Homeಅಂತರಾಷ್ಟ್ರೀಯಗಾಝಾ ಕದನ ವಿರಾಮ ಉಲ್ಲಂಘಿಸಿದ ಇಸ್ರೇಲ್ : ಈವರೆಗೆ 38 ಪ್ಯಾಲೆಸ್ತೀನಿಯರ ಹತ್ಯೆ

ಗಾಝಾ ಕದನ ವಿರಾಮ ಉಲ್ಲಂಘಿಸಿದ ಇಸ್ರೇಲ್ : ಈವರೆಗೆ 38 ಪ್ಯಾಲೆಸ್ತೀನಿಯರ ಹತ್ಯೆ

- Advertisement -
- Advertisement -

ಈ ಹಿಂದಿನಂತೆ ಈ ಬಾರಿಯೂ ಇಸ್ರೇಲ್ ಗಾಝಾ ಕದನ ವಿರಾಮ ಒಪ್ಪಂದವನ್ನು ಮುರಿದಿದೆ. ಅಕ್ಟೋಬರ್ 9ರಂದು ಹಮಾಸ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ, ಈವರೆಗೆ (ಅ.19) ಬರೋಬ್ಬರಿ 47 ಬಾರಿ ಇಸ್ರೇಲ್ ಒಪ್ಪಂದ ಉಲ್ಲಂಘಿಸಿ ದಾಳಿ ಮಾಡಿದೆ. ಇದರಿಂದ ಈವರೆಗೆ 38 ಜನರು ಸಾವಿಗೀಡಾಗಿದ್ದು, 143 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಗಾಝಾ ಪಟ್ಟಿಯಾದ್ಯಂತ ಹಲವೆಡೆ ನಾಗರಿಕರ ಮೇಲೆ ಇಸ್ರೇಲ್ ಸೈನಿಕರು ನೇರ ಗುಂಡಿನ ದಾಳಿ ನಡೆಸಿದ್ದಾರೆ. ಕೆಲವೆಡೆ ಶೆಲ್ ದಾಳಿ ಮಾಡಿದ್ದಾರೆ. ಅನೇಕ ಕಡೆಗಳಲ್ಲಿ ಅಮಾಯಕರ ಜನರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಹಲವು ಪ್ಯಾಲೆಸ್ತೀನಿಯರನ್ನು ಬಂಧಿಸಿದ್ದಾರೆ ಎಂದು ಗಾಝಾದ ಮಾಧ್ಯಮಗಳು ವರದಿ ಮಾಡಿವೆ.

ರಫಾ ಮತ್ತು ದಕ್ಷಿಣ ಗಾಝಾದ ಇತರೆಡೆಗಳಲ್ಲಿ ಇಸ್ರೇಲಿ ಸೇನೆ ದಾಳಿ ನಡೆಸುತ್ತಿದೆ. ಹಮಾಸ್ ಜೊತೆಗಿನ ಗುಂಡಿನ ಚಕಮಕಿ ಬಳಿಕ ಈ ದಾಳಿಗಳು ನಡೆದಿವೆ ಎಂದು ಇಸ್ರೇಲ್ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ.

ಇದಕ್ಕೆ ವ್ಯತಿರಿಕ್ತವಾಗಿ, ಹಮಾಸ್ ಗಾಝಾದಲ್ಲಿ ನಾಗರಿಕರ ಮೇಲೆ ದಾಳಿ ನಡೆಸಲು ಯೋಜಿಸುತ್ತಿದೆ ಎಂಬ ‘ವಿಶ್ವಾಸಾರ್ಹ ವರದಿಗಳು ನಮ್ಮ ಬಳಿ ಇವೆ ಎಂದು ಅಮೆರಿಕ ಶನಿವಾರ ಹೇಳಿಕೊಂಡಿದೆ.

“ಪ್ಯಾಲೆಸ್ತೀನಿಯನ್ ನಾಗರಿಕರ ಮೇಲಿನ ಈ ಯೋಜಿತ ದಾಳಿಯು ಕದನ ವಿರಾಮ ಒಪ್ಪಂದದ ನೇರ ಮತ್ತು ಗಂಭೀರ ಉಲ್ಲಂಘನೆಯಾಗುತ್ತದೆ. ಮಧ್ಯಸ್ಥಿಕೆ ಪ್ರಯತ್ನಗಳ ಮೂಲಕ ಸಾಧಿಸಿದ ಗಮನಾರ್ಹ ಪ್ರಗತಿಯನ್ನು ಇದು ಹಾಳು ಮಾಡುತ್ತದೆ” ಎಂದು ಅಮೆರಿಕದ ವಿದೇಶಾಂಗ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಹಮಾಸ್ ಈ ಹೇಳಿಕೆಗಳನ್ನು ತಿರಸ್ಕರಿಸಿದೆ. ಅಮೆರಿಕ ಇಸ್ರೇಲ್ ಜೊತೆ ಸೇರಿಕೊಂಡು ಸುಳ್ಳು ಹೇಳುತ್ತಿದೆ. ಗಾಝಾದಲ್ಲಿ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ನಡೆಸುತ್ತಿರುವ ಆಕ್ರಮಣ, ಯುದ್ದಪರಾಧಗಳು ಮತ್ತು ಸಂಘಟಿತ ದಾಳಿ ಮುಂದುವರಿಯಲು ಬೆಂಬಲವಾಗಿ ನಿಂತಿದೆ ಎಂದು ಹಮಾಸ್ ಆರೋಪಿಸಿದೆ.

ಜಗತ್ತಿಗೆ ಸುಳ್ಳು ಮತ್ತು ದಾರಿ ತಪ್ಪಿಸುವ ಹೇಳಿಕೆ ನೀಡುವುದನ್ನು ಅಮೆರಿಕ ಕೊನೆಗೊಳಿಸಬೇಕು. ಇಸ್ರೇಲ್ ಕದನ ವಿರಾಮ ಒಪ್ಪಂದ ಮುರಿಯುತ್ತಿರುವುದನ್ನು ತಡೆಯಬೇಕು ಎಂದು ಹಮಾಸ್ ಅಮೆರಿಕಕ್ಕೆ ಆಗ್ರಹಿಸಿದೆ.

“ಅಮೆರಿಕ ಮತ್ತು ಇಸ್ರೇಲ್‌ ಹೇಳುತ್ತಿರುವುದೆಲ್ಲ ಸುಳ್ಳು. ಗಾಝಾದಲ್ಲಿ ಗ್ರೌಂಡ್ ರಿಯಾಲಿಟಿ ಬೇರೆಯೇ ಇದೆ. ಇಸ್ರೇಲ್ ಮತ್ತು ಅಮೆರಿಕದವರು ಜಂಟಿಯಾಗಿ ಗಾಝಾದ ಕ್ರಿಮಿನಲ್ ಗ್ಯಾಂಗ್‌ಗಳಿಗೆ ಹಣಕಾಸು ಸೇರಿದಂತೆ ಎಲ್ಲಾ ನೆರವುಗಳನ್ನು ನೀಡುತ್ತಿದ್ದಾರೆ. ಅವರನ್ನು ಶಸ್ತ್ರ ಸಜ್ಜಗೊಳಿಸಿ ಪ್ಯಾಲೆಸ್ತೀನಿಯರ ಮೇಲೆ ದಾಳಿ ನಡೆಸಲು ಪ್ರೇರೇಪಿಸುತ್ತಿದ್ದಾರೆ. ಈ ಗುಂಪುಗಳು ನೆರವು ಟ್ರಕ್‌ಗಳನ್ನು ಲೂಟಿ ಮಾಡುತ್ತಿವೆ. ಅಮಾಯಕರ ಜನರ ಮೇಲೆ ದಾಳಿ ಮಾಡುತ್ತಿವೆ. ಈ ವಿಚಾರವನ್ನು ಆ ಗುಂಪುಗಳು ವಿಡಿಯೋ ಮೂಲಕ ಒಪ್ಪಿಕೊಂಡಿವೆ. ಕೆಲವೆಡೆ ಇಸ್ರೇಲ್‌ ನೇರವಾಗಿ ನಾಗರಿಕ ಮೇಲೆ ದಾಳಿ ಮಾಡುತ್ತಿವೆ. ಒಟ್ಟಿನಲ್ಲಿ ಪರಿಸ್ಥಿತಿ ಶೋಚಣೀಯವಾಗಿದೆ” ಎಂದು ಹಮಾಸ್ ಹೇಳಿಕೊಂಡಿದೆ.

ಮುಂದುವರಿದ ಇಸ್ರೇಲ್ ಆಕ್ರಮಣ

ದೊಡ್ಡ ಮಟ್ಟದ ಕದನ ವಿರಾಮ ಉಲ್ಲಂಘನೆ ಎಂಬಂತೆ, ಶುಕ್ರವಾರ ಗಾಝಾದಲ್ಲಿ ಭೀಕರ ದಾಳಿ ನಡೆಸಿದ ಇಸ್ರೇಲ್, ಏಳು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಹನ್ನೊಂದು ಜನರನ್ನು ಹತ್ಯೆ ಮಾಡಿದೆ. ಸ್ಥಳಾಂತರಗೊಂಡ ಕುಟುಂಬವು ತಮ್ಮ ಮನೆಗೆ ಹಿಂತಿರುಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ವಾಹನವನ್ನು ಇಸ್ರೇಲಿ ಸೇನೆಯು ಗುರಿಯಾಗಿಸಿಕೊಂಡು ಡಿಕ್ಕಿ ಹೊಡೆದಿದೆ. ಗಾಝಾದ ನಾಗರಿಕ ರಕ್ಷಣಾ ಇಲಾಖೆಯ ಪ್ರಕಾರ, ಗಾಝಾ ನಗರದ ಜೈಟೌನ್ ಸಮೀಪ ಈ ದಾಳಿ ನಡೆದಿದೆ.

ಈ ಹತ್ಯೆಯನ್ನು ಸಮರ್ಥಿಸಿಕೊಂಡಿರುವ ಇಸ್ರೇಲ್, ಪ್ಯಾಲೆಸ್ತೀನಿಯರ ವಾಹನವು ‘ಹಳದಿ ರೇಖೆ’ಯನ್ನು ದಾಟಿ, ಇಸ್ರೇಲ್ ನಿಯಂತ್ರಣದಲ್ಲಿರುವ ಪ್ರದೇಶಕ್ಕೆ ಪ್ರವೇಶಿಸಿತ್ತು ಎಂದು ಹೇಳಿಕೊಂಡಿದೆ.

“ನೆಲದ ಮೇಲೆ ನಿಜವಾದ ಭೌತಿಕ ಗುರುತುಗಳು ಇಲ್ಲದ ಕಾರಣ ಮೃತ ಕುಟುಂಬಕ್ಕೆ ಹಳದಿ ಮತ್ತು ಕೆಂಪು ರೇಖೆಗಳ ನಡುವೆ ವ್ಯತ್ಯಾಸವನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು” ಎಂದು ಗಾಝಾ ನಾಗರಿಕ ರಕ್ಷಣಾ ವಕ್ತಾರ ಮಹಮೂದ್ ಬಸಲ್ ಹೇಳಿದ್ದಾರೆ.

ಇತ್ತ ಗಾಝಾ ಪಟ್ಟಿಯಲ್ಲಿ ಮಾತ್ರವಲ್ಲದೆ, ಇಸ್ರೇಲಿ ಸೇನೆಯು ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಹಿಂಸಾತ್ಮಕ ದಾಳಿಗಳನ್ನು ತೀವ್ರಗೊಳಿಸಿದೆ. ಅನೇಕ ಪ್ಯಾಲೆಸ್ತೀನಿಯರು ಕೊಂದು ಅವರ ಆಸ್ತಿಗಳನ್ನು ಧ್ವಂಸಗೊಳಿಸುತ್ತಿದೆ. ಭಾನುವಾರ ನಬ್ಲಸ್ ಬಳಿಯ ಅಲ್-ಐನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲಿ ಸೇನೆ ನಡೆಸಿದ ದಾಳಿಯಲ್ಲಿ 42 ವರ್ಷದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ ಇಬ್ಬರು ಗಾಯಗೊಂಡಿದ್ದಾರೆ.

ಇದಕ್ಕೂ ಮುನ್ನ ಶುಕ್ರವಾರ ಹೆಬ್ರಾನ್‌ನ ದಕ್ಷಿಣದಲ್ಲಿರುವ ಅಲ್-ರಿಹಿಯಾ ಪಟ್ಟಣದಲ್ಲಿ ಇಸ್ರೇಲಿ ಸೇನೆ 11 ವರ್ಷದ ಬಾಲಕ ಮೊಹಮ್ಮದ್ ಹಲ್ಲಾಕ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಿತ್ತು. ಕದನ ವಿರಾಮ ಜಾರಿಗೆ ಬಂದ ನಂತರ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ತೀವ್ರ ಆಕ್ರಮಣ ನಡೆಸುತ್ತಿದೆ.

ಈ ನಡುವೆ, ಗಾಝಾ ಮತ್ತು ಈಜಿಪ್ಟ್ ನಡುವಿನ ರಫಾ ಗಡಿಯನ್ನು ಮುಂದಿನ ಸೂಚನೆ ಬರುವವರೆಗೂ ಮುಚ್ಚಲಾಗುವುದು ಎಂದು ಇಸ್ರೇಲ್ ಶನಿವಾರ ಹೇಳಿದೆ. ಇಸ್ರೇಲ್‌ನ ನಿರಂತರ ದಿಗ್ಬಂಧನದಿಂದ ಸಂಕಷ್ಟ ಎದುರಿಸುತ್ತಿದ್ದ ಪ್ಯಾಲೆಸ್ತೀನಿಯರಿಗೆ ಹೆಚ್ಚು ಅಗತ್ಯವಿರುವ ಮಾನವೀಯ ನೆರವು ತಲುಪಿಸಲು ಉಳಿದಿದ್ದ ಜಾಗ ಇದೊಂದೆ ಆಗಿತ್ತು.

ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ಮುಂದಿನ ಸೂಚನೆವರೆಗೆ ರಫಾ ಕ್ರಾಸಿಂಗ್ ಅನ್ನು ಮುಚ್ಚುವಂತೆ ನಿರ್ದೇಶಿಸಿದ್ದಾರೆ. ಒತ್ತೆಯಾಳುಗಳು ಮತ್ತು ಮೃತರ ದೇಹಗಳನ್ನು ಹಿಂದಿರುಗಿಸುವ ಮತ್ತು ಒಪ್ಪಿದ ನಿಯಮಗಳನ್ನು ಜಾರಿಗೆ ತರುವ ತನ್ನ ಜವಾಬ್ದಾರಿಗಳನ್ನು ಹಮಾಸ್ ಹೇಗೆ ಪೂರೈಸುತ್ತದೆ ಎಂಬುದರ ಆಧಾರದ ಮೇಲೆ ಗಡಿ ತೆರೆಯುವಿಕೆ ನಿಂತಿದೆ ಎಂದು ನೆತನ್ಯಾಹು ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಒಟ್ಟು 28 ಒತ್ತೆಯಾಳುಗಳ ಮೃತದೇಹಗಳ ಪೈಕಿ 12 ಮೃತದೇಹಗಳನ್ನು ಹಮಾಸ್ ಇಸ್ರೇಲ್‌ಗೆ ಹಸ್ತಾಂತರಿಸಿದೆ. ಇನ್ನುಳಿದವು ಇಸ್ರೇಲ್ ಧ್ವಂಸಗೊಳಿಸಿದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಇವೆ. ಅವುಗಳನ್ನು ಮೇಲೆತ್ತಲು ವಿಶೇಷ ಉಪಕರಣಗಳು ಅಥವಾ ಯಂತ್ರಗಳು ಬೇಕು ಎಂದು ಹಮಾಸ್ ಶನಿವಾರ ಹೇಳಿದೆ.

ಇಸ್ರೇಲ್ ಕಳೆದ ಎರಡು ವರ್ಷಗಳಲ್ಲಿ ನಡೆಸಿದ ನಿರಂತರ ಆಕ್ರಮಣದಿಂದ ಗಾಝಾದಲ್ಲಿ ಸಾವಿಗೀಡಾದ ಪ್ಯಾಲೆಸ್ತೀನಿಯರ ಸಂಖ್ಯೆ 68 ಸಾವಿರ ದಾಟಿದೆ. ಇನ್ನೂ ಸುಮಾರು 10 ಸಾವಿರ ಜನರ ಮೃತದೇಹಗಳು ಅವಶೇಷಗಳಡಿ ಇರಬಹುದು ಎಂದು ಅಂದಾಜಿಸಲಾಗಿದೆ. ಗಾಯಾಳುಗಳ ಸಂಖ್ಯೆ 1,70,000 ಸಾವಿರ ದಾಟಿದೆ.

ಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...