Homeಅಂತರಾಷ್ಟ್ರೀಯ''ಇಸ್ರೇಲ್ ಹೆಚ್ಚು ಕಾಲ ಉಳಿಯುವುದಿಲ್ಲ" | ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಪ್ರತಿಜ್ಞೆ

”ಇಸ್ರೇಲ್ ಹೆಚ್ಚು ಕಾಲ ಉಳಿಯುವುದಿಲ್ಲ” | ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಪ್ರತಿಜ್ಞೆ

- Advertisement -
- Advertisement -

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ತಮ್ಮ ಅಪರೂಪದ ಶುಕ್ರವಾರದ ಭಾಷಣದಲ್ಲಿ ಇಸ್ರೇಲ್ ವಿರುದ್ಧ ಹೋರಾಡುತ್ತಿರುವ ಪ್ಯಾಲೆಸ್ತೀನ್‌ ಮತ್ತು ಲೆಬನಾನಿನ ಚಳುವಳಿಗಳನ್ನು ಬೆಂಬಲಿಸಿದ್ದು, “ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ” ಎಂದು ಹೇಳಿದ್ದಾರೆ. ಟೆಹ್ರಾನ್‌ನ ಮಸೀದಿಯೊಂದರಲ್ಲಿ ಹತ್ತಾರು ಸಾವಿರ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಖಮೇನಿ, ಇಸ್ರೇಲ್ ಮೇಲೆ ಇರಾನ್‌ನ ಕ್ಷಿಪಣಿ ದಾಳಿಯನ್ನು “ಸಾರ್ವಜನಿಕ ಸೇವೆ” ಎಂದು ಸಮರ್ಥಿಸಿಕೊಂಡಿದ್ದಾರೆ.ಇಸ್ರೇಲ್ ಹೆಚ್ಚು ಕಾಲ ಉಳಿಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಮಾಸ್ ಅಥವಾ ಹಿಜ್ಬುಲ್ಲಾ ವಿರುದ್ಧ ಇಸ್ರೇಲ್ ಮೇಲುಗೈ ಸಾಧಿಸುವುದಿಲ್ಲ ಎಂದು ಅವರು ಘೋಷಿಸಿದ್ದಾರೆ. “ನಾವು ನಿಮ್ಮೊಂದಿಗಿದ್ದೇವೆ” ಎಂಬ ಅವರ ಘೋಷಣೆಯು ವಿಶಾಲವಾದ ಮಸೀದಿ ಮೈದಾನದಲ್ಲಿ ಪ್ರತಿಧ್ವನಿಸಿದವು.ಇಸ್ರೇಲ್ ಹೆಚ್ಚು ಕಾಲ ಉಳಿಯಲ್ಲ

ಕಳೆದ ಐದು ವರ್ಷಗಳಲ್ಲಿ ಇದು ಖಮೇನಿ ಅವರ ಮೊದಲ ಶುಕ್ರವಾರದ ಧರ್ಮೋಪದೇಶ ಭಾಷಣವಾಗಿದೆ. ಅವರ ಜೀವಕ್ಕೆ ಇರುವ ಬೆದರಿಕೆಗಳ ನಡುವೆಯು ಅವರು ಪ್ರತಿಭಟನೆಯ ಭಾಗವಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಮಂಗಳವಾರ ಇರಾನ್ ಹಾರಿಸಿದ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇಸ್ರೇಲ್ ಪ್ರತಿಜ್ಞೆ ಮಾಡಿದ್ದು, ಖಮೇನಿಯನ್ನು ಪ್ರಮುಖ ಗುರಿಯಾಗಿಸಿದೆ.

ಇದನ್ನೂಓದಿ: ‘ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ’ ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

ಖಮೇನಿ ತಮ್ಮ ಭಾಷಣದಲ್ಲಿ ಕಳೆದ ವಾರ ಬೈರುತ್‌ನಲ್ಲಿ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟ ಇರಾನ್ ಬೆಂಬಲಿತ ಲೆಬನಾನ್ ಬಂಡುಕೋರ ಗುಂಪಿನ ಹಿಜ್ಬುಲ್ಲಾದ ಮಾಜಿ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಶ್ಲಾಘಿಸಿದ್ದಾರೆ.

“ಸಯ್ಯದ್ ಹಸನ್ ನಸ್ರಲ್ಲಾ ಅವರು ಇನ್ನು ಮುಂದೆ ನಮ್ಮೊಂದಿಗಿಲ್ಲ, ಆದರೆ ಅವರ ಆತ್ಮ ಮತ್ತು ಅವರ ಮಾರ್ಗವು ನಮ್ಮನ್ನು ಶಾಶ್ವತವಾಗಿ ಪ್ರೇರೇಪಿಸುತ್ತದೆ. ಅವರು ಝಿಯೋನಿಸ್ಟ್ ಶತ್ರುಗಳ ವಿರುದ್ಧ ಉನ್ನತ ಧ್ವಜವಾಗಿದ್ದರು. ಅವರ ಹುತಾತ್ಮತೆಯು ಈ ಪ್ರಭಾವವನ್ನು ಇನ್ನಷ್ಟು ಹೆಚ್ಚಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಹೆಜ್ಬೊಲ್ಲಾ ಸಂಘಟನೆಯನ್ನು ನಸ್ರಲ್ಲಾ ಅವರ ನಾಯಕತ್ವದಲ್ಲಿ ಸ್ಥಿರವಾಗಿ ಬೆಳೆದ “ಆಶೀರ್ವಾದದ ಮರ” ಎಂದು ಖಮೇನಿ ಅವರು ಬಣ್ಣಿಸಿದ್ದಾರೆ. “ಲೆಬನಾನ್‌ನ ರಕ್ತಸಿಕ್ತ ಜನರಿಗೆ ಸಹಾಯ ಮಾಡುವುದು ಮತ್ತು ಲೆಬನಾನ್‌ನ ಜಿಹಾದ್ ಮತ್ತು ಅಲ್-ಅಕ್ಸಾ ಮಸೀದಿಗಾಗಿ ಯುದ್ಧವನ್ನು ಬೆಂಬಲಿಸುವುದು ಎಲ್ಲಾ ಮುಸ್ಲಿಮರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ” ಎಂದು ಅವರು ಘೋಷಿಸಿದ್ದಾರೆ.

ಇದನ್ನೂಓದಿ: ‘ಇಸ್ರೇಲಿ ಟೈಮ್ ಮೆಷಿನ್’ ಬಳಿಸಿ ಯುವಕರನ್ನಾಗಿ ಮಾಡುತ್ತೇವೆ ಎಂದು ₹35 ಕೋಟಿ ವಂಚನೆ: ಉತ್ತರ ಪ್ರದೇಶದಲ್ಲಿ ಘಟನೆ!

ಪ್ಯಾಲೆಸ್ತೀನಿ ಹಮಾಸ್ ಗುಂಪನ್ನು ಬೆಂಬಲಿಸಿರುವ ಇರಾನ್‌ನ ಸರ್ವೋಚ್ಚ ನಾಯಕ ಖಮೇನಿ, ಇಸ್ರೇಲ್ ಮೇಲೆ ಹಮಾಸ್ ನಡೆಸಿದ್ದ ಅಕ್ಟೋಬರ್ 7 ರ ದಾಳಿಯನ್ನು “ಸರಿಯಾದ ಕ್ರಮ” ಎಂದು ಕರೆದಿದ್ದಾರೆ.

“ಜಿಯೋನಿಸ್ಟ್‌ಗಳು ಮತ್ತು ಅಮೆರಿಕನ್ನರು ಕನಸು ಕಾಣುತ್ತಿದ್ದಾರೆ ಎಂಬುದರಲ್ಲಿ ಸಂದೇಹವಿಲ್ಲ. ಝಿಯೋನಿಸ್ಟ್ ಘಟಕವನ್ನು ನೆಲದಿಂದ ಕಿತ್ತುಹಾಕಲಾಗುತ್ತದೆ. ಅದಕ್ಕೆ ಯಾವುದೆ ಬೇರುಗಳಿಲ್ಲ, ಅದು ನಕಲಿಯಾಗಿದ್ದು, ಅಸ್ಥಿರವಾಗಿದೆ ಮತ್ತು ಅಮೇರಿಕದ ಬೆಂಬಲದಿಂದ ಮಾತ್ರ ಅಸ್ತಿತ್ವದಲ್ಲಿದೆ” ಎಂದು ಖಮೇನಿ ಹೇಳಿದ್ದಾರೆ.

ಇರಾನ್‌ನಲ್ಲಿ ಅತ್ಯುನ್ನತ ಅಧಿಕಾರವನ್ನು ಹೊಂದಿರುವ ಸರ್ವೋಚ್ಚ ನಾಯಕ ಖಮೇನಿ ಅವರು ಐದು ವರ್ಷಗಳ ಹಿಂದೆ ಕೊನೆಯ ಶುಕ್ರವಾರದಂದು ಭಾಷಣ ಮಾಡಿದ್ದರು. ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಕಮಾಂಡರ್ ಖಾಸೆಮ್ ಸೊಲೈಮಾನಿ ಅವರ ಹತ್ಯೆಗೆ ಪ್ರತಿಕ್ರಿಯೆಯಾಗಿ ಇರಾಕ್‌ನಲ್ಲಿರುವ ಯುಎಸ್ ಸೇನಾ ನೆಲೆಯ ಮೇಲೆ ಕ್ಷಿಪಣಿ ದಾಳಿ ನಡೆಸಿದ ನಂತರ ಅವರು ಕೊನೆಯದಾಗಿ ಜನವರಿ 2020 ರಲ್ಲಿ ಶುಕ್ರವಾರದಂದು ಸಾರ್ವಜನಿಕವಾಗಿ ಭಾಷಣ ಮಾಡಿದ್ದರು.

ಇರಾನ್ ತನ್ನ ದೇಶದ ದಕ್ಷಿಣ ಮತ್ತು ಉತ್ತರದಲ್ಲಿ ಇಸ್ರೇಲ್ ವಿರುದ್ಧ ಹೋರಾಡುತ್ತಿರುವ ಹಮಾಸ್ ಮತ್ತು ಹೆಜ್ಬೊಲ್ಲಾ ಎರಡನ್ನೂ ಬೆಂಬಲಿಸುತ್ತದೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...