Homeಅಂತರಾಷ್ಟ್ರೀಯಗಾಝಾ ಕದನ ವಿರಾಮ ಉಲ್ಲಂಘಿಸಿದ ಇಸ್ರೇಲ್ : ಈವರೆಗೆ 38 ಪ್ಯಾಲೆಸ್ತೀನಿಯರ ಹತ್ಯೆ

ಗಾಝಾ ಕದನ ವಿರಾಮ ಉಲ್ಲಂಘಿಸಿದ ಇಸ್ರೇಲ್ : ಈವರೆಗೆ 38 ಪ್ಯಾಲೆಸ್ತೀನಿಯರ ಹತ್ಯೆ

- Advertisement -
- Advertisement -

ಈ ಹಿಂದಿನಂತೆ ಈ ಬಾರಿಯೂ ಇಸ್ರೇಲ್ ಗಾಝಾ ಕದನ ವಿರಾಮ ಒಪ್ಪಂದವನ್ನು ಮುರಿದಿದೆ. ಅಕ್ಟೋಬರ್ 9ರಂದು ಹಮಾಸ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ, ಈವರೆಗೆ (ಅ.19) ಬರೋಬ್ಬರಿ 47 ಬಾರಿ ಇಸ್ರೇಲ್ ಒಪ್ಪಂದ ಉಲ್ಲಂಘಿಸಿ ದಾಳಿ ಮಾಡಿದೆ. ಇದರಿಂದ ಈವರೆಗೆ 38 ಜನರು ಸಾವಿಗೀಡಾಗಿದ್ದು, 143 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಗಾಝಾ ಪಟ್ಟಿಯಾದ್ಯಂತ ಹಲವೆಡೆ ನಾಗರಿಕರ ಮೇಲೆ ಇಸ್ರೇಲ್ ಸೈನಿಕರು ನೇರ ಗುಂಡಿನ ದಾಳಿ ನಡೆಸಿದ್ದಾರೆ. ಕೆಲವೆಡೆ ಶೆಲ್ ದಾಳಿ ಮಾಡಿದ್ದಾರೆ. ಅನೇಕ ಕಡೆಗಳಲ್ಲಿ ಅಮಾಯಕರ ಜನರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಹಲವು ಪ್ಯಾಲೆಸ್ತೀನಿಯರನ್ನು ಬಂಧಿಸಿದ್ದಾರೆ ಎಂದು ಗಾಝಾದ ಮಾಧ್ಯಮಗಳು ವರದಿ ಮಾಡಿವೆ.

ರಫಾ ಮತ್ತು ದಕ್ಷಿಣ ಗಾಝಾದ ಇತರೆಡೆಗಳಲ್ಲಿ ಇಸ್ರೇಲಿ ಸೇನೆ ದಾಳಿ ನಡೆಸುತ್ತಿದೆ. ಹಮಾಸ್ ಜೊತೆಗಿನ ಗುಂಡಿನ ಚಕಮಕಿ ಬಳಿಕ ಈ ದಾಳಿಗಳು ನಡೆದಿವೆ ಎಂದು ಇಸ್ರೇಲ್ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ.

ಇದಕ್ಕೆ ವ್ಯತಿರಿಕ್ತವಾಗಿ, ಹಮಾಸ್ ಗಾಝಾದಲ್ಲಿ ನಾಗರಿಕರ ಮೇಲೆ ದಾಳಿ ನಡೆಸಲು ಯೋಜಿಸುತ್ತಿದೆ ಎಂಬ ‘ವಿಶ್ವಾಸಾರ್ಹ ವರದಿಗಳು ನಮ್ಮ ಬಳಿ ಇವೆ ಎಂದು ಅಮೆರಿಕ ಶನಿವಾರ ಹೇಳಿಕೊಂಡಿದೆ.

“ಪ್ಯಾಲೆಸ್ತೀನಿಯನ್ ನಾಗರಿಕರ ಮೇಲಿನ ಈ ಯೋಜಿತ ದಾಳಿಯು ಕದನ ವಿರಾಮ ಒಪ್ಪಂದದ ನೇರ ಮತ್ತು ಗಂಭೀರ ಉಲ್ಲಂಘನೆಯಾಗುತ್ತದೆ. ಮಧ್ಯಸ್ಥಿಕೆ ಪ್ರಯತ್ನಗಳ ಮೂಲಕ ಸಾಧಿಸಿದ ಗಮನಾರ್ಹ ಪ್ರಗತಿಯನ್ನು ಇದು ಹಾಳು ಮಾಡುತ್ತದೆ” ಎಂದು ಅಮೆರಿಕದ ವಿದೇಶಾಂಗ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಹಮಾಸ್ ಈ ಹೇಳಿಕೆಗಳನ್ನು ತಿರಸ್ಕರಿಸಿದೆ. ಅಮೆರಿಕ ಇಸ್ರೇಲ್ ಜೊತೆ ಸೇರಿಕೊಂಡು ಸುಳ್ಳು ಹೇಳುತ್ತಿದೆ. ಗಾಝಾದಲ್ಲಿ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ನಡೆಸುತ್ತಿರುವ ಆಕ್ರಮಣ, ಯುದ್ದಪರಾಧಗಳು ಮತ್ತು ಸಂಘಟಿತ ದಾಳಿ ಮುಂದುವರಿಯಲು ಬೆಂಬಲವಾಗಿ ನಿಂತಿದೆ ಎಂದು ಹಮಾಸ್ ಆರೋಪಿಸಿದೆ.

ಜಗತ್ತಿಗೆ ಸುಳ್ಳು ಮತ್ತು ದಾರಿ ತಪ್ಪಿಸುವ ಹೇಳಿಕೆ ನೀಡುವುದನ್ನು ಅಮೆರಿಕ ಕೊನೆಗೊಳಿಸಬೇಕು. ಇಸ್ರೇಲ್ ಕದನ ವಿರಾಮ ಒಪ್ಪಂದ ಮುರಿಯುತ್ತಿರುವುದನ್ನು ತಡೆಯಬೇಕು ಎಂದು ಹಮಾಸ್ ಅಮೆರಿಕಕ್ಕೆ ಆಗ್ರಹಿಸಿದೆ.

“ಅಮೆರಿಕ ಮತ್ತು ಇಸ್ರೇಲ್‌ ಹೇಳುತ್ತಿರುವುದೆಲ್ಲ ಸುಳ್ಳು. ಗಾಝಾದಲ್ಲಿ ಗ್ರೌಂಡ್ ರಿಯಾಲಿಟಿ ಬೇರೆಯೇ ಇದೆ. ಇಸ್ರೇಲ್ ಮತ್ತು ಅಮೆರಿಕದವರು ಜಂಟಿಯಾಗಿ ಗಾಝಾದ ಕ್ರಿಮಿನಲ್ ಗ್ಯಾಂಗ್‌ಗಳಿಗೆ ಹಣಕಾಸು ಸೇರಿದಂತೆ ಎಲ್ಲಾ ನೆರವುಗಳನ್ನು ನೀಡುತ್ತಿದ್ದಾರೆ. ಅವರನ್ನು ಶಸ್ತ್ರ ಸಜ್ಜಗೊಳಿಸಿ ಪ್ಯಾಲೆಸ್ತೀನಿಯರ ಮೇಲೆ ದಾಳಿ ನಡೆಸಲು ಪ್ರೇರೇಪಿಸುತ್ತಿದ್ದಾರೆ. ಈ ಗುಂಪುಗಳು ನೆರವು ಟ್ರಕ್‌ಗಳನ್ನು ಲೂಟಿ ಮಾಡುತ್ತಿವೆ. ಅಮಾಯಕರ ಜನರ ಮೇಲೆ ದಾಳಿ ಮಾಡುತ್ತಿವೆ. ಈ ವಿಚಾರವನ್ನು ಆ ಗುಂಪುಗಳು ವಿಡಿಯೋ ಮೂಲಕ ಒಪ್ಪಿಕೊಂಡಿವೆ. ಕೆಲವೆಡೆ ಇಸ್ರೇಲ್‌ ನೇರವಾಗಿ ನಾಗರಿಕ ಮೇಲೆ ದಾಳಿ ಮಾಡುತ್ತಿವೆ. ಒಟ್ಟಿನಲ್ಲಿ ಪರಿಸ್ಥಿತಿ ಶೋಚಣೀಯವಾಗಿದೆ” ಎಂದು ಹಮಾಸ್ ಹೇಳಿಕೊಂಡಿದೆ.

ಮುಂದುವರಿದ ಇಸ್ರೇಲ್ ಆಕ್ರಮಣ

ದೊಡ್ಡ ಮಟ್ಟದ ಕದನ ವಿರಾಮ ಉಲ್ಲಂಘನೆ ಎಂಬಂತೆ, ಶುಕ್ರವಾರ ಗಾಝಾದಲ್ಲಿ ಭೀಕರ ದಾಳಿ ನಡೆಸಿದ ಇಸ್ರೇಲ್, ಏಳು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಹನ್ನೊಂದು ಜನರನ್ನು ಹತ್ಯೆ ಮಾಡಿದೆ. ಸ್ಥಳಾಂತರಗೊಂಡ ಕುಟುಂಬವು ತಮ್ಮ ಮನೆಗೆ ಹಿಂತಿರುಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ವಾಹನವನ್ನು ಇಸ್ರೇಲಿ ಸೇನೆಯು ಗುರಿಯಾಗಿಸಿಕೊಂಡು ಡಿಕ್ಕಿ ಹೊಡೆದಿದೆ. ಗಾಝಾದ ನಾಗರಿಕ ರಕ್ಷಣಾ ಇಲಾಖೆಯ ಪ್ರಕಾರ, ಗಾಝಾ ನಗರದ ಜೈಟೌನ್ ಸಮೀಪ ಈ ದಾಳಿ ನಡೆದಿದೆ.

ಈ ಹತ್ಯೆಯನ್ನು ಸಮರ್ಥಿಸಿಕೊಂಡಿರುವ ಇಸ್ರೇಲ್, ಪ್ಯಾಲೆಸ್ತೀನಿಯರ ವಾಹನವು ‘ಹಳದಿ ರೇಖೆ’ಯನ್ನು ದಾಟಿ, ಇಸ್ರೇಲ್ ನಿಯಂತ್ರಣದಲ್ಲಿರುವ ಪ್ರದೇಶಕ್ಕೆ ಪ್ರವೇಶಿಸಿತ್ತು ಎಂದು ಹೇಳಿಕೊಂಡಿದೆ.

“ನೆಲದ ಮೇಲೆ ನಿಜವಾದ ಭೌತಿಕ ಗುರುತುಗಳು ಇಲ್ಲದ ಕಾರಣ ಮೃತ ಕುಟುಂಬಕ್ಕೆ ಹಳದಿ ಮತ್ತು ಕೆಂಪು ರೇಖೆಗಳ ನಡುವೆ ವ್ಯತ್ಯಾಸವನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು” ಎಂದು ಗಾಝಾ ನಾಗರಿಕ ರಕ್ಷಣಾ ವಕ್ತಾರ ಮಹಮೂದ್ ಬಸಲ್ ಹೇಳಿದ್ದಾರೆ.

ಇತ್ತ ಗಾಝಾ ಪಟ್ಟಿಯಲ್ಲಿ ಮಾತ್ರವಲ್ಲದೆ, ಇಸ್ರೇಲಿ ಸೇನೆಯು ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಹಿಂಸಾತ್ಮಕ ದಾಳಿಗಳನ್ನು ತೀವ್ರಗೊಳಿಸಿದೆ. ಅನೇಕ ಪ್ಯಾಲೆಸ್ತೀನಿಯರು ಕೊಂದು ಅವರ ಆಸ್ತಿಗಳನ್ನು ಧ್ವಂಸಗೊಳಿಸುತ್ತಿದೆ. ಭಾನುವಾರ ನಬ್ಲಸ್ ಬಳಿಯ ಅಲ್-ಐನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲಿ ಸೇನೆ ನಡೆಸಿದ ದಾಳಿಯಲ್ಲಿ 42 ವರ್ಷದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ ಇಬ್ಬರು ಗಾಯಗೊಂಡಿದ್ದಾರೆ.

ಇದಕ್ಕೂ ಮುನ್ನ ಶುಕ್ರವಾರ ಹೆಬ್ರಾನ್‌ನ ದಕ್ಷಿಣದಲ್ಲಿರುವ ಅಲ್-ರಿಹಿಯಾ ಪಟ್ಟಣದಲ್ಲಿ ಇಸ್ರೇಲಿ ಸೇನೆ 11 ವರ್ಷದ ಬಾಲಕ ಮೊಹಮ್ಮದ್ ಹಲ್ಲಾಕ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಿತ್ತು. ಕದನ ವಿರಾಮ ಜಾರಿಗೆ ಬಂದ ನಂತರ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ತೀವ್ರ ಆಕ್ರಮಣ ನಡೆಸುತ್ತಿದೆ.

ಈ ನಡುವೆ, ಗಾಝಾ ಮತ್ತು ಈಜಿಪ್ಟ್ ನಡುವಿನ ರಫಾ ಗಡಿಯನ್ನು ಮುಂದಿನ ಸೂಚನೆ ಬರುವವರೆಗೂ ಮುಚ್ಚಲಾಗುವುದು ಎಂದು ಇಸ್ರೇಲ್ ಶನಿವಾರ ಹೇಳಿದೆ. ಇಸ್ರೇಲ್‌ನ ನಿರಂತರ ದಿಗ್ಬಂಧನದಿಂದ ಸಂಕಷ್ಟ ಎದುರಿಸುತ್ತಿದ್ದ ಪ್ಯಾಲೆಸ್ತೀನಿಯರಿಗೆ ಹೆಚ್ಚು ಅಗತ್ಯವಿರುವ ಮಾನವೀಯ ನೆರವು ತಲುಪಿಸಲು ಉಳಿದಿದ್ದ ಜಾಗ ಇದೊಂದೆ ಆಗಿತ್ತು.

ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ಮುಂದಿನ ಸೂಚನೆವರೆಗೆ ರಫಾ ಕ್ರಾಸಿಂಗ್ ಅನ್ನು ಮುಚ್ಚುವಂತೆ ನಿರ್ದೇಶಿಸಿದ್ದಾರೆ. ಒತ್ತೆಯಾಳುಗಳು ಮತ್ತು ಮೃತರ ದೇಹಗಳನ್ನು ಹಿಂದಿರುಗಿಸುವ ಮತ್ತು ಒಪ್ಪಿದ ನಿಯಮಗಳನ್ನು ಜಾರಿಗೆ ತರುವ ತನ್ನ ಜವಾಬ್ದಾರಿಗಳನ್ನು ಹಮಾಸ್ ಹೇಗೆ ಪೂರೈಸುತ್ತದೆ ಎಂಬುದರ ಆಧಾರದ ಮೇಲೆ ಗಡಿ ತೆರೆಯುವಿಕೆ ನಿಂತಿದೆ ಎಂದು ನೆತನ್ಯಾಹು ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಒಟ್ಟು 28 ಒತ್ತೆಯಾಳುಗಳ ಮೃತದೇಹಗಳ ಪೈಕಿ 12 ಮೃತದೇಹಗಳನ್ನು ಹಮಾಸ್ ಇಸ್ರೇಲ್‌ಗೆ ಹಸ್ತಾಂತರಿಸಿದೆ. ಇನ್ನುಳಿದವು ಇಸ್ರೇಲ್ ಧ್ವಂಸಗೊಳಿಸಿದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಇವೆ. ಅವುಗಳನ್ನು ಮೇಲೆತ್ತಲು ವಿಶೇಷ ಉಪಕರಣಗಳು ಅಥವಾ ಯಂತ್ರಗಳು ಬೇಕು ಎಂದು ಹಮಾಸ್ ಶನಿವಾರ ಹೇಳಿದೆ.

ಇಸ್ರೇಲ್ ಕಳೆದ ಎರಡು ವರ್ಷಗಳಲ್ಲಿ ನಡೆಸಿದ ನಿರಂತರ ಆಕ್ರಮಣದಿಂದ ಗಾಝಾದಲ್ಲಿ ಸಾವಿಗೀಡಾದ ಪ್ಯಾಲೆಸ್ತೀನಿಯರ ಸಂಖ್ಯೆ 68 ಸಾವಿರ ದಾಟಿದೆ. ಇನ್ನೂ ಸುಮಾರು 10 ಸಾವಿರ ಜನರ ಮೃತದೇಹಗಳು ಅವಶೇಷಗಳಡಿ ಇರಬಹುದು ಎಂದು ಅಂದಾಜಿಸಲಾಗಿದೆ. ಗಾಯಾಳುಗಳ ಸಂಖ್ಯೆ 1,70,000 ಸಾವಿರ ದಾಟಿದೆ.

ಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...