಲುಫ್ ಬೆನ್

ಅಲುಫ್ ಬೆನ್ ಇಸ್ರೇಲ್ ನ ಖ್ಯಾತ ಪತ್ರಕರ್ತರು. ಆ ದೇಶದ ನಂಬರ್ 1 ಪತ್ರಿಕೆಯ ಪ್ರಧಾನ ಸಂಪಾದಕರಾಗಿರುವ ಅಲುಫ್ ಬೆನ್ ಚಿಕ್ಕಪ್ಪ ಗಾಜಾ ಪಟ್ಟಿಯಲ್ಲಿ ನಡೆದ ದಾಳಿಯ ವೇಳೆ ಮೃತರಾಗಿದ್ದಾರೆ. ಹಲವು ಪ್ರತಿಷ್ಟಿತ ಪತ್ರಿಕೆಯಲ್ಲಿ ಪ್ರಧಾನ ಸಂಪಾದಕರಾಗಿ ಕೆಲಸ ಮಾಡಿರುವ ಅಲುಫ್ ಬೆನ್ ಇಸ್ರೇಲ್ ನ ಎಲ್ಲಾ ಗಲಭೆ, ಯುದ್ದಗಳನ್ನು ಖುದ್ದು ವರದಿ ಮಾಡಿದ್ದಾರೆ. ಮಾನವ ಹಕ್ಕುಗಳು, ಸಮಾನತೆಯ ಪ್ರತಿಪಾದಕರಾಗಿರುವ ಅಲುಫ್ ಬೆನ್ ಬರಹಗಳ ಜಗತ್ತಿನ ಎಲ್ಲಾ ಕಡೆ ನಡೆಯುವ ದೌರ್ಜನ್ಯವನ್ನು ವಿರೋಧಿಸುತ್ತಾರೆ. ಅವರ ಸಂಪಾದಕೀಯವನ್ನು ಅವರ ಆಶಯಕ್ಕೆ ಕುಂದು ಬಾರದ ರೀತಿಯಲ್ಲಿ ಅನುವಾದ ಮಾಡಲಾಗಿದೆ.

ಅನುವಾದ – ನವೀನ್ ಸೂರಿಂಜೆ (ಪತ್ರಕರ್ತರು)


ಇದನ್ನೂ ಓದಿ: ಇಸ್ರೇಲ್ ವಿರುದ್ಧ ಹಮಾಸ್ ದಾಳಿಗೆ ವಿರೋಧ: ಪ್ಯಾಲೆಸ್ಟೈನ್ ಬೆಂಬಲಿಸಿದ ಭಾರತ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...