Homeಅಂತರಾಷ್ಟ್ರೀಯಗಾಝಾ ಕದನ ವಿರಾಮ ಉಲ್ಲಂಘಿಸಿದ ಇಸ್ರೇಲ್ : ಈವರೆಗೆ 38 ಪ್ಯಾಲೆಸ್ತೀನಿಯರ ಹತ್ಯೆ

ಗಾಝಾ ಕದನ ವಿರಾಮ ಉಲ್ಲಂಘಿಸಿದ ಇಸ್ರೇಲ್ : ಈವರೆಗೆ 38 ಪ್ಯಾಲೆಸ್ತೀನಿಯರ ಹತ್ಯೆ

- Advertisement -
- Advertisement -

ಈ ಹಿಂದಿನಂತೆ ಈ ಬಾರಿಯೂ ಇಸ್ರೇಲ್ ಗಾಝಾ ಕದನ ವಿರಾಮ ಒಪ್ಪಂದವನ್ನು ಮುರಿದಿದೆ. ಅಕ್ಟೋಬರ್ 9ರಂದು ಹಮಾಸ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ, ಈವರೆಗೆ (ಅ.19) ಬರೋಬ್ಬರಿ 47 ಬಾರಿ ಇಸ್ರೇಲ್ ಒಪ್ಪಂದ ಉಲ್ಲಂಘಿಸಿ ದಾಳಿ ಮಾಡಿದೆ. ಇದರಿಂದ ಈವರೆಗೆ 38 ಜನರು ಸಾವಿಗೀಡಾಗಿದ್ದು, 143 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಗಾಝಾ ಪಟ್ಟಿಯಾದ್ಯಂತ ಹಲವೆಡೆ ನಾಗರಿಕರ ಮೇಲೆ ಇಸ್ರೇಲ್ ಸೈನಿಕರು ನೇರ ಗುಂಡಿನ ದಾಳಿ ನಡೆಸಿದ್ದಾರೆ. ಕೆಲವೆಡೆ ಶೆಲ್ ದಾಳಿ ಮಾಡಿದ್ದಾರೆ. ಅನೇಕ ಕಡೆಗಳಲ್ಲಿ ಅಮಾಯಕರ ಜನರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಹಲವು ಪ್ಯಾಲೆಸ್ತೀನಿಯರನ್ನು ಬಂಧಿಸಿದ್ದಾರೆ ಎಂದು ಗಾಝಾದ ಮಾಧ್ಯಮಗಳು ವರದಿ ಮಾಡಿವೆ.

ರಫಾ ಮತ್ತು ದಕ್ಷಿಣ ಗಾಝಾದ ಇತರೆಡೆಗಳಲ್ಲಿ ಇಸ್ರೇಲಿ ಸೇನೆ ದಾಳಿ ನಡೆಸುತ್ತಿದೆ. ಹಮಾಸ್ ಜೊತೆಗಿನ ಗುಂಡಿನ ಚಕಮಕಿ ಬಳಿಕ ಈ ದಾಳಿಗಳು ನಡೆದಿವೆ ಎಂದು ಇಸ್ರೇಲ್ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ.

ಇದಕ್ಕೆ ವ್ಯತಿರಿಕ್ತವಾಗಿ, ಹಮಾಸ್ ಗಾಝಾದಲ್ಲಿ ನಾಗರಿಕರ ಮೇಲೆ ದಾಳಿ ನಡೆಸಲು ಯೋಜಿಸುತ್ತಿದೆ ಎಂಬ ‘ವಿಶ್ವಾಸಾರ್ಹ ವರದಿಗಳು ನಮ್ಮ ಬಳಿ ಇವೆ ಎಂದು ಅಮೆರಿಕ ಶನಿವಾರ ಹೇಳಿಕೊಂಡಿದೆ.

“ಪ್ಯಾಲೆಸ್ತೀನಿಯನ್ ನಾಗರಿಕರ ಮೇಲಿನ ಈ ಯೋಜಿತ ದಾಳಿಯು ಕದನ ವಿರಾಮ ಒಪ್ಪಂದದ ನೇರ ಮತ್ತು ಗಂಭೀರ ಉಲ್ಲಂಘನೆಯಾಗುತ್ತದೆ. ಮಧ್ಯಸ್ಥಿಕೆ ಪ್ರಯತ್ನಗಳ ಮೂಲಕ ಸಾಧಿಸಿದ ಗಮನಾರ್ಹ ಪ್ರಗತಿಯನ್ನು ಇದು ಹಾಳು ಮಾಡುತ್ತದೆ” ಎಂದು ಅಮೆರಿಕದ ವಿದೇಶಾಂಗ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಹಮಾಸ್ ಈ ಹೇಳಿಕೆಗಳನ್ನು ತಿರಸ್ಕರಿಸಿದೆ. ಅಮೆರಿಕ ಇಸ್ರೇಲ್ ಜೊತೆ ಸೇರಿಕೊಂಡು ಸುಳ್ಳು ಹೇಳುತ್ತಿದೆ. ಗಾಝಾದಲ್ಲಿ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ನಡೆಸುತ್ತಿರುವ ಆಕ್ರಮಣ, ಯುದ್ದಪರಾಧಗಳು ಮತ್ತು ಸಂಘಟಿತ ದಾಳಿ ಮುಂದುವರಿಯಲು ಬೆಂಬಲವಾಗಿ ನಿಂತಿದೆ ಎಂದು ಹಮಾಸ್ ಆರೋಪಿಸಿದೆ.

ಜಗತ್ತಿಗೆ ಸುಳ್ಳು ಮತ್ತು ದಾರಿ ತಪ್ಪಿಸುವ ಹೇಳಿಕೆ ನೀಡುವುದನ್ನು ಅಮೆರಿಕ ಕೊನೆಗೊಳಿಸಬೇಕು. ಇಸ್ರೇಲ್ ಕದನ ವಿರಾಮ ಒಪ್ಪಂದ ಮುರಿಯುತ್ತಿರುವುದನ್ನು ತಡೆಯಬೇಕು ಎಂದು ಹಮಾಸ್ ಅಮೆರಿಕಕ್ಕೆ ಆಗ್ರಹಿಸಿದೆ.

“ಅಮೆರಿಕ ಮತ್ತು ಇಸ್ರೇಲ್‌ ಹೇಳುತ್ತಿರುವುದೆಲ್ಲ ಸುಳ್ಳು. ಗಾಝಾದಲ್ಲಿ ಗ್ರೌಂಡ್ ರಿಯಾಲಿಟಿ ಬೇರೆಯೇ ಇದೆ. ಇಸ್ರೇಲ್ ಮತ್ತು ಅಮೆರಿಕದವರು ಜಂಟಿಯಾಗಿ ಗಾಝಾದ ಕ್ರಿಮಿನಲ್ ಗ್ಯಾಂಗ್‌ಗಳಿಗೆ ಹಣಕಾಸು ಸೇರಿದಂತೆ ಎಲ್ಲಾ ನೆರವುಗಳನ್ನು ನೀಡುತ್ತಿದ್ದಾರೆ. ಅವರನ್ನು ಶಸ್ತ್ರ ಸಜ್ಜಗೊಳಿಸಿ ಪ್ಯಾಲೆಸ್ತೀನಿಯರ ಮೇಲೆ ದಾಳಿ ನಡೆಸಲು ಪ್ರೇರೇಪಿಸುತ್ತಿದ್ದಾರೆ. ಈ ಗುಂಪುಗಳು ನೆರವು ಟ್ರಕ್‌ಗಳನ್ನು ಲೂಟಿ ಮಾಡುತ್ತಿವೆ. ಅಮಾಯಕರ ಜನರ ಮೇಲೆ ದಾಳಿ ಮಾಡುತ್ತಿವೆ. ಈ ವಿಚಾರವನ್ನು ಆ ಗುಂಪುಗಳು ವಿಡಿಯೋ ಮೂಲಕ ಒಪ್ಪಿಕೊಂಡಿವೆ. ಕೆಲವೆಡೆ ಇಸ್ರೇಲ್‌ ನೇರವಾಗಿ ನಾಗರಿಕ ಮೇಲೆ ದಾಳಿ ಮಾಡುತ್ತಿವೆ. ಒಟ್ಟಿನಲ್ಲಿ ಪರಿಸ್ಥಿತಿ ಶೋಚಣೀಯವಾಗಿದೆ” ಎಂದು ಹಮಾಸ್ ಹೇಳಿಕೊಂಡಿದೆ.

ಮುಂದುವರಿದ ಇಸ್ರೇಲ್ ಆಕ್ರಮಣ

ದೊಡ್ಡ ಮಟ್ಟದ ಕದನ ವಿರಾಮ ಉಲ್ಲಂಘನೆ ಎಂಬಂತೆ, ಶುಕ್ರವಾರ ಗಾಝಾದಲ್ಲಿ ಭೀಕರ ದಾಳಿ ನಡೆಸಿದ ಇಸ್ರೇಲ್, ಏಳು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಹನ್ನೊಂದು ಜನರನ್ನು ಹತ್ಯೆ ಮಾಡಿದೆ. ಸ್ಥಳಾಂತರಗೊಂಡ ಕುಟುಂಬವು ತಮ್ಮ ಮನೆಗೆ ಹಿಂತಿರುಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ವಾಹನವನ್ನು ಇಸ್ರೇಲಿ ಸೇನೆಯು ಗುರಿಯಾಗಿಸಿಕೊಂಡು ಡಿಕ್ಕಿ ಹೊಡೆದಿದೆ. ಗಾಝಾದ ನಾಗರಿಕ ರಕ್ಷಣಾ ಇಲಾಖೆಯ ಪ್ರಕಾರ, ಗಾಝಾ ನಗರದ ಜೈಟೌನ್ ಸಮೀಪ ಈ ದಾಳಿ ನಡೆದಿದೆ.

ಈ ಹತ್ಯೆಯನ್ನು ಸಮರ್ಥಿಸಿಕೊಂಡಿರುವ ಇಸ್ರೇಲ್, ಪ್ಯಾಲೆಸ್ತೀನಿಯರ ವಾಹನವು ‘ಹಳದಿ ರೇಖೆ’ಯನ್ನು ದಾಟಿ, ಇಸ್ರೇಲ್ ನಿಯಂತ್ರಣದಲ್ಲಿರುವ ಪ್ರದೇಶಕ್ಕೆ ಪ್ರವೇಶಿಸಿತ್ತು ಎಂದು ಹೇಳಿಕೊಂಡಿದೆ.

“ನೆಲದ ಮೇಲೆ ನಿಜವಾದ ಭೌತಿಕ ಗುರುತುಗಳು ಇಲ್ಲದ ಕಾರಣ ಮೃತ ಕುಟುಂಬಕ್ಕೆ ಹಳದಿ ಮತ್ತು ಕೆಂಪು ರೇಖೆಗಳ ನಡುವೆ ವ್ಯತ್ಯಾಸವನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು” ಎಂದು ಗಾಝಾ ನಾಗರಿಕ ರಕ್ಷಣಾ ವಕ್ತಾರ ಮಹಮೂದ್ ಬಸಲ್ ಹೇಳಿದ್ದಾರೆ.

ಇತ್ತ ಗಾಝಾ ಪಟ್ಟಿಯಲ್ಲಿ ಮಾತ್ರವಲ್ಲದೆ, ಇಸ್ರೇಲಿ ಸೇನೆಯು ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಹಿಂಸಾತ್ಮಕ ದಾಳಿಗಳನ್ನು ತೀವ್ರಗೊಳಿಸಿದೆ. ಅನೇಕ ಪ್ಯಾಲೆಸ್ತೀನಿಯರು ಕೊಂದು ಅವರ ಆಸ್ತಿಗಳನ್ನು ಧ್ವಂಸಗೊಳಿಸುತ್ತಿದೆ. ಭಾನುವಾರ ನಬ್ಲಸ್ ಬಳಿಯ ಅಲ್-ಐನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲಿ ಸೇನೆ ನಡೆಸಿದ ದಾಳಿಯಲ್ಲಿ 42 ವರ್ಷದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ ಇಬ್ಬರು ಗಾಯಗೊಂಡಿದ್ದಾರೆ.

ಇದಕ್ಕೂ ಮುನ್ನ ಶುಕ್ರವಾರ ಹೆಬ್ರಾನ್‌ನ ದಕ್ಷಿಣದಲ್ಲಿರುವ ಅಲ್-ರಿಹಿಯಾ ಪಟ್ಟಣದಲ್ಲಿ ಇಸ್ರೇಲಿ ಸೇನೆ 11 ವರ್ಷದ ಬಾಲಕ ಮೊಹಮ್ಮದ್ ಹಲ್ಲಾಕ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಿತ್ತು. ಕದನ ವಿರಾಮ ಜಾರಿಗೆ ಬಂದ ನಂತರ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ತೀವ್ರ ಆಕ್ರಮಣ ನಡೆಸುತ್ತಿದೆ.

ಈ ನಡುವೆ, ಗಾಝಾ ಮತ್ತು ಈಜಿಪ್ಟ್ ನಡುವಿನ ರಫಾ ಗಡಿಯನ್ನು ಮುಂದಿನ ಸೂಚನೆ ಬರುವವರೆಗೂ ಮುಚ್ಚಲಾಗುವುದು ಎಂದು ಇಸ್ರೇಲ್ ಶನಿವಾರ ಹೇಳಿದೆ. ಇಸ್ರೇಲ್‌ನ ನಿರಂತರ ದಿಗ್ಬಂಧನದಿಂದ ಸಂಕಷ್ಟ ಎದುರಿಸುತ್ತಿದ್ದ ಪ್ಯಾಲೆಸ್ತೀನಿಯರಿಗೆ ಹೆಚ್ಚು ಅಗತ್ಯವಿರುವ ಮಾನವೀಯ ನೆರವು ತಲುಪಿಸಲು ಉಳಿದಿದ್ದ ಜಾಗ ಇದೊಂದೆ ಆಗಿತ್ತು.

ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ಮುಂದಿನ ಸೂಚನೆವರೆಗೆ ರಫಾ ಕ್ರಾಸಿಂಗ್ ಅನ್ನು ಮುಚ್ಚುವಂತೆ ನಿರ್ದೇಶಿಸಿದ್ದಾರೆ. ಒತ್ತೆಯಾಳುಗಳು ಮತ್ತು ಮೃತರ ದೇಹಗಳನ್ನು ಹಿಂದಿರುಗಿಸುವ ಮತ್ತು ಒಪ್ಪಿದ ನಿಯಮಗಳನ್ನು ಜಾರಿಗೆ ತರುವ ತನ್ನ ಜವಾಬ್ದಾರಿಗಳನ್ನು ಹಮಾಸ್ ಹೇಗೆ ಪೂರೈಸುತ್ತದೆ ಎಂಬುದರ ಆಧಾರದ ಮೇಲೆ ಗಡಿ ತೆರೆಯುವಿಕೆ ನಿಂತಿದೆ ಎಂದು ನೆತನ್ಯಾಹು ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಒಟ್ಟು 28 ಒತ್ತೆಯಾಳುಗಳ ಮೃತದೇಹಗಳ ಪೈಕಿ 12 ಮೃತದೇಹಗಳನ್ನು ಹಮಾಸ್ ಇಸ್ರೇಲ್‌ಗೆ ಹಸ್ತಾಂತರಿಸಿದೆ. ಇನ್ನುಳಿದವು ಇಸ್ರೇಲ್ ಧ್ವಂಸಗೊಳಿಸಿದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಇವೆ. ಅವುಗಳನ್ನು ಮೇಲೆತ್ತಲು ವಿಶೇಷ ಉಪಕರಣಗಳು ಅಥವಾ ಯಂತ್ರಗಳು ಬೇಕು ಎಂದು ಹಮಾಸ್ ಶನಿವಾರ ಹೇಳಿದೆ.

ಇಸ್ರೇಲ್ ಕಳೆದ ಎರಡು ವರ್ಷಗಳಲ್ಲಿ ನಡೆಸಿದ ನಿರಂತರ ಆಕ್ರಮಣದಿಂದ ಗಾಝಾದಲ್ಲಿ ಸಾವಿಗೀಡಾದ ಪ್ಯಾಲೆಸ್ತೀನಿಯರ ಸಂಖ್ಯೆ 68 ಸಾವಿರ ದಾಟಿದೆ. ಇನ್ನೂ ಸುಮಾರು 10 ಸಾವಿರ ಜನರ ಮೃತದೇಹಗಳು ಅವಶೇಷಗಳಡಿ ಇರಬಹುದು ಎಂದು ಅಂದಾಜಿಸಲಾಗಿದೆ. ಗಾಯಾಳುಗಳ ಸಂಖ್ಯೆ 1,70,000 ಸಾವಿರ ದಾಟಿದೆ.

ಗಾಝಾ ಕದನ ವಿರಾಮ ಜಾರಿಯಾದರೂ ಆಕ್ರಮಣ ಮುಂದುವರಿಸಿದ ಇಸ್ರೇಲ್ : ಪ್ಯಾಲೆಸ್ತೀನಿಯರ ಹತ್ಯೆ, ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...