Homeಅಂತರಾಷ್ಟ್ರೀಯ''ಇಸ್ರೇಲ್ ಹೆಚ್ಚು ಕಾಲ ಉಳಿಯುವುದಿಲ್ಲ" | ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಪ್ರತಿಜ್ಞೆ

”ಇಸ್ರೇಲ್ ಹೆಚ್ಚು ಕಾಲ ಉಳಿಯುವುದಿಲ್ಲ” | ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಪ್ರತಿಜ್ಞೆ

- Advertisement -
- Advertisement -

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ತಮ್ಮ ಅಪರೂಪದ ಶುಕ್ರವಾರದ ಭಾಷಣದಲ್ಲಿ ಇಸ್ರೇಲ್ ವಿರುದ್ಧ ಹೋರಾಡುತ್ತಿರುವ ಪ್ಯಾಲೆಸ್ತೀನ್‌ ಮತ್ತು ಲೆಬನಾನಿನ ಚಳುವಳಿಗಳನ್ನು ಬೆಂಬಲಿಸಿದ್ದು, “ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ” ಎಂದು ಹೇಳಿದ್ದಾರೆ. ಟೆಹ್ರಾನ್‌ನ ಮಸೀದಿಯೊಂದರಲ್ಲಿ ಹತ್ತಾರು ಸಾವಿರ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಖಮೇನಿ, ಇಸ್ರೇಲ್ ಮೇಲೆ ಇರಾನ್‌ನ ಕ್ಷಿಪಣಿ ದಾಳಿಯನ್ನು “ಸಾರ್ವಜನಿಕ ಸೇವೆ” ಎಂದು ಸಮರ್ಥಿಸಿಕೊಂಡಿದ್ದಾರೆ.ಇಸ್ರೇಲ್ ಹೆಚ್ಚು ಕಾಲ ಉಳಿಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಮಾಸ್ ಅಥವಾ ಹಿಜ್ಬುಲ್ಲಾ ವಿರುದ್ಧ ಇಸ್ರೇಲ್ ಮೇಲುಗೈ ಸಾಧಿಸುವುದಿಲ್ಲ ಎಂದು ಅವರು ಘೋಷಿಸಿದ್ದಾರೆ. “ನಾವು ನಿಮ್ಮೊಂದಿಗಿದ್ದೇವೆ” ಎಂಬ ಅವರ ಘೋಷಣೆಯು ವಿಶಾಲವಾದ ಮಸೀದಿ ಮೈದಾನದಲ್ಲಿ ಪ್ರತಿಧ್ವನಿಸಿದವು.ಇಸ್ರೇಲ್ ಹೆಚ್ಚು ಕಾಲ ಉಳಿಯಲ್ಲ

ಕಳೆದ ಐದು ವರ್ಷಗಳಲ್ಲಿ ಇದು ಖಮೇನಿ ಅವರ ಮೊದಲ ಶುಕ್ರವಾರದ ಧರ್ಮೋಪದೇಶ ಭಾಷಣವಾಗಿದೆ. ಅವರ ಜೀವಕ್ಕೆ ಇರುವ ಬೆದರಿಕೆಗಳ ನಡುವೆಯು ಅವರು ಪ್ರತಿಭಟನೆಯ ಭಾಗವಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಮಂಗಳವಾರ ಇರಾನ್ ಹಾರಿಸಿದ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇಸ್ರೇಲ್ ಪ್ರತಿಜ್ಞೆ ಮಾಡಿದ್ದು, ಖಮೇನಿಯನ್ನು ಪ್ರಮುಖ ಗುರಿಯಾಗಿಸಿದೆ.

ಇದನ್ನೂಓದಿ: ‘ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ’ ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

ಖಮೇನಿ ತಮ್ಮ ಭಾಷಣದಲ್ಲಿ ಕಳೆದ ವಾರ ಬೈರುತ್‌ನಲ್ಲಿ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟ ಇರಾನ್ ಬೆಂಬಲಿತ ಲೆಬನಾನ್ ಬಂಡುಕೋರ ಗುಂಪಿನ ಹಿಜ್ಬುಲ್ಲಾದ ಮಾಜಿ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಶ್ಲಾಘಿಸಿದ್ದಾರೆ.

“ಸಯ್ಯದ್ ಹಸನ್ ನಸ್ರಲ್ಲಾ ಅವರು ಇನ್ನು ಮುಂದೆ ನಮ್ಮೊಂದಿಗಿಲ್ಲ, ಆದರೆ ಅವರ ಆತ್ಮ ಮತ್ತು ಅವರ ಮಾರ್ಗವು ನಮ್ಮನ್ನು ಶಾಶ್ವತವಾಗಿ ಪ್ರೇರೇಪಿಸುತ್ತದೆ. ಅವರು ಝಿಯೋನಿಸ್ಟ್ ಶತ್ರುಗಳ ವಿರುದ್ಧ ಉನ್ನತ ಧ್ವಜವಾಗಿದ್ದರು. ಅವರ ಹುತಾತ್ಮತೆಯು ಈ ಪ್ರಭಾವವನ್ನು ಇನ್ನಷ್ಟು ಹೆಚ್ಚಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಹೆಜ್ಬೊಲ್ಲಾ ಸಂಘಟನೆಯನ್ನು ನಸ್ರಲ್ಲಾ ಅವರ ನಾಯಕತ್ವದಲ್ಲಿ ಸ್ಥಿರವಾಗಿ ಬೆಳೆದ “ಆಶೀರ್ವಾದದ ಮರ” ಎಂದು ಖಮೇನಿ ಅವರು ಬಣ್ಣಿಸಿದ್ದಾರೆ. “ಲೆಬನಾನ್‌ನ ರಕ್ತಸಿಕ್ತ ಜನರಿಗೆ ಸಹಾಯ ಮಾಡುವುದು ಮತ್ತು ಲೆಬನಾನ್‌ನ ಜಿಹಾದ್ ಮತ್ತು ಅಲ್-ಅಕ್ಸಾ ಮಸೀದಿಗಾಗಿ ಯುದ್ಧವನ್ನು ಬೆಂಬಲಿಸುವುದು ಎಲ್ಲಾ ಮುಸ್ಲಿಮರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ” ಎಂದು ಅವರು ಘೋಷಿಸಿದ್ದಾರೆ.

ಇದನ್ನೂಓದಿ: ‘ಇಸ್ರೇಲಿ ಟೈಮ್ ಮೆಷಿನ್’ ಬಳಿಸಿ ಯುವಕರನ್ನಾಗಿ ಮಾಡುತ್ತೇವೆ ಎಂದು ₹35 ಕೋಟಿ ವಂಚನೆ: ಉತ್ತರ ಪ್ರದೇಶದಲ್ಲಿ ಘಟನೆ!

ಪ್ಯಾಲೆಸ್ತೀನಿ ಹಮಾಸ್ ಗುಂಪನ್ನು ಬೆಂಬಲಿಸಿರುವ ಇರಾನ್‌ನ ಸರ್ವೋಚ್ಚ ನಾಯಕ ಖಮೇನಿ, ಇಸ್ರೇಲ್ ಮೇಲೆ ಹಮಾಸ್ ನಡೆಸಿದ್ದ ಅಕ್ಟೋಬರ್ 7 ರ ದಾಳಿಯನ್ನು “ಸರಿಯಾದ ಕ್ರಮ” ಎಂದು ಕರೆದಿದ್ದಾರೆ.

“ಜಿಯೋನಿಸ್ಟ್‌ಗಳು ಮತ್ತು ಅಮೆರಿಕನ್ನರು ಕನಸು ಕಾಣುತ್ತಿದ್ದಾರೆ ಎಂಬುದರಲ್ಲಿ ಸಂದೇಹವಿಲ್ಲ. ಝಿಯೋನಿಸ್ಟ್ ಘಟಕವನ್ನು ನೆಲದಿಂದ ಕಿತ್ತುಹಾಕಲಾಗುತ್ತದೆ. ಅದಕ್ಕೆ ಯಾವುದೆ ಬೇರುಗಳಿಲ್ಲ, ಅದು ನಕಲಿಯಾಗಿದ್ದು, ಅಸ್ಥಿರವಾಗಿದೆ ಮತ್ತು ಅಮೇರಿಕದ ಬೆಂಬಲದಿಂದ ಮಾತ್ರ ಅಸ್ತಿತ್ವದಲ್ಲಿದೆ” ಎಂದು ಖಮೇನಿ ಹೇಳಿದ್ದಾರೆ.

ಇರಾನ್‌ನಲ್ಲಿ ಅತ್ಯುನ್ನತ ಅಧಿಕಾರವನ್ನು ಹೊಂದಿರುವ ಸರ್ವೋಚ್ಚ ನಾಯಕ ಖಮೇನಿ ಅವರು ಐದು ವರ್ಷಗಳ ಹಿಂದೆ ಕೊನೆಯ ಶುಕ್ರವಾರದಂದು ಭಾಷಣ ಮಾಡಿದ್ದರು. ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಕಮಾಂಡರ್ ಖಾಸೆಮ್ ಸೊಲೈಮಾನಿ ಅವರ ಹತ್ಯೆಗೆ ಪ್ರತಿಕ್ರಿಯೆಯಾಗಿ ಇರಾಕ್‌ನಲ್ಲಿರುವ ಯುಎಸ್ ಸೇನಾ ನೆಲೆಯ ಮೇಲೆ ಕ್ಷಿಪಣಿ ದಾಳಿ ನಡೆಸಿದ ನಂತರ ಅವರು ಕೊನೆಯದಾಗಿ ಜನವರಿ 2020 ರಲ್ಲಿ ಶುಕ್ರವಾರದಂದು ಸಾರ್ವಜನಿಕವಾಗಿ ಭಾಷಣ ಮಾಡಿದ್ದರು.

ಇರಾನ್ ತನ್ನ ದೇಶದ ದಕ್ಷಿಣ ಮತ್ತು ಉತ್ತರದಲ್ಲಿ ಇಸ್ರೇಲ್ ವಿರುದ್ಧ ಹೋರಾಡುತ್ತಿರುವ ಹಮಾಸ್ ಮತ್ತು ಹೆಜ್ಬೊಲ್ಲಾ ಎರಡನ್ನೂ ಬೆಂಬಲಿಸುತ್ತದೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...