Homeಅಂತರಾಷ್ಟ್ರೀಯಗಾಝಾ ಕದನ ವಿರಾಮ ಉಲ್ಲಂಘಿಸಿದ ಇಸ್ರೇಲ್ : ಈವರೆಗೆ 38 ಪ್ಯಾಲೆಸ್ತೀನಿಯರ ಹತ್ಯೆ

ಗಾಝಾ ಕದನ ವಿರಾಮ ಉಲ್ಲಂಘಿಸಿದ ಇಸ್ರೇಲ್ : ಈವರೆಗೆ 38 ಪ್ಯಾಲೆಸ್ತೀನಿಯರ ಹತ್ಯೆ

- Advertisement -
- Advertisement -

ಈ ಹಿಂದಿನಂತೆ ಈ ಬಾರಿಯೂ ಇಸ್ರೇಲ್ ಗಾಝಾ ಕದನ ವಿರಾಮ ಒಪ್ಪಂದವನ್ನು ಮುರಿದಿದೆ. ಅಕ್ಟೋಬರ್ 9ರಂದು ಹಮಾಸ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ, ಈವರೆಗೆ (ಅ.19) ಬರೋಬ್ಬರಿ 47 ಬಾರಿ ಇಸ್ರೇಲ್ ಒಪ್ಪಂದ ಉಲ್ಲಂಘಿಸಿ ದಾಳಿ ಮಾಡಿದೆ. ಇದರಿಂದ ಈವರೆಗೆ 38 ಜನರು ಸಾವಿಗೀಡಾಗಿದ್ದು, 143 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಗಾಝಾ ಪಟ್ಟಿಯಾದ್ಯಂತ ಹಲವೆಡೆ ನಾಗರಿಕರ ಮೇಲೆ ಇಸ್ರೇಲ್ ಸೈನಿಕರು ನೇರ ಗುಂಡಿನ ದಾಳಿ ನಡೆಸಿದ್ದಾರೆ. ಕೆಲವೆಡೆ ಶೆಲ್ ದಾಳಿ ಮಾಡಿದ್ದಾರೆ. ಅನೇಕ ಕಡೆಗಳಲ್ಲಿ ಅಮಾಯಕರ ಜನರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಹಲವು ಪ್ಯಾಲೆಸ್ತೀನಿಯರನ್ನು ಬಂಧಿಸಿದ್ದಾರೆ ಎಂದು ಗಾಝಾದ ಮಾಧ್ಯಮಗಳು ವರದಿ ಮಾಡಿವೆ.

ರಫಾ ಮತ್ತು ದಕ್ಷಿಣ ಗಾಝಾದ ಇತರೆಡೆಗಳಲ್ಲಿ ಇಸ್ರೇಲಿ ಸೇನೆ ದಾಳಿ ನಡೆಸುತ್ತಿದೆ. ಹಮಾಸ್ ಜೊತೆಗಿನ ಗುಂಡಿನ ಚಕಮಕಿ ಬಳಿಕ ಈ ದಾಳಿಗಳು ನಡೆದಿವೆ ಎಂದು ಇಸ್ರೇಲ್ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ.

ಇದಕ್ಕೆ ವ್ಯತಿರಿಕ್ತವಾಗಿ, ಹಮಾಸ್ ಗಾಝಾದಲ್ಲಿ ನಾಗರಿಕರ ಮೇಲೆ ದಾಳಿ ನಡೆಸಲು ಯೋಜಿಸುತ್ತಿದೆ ಎಂಬ ‘ವಿಶ್ವಾಸಾರ್ಹ ವರದಿಗಳು ನಮ್ಮ ಬಳಿ ಇವೆ ಎಂದು ಅಮೆರಿಕ ಶನಿವಾರ ಹೇಳಿಕೊಂಡಿದೆ.

“ಪ್ಯಾಲೆಸ್ತೀನಿಯನ್ ನಾಗರಿಕರ ಮೇಲಿನ ಈ ಯೋಜಿತ ದಾಳಿಯು ಕದನ ವಿರಾಮ ಒಪ್ಪಂದದ ನೇರ ಮತ್ತು ಗಂಭೀರ ಉಲ್ಲಂಘನೆಯಾಗುತ್ತದೆ. ಮಧ್ಯಸ್ಥಿಕೆ ಪ್ರಯತ್ನಗಳ ಮೂಲಕ ಸಾಧಿಸಿದ ಗಮನಾರ್ಹ ಪ್ರಗತಿಯನ್ನು ಇದು ಹಾಳು ಮಾಡುತ್ತದೆ” ಎಂದು ಅಮೆರಿಕದ ವಿದೇಶಾಂಗ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಹಮಾಸ್ ಈ ಹೇಳಿಕೆಗಳನ್ನು ತಿರಸ್ಕರಿಸಿದೆ. ಅಮೆರಿಕ ಇಸ್ರೇಲ್ ಜೊತೆ ಸೇರಿಕೊಂಡು ಸುಳ್ಳು ಹೇಳುತ್ತಿದೆ. ಗಾಝಾದಲ್ಲಿ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ನಡೆಸುತ್ತಿರುವ ಆಕ್ರಮಣ, ಯುದ್ದಪರಾಧಗಳು ಮತ್ತು ಸಂಘಟಿತ ದಾಳಿ ಮುಂದುವರಿಯಲು ಬೆಂಬಲವಾಗಿ ನಿಂತಿದೆ ಎಂದು ಹಮಾಸ್ ಆರೋಪಿಸಿದೆ.

ಜಗತ್ತಿಗೆ ಸುಳ್ಳು ಮತ್ತು ದಾರಿ ತಪ್ಪಿಸುವ ಹೇಳಿಕೆ ನೀಡುವುದನ್ನು ಅಮೆರಿಕ ಕೊನೆಗೊಳಿಸಬೇಕು. ಇಸ್ರೇಲ್ ಕದನ ವಿರಾಮ ಒಪ್ಪಂದ ಮುರಿಯುತ್ತಿರುವುದನ್ನು ತಡೆಯಬೇಕು ಎಂದು ಹಮಾಸ್ ಅಮೆರಿಕಕ್ಕೆ ಆಗ್ರಹಿಸಿದೆ.

“ಅಮೆರಿಕ ಮತ್ತು ಇಸ್ರೇಲ್‌ ಹೇಳುತ್ತಿರುವುದೆಲ್ಲ ಸುಳ್ಳು. ಗಾಝಾದಲ್ಲಿ ಗ್ರೌಂಡ್ ರಿಯಾಲಿಟಿ ಬೇರೆಯೇ ಇದೆ. ಇಸ್ರೇಲ್ ಮತ್ತು ಅಮೆರಿಕದವರು ಜಂಟಿಯಾಗಿ ಗಾಝಾದ ಕ್ರಿಮಿನಲ್ ಗ್ಯಾಂಗ್‌ಗಳಿಗೆ ಹಣಕಾಸು ಸೇರಿದಂತೆ ಎಲ್ಲಾ ನೆರವುಗಳನ್ನು ನೀಡುತ್ತಿದ್ದಾರೆ. ಅವರನ್ನು ಶಸ್ತ್ರ ಸಜ್ಜಗೊಳಿಸಿ ಪ್ಯಾಲೆಸ್ತೀನಿಯರ ಮೇಲೆ ದಾಳಿ ನಡೆಸಲು ಪ್ರೇರೇಪಿಸುತ್ತಿದ್ದಾರೆ. ಈ ಗುಂಪುಗಳು ನೆರವು ಟ್ರಕ್‌ಗಳನ್ನು ಲೂಟಿ ಮಾಡುತ್ತಿವೆ. ಅಮಾಯಕರ ಜನರ ಮೇಲೆ ದಾಳಿ ಮಾಡುತ್ತಿವೆ. ಈ ವಿಚಾರವನ್ನು ಆ ಗುಂಪುಗಳು ವಿಡಿಯೋ ಮೂಲಕ ಒಪ್ಪಿಕೊಂಡಿವೆ. ಕೆಲವೆಡೆ ಇಸ್ರೇಲ್‌ ನೇರವಾಗಿ ನಾಗರಿಕ ಮೇಲೆ ದಾಳಿ ಮಾಡುತ್ತಿವೆ. ಒಟ್ಟಿನಲ್ಲಿ ಪರಿಸ್ಥಿತಿ ಶೋಚಣೀಯವಾಗಿದೆ” ಎಂದು ಹಮಾಸ್ ಹೇಳಿಕೊಂಡಿದೆ.

ಮುಂದುವರಿದ ಇಸ್ರೇಲ್ ಆಕ್ರಮಣ

ದೊಡ್ಡ ಮಟ್ಟದ ಕದನ ವಿರಾಮ ಉಲ್ಲಂಘನೆ ಎಂಬಂತೆ, ಶುಕ್ರವಾರ ಗಾಝಾದಲ್ಲಿ ಭೀಕರ ದಾಳಿ ನಡೆಸಿದ ಇಸ್ರೇಲ್, ಏಳು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಹನ್ನೊಂದು ಜನರನ್ನು ಹತ್ಯೆ ಮಾಡಿದೆ. ಸ್ಥಳಾಂತರಗೊಂಡ ಕುಟುಂಬವು ತಮ್ಮ ಮನೆಗೆ ಹಿಂತಿರುಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ವಾಹನವನ್ನು ಇಸ್ರೇಲಿ ಸೇನೆಯು ಗುರಿಯಾಗಿಸಿಕೊಂಡು ಡಿಕ್ಕಿ ಹೊಡೆದಿದೆ. ಗಾಝಾದ ನಾಗರಿಕ ರಕ್ಷಣಾ ಇಲಾಖೆಯ ಪ್ರಕಾರ, ಗಾಝಾ ನಗರದ ಜೈಟೌನ್ ಸಮೀಪ ಈ ದಾಳಿ ನಡೆದಿದೆ.

ಈ ಹತ್ಯೆಯನ್ನು ಸಮರ್ಥಿಸಿಕೊಂಡಿರುವ ಇಸ್ರೇಲ್, ಪ್ಯಾಲೆಸ್ತೀನಿಯರ ವಾಹನವು ‘ಹಳದಿ ರೇಖೆ’ಯನ್ನು ದಾಟಿ, ಇಸ್ರೇಲ್ ನಿಯಂತ್ರಣದಲ್ಲಿರುವ ಪ್ರದೇಶಕ್ಕೆ ಪ್ರವೇಶಿಸಿತ್ತು ಎಂದು ಹೇಳಿಕೊಂಡಿದೆ.

“ನೆಲದ ಮೇಲೆ ನಿಜವಾದ ಭೌತಿಕ ಗುರುತುಗಳು ಇಲ್ಲದ ಕಾರಣ ಮೃತ ಕುಟುಂಬಕ್ಕೆ ಹಳದಿ ಮತ್ತು ಕೆಂಪು ರೇಖೆಗಳ ನಡುವೆ ವ್ಯತ್ಯಾಸವನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು” ಎಂದು ಗಾಝಾ ನಾಗರಿಕ ರಕ್ಷಣಾ ವಕ್ತಾರ ಮಹಮೂದ್ ಬಸಲ್ ಹೇಳಿದ್ದಾರೆ.

ಇತ್ತ ಗಾಝಾ ಪಟ್ಟಿಯಲ್ಲಿ ಮಾತ್ರವಲ್ಲದೆ, ಇಸ್ರೇಲಿ ಸೇನೆಯು ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಹಿಂಸಾತ್ಮಕ ದಾಳಿಗಳನ್ನು ತೀವ್ರಗೊಳಿಸಿದೆ. ಅನೇಕ ಪ್ಯಾಲೆಸ್ತೀನಿಯರು ಕೊಂದು ಅವರ ಆಸ್ತಿಗಳನ್ನು ಧ್ವಂಸಗೊಳಿಸುತ್ತಿದೆ. ಭಾನುವಾರ ನಬ್ಲಸ್ ಬಳಿಯ ಅಲ್-ಐನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲಿ ಸೇನೆ ನಡೆಸಿದ ದಾಳಿಯಲ್ಲಿ 42 ವರ್ಷದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ ಇಬ್ಬರು ಗಾಯಗೊಂಡಿದ್ದಾರೆ.

ಇದಕ್ಕೂ ಮುನ್ನ ಶುಕ್ರವಾರ ಹೆಬ್ರಾನ್‌ನ ದಕ್ಷಿಣದಲ್ಲಿರುವ ಅಲ್-ರಿಹಿಯಾ ಪಟ್ಟಣದಲ್ಲಿ ಇಸ್ರೇಲಿ ಸೇನೆ 11 ವರ್ಷದ ಬಾಲಕ ಮೊಹಮ್ಮದ್ ಹಲ್ಲಾಕ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಿತ್ತು. ಕದನ ವಿರಾಮ ಜಾರಿಗೆ ಬಂದ ನಂತರ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ತೀವ್ರ ಆಕ್ರಮಣ ನಡೆಸುತ್ತಿದೆ.

ಈ ನಡುವೆ, ಗಾಝಾ ಮತ್ತು ಈಜಿಪ್ಟ್ ನಡುವಿನ ರಫಾ ಗಡಿಯನ್ನು ಮುಂದಿನ ಸೂಚನೆ ಬರುವವರೆಗೂ ಮುಚ್ಚಲಾಗುವುದು ಎಂದು ಇಸ್ರೇಲ್ ಶನಿವಾರ ಹೇಳಿದೆ. ಇಸ್ರೇಲ್‌ನ ನಿರಂತರ ದಿಗ್ಬಂಧನದಿಂದ ಸಂಕಷ್ಟ ಎದುರಿಸುತ್ತಿದ್ದ ಪ್ಯಾಲೆಸ್ತೀನಿಯರಿಗೆ ಹೆಚ್ಚು ಅಗತ್ಯವಿರುವ ಮಾನವೀಯ ನೆರವು ತಲುಪಿಸಲು ಉಳಿದಿದ್ದ ಜಾಗ ಇದೊಂದೆ ಆಗಿತ್ತು.

ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ಮುಂದಿನ ಸೂಚನೆವರೆಗೆ ರಫಾ ಕ್ರಾಸಿಂಗ್ ಅನ್ನು ಮುಚ್ಚುವಂತೆ ನಿರ್ದೇಶಿಸಿದ್ದಾರೆ. ಒತ್ತೆಯಾಳುಗಳು ಮತ್ತು ಮೃತರ ದೇಹಗಳನ್ನು ಹಿಂದಿರುಗಿಸುವ ಮತ್ತು ಒಪ್ಪಿದ ನಿಯಮಗಳನ್ನು ಜಾರಿಗೆ ತರುವ ತನ್ನ ಜವಾಬ್ದಾರಿಗಳನ್ನು ಹಮಾಸ್ ಹೇಗೆ ಪೂರೈಸುತ್ತದೆ ಎಂಬುದರ ಆಧಾರದ ಮೇಲೆ ಗಡಿ ತೆರೆಯುವಿಕೆ ನಿಂತಿದೆ ಎಂದು ನೆತನ್ಯಾಹು ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಒಟ್ಟು 28 ಒತ್ತೆಯಾಳುಗಳ ಮೃತದೇಹಗಳ ಪೈಕಿ 12 ಮೃತದೇಹಗಳನ್ನು ಹಮಾಸ್ ಇಸ್ರೇಲ್‌ಗೆ ಹಸ್ತಾಂತರಿಸಿದೆ. ಇನ್ನುಳಿದವು ಇಸ್ರೇಲ್ ಧ್ವಂಸಗೊಳಿಸಿದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಇವೆ. ಅವುಗಳನ್ನು ಮೇಲೆತ್ತಲು ವಿಶೇಷ ಉಪಕರಣಗಳು ಅಥವಾ ಯಂತ್ರಗಳು ಬೇಕು ಎಂದು ಹಮಾಸ್ ಶನಿವಾರ ಹೇಳಿದೆ.

ಇಸ್ರೇಲ್ ಕಳೆದ ಎರಡು ವರ್ಷಗಳಲ್ಲಿ ನಡೆಸಿದ ನಿರಂತರ ಆಕ್ರಮಣದಿಂದ ಗಾಝಾದಲ್ಲಿ ಸಾವಿಗೀಡಾದ ಪ್ಯಾಲೆಸ್ತೀನಿಯರ ಸಂಖ್ಯೆ 68 ಸಾವಿರ ದಾಟಿದೆ. ಇನ್ನೂ ಸುಮಾರು 10 ಸಾವಿರ ಜನರ ಮೃತದೇಹಗಳು ಅವಶೇಷಗಳಡಿ ಇರಬಹುದು ಎಂದು ಅಂದಾಜಿಸಲಾಗಿದೆ. ಗಾಯಾಳುಗಳ ಸಂಖ್ಯೆ 1,70,000 ಸಾವಿರ ದಾಟಿದೆ.

ಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...