Homeಮುಖಪುಟಇಸ್ರೇಲ್ ಹಿಂಸಾಚಾರ: ಹಮಾಸ್‌ ಗುಂಪಿನ 150 ಸುರಂಗ ಮಾರ್ಗಗಳು ಧ್ವಂಸ

ಇಸ್ರೇಲ್ ಹಿಂಸಾಚಾರ: ಹಮಾಸ್‌ ಗುಂಪಿನ 150 ಸುರಂಗ ಮಾರ್ಗಗಳು ಧ್ವಂಸ

- Advertisement -
- Advertisement -

ಹಮಾಸ್‌ ಶಸಸ್ತ್ರ ಗುಂಪಿನ ಹಿಂಸಾಚಾರ ಮುಂದುವರೆಸಿರುವ ಇಸ್ರೇಲ್‌ ರಕ್ಷಣಾ ಪಡೆಯು ಉತ್ತರ ಗಾಜಾದಲ್ಲಿ ದಾಳಿಯನ್ನು ತೀವ್ರಗೊಳಿಸಿದೆ. ಒಂದು ಕಡೆ ಭೂ ದಾಳಿ ನಡೆಸಿದರೆ ಮತ್ತೊಂದು ಕಡೆ ವಾಯು ದಾಳಿಯ ಮೂಲಕ ಹಮಾಸ್‌ ಗುಂಪಿನ ಮೇಲೆ ಯುದ್ಧ ಆರಂಭಿಸಿದೆ.

ಶುಕ್ರವಾರ ರಾತ್ರಿಯಿಂದ ಗಾಜಾಪಟ್ಟಿ ಮೇಲೆ ವ್ಯಾಪಕ ದಾಳಿ ನಡೆಸಿರುವ ಇಸ್ರೇಲ್‌ ಸೇನಾಪಡೆ, ಬೃಹತ್‌ ಪ್ರಮಾಣದ ಬಾಂಬ್‌ ದಾಳಿಯಿಂದ ಗಾಜಾಪಟ್ಟಿಯಲ್ಲಿ ಇಂಟರ್ನೆಟ್‌, ಫೋನ್‌ ಸೇವೆಗಳು ಕಡಿತಗೊಂಡಿವೆ. 2.3 ಮಿಲಿಯನ್‌ ಜನರು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿದ್ದಾರೆ. ಇಸ್ರೇಲ್‌ ವಾಯುಸೇನೆಯ ಭೀಕರ ದಾಳಿಗೆ ಗಾಜಾ ಪಟ್ಟಣ ಪೂರ್ಣ ಪ್ರಮಾಣದಲ್ಲಿ ಅಯೋಮಯವಾಗಿದೆ.

ಉತ್ತರ ಗಾಜಾದಲ್ಲಿ ಇಸ್ರೇಲಿ ಯುದ್ಧ ವಿಮಾನಗಳು ನಡೆಸಿದ ತೀವ್ರ ದಾಳಿಯಲ್ಲಿ ಹಮಾಸ್‌ ಗುಂಪಿನ ಸುಮಾರು 150 ಅಡಗುತಾಣಗಳು ಧ್ವಂಸಗೊಂಡಿವೆ. ಗಾಜಾದಲ್ಲಿನ ಸುರಂಗ ಮಾರ್ಗಗಳನ್ನು ನಾಶಪಡಿಸಿದ ಕುರಿತು ಇಸ್ರೇಲ್ ಸೇನೆ ಅಧಿಕೃತ ಮಾಹಿತಿ ನೀಡಿದೆ. ದಾಳಿಗೊಳಗಾದ ಪ್ರದೇಶಗಳಲ್ಲಿ ಹಮಾಸ್‌ ಗುಂಪಿನ ಸುರಂಗ ಅಡಗುದಾಣಗಳು, ಸುರಂಗ ಮಾರ್ಗಗಳು, ಭೂಗತ ಯುದ್ಧ ಸ್ಥಳಗಳು ಹಾಗೂ ಅವರ ಮೂಲಸೌಕರ್ಯಗಳನ್ನು ನಾಶಪಡಿಸಲಾಗಿದೆ ಎಂದು ಇಸ್ರೇಲ್‌ ಸೇನೆ ಮಾಹಿತಿ ನೀಡಿದೆ.

ಭಾನುವಾರ, ಗಾಜಾದಲ್ಲಿ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಅಕ್ಟೋಬರ್ 7 ರಿಂದ ಗಾಜಾದಲ್ಲಿ ಒಟ್ಟು ಸಾವಿನ ಸಂಖ್ಯೆ 8,005 ಜನರಿಗೆ ಏರಿದೆ ಎಂದು ಹೇಳಿದೆ. ಹಮಾಸ್ ನಡೆಸುತ್ತಿರುವ ಗಾಜಾದಲ್ಲಿನ ಆರೋಗ್ಯ ಸಚಿವಾಲಯವು ಇಸ್ರೇಲಿ ದಾಳಿಯಲ್ಲಿ 7,703 ಜನರು ಸಾವನ್ನಪ್ಪಿದ್ದಾರೆ, ಮುಖ್ಯವಾಗಿ ನಾಗರಿಕರು, 3,500 ಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ ಎಂದು ಹೇಳಿದ್ದಾರೆ.

ಗಾಜಾದಲ್ಲಿ ಹಮಾಸ್ ವಿರುದ್ಧದ ಯುದ್ಧದ ಎರಡನೇ ಹಂತವನ್ನು ಇಸ್ರೇಲ್ ಪಡೆಗಳು ಪ್ರವೇಶಿಸಿವೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಶನಿವಾರ ಪ್ರಕಟಿಸಿದ್ದಾರೆ. ಶತ್ರುಗಳನ್ನು ‘ನೆಲದ ಕೆಳಗೆ ಹಾಗೂ ನೆಲದ ಮೇಲೆ’ ಎರಡೂ ಕಡೆಗಳಿಂದ ನಿರ್ಮೂಲನೆ ಮಾಡುವುದಾಗಿ ಶಪಥ ಮಾಡಿದ್ದಾರೆ. ಈ ಯುದ್ಧವು ಸುದೀರ್ಘ ಹಾಗೂ ಕ್ಲಿಷ್ಟಕರವಾಗಲಿದೆ ಎಂದಿರುವ ಅವರು, ಪರಿಸ್ಥಿತಿಯು ಇಸ್ರೇಲ್‌ಗೆ ಅಸ್ತಿತ್ವದ ಪ್ರಶ್ನೆಯಾಗಿದೆ ಎಂದಿದ್ದಾರೆ

ಇದನ್ನೂ ಓದಿ: ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ ಉಳಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...