Homeಮುಖಪುಟಇಸ್ರೇಲ್ ಹಿಂಸಾಚಾರ: ಹಮಾಸ್‌ ಗುಂಪಿನ 150 ಸುರಂಗ ಮಾರ್ಗಗಳು ಧ್ವಂಸ

ಇಸ್ರೇಲ್ ಹಿಂಸಾಚಾರ: ಹಮಾಸ್‌ ಗುಂಪಿನ 150 ಸುರಂಗ ಮಾರ್ಗಗಳು ಧ್ವಂಸ

- Advertisement -
- Advertisement -

ಹಮಾಸ್‌ ಶಸಸ್ತ್ರ ಗುಂಪಿನ ಹಿಂಸಾಚಾರ ಮುಂದುವರೆಸಿರುವ ಇಸ್ರೇಲ್‌ ರಕ್ಷಣಾ ಪಡೆಯು ಉತ್ತರ ಗಾಜಾದಲ್ಲಿ ದಾಳಿಯನ್ನು ತೀವ್ರಗೊಳಿಸಿದೆ. ಒಂದು ಕಡೆ ಭೂ ದಾಳಿ ನಡೆಸಿದರೆ ಮತ್ತೊಂದು ಕಡೆ ವಾಯು ದಾಳಿಯ ಮೂಲಕ ಹಮಾಸ್‌ ಗುಂಪಿನ ಮೇಲೆ ಯುದ್ಧ ಆರಂಭಿಸಿದೆ.

ಶುಕ್ರವಾರ ರಾತ್ರಿಯಿಂದ ಗಾಜಾಪಟ್ಟಿ ಮೇಲೆ ವ್ಯಾಪಕ ದಾಳಿ ನಡೆಸಿರುವ ಇಸ್ರೇಲ್‌ ಸೇನಾಪಡೆ, ಬೃಹತ್‌ ಪ್ರಮಾಣದ ಬಾಂಬ್‌ ದಾಳಿಯಿಂದ ಗಾಜಾಪಟ್ಟಿಯಲ್ಲಿ ಇಂಟರ್ನೆಟ್‌, ಫೋನ್‌ ಸೇವೆಗಳು ಕಡಿತಗೊಂಡಿವೆ. 2.3 ಮಿಲಿಯನ್‌ ಜನರು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿದ್ದಾರೆ. ಇಸ್ರೇಲ್‌ ವಾಯುಸೇನೆಯ ಭೀಕರ ದಾಳಿಗೆ ಗಾಜಾ ಪಟ್ಟಣ ಪೂರ್ಣ ಪ್ರಮಾಣದಲ್ಲಿ ಅಯೋಮಯವಾಗಿದೆ.

ಉತ್ತರ ಗಾಜಾದಲ್ಲಿ ಇಸ್ರೇಲಿ ಯುದ್ಧ ವಿಮಾನಗಳು ನಡೆಸಿದ ತೀವ್ರ ದಾಳಿಯಲ್ಲಿ ಹಮಾಸ್‌ ಗುಂಪಿನ ಸುಮಾರು 150 ಅಡಗುತಾಣಗಳು ಧ್ವಂಸಗೊಂಡಿವೆ. ಗಾಜಾದಲ್ಲಿನ ಸುರಂಗ ಮಾರ್ಗಗಳನ್ನು ನಾಶಪಡಿಸಿದ ಕುರಿತು ಇಸ್ರೇಲ್ ಸೇನೆ ಅಧಿಕೃತ ಮಾಹಿತಿ ನೀಡಿದೆ. ದಾಳಿಗೊಳಗಾದ ಪ್ರದೇಶಗಳಲ್ಲಿ ಹಮಾಸ್‌ ಗುಂಪಿನ ಸುರಂಗ ಅಡಗುದಾಣಗಳು, ಸುರಂಗ ಮಾರ್ಗಗಳು, ಭೂಗತ ಯುದ್ಧ ಸ್ಥಳಗಳು ಹಾಗೂ ಅವರ ಮೂಲಸೌಕರ್ಯಗಳನ್ನು ನಾಶಪಡಿಸಲಾಗಿದೆ ಎಂದು ಇಸ್ರೇಲ್‌ ಸೇನೆ ಮಾಹಿತಿ ನೀಡಿದೆ.

ಭಾನುವಾರ, ಗಾಜಾದಲ್ಲಿ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಅಕ್ಟೋಬರ್ 7 ರಿಂದ ಗಾಜಾದಲ್ಲಿ ಒಟ್ಟು ಸಾವಿನ ಸಂಖ್ಯೆ 8,005 ಜನರಿಗೆ ಏರಿದೆ ಎಂದು ಹೇಳಿದೆ. ಹಮಾಸ್ ನಡೆಸುತ್ತಿರುವ ಗಾಜಾದಲ್ಲಿನ ಆರೋಗ್ಯ ಸಚಿವಾಲಯವು ಇಸ್ರೇಲಿ ದಾಳಿಯಲ್ಲಿ 7,703 ಜನರು ಸಾವನ್ನಪ್ಪಿದ್ದಾರೆ, ಮುಖ್ಯವಾಗಿ ನಾಗರಿಕರು, 3,500 ಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ ಎಂದು ಹೇಳಿದ್ದಾರೆ.

ಗಾಜಾದಲ್ಲಿ ಹಮಾಸ್ ವಿರುದ್ಧದ ಯುದ್ಧದ ಎರಡನೇ ಹಂತವನ್ನು ಇಸ್ರೇಲ್ ಪಡೆಗಳು ಪ್ರವೇಶಿಸಿವೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಶನಿವಾರ ಪ್ರಕಟಿಸಿದ್ದಾರೆ. ಶತ್ರುಗಳನ್ನು ‘ನೆಲದ ಕೆಳಗೆ ಹಾಗೂ ನೆಲದ ಮೇಲೆ’ ಎರಡೂ ಕಡೆಗಳಿಂದ ನಿರ್ಮೂಲನೆ ಮಾಡುವುದಾಗಿ ಶಪಥ ಮಾಡಿದ್ದಾರೆ. ಈ ಯುದ್ಧವು ಸುದೀರ್ಘ ಹಾಗೂ ಕ್ಲಿಷ್ಟಕರವಾಗಲಿದೆ ಎಂದಿರುವ ಅವರು, ಪರಿಸ್ಥಿತಿಯು ಇಸ್ರೇಲ್‌ಗೆ ಅಸ್ತಿತ್ವದ ಪ್ರಶ್ನೆಯಾಗಿದೆ ಎಂದಿದ್ದಾರೆ

ಇದನ್ನೂ ಓದಿ: ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ ಉಳಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...