Homeಮುಖಪುಟಕದನ ವಿರಾಮ ಮುರಿದ ಇಸ್ರೇಲ್‌ : ಲೆಬನಾನ್‌ ಮೇಲೆ ದಾಳಿ ; 11 ಜನರ ಹತ್ಯೆ

ಕದನ ವಿರಾಮ ಮುರಿದ ಇಸ್ರೇಲ್‌ : ಲೆಬನಾನ್‌ ಮೇಲೆ ದಾಳಿ ; 11 ಜನರ ಹತ್ಯೆ

- Advertisement -
- Advertisement -

ಇಸ್ರೇಲ್‌ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ನಡುವೆ ಕದನ ವಿರಾಮ ಒಪ್ಪಂದ ನಡೆದರೂ, ಅದು ಹೆಸರಿಗೆ ಮಾತ್ರ ಎಂಬಂತಾಗಿದೆ. ಸೋಮವಾರ (ಡಿ.2) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಲೆಬನಾನ್‌ನ 11 ಜನರು ಸಾವನ್ನಪ್ಪಿದ್ದಾರೆ. ಆ ಬಳಿಕ ಪರಸ್ಪರ ಸಂಘರ್ಷ‍ ಉಲ್ಬಣಿಸಿದೆ.

ನವೆಂಬರ್ 27ರಂದು ಯುಎಸ್‌, ಈಜಿಪ್ಟ್, ಕತಾರ್ ಮತ್ತು ತುರ್ಕಿ ದೇಶಗಳ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಸೇನೆ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ಕದನ ವಿರಾಮಕ್ಕೆ ಸಹಿ ಹಾಕಿತ್ತು. ಈ ವಿಚಾರವನ್ನು ಯುಎಸ್‌ ಅಧ್ಯಕ್ಷ ಜೋ ಬೈಡನ್‌ ಅವರೇ ಘೋಷಣೆ ಮಾಡಿದ್ದರು.

ಆದರೆ, ಇಸ್ರೇಲ್ ಕದನ ವಿರಾಮ ಮುರಿದು ಸೋಮವಾರ ಲೆಬನಾನ್‌ ಮೇಲೆ ವೈಮಾನಿಕ ದಾಳಿ ನಡೆಸಿ ಇಬ್ಬರನ್ನು ಕೊಂದು ಹಾಕಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಹಿಜ್ಬುಲ್ಲಾ ಕೂಡ ಇಸ್ರೇಲ್ ಸೇನಾ ನೆಲೆ ಮೇಲೆ ದಾಳಿ ನಡೆಸಿದೆ. ನಂತರ ಇಸ್ರೇಲ್ ನಡೆಸಿದ ಸರಣಿ ದಾಳಿಗಳಲ್ಲಿ 9 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯ ಹೇಳಿದೆ.

ಲೆಬನಾನ್ ತನ್ನದೇ ಎಂದು ಹೇಳಿಕೊಳ್ಳುವ ವಿವಾದಿತ ಪ್ರದೇಶವಾದ ಫಾರ್ ಚೌಬಾದ ಬೆಟ್ಟಗಳಲ್ಲಿನ ಇಸ್ರೇಲಿ ಮಿಲಿಟರಿ ನೆಲೆಯ ಮೇಲೆ ದಾಳಿ ಮಾಡುವ ಮೂಲಕ ಕದನ ವಿರಾಮದ ‘ಪುನರಾವರ್ತಿತ ಉಲ್ಲಂಘನೆ’ ಗಳಿಗೆ “ಪ್ರಾಥಮಿಕ ರಕ್ಷಣಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದೇವೆ ಎಂದು ಹಿಜ್ಬುಲ್ಲಾ ಸಮರ್ಥಿಸಿಕೊಂಡಿದೆ.

ಲೆಬನಾನ್‌ನಾದ್ಯಂತ ಮಾರಣಾಂತಿಕ ವಾಯುದಾಳಿಗಳು, ದಕ್ಷಿಣದಲ್ಲಿ ನಾಗರಿಕರ ಮೇಲೆ ಗುಂಡು ಹಾರಿಸುವುದು ಮತ್ತು ರಾಜಧಾನಿ ಬೈರುತ್ ಸೇರಿದಂತೆ ಲೆಬನಾನಿನ ವಾಯುಪ್ರದೇಶದಲ್ಲಿ ಡ್ರೋನ್‌, ಜೆಟ್‌ಗಳನ್ನು ಹಾರಿಸುವ ಮೂಲಕ ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿದೆ ಎಂದು ಹಿಜ್ಬುಲ್ಲಾ ಆರೋಪಿಸಿದೆ.

ದಾಳಿ ನಿಲ್ಲಿಸುವಂತೆ ಸಂಬಂಧಿ ಅಧಿಕಾರಿಗಳು ಮನವಿ ಮಾಡಿದರೂ, ಇಸ್ರೇಲ್ ಸುಮ್ಮನಾಗಲಿಲ್ಲ. ಹಾಗಾಗಿ, ನಾವು ಪ್ರತಿಕ್ರಿಯೆ ನೀಡಬೇಕಾಗಿ ಬಂದು ಎಂದು ಹಿಜ್ಬುಲ್ಲಾ ತಿಳಿಸಿದೆ.

ಆದರೆ, ಹಿಜ್ಬಲ್ಲಾ ಪ್ರತಿಕ್ರಿಯೆ ಇಸ್ರೇಲ್ ಕಡೆಯಿಂದ ಇನ್ನಷ್ಟು ದಾಳಿಗಳನ್ನು ಪ್ರೇರೇಪಿಸಿದ್ದಲ್ಲದೆ ಜೀವ ಹಾನಿಗೆ ಕಾರಣವಾಗಿದೆ. ಇಸ್ರೇಲ್ ಸರಣಿ ದಾಳಿಗಳನ್ನು ನಡೆಸಿ ಇದು ನಮ್ಮ ತೀಕ್ಣ ಪ್ರತಿಕ್ರಿಯೆ ಎಂದಿದೆ.

ಇಸ್ರೇಲ್ ಮತ್ತು ಹಿಬ್ಜುಲ್ಲಾ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಮನೆ ಬಿಟ್ಟು ದೂರದ ಊರುಗಳಿಗೆ ತೆರಳಿದ್ದ ಬೈರೂತ್‌ ಸೇರಿದಂತೆ ಲೆಬನಾನ್‌ನ ವಿವಿಧ ಭಾಗಗಳ ಜನರು ಮರಳಿ ಬಂದಿದ್ದರು. ಈಗ ಸಂಘರ್ಷ ಮತ್ತೆ ಉಲ್ಬಣಿಸಿದ್ದರಿಂದ ಅವರು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ಇದನ್ನೂ ಓದಿ : ‘ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ’ | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ ಪೊಲೀಸರಿಗೆ ಹೈಕೋರ್ಟ್ ತಪರಾಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...