Homeಮುಖಪುಟಕದನ ವಿರಾಮ ಮುರಿದ ಇಸ್ರೇಲ್‌ : ಲೆಬನಾನ್‌ ಮೇಲೆ ದಾಳಿ ; 11 ಜನರ ಹತ್ಯೆ

ಕದನ ವಿರಾಮ ಮುರಿದ ಇಸ್ರೇಲ್‌ : ಲೆಬನಾನ್‌ ಮೇಲೆ ದಾಳಿ ; 11 ಜನರ ಹತ್ಯೆ

- Advertisement -
- Advertisement -

ಇಸ್ರೇಲ್‌ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ನಡುವೆ ಕದನ ವಿರಾಮ ಒಪ್ಪಂದ ನಡೆದರೂ, ಅದು ಹೆಸರಿಗೆ ಮಾತ್ರ ಎಂಬಂತಾಗಿದೆ. ಸೋಮವಾರ (ಡಿ.2) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಲೆಬನಾನ್‌ನ 11 ಜನರು ಸಾವನ್ನಪ್ಪಿದ್ದಾರೆ. ಆ ಬಳಿಕ ಪರಸ್ಪರ ಸಂಘರ್ಷ‍ ಉಲ್ಬಣಿಸಿದೆ.

ನವೆಂಬರ್ 27ರಂದು ಯುಎಸ್‌, ಈಜಿಪ್ಟ್, ಕತಾರ್ ಮತ್ತು ತುರ್ಕಿ ದೇಶಗಳ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಸೇನೆ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ಕದನ ವಿರಾಮಕ್ಕೆ ಸಹಿ ಹಾಕಿತ್ತು. ಈ ವಿಚಾರವನ್ನು ಯುಎಸ್‌ ಅಧ್ಯಕ್ಷ ಜೋ ಬೈಡನ್‌ ಅವರೇ ಘೋಷಣೆ ಮಾಡಿದ್ದರು.

ಆದರೆ, ಇಸ್ರೇಲ್ ಕದನ ವಿರಾಮ ಮುರಿದು ಸೋಮವಾರ ಲೆಬನಾನ್‌ ಮೇಲೆ ವೈಮಾನಿಕ ದಾಳಿ ನಡೆಸಿ ಇಬ್ಬರನ್ನು ಕೊಂದು ಹಾಕಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಹಿಜ್ಬುಲ್ಲಾ ಕೂಡ ಇಸ್ರೇಲ್ ಸೇನಾ ನೆಲೆ ಮೇಲೆ ದಾಳಿ ನಡೆಸಿದೆ. ನಂತರ ಇಸ್ರೇಲ್ ನಡೆಸಿದ ಸರಣಿ ದಾಳಿಗಳಲ್ಲಿ 9 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯ ಹೇಳಿದೆ.

ಲೆಬನಾನ್ ತನ್ನದೇ ಎಂದು ಹೇಳಿಕೊಳ್ಳುವ ವಿವಾದಿತ ಪ್ರದೇಶವಾದ ಫಾರ್ ಚೌಬಾದ ಬೆಟ್ಟಗಳಲ್ಲಿನ ಇಸ್ರೇಲಿ ಮಿಲಿಟರಿ ನೆಲೆಯ ಮೇಲೆ ದಾಳಿ ಮಾಡುವ ಮೂಲಕ ಕದನ ವಿರಾಮದ ‘ಪುನರಾವರ್ತಿತ ಉಲ್ಲಂಘನೆ’ ಗಳಿಗೆ “ಪ್ರಾಥಮಿಕ ರಕ್ಷಣಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದೇವೆ ಎಂದು ಹಿಜ್ಬುಲ್ಲಾ ಸಮರ್ಥಿಸಿಕೊಂಡಿದೆ.

ಲೆಬನಾನ್‌ನಾದ್ಯಂತ ಮಾರಣಾಂತಿಕ ವಾಯುದಾಳಿಗಳು, ದಕ್ಷಿಣದಲ್ಲಿ ನಾಗರಿಕರ ಮೇಲೆ ಗುಂಡು ಹಾರಿಸುವುದು ಮತ್ತು ರಾಜಧಾನಿ ಬೈರುತ್ ಸೇರಿದಂತೆ ಲೆಬನಾನಿನ ವಾಯುಪ್ರದೇಶದಲ್ಲಿ ಡ್ರೋನ್‌, ಜೆಟ್‌ಗಳನ್ನು ಹಾರಿಸುವ ಮೂಲಕ ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿದೆ ಎಂದು ಹಿಜ್ಬುಲ್ಲಾ ಆರೋಪಿಸಿದೆ.

ದಾಳಿ ನಿಲ್ಲಿಸುವಂತೆ ಸಂಬಂಧಿ ಅಧಿಕಾರಿಗಳು ಮನವಿ ಮಾಡಿದರೂ, ಇಸ್ರೇಲ್ ಸುಮ್ಮನಾಗಲಿಲ್ಲ. ಹಾಗಾಗಿ, ನಾವು ಪ್ರತಿಕ್ರಿಯೆ ನೀಡಬೇಕಾಗಿ ಬಂದು ಎಂದು ಹಿಜ್ಬುಲ್ಲಾ ತಿಳಿಸಿದೆ.

ಆದರೆ, ಹಿಜ್ಬಲ್ಲಾ ಪ್ರತಿಕ್ರಿಯೆ ಇಸ್ರೇಲ್ ಕಡೆಯಿಂದ ಇನ್ನಷ್ಟು ದಾಳಿಗಳನ್ನು ಪ್ರೇರೇಪಿಸಿದ್ದಲ್ಲದೆ ಜೀವ ಹಾನಿಗೆ ಕಾರಣವಾಗಿದೆ. ಇಸ್ರೇಲ್ ಸರಣಿ ದಾಳಿಗಳನ್ನು ನಡೆಸಿ ಇದು ನಮ್ಮ ತೀಕ್ಣ ಪ್ರತಿಕ್ರಿಯೆ ಎಂದಿದೆ.

ಇಸ್ರೇಲ್ ಮತ್ತು ಹಿಬ್ಜುಲ್ಲಾ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಮನೆ ಬಿಟ್ಟು ದೂರದ ಊರುಗಳಿಗೆ ತೆರಳಿದ್ದ ಬೈರೂತ್‌ ಸೇರಿದಂತೆ ಲೆಬನಾನ್‌ನ ವಿವಿಧ ಭಾಗಗಳ ಜನರು ಮರಳಿ ಬಂದಿದ್ದರು. ಈಗ ಸಂಘರ್ಷ ಮತ್ತೆ ಉಲ್ಬಣಿಸಿದ್ದರಿಂದ ಅವರು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ಇದನ್ನೂ ಓದಿ : ‘ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ’ | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ ಪೊಲೀಸರಿಗೆ ಹೈಕೋರ್ಟ್ ತಪರಾಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...