Homeಮುಖಪುಟಕದನ ವಿರಾಮ ಮುರಿದ ಇಸ್ರೇಲ್‌ : ಲೆಬನಾನ್‌ ಮೇಲೆ ದಾಳಿ ; 11 ಜನರ ಹತ್ಯೆ

ಕದನ ವಿರಾಮ ಮುರಿದ ಇಸ್ರೇಲ್‌ : ಲೆಬನಾನ್‌ ಮೇಲೆ ದಾಳಿ ; 11 ಜನರ ಹತ್ಯೆ

- Advertisement -
- Advertisement -

ಇಸ್ರೇಲ್‌ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ನಡುವೆ ಕದನ ವಿರಾಮ ಒಪ್ಪಂದ ನಡೆದರೂ, ಅದು ಹೆಸರಿಗೆ ಮಾತ್ರ ಎಂಬಂತಾಗಿದೆ. ಸೋಮವಾರ (ಡಿ.2) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಲೆಬನಾನ್‌ನ 11 ಜನರು ಸಾವನ್ನಪ್ಪಿದ್ದಾರೆ. ಆ ಬಳಿಕ ಪರಸ್ಪರ ಸಂಘರ್ಷ‍ ಉಲ್ಬಣಿಸಿದೆ.

ನವೆಂಬರ್ 27ರಂದು ಯುಎಸ್‌, ಈಜಿಪ್ಟ್, ಕತಾರ್ ಮತ್ತು ತುರ್ಕಿ ದೇಶಗಳ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಸೇನೆ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ಕದನ ವಿರಾಮಕ್ಕೆ ಸಹಿ ಹಾಕಿತ್ತು. ಈ ವಿಚಾರವನ್ನು ಯುಎಸ್‌ ಅಧ್ಯಕ್ಷ ಜೋ ಬೈಡನ್‌ ಅವರೇ ಘೋಷಣೆ ಮಾಡಿದ್ದರು.

ಆದರೆ, ಇಸ್ರೇಲ್ ಕದನ ವಿರಾಮ ಮುರಿದು ಸೋಮವಾರ ಲೆಬನಾನ್‌ ಮೇಲೆ ವೈಮಾನಿಕ ದಾಳಿ ನಡೆಸಿ ಇಬ್ಬರನ್ನು ಕೊಂದು ಹಾಕಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಹಿಜ್ಬುಲ್ಲಾ ಕೂಡ ಇಸ್ರೇಲ್ ಸೇನಾ ನೆಲೆ ಮೇಲೆ ದಾಳಿ ನಡೆಸಿದೆ. ನಂತರ ಇಸ್ರೇಲ್ ನಡೆಸಿದ ಸರಣಿ ದಾಳಿಗಳಲ್ಲಿ 9 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯ ಹೇಳಿದೆ.

ಲೆಬನಾನ್ ತನ್ನದೇ ಎಂದು ಹೇಳಿಕೊಳ್ಳುವ ವಿವಾದಿತ ಪ್ರದೇಶವಾದ ಫಾರ್ ಚೌಬಾದ ಬೆಟ್ಟಗಳಲ್ಲಿನ ಇಸ್ರೇಲಿ ಮಿಲಿಟರಿ ನೆಲೆಯ ಮೇಲೆ ದಾಳಿ ಮಾಡುವ ಮೂಲಕ ಕದನ ವಿರಾಮದ ‘ಪುನರಾವರ್ತಿತ ಉಲ್ಲಂಘನೆ’ ಗಳಿಗೆ “ಪ್ರಾಥಮಿಕ ರಕ್ಷಣಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದೇವೆ ಎಂದು ಹಿಜ್ಬುಲ್ಲಾ ಸಮರ್ಥಿಸಿಕೊಂಡಿದೆ.

ಲೆಬನಾನ್‌ನಾದ್ಯಂತ ಮಾರಣಾಂತಿಕ ವಾಯುದಾಳಿಗಳು, ದಕ್ಷಿಣದಲ್ಲಿ ನಾಗರಿಕರ ಮೇಲೆ ಗುಂಡು ಹಾರಿಸುವುದು ಮತ್ತು ರಾಜಧಾನಿ ಬೈರುತ್ ಸೇರಿದಂತೆ ಲೆಬನಾನಿನ ವಾಯುಪ್ರದೇಶದಲ್ಲಿ ಡ್ರೋನ್‌, ಜೆಟ್‌ಗಳನ್ನು ಹಾರಿಸುವ ಮೂಲಕ ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿದೆ ಎಂದು ಹಿಜ್ಬುಲ್ಲಾ ಆರೋಪಿಸಿದೆ.

ದಾಳಿ ನಿಲ್ಲಿಸುವಂತೆ ಸಂಬಂಧಿ ಅಧಿಕಾರಿಗಳು ಮನವಿ ಮಾಡಿದರೂ, ಇಸ್ರೇಲ್ ಸುಮ್ಮನಾಗಲಿಲ್ಲ. ಹಾಗಾಗಿ, ನಾವು ಪ್ರತಿಕ್ರಿಯೆ ನೀಡಬೇಕಾಗಿ ಬಂದು ಎಂದು ಹಿಜ್ಬುಲ್ಲಾ ತಿಳಿಸಿದೆ.

ಆದರೆ, ಹಿಜ್ಬಲ್ಲಾ ಪ್ರತಿಕ್ರಿಯೆ ಇಸ್ರೇಲ್ ಕಡೆಯಿಂದ ಇನ್ನಷ್ಟು ದಾಳಿಗಳನ್ನು ಪ್ರೇರೇಪಿಸಿದ್ದಲ್ಲದೆ ಜೀವ ಹಾನಿಗೆ ಕಾರಣವಾಗಿದೆ. ಇಸ್ರೇಲ್ ಸರಣಿ ದಾಳಿಗಳನ್ನು ನಡೆಸಿ ಇದು ನಮ್ಮ ತೀಕ್ಣ ಪ್ರತಿಕ್ರಿಯೆ ಎಂದಿದೆ.

ಇಸ್ರೇಲ್ ಮತ್ತು ಹಿಬ್ಜುಲ್ಲಾ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಮನೆ ಬಿಟ್ಟು ದೂರದ ಊರುಗಳಿಗೆ ತೆರಳಿದ್ದ ಬೈರೂತ್‌ ಸೇರಿದಂತೆ ಲೆಬನಾನ್‌ನ ವಿವಿಧ ಭಾಗಗಳ ಜನರು ಮರಳಿ ಬಂದಿದ್ದರು. ಈಗ ಸಂಘರ್ಷ ಮತ್ತೆ ಉಲ್ಬಣಿಸಿದ್ದರಿಂದ ಅವರು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ಇದನ್ನೂ ಓದಿ : ‘ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ’ | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ ಪೊಲೀಸರಿಗೆ ಹೈಕೋರ್ಟ್ ತಪರಾಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...