Homeಅಂತರಾಷ್ಟ್ರೀಯಇಸ್ರೇಲ್: ಫಿರಂಗಿಗಳು ಘರ್ಜಿಸುತ್ತಿರುವಾಗಲೂ ನಡೆಯುತ್ತಿವೆ ಮುಸ್ಲೀಮರು ಮತ್ತು ಯಹೂದಿಗಳ ಸೌಹಾರ್ದ ಕಾರ್ಯಕ್ರಮಗಳು!

ಇಸ್ರೇಲ್: ಫಿರಂಗಿಗಳು ಘರ್ಜಿಸುತ್ತಿರುವಾಗಲೂ ನಡೆಯುತ್ತಿವೆ ಮುಸ್ಲೀಮರು ಮತ್ತು ಯಹೂದಿಗಳ ಸೌಹಾರ್ದ ಕಾರ್ಯಕ್ರಮಗಳು!

ದೇಶದ ಪ್ರಧಾನಿಯೇ ಒಂದು ಸಮುದಾಯವನ್ನು ಅಪರಾಧ ಮತ್ತು ಹಿಂಸಾಚಾರಕ್ಕೆ ಪ್ರಚೋದಿಸಿದಾಗ ಸೌಹಾರ್ದತೆಯನ್ನು ಹುಟ್ಟಿಸುವ ಮತ್ತು ಹರಡುವ ಈ ಮೌಲ್ಯಯುತ ಕೆಲಸವನ್ನು ಜನರೇ ಖುದ್ದಾಗಿ ಮಾಡಬೇಕಿದೆ...

- Advertisement -
- Advertisement -

ಮಧ್ಯಪ್ರಾಚ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಲವರು ಶಾಂತಿಗಾಗಿ ಪ್ರಾರ್ಥಿಸುತ್ತಿರುವಾಗಲೇ ಕೆಲವರು ಐ ಸ್ಟ್ಯಾಂಡ್ ವಿತ್ ಇಸ್ರೇಲ್ ಎಂದು ಹಿಂಸಾಚಾರವನ್ನು ಬೆಂಬಲಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಇಸ್ರೇಲ್ ನ ಅತೀ ಹೆಚ್ಚು ಪ್ರಸರಣಾ ಸಂಖ್ಯೆ ಹೊಂದಿರುವ HAARETZ (ಭೂಮಿ) ಪತ್ರಿಕೆ ಅತ್ಯುತ್ತಮ ಸಂಪಾಕೀಯ ಪ್ರಕಟಿಸಿದೆ. HAARETZ ನ ಪ್ರಧಾನ ಸಂಪಾದಕ ಅಲುಫ್ ಬೆನ್ ಬರೆದ ಸಂಪಾದಕೀಯವನ್ನು ಕನ್ನಡದ ಜನಪರ ಪತ್ರಕರ್ತ ನವೀನ್ ಸೂರಿಂಜೆ ಅನುವಾದಿಸಿದ್ದಾರೆ. ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ಪ್ರಕಟಿಸುತ್ತಿದ್ದೇವೆ.

ಕಳೆದ ಹಲವು ದಿನಗಳಿಂದ ಇಸ್ರೇಲ್‌ನಲ್ಲಿ ಅರಬ್ಬರು ಮತ್ತು ಯಹೂದಿಗಳ ನಡುವಿನ ನೋವಿನ ಘರ್ಷಣೆಯ ಉತ್ತುಂಗಕ್ಕೆ ಏರಿದೆ. ಇವೆಲ್ಲವನ್ನೂ ಹೊರತುಪಡಿಸಿ ಸಮಾಜದ ಗಣ್ಯರೂ ಸೇರಿದಂತೆ ಸಾವಿರಾರು ಅರಬ್ ಮತ್ತು ಯಹೂದಿ ನಾಗರಿಕರು ಇಸ್ರೇಲಿ ನಗರಗಳಲ್ಲಿ, ಹಳ್ಳಿಗಳಲ್ಲಿ ನಡೆಸಿದ ಜಂಟಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಅರಬರು, ಯಹೂದಿಗಳು ಎಂಬ ಯಾವ ವ್ಯತ್ಯಾಸವು ಇಸ್ರೇಲಿನ ಸಾಮಾನ್ಯ ಜನರ ಮಧ್ಯೆ ಇಲ್ಲ. ಮುಸ್ಲೀಮರು ಮತ್ತು ಯಹೂದಿಗಳು ಜೊತೆಗೂಡಿ ನಡೆಸುತ್ತಿರುವ ಹತ್ತಾರು ಕಾರ್ಯಕ್ರಮಗಳ ವಿಶೇಷತೆಯೆಂದರೆ ಅವು “ಫಿರಂಗಿಗಳು ಘರ್ಜಿಸುತ್ತಿರುವಾಗಲೂ” ನಡೆಯುತ್ತಿವೆ ಎಂಬುದೇ ಆಗಿದೆ. ಗಲಭೆಗಳು ಮತ್ತು ಆಕ್ರಮಣಗಳು ಇಸ್ರೇಲ್ ದೇಶದ ಸಾಮಾನ್ಯ ಯಹೂದಿ-ಅರಬ್ ಸಮುದಾಯಗಳಲ್ಲಿ ಯಾವ ವ್ಯತ್ಯಾಸವನ್ನು ಮಾಡಕೂಡದು. ಇದೊಂದೇ ನಮ್ಮ ಮುಂದಿರುವ ಅತೀ ದೊಡ್ಡ ಭರವಸೆಯಾಗಿದೆ. ಈ ಹಿಂದೆಯೂ ಇದೇ ರೀತಿ ಮುಸ್ಲಿಂ ಮತ್ತು ಯಹೂದಿಗಳ ಸೌಹಾರ್ದ ಕಾರ್ಯಕ್ರಮಗಳು ನಡೆದಿತ್ತು. ಆ ಕಾರ್ಯಕ್ರಮಗಳು ಗಲಭೆಗಳ ನಂತರ ನಡೆದಿದ್ದರೆ ಈ ಬಾರಿ ಸಂಘರ್ಷಗಳು ಜಾರಿಯಲ್ಲಿರುವಂತೆಯೇ ಮುಸ್ಲಿಂ ಮತ್ತು ಯಹೂದಿ ಸೌಹಾರ್ದ ಕಾರ್ಯಕ್ರಮಗಳೂ ಜಾರಿಯಲ್ಲಿದೆ.

ಹಾಗಾಗಿ, ಈ ಭಯಾನಕ ಘಟನಗಳು, ಸಾವು ನೋವುಗಳು, ಹತಾಶೆಯಿಂದ ಅಘಾತಕ್ಕೊಳಗಾಗಿರುವ ಇಸ್ರೇಲ್‌ನಲ್ಲಿ ಎಲ್ಲವೂ ಕಳೆದು ಹೋಗಿಲ್ಲ ಎಂಬ ಆಶಾಭಾವ ಮೂಡುತ್ತಿದೆ. ಸಂಘರ್ಷದ ಮಧ್ಯೆಯೇ ಹಲವು ಸಮಾಜಿಕ ಸಂಘಟನೆಗಳ ನೇತೃತ್ವದಲ್ಲಿ ಮುಸ್ಲಿಂ ಮತ್ತು ಯಹೂದಿಗಳ ಸಹ ಜೀವನ ನಡೆಸಲು ಬೇಕಾಗುವ ವಾತಾವರಣ ನಿರ್ಮಿಸುತ್ತಿರುವುದು ಸಮಾನತೆ ಮತ್ತು ಪರಸ್ಪರ ಗೌರವ ಹುಟ್ಟಿಸುವ ಮೊದಲ ಬೀಜಗಳೆಂದು ನಾವು ನೋಡಬಹುದು. ದೇಶದಲ್ಲಿ ಎಲ್ಲವೂ ಸರಿಯಿದ್ದಾಗ ಸೌಹಾರ್ದತೆಯಿಂದ ವಾಸಿಸುವುದು ದೊಡ್ಡ ವಿಚಾರವಲ್ಲ. ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದಾಗಲೇ ಜನರ ಸೌಹಾರ್ದ ಮನಸ್ಥಿತಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಈ ದೇಶದ ಅಭಿವೃದ್ದಿಗೆ ಎಲ್ಲಾ ಸಮುದಾಯಗಳ ಕೊಡುಗೆಯಿದೆ. ಅರಬರು/ಮುಸ್ಲಿಮರು/ಯಹೂದಿಗಳು ಸೇರಿದಂತೆ ಸಮುದಾಯಗಳ ಅಭಿವೃದ್ದಿಯ ಕೊಡುಗೆಯಿಂದ ಇಸ್ರೇಲ್ ಗಟ್ಟಿಗೊಂಡಿದೆ. ಕೆಲ ಮಾನವ ಹಕ್ಕು ನಾಗರಿಕ ಸಂಘಟನೆಗಳು ಸೌಹಾರ್ದತೆಗಾಗಿ ಕೆಲಸ ಮಾಡಿದೆ. ಸಮ ಸಮಾಜಕ್ಕಾಗಿ ಕೆಲಸ ಮಾಡುವ ಅಂತಹ ಸಂಘಟನೆಗಳ ಕೆಲಸ ಫಲಿತಾಂಶ ಈಗ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇಷ್ಟೊಂದು ಸಂಘರ್ಷಗಳ ಮಧ್ಯೆಯೂ ನಮಗೂ ಅದಕ್ಕೂ ಯಾವ ಸಂಬಂಧವಿಲ್ಲ ಎಂಬಂತೆ ಸೌಹಾರ್ದಯುತವಾಗಿ ಬದುಕುವ ಇಸ್ರೇಲಿನ ಹಲವು ಪ್ರದೇಶಗಳು ಇದಕ್ಕೆ ನಿದರ್ಶನವಾಗಿದೆ. ಯಾರು ಏನೇ ಪ್ರಯತ್ನಪಟ್ಟರೂ ನಾವುಗಳು ಹಂಚಿಕೊಂಡು ಬದುಕುವುದನ್ನು ತಪ್ಪಿಸಲಾಗದು.

ಕೆಲವೇ ಕೆಲವು ತಿಂಗಳುಗಳ ಹಿಂದೆ ಹೊರಳಿ ನೋಡಿ, ದೇಶಾದ್ಯಂತದ ಅರಬ್-ಯಹೂದಿ ವೈದ್ಯಕೀಯ ತಂಡಗಳು ಕರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಒಟ್ಟಾಗಿ ಹೋರಾಡಿದ್ದವು. ವೈರಸ್ ವಿರುದ್ಧ ಜನಸಮುದಾಯದ ಮಧ್ಯೆ ಸೌಹಾರ್ದಯುತವಾಗಿ ಕೆಲಸ ಮಾಡಿದ್ದನ್ನು ಎಂಬುದನ್ನು ನಾವು ನೆನಪಿನಲ್ಲಿಡಬೇಕು. ಈಗ ಅದೇ ತಂಡಗಳು ಹಿಂಸಾಚಾರದ ವಿರುದ್ಧ ಮತ್ತು ಪರಸ್ಪರ ಸೌಹಾರ್ಧಕ್ಕಾಗಿ ಕರೆ ನೀಡುತ್ತಿದ್ದಾರೆ.

ಕೆಲವು ರಾಜಕಾರಣಿಗಳು, ಸಮುದಾಯದ ಮುಖಂಡರು ಮತ್ತು ಮಾಧ್ಯಮಗಳು ಜನರನ್ನು ಪ್ರಚೋದಿಸುವ ಪ್ರಯತ್ನಗಳನ್ನು ಮಾಡುತ್ತಿವೆ. ಇಂತಹ ಕಂದಕಗಳನ್ನು ಸೃಷ್ಟಿಸುವವರ ಮಧ್ಯೆ ಮಾನವ ಹಕ್ಕುಗಳ ಪರವಾಗಿನ ಕೆಲ ಅರಬ್ ಮತ್ತು ಯಹೂದಿ ರಾಜಕೀಯ ಮುಖಂಡರು ಸಮುದಾಯಗಳ ಮಧ್ಯೆ ಸಂವಾದವನ್ನು ನಡೆಸುತ್ತಿದ್ದಾರೆ. ಇದು ಮನುಷ್ಯರ ಮಧ್ಯೆ ಇರುವ ಜ್ವಾಲೆಗಳನ್ನು ತಣಿಸುತ್ತಿದೆ.

ಇಸ್ರೇಲಿನಲ್ಲಿ ಸಮುದಾಯಗಳ ಮಧ್ಯೆ ಇರುವ ಆಳವಾದ ಭಿನ್ನಾಭಿಪ್ರಾಯಗಳನ್ನು ಅಲ್ಲಗಳೆಯುವಂತಿಲ್ಲ. ಜೆರುಸಲೆಮ್, ಗಾಜಾ ಪಟ್ಟಿ ಮತ್ತು ಪಶ್ಚಿಮ ದಂಡೆಯಲ್ಲಿನ ಘಟನೆಗಳು ಅರಬ್ ಮತ್ತು ಯಹೂದಿ ಸಮುದಾಯಗಳ ಮಧ್ಯೆ ಇರುವ ಸಂಘರ್ಷವನ್ನೇ ಸೂಚಿಸುತ್ತದೆ. ಇದ್ಯಾವುದಕ್ಕೂ ಯುದ್ದ, ಗಲಭೆಗಳು ಪರಿಹಾರವಲ್ಲ. ಪರಸ್ಪರ ಮಾತುಕತೆಗಳೇ ಈ ಸಂಘರ್ಷಕ್ಕೆ ಇರುವ ಪರಿಹಾರ. ಪರಸ್ಪರ ಸೌಹಾರ್ಧ ಸಂಬಂಧಗಳೇ ಈಗಿರುವ ಇಸ್ರೇಲಿನ ದುಗುಡಯುಕ್ತ ವಾತಾವರಣಕ್ಕೆ ಏಕೈಕ ಪರಿಹಾರವಾಗಿದೆ.

ಇಸ್ರೇಲಿನಲ್ಲಿ ಅರಬ್ಬರು ಮತ್ತು ಯಹೂದಿಗಳು ಒಂದೇ ನಗರಗಳಲ್ಲಿ ಅಕ್ಕಪಕ್ಕದಲ್ಲೇ ವಾಸಿಸುತ್ತಾರೆ. ವಿಶೇಷವಾಗಿ ಅಪಾರ್ಟ್ಮೆಂಟ್ ಕಟ್ಟಡಗಳು ಮತ್ತು ಸೈಟುಗಳನ್ನು ಹಂಚಿಕೊಳ್ಳುವುದರಲ್ಲಿ ಈವರೆಗೂ ತಾರತಮ್ಯ ಮಾಡಿಲ್ಲ. ಆದರೆ ಕಳೆದ ಕೆಲ ದಿನಗಳು ಎರಡೂ ಜನಸಮುದಾಯಗಳು ಭಯ ಮತ್ತು ಅಪನಂಬಿಕೆಯ ವಾತಾವರಣದಲ್ಲಿ ಬದುಕುತ್ತಿದೆ. ಇದು ಎಷ್ಟು ಅಪಾಯಕಾರಿ ಮತ್ತು ಜನರನ್ನು ಮಾನಸಿಕತೆಯ ಮೇಲೆ ಹೊಡೆತ ಬೀರುತ್ತೆ ಎಂಬುದನ್ನು ನಾವು ಅರ್ಥೈಸಿಕೊಳ್ಳಬೇಕು. ಅದಕ್ಕಾಗಿಯೇ ನೆರೆಹೊರೆಯವರನ್ನು, ಬೇರೆ ಬೇರೆ ಸಮುದಾಯಗಳನ್ನು ಒಂದುಗೂಡಿಸುವ ಕಾರ್ಯಚಟುವಟಿಕೆಗಳು ಇಸ್ರೇಲಿನ ಸಧ್ಯದ ಅವಶ್ಯಕತೆಯಾಗಿದೆ.

ಸೌಹಾರ್ದತೆಯನ್ನು ಹುಟ್ಟಿಸುವ ಮತ್ತು ಹರಡುವ ಈ ಮೌಲ್ಯಯುತ ಕೆಲಸವನ್ನು ಜನರೇ ಖುದ್ದಾಗಿ ಮಾಡಬೇಕಿದೆ. ಏಕೆಂದರೆ ದೇಶದ ಪ್ರಧಾನಿಯೇ ಒಂದು ಸಮುದಾಯವನ್ನು ಅಪರಾಧ ಮತ್ತು ಹಿಂಸಾಚಾರಕ್ಕೆ ಪ್ರಚೋದಿಸಿದಾಗ ಈ ನೆಲ ಮೂಲವೇ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕಿದೆ‌.

******

ಅಲುಫ್ ಬೆನ್

ಅಲುಫ್ ಬೆನ್ ಇಸ್ರೇಲ್ ನ ಖ್ಯಾತ ಪತ್ರಕರ್ತರು. ಆ ದೇಶದ ನಂಬರ್ 1 ಪತ್ರಿಕೆಯ ಪ್ರಧಾನ ಸಂಪಾದಕರಾಗಿರುವ ಅಲುಫ್ ಬೆನ್ ಚಿಕ್ಕಪ್ಪ ಗಾಜಾ ಪಟ್ಟಿಯಲ್ಲಿ ನಡೆದ ದಾಳಿಯ ವೇಳೆ ಮೃತರಾಗಿದ್ದಾರೆ. ಹಲವು ಪ್ರತಿಷ್ಟಿತ ಪತ್ರಿಕೆಯಲ್ಲಿ ಪ್ರಧಾನ ಸಂಪಾದಕರಾಗಿ ಕೆಲಸ ಮಾಡಿರುವ ಅಲುಫ್ ಬೆನ್ ಇಸ್ರೇಲ್ ನ ಎಲ್ಲಾ ಗಲಭೆ, ಯುದ್ದಗಳನ್ನು ಖುದ್ದು ವರದಿ ಮಾಡಿದ್ದಾರೆ. ಮಾನವ ಹಕ್ಕುಗಳು, ಸಮಾನತೆಯ ಪ್ರತಿಪಾದಕರಾಗಿರುವ ಅಲುಫ್ ಬೆನ್ ಬರಹಗಳ ಜಗತ್ತಿನ ಎಲ್ಲಾ ಕಡೆ ನಡೆಯುವ ದೌರ್ಜನ್ಯವನ್ನು ವಿರೋಧಿಸುತ್ತಾರೆ. ಅವರ ಸಂಪಾದಕೀಯವನ್ನು ಅವರ ಆಶಯಕ್ಕೆ ಕುಂದು ಬಾರದ ರೀತಿಯಲ್ಲಿ ಅನುವಾದ ಮಾಡಲಾಗಿದೆ.

ಅನುವಾದ – ನವೀನ್ ಸೂರಿಂಜೆ (ಪತ್ರಕರ್ತರು)


ಇದನ್ನೂ ಓದಿ: ಇಸ್ರೇಲ್ ವಿರುದ್ಧ ಹಮಾಸ್ ದಾಳಿಗೆ ವಿರೋಧ: ಪ್ಯಾಲೆಸ್ಟೈನ್ ಬೆಂಬಲಿಸಿದ ಭಾರತ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...