Homeಮುಖಪುಟಇಸ್ರೇಲ್ ಹಿಂಸಾಚಾರ: ಹಮಾಸ್‌ ಗುಂಪಿನ 150 ಸುರಂಗ ಮಾರ್ಗಗಳು ಧ್ವಂಸ

ಇಸ್ರೇಲ್ ಹಿಂಸಾಚಾರ: ಹಮಾಸ್‌ ಗುಂಪಿನ 150 ಸುರಂಗ ಮಾರ್ಗಗಳು ಧ್ವಂಸ

- Advertisement -
- Advertisement -

ಹಮಾಸ್‌ ಶಸಸ್ತ್ರ ಗುಂಪಿನ ಹಿಂಸಾಚಾರ ಮುಂದುವರೆಸಿರುವ ಇಸ್ರೇಲ್‌ ರಕ್ಷಣಾ ಪಡೆಯು ಉತ್ತರ ಗಾಜಾದಲ್ಲಿ ದಾಳಿಯನ್ನು ತೀವ್ರಗೊಳಿಸಿದೆ. ಒಂದು ಕಡೆ ಭೂ ದಾಳಿ ನಡೆಸಿದರೆ ಮತ್ತೊಂದು ಕಡೆ ವಾಯು ದಾಳಿಯ ಮೂಲಕ ಹಮಾಸ್‌ ಗುಂಪಿನ ಮೇಲೆ ಯುದ್ಧ ಆರಂಭಿಸಿದೆ.

ಶುಕ್ರವಾರ ರಾತ್ರಿಯಿಂದ ಗಾಜಾಪಟ್ಟಿ ಮೇಲೆ ವ್ಯಾಪಕ ದಾಳಿ ನಡೆಸಿರುವ ಇಸ್ರೇಲ್‌ ಸೇನಾಪಡೆ, ಬೃಹತ್‌ ಪ್ರಮಾಣದ ಬಾಂಬ್‌ ದಾಳಿಯಿಂದ ಗಾಜಾಪಟ್ಟಿಯಲ್ಲಿ ಇಂಟರ್ನೆಟ್‌, ಫೋನ್‌ ಸೇವೆಗಳು ಕಡಿತಗೊಂಡಿವೆ. 2.3 ಮಿಲಿಯನ್‌ ಜನರು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿದ್ದಾರೆ. ಇಸ್ರೇಲ್‌ ವಾಯುಸೇನೆಯ ಭೀಕರ ದಾಳಿಗೆ ಗಾಜಾ ಪಟ್ಟಣ ಪೂರ್ಣ ಪ್ರಮಾಣದಲ್ಲಿ ಅಯೋಮಯವಾಗಿದೆ.

ಉತ್ತರ ಗಾಜಾದಲ್ಲಿ ಇಸ್ರೇಲಿ ಯುದ್ಧ ವಿಮಾನಗಳು ನಡೆಸಿದ ತೀವ್ರ ದಾಳಿಯಲ್ಲಿ ಹಮಾಸ್‌ ಗುಂಪಿನ ಸುಮಾರು 150 ಅಡಗುತಾಣಗಳು ಧ್ವಂಸಗೊಂಡಿವೆ. ಗಾಜಾದಲ್ಲಿನ ಸುರಂಗ ಮಾರ್ಗಗಳನ್ನು ನಾಶಪಡಿಸಿದ ಕುರಿತು ಇಸ್ರೇಲ್ ಸೇನೆ ಅಧಿಕೃತ ಮಾಹಿತಿ ನೀಡಿದೆ. ದಾಳಿಗೊಳಗಾದ ಪ್ರದೇಶಗಳಲ್ಲಿ ಹಮಾಸ್‌ ಗುಂಪಿನ ಸುರಂಗ ಅಡಗುದಾಣಗಳು, ಸುರಂಗ ಮಾರ್ಗಗಳು, ಭೂಗತ ಯುದ್ಧ ಸ್ಥಳಗಳು ಹಾಗೂ ಅವರ ಮೂಲಸೌಕರ್ಯಗಳನ್ನು ನಾಶಪಡಿಸಲಾಗಿದೆ ಎಂದು ಇಸ್ರೇಲ್‌ ಸೇನೆ ಮಾಹಿತಿ ನೀಡಿದೆ.

ಭಾನುವಾರ, ಗಾಜಾದಲ್ಲಿ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಅಕ್ಟೋಬರ್ 7 ರಿಂದ ಗಾಜಾದಲ್ಲಿ ಒಟ್ಟು ಸಾವಿನ ಸಂಖ್ಯೆ 8,005 ಜನರಿಗೆ ಏರಿದೆ ಎಂದು ಹೇಳಿದೆ. ಹಮಾಸ್ ನಡೆಸುತ್ತಿರುವ ಗಾಜಾದಲ್ಲಿನ ಆರೋಗ್ಯ ಸಚಿವಾಲಯವು ಇಸ್ರೇಲಿ ದಾಳಿಯಲ್ಲಿ 7,703 ಜನರು ಸಾವನ್ನಪ್ಪಿದ್ದಾರೆ, ಮುಖ್ಯವಾಗಿ ನಾಗರಿಕರು, 3,500 ಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ ಎಂದು ಹೇಳಿದ್ದಾರೆ.

ಗಾಜಾದಲ್ಲಿ ಹಮಾಸ್ ವಿರುದ್ಧದ ಯುದ್ಧದ ಎರಡನೇ ಹಂತವನ್ನು ಇಸ್ರೇಲ್ ಪಡೆಗಳು ಪ್ರವೇಶಿಸಿವೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಶನಿವಾರ ಪ್ರಕಟಿಸಿದ್ದಾರೆ. ಶತ್ರುಗಳನ್ನು ‘ನೆಲದ ಕೆಳಗೆ ಹಾಗೂ ನೆಲದ ಮೇಲೆ’ ಎರಡೂ ಕಡೆಗಳಿಂದ ನಿರ್ಮೂಲನೆ ಮಾಡುವುದಾಗಿ ಶಪಥ ಮಾಡಿದ್ದಾರೆ. ಈ ಯುದ್ಧವು ಸುದೀರ್ಘ ಹಾಗೂ ಕ್ಲಿಷ್ಟಕರವಾಗಲಿದೆ ಎಂದಿರುವ ಅವರು, ಪರಿಸ್ಥಿತಿಯು ಇಸ್ರೇಲ್‌ಗೆ ಅಸ್ತಿತ್ವದ ಪ್ರಶ್ನೆಯಾಗಿದೆ ಎಂದಿದ್ದಾರೆ

ಇದನ್ನೂ ಓದಿ: ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ ಉಳಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...