Homeಅಂತರಾಷ್ಟ್ರೀಯ''ಇಸ್ರೇಲ್ ಹೆಚ್ಚು ಕಾಲ ಉಳಿಯುವುದಿಲ್ಲ" | ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಪ್ರತಿಜ್ಞೆ

”ಇಸ್ರೇಲ್ ಹೆಚ್ಚು ಕಾಲ ಉಳಿಯುವುದಿಲ್ಲ” | ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಪ್ರತಿಜ್ಞೆ

- Advertisement -
- Advertisement -

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ತಮ್ಮ ಅಪರೂಪದ ಶುಕ್ರವಾರದ ಭಾಷಣದಲ್ಲಿ ಇಸ್ರೇಲ್ ವಿರುದ್ಧ ಹೋರಾಡುತ್ತಿರುವ ಪ್ಯಾಲೆಸ್ತೀನ್‌ ಮತ್ತು ಲೆಬನಾನಿನ ಚಳುವಳಿಗಳನ್ನು ಬೆಂಬಲಿಸಿದ್ದು, “ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ” ಎಂದು ಹೇಳಿದ್ದಾರೆ. ಟೆಹ್ರಾನ್‌ನ ಮಸೀದಿಯೊಂದರಲ್ಲಿ ಹತ್ತಾರು ಸಾವಿರ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಖಮೇನಿ, ಇಸ್ರೇಲ್ ಮೇಲೆ ಇರಾನ್‌ನ ಕ್ಷಿಪಣಿ ದಾಳಿಯನ್ನು “ಸಾರ್ವಜನಿಕ ಸೇವೆ” ಎಂದು ಸಮರ್ಥಿಸಿಕೊಂಡಿದ್ದಾರೆ.ಇಸ್ರೇಲ್ ಹೆಚ್ಚು ಕಾಲ ಉಳಿಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಮಾಸ್ ಅಥವಾ ಹಿಜ್ಬುಲ್ಲಾ ವಿರುದ್ಧ ಇಸ್ರೇಲ್ ಮೇಲುಗೈ ಸಾಧಿಸುವುದಿಲ್ಲ ಎಂದು ಅವರು ಘೋಷಿಸಿದ್ದಾರೆ. “ನಾವು ನಿಮ್ಮೊಂದಿಗಿದ್ದೇವೆ” ಎಂಬ ಅವರ ಘೋಷಣೆಯು ವಿಶಾಲವಾದ ಮಸೀದಿ ಮೈದಾನದಲ್ಲಿ ಪ್ರತಿಧ್ವನಿಸಿದವು.ಇಸ್ರೇಲ್ ಹೆಚ್ಚು ಕಾಲ ಉಳಿಯಲ್ಲ

ಕಳೆದ ಐದು ವರ್ಷಗಳಲ್ಲಿ ಇದು ಖಮೇನಿ ಅವರ ಮೊದಲ ಶುಕ್ರವಾರದ ಧರ್ಮೋಪದೇಶ ಭಾಷಣವಾಗಿದೆ. ಅವರ ಜೀವಕ್ಕೆ ಇರುವ ಬೆದರಿಕೆಗಳ ನಡುವೆಯು ಅವರು ಪ್ರತಿಭಟನೆಯ ಭಾಗವಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಮಂಗಳವಾರ ಇರಾನ್ ಹಾರಿಸಿದ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇಸ್ರೇಲ್ ಪ್ರತಿಜ್ಞೆ ಮಾಡಿದ್ದು, ಖಮೇನಿಯನ್ನು ಪ್ರಮುಖ ಗುರಿಯಾಗಿಸಿದೆ.

ಇದನ್ನೂಓದಿ: ‘ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ’ ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

ಖಮೇನಿ ತಮ್ಮ ಭಾಷಣದಲ್ಲಿ ಕಳೆದ ವಾರ ಬೈರುತ್‌ನಲ್ಲಿ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟ ಇರಾನ್ ಬೆಂಬಲಿತ ಲೆಬನಾನ್ ಬಂಡುಕೋರ ಗುಂಪಿನ ಹಿಜ್ಬುಲ್ಲಾದ ಮಾಜಿ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಶ್ಲಾಘಿಸಿದ್ದಾರೆ.

“ಸಯ್ಯದ್ ಹಸನ್ ನಸ್ರಲ್ಲಾ ಅವರು ಇನ್ನು ಮುಂದೆ ನಮ್ಮೊಂದಿಗಿಲ್ಲ, ಆದರೆ ಅವರ ಆತ್ಮ ಮತ್ತು ಅವರ ಮಾರ್ಗವು ನಮ್ಮನ್ನು ಶಾಶ್ವತವಾಗಿ ಪ್ರೇರೇಪಿಸುತ್ತದೆ. ಅವರು ಝಿಯೋನಿಸ್ಟ್ ಶತ್ರುಗಳ ವಿರುದ್ಧ ಉನ್ನತ ಧ್ವಜವಾಗಿದ್ದರು. ಅವರ ಹುತಾತ್ಮತೆಯು ಈ ಪ್ರಭಾವವನ್ನು ಇನ್ನಷ್ಟು ಹೆಚ್ಚಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಹೆಜ್ಬೊಲ್ಲಾ ಸಂಘಟನೆಯನ್ನು ನಸ್ರಲ್ಲಾ ಅವರ ನಾಯಕತ್ವದಲ್ಲಿ ಸ್ಥಿರವಾಗಿ ಬೆಳೆದ “ಆಶೀರ್ವಾದದ ಮರ” ಎಂದು ಖಮೇನಿ ಅವರು ಬಣ್ಣಿಸಿದ್ದಾರೆ. “ಲೆಬನಾನ್‌ನ ರಕ್ತಸಿಕ್ತ ಜನರಿಗೆ ಸಹಾಯ ಮಾಡುವುದು ಮತ್ತು ಲೆಬನಾನ್‌ನ ಜಿಹಾದ್ ಮತ್ತು ಅಲ್-ಅಕ್ಸಾ ಮಸೀದಿಗಾಗಿ ಯುದ್ಧವನ್ನು ಬೆಂಬಲಿಸುವುದು ಎಲ್ಲಾ ಮುಸ್ಲಿಮರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ” ಎಂದು ಅವರು ಘೋಷಿಸಿದ್ದಾರೆ.

ಇದನ್ನೂಓದಿ: ‘ಇಸ್ರೇಲಿ ಟೈಮ್ ಮೆಷಿನ್’ ಬಳಿಸಿ ಯುವಕರನ್ನಾಗಿ ಮಾಡುತ್ತೇವೆ ಎಂದು ₹35 ಕೋಟಿ ವಂಚನೆ: ಉತ್ತರ ಪ್ರದೇಶದಲ್ಲಿ ಘಟನೆ!

ಪ್ಯಾಲೆಸ್ತೀನಿ ಹಮಾಸ್ ಗುಂಪನ್ನು ಬೆಂಬಲಿಸಿರುವ ಇರಾನ್‌ನ ಸರ್ವೋಚ್ಚ ನಾಯಕ ಖಮೇನಿ, ಇಸ್ರೇಲ್ ಮೇಲೆ ಹಮಾಸ್ ನಡೆಸಿದ್ದ ಅಕ್ಟೋಬರ್ 7 ರ ದಾಳಿಯನ್ನು “ಸರಿಯಾದ ಕ್ರಮ” ಎಂದು ಕರೆದಿದ್ದಾರೆ.

“ಜಿಯೋನಿಸ್ಟ್‌ಗಳು ಮತ್ತು ಅಮೆರಿಕನ್ನರು ಕನಸು ಕಾಣುತ್ತಿದ್ದಾರೆ ಎಂಬುದರಲ್ಲಿ ಸಂದೇಹವಿಲ್ಲ. ಝಿಯೋನಿಸ್ಟ್ ಘಟಕವನ್ನು ನೆಲದಿಂದ ಕಿತ್ತುಹಾಕಲಾಗುತ್ತದೆ. ಅದಕ್ಕೆ ಯಾವುದೆ ಬೇರುಗಳಿಲ್ಲ, ಅದು ನಕಲಿಯಾಗಿದ್ದು, ಅಸ್ಥಿರವಾಗಿದೆ ಮತ್ತು ಅಮೇರಿಕದ ಬೆಂಬಲದಿಂದ ಮಾತ್ರ ಅಸ್ತಿತ್ವದಲ್ಲಿದೆ” ಎಂದು ಖಮೇನಿ ಹೇಳಿದ್ದಾರೆ.

ಇರಾನ್‌ನಲ್ಲಿ ಅತ್ಯುನ್ನತ ಅಧಿಕಾರವನ್ನು ಹೊಂದಿರುವ ಸರ್ವೋಚ್ಚ ನಾಯಕ ಖಮೇನಿ ಅವರು ಐದು ವರ್ಷಗಳ ಹಿಂದೆ ಕೊನೆಯ ಶುಕ್ರವಾರದಂದು ಭಾಷಣ ಮಾಡಿದ್ದರು. ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಕಮಾಂಡರ್ ಖಾಸೆಮ್ ಸೊಲೈಮಾನಿ ಅವರ ಹತ್ಯೆಗೆ ಪ್ರತಿಕ್ರಿಯೆಯಾಗಿ ಇರಾಕ್‌ನಲ್ಲಿರುವ ಯುಎಸ್ ಸೇನಾ ನೆಲೆಯ ಮೇಲೆ ಕ್ಷಿಪಣಿ ದಾಳಿ ನಡೆಸಿದ ನಂತರ ಅವರು ಕೊನೆಯದಾಗಿ ಜನವರಿ 2020 ರಲ್ಲಿ ಶುಕ್ರವಾರದಂದು ಸಾರ್ವಜನಿಕವಾಗಿ ಭಾಷಣ ಮಾಡಿದ್ದರು.

ಇರಾನ್ ತನ್ನ ದೇಶದ ದಕ್ಷಿಣ ಮತ್ತು ಉತ್ತರದಲ್ಲಿ ಇಸ್ರೇಲ್ ವಿರುದ್ಧ ಹೋರಾಡುತ್ತಿರುವ ಹಮಾಸ್ ಮತ್ತು ಹೆಜ್ಬೊಲ್ಲಾ ಎರಡನ್ನೂ ಬೆಂಬಲಿಸುತ್ತದೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...