Homeಮುಖಪುಟಲೆಬನಾನ್‌ ಮೇಲೆ ಇಸ್ರೇಲ್ ವೈಮಾನಿಕ ದಾಳಿ | 492 ಜನರು ಸಾವು ; ಸಾವಿರಕ್ಕೂ ಅಧಿಕ...

ಲೆಬನಾನ್‌ ಮೇಲೆ ಇಸ್ರೇಲ್ ವೈಮಾನಿಕ ದಾಳಿ | 492 ಜನರು ಸಾವು ; ಸಾವಿರಕ್ಕೂ ಅಧಿಕ ಮಂದಿಗೆ ಗಾಯ

- Advertisement -
- Advertisement -

ಲೆಬನಾನ್‌ನಲ್ಲಿ ಹೆಜ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಸೋಮವಾರ (ಸೆ.23) ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ 492 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಆರೋಗ್ಯ ಸಚಿವಾಲಯ ಹೇಳಿದ್ದು, ಕಳೆದ 20 ವರ್ಷಗಳ ಸಂಘರ್ಷದಲ್ಲಿ ಅತಿ ದೊಡ್ಡ ದಾಳಿ ಇದು ಎಂದು ತಿಳಿಸಿದೆ.

ಈ ಸುದ್ದಿ ಬರೆಯುವ ಹೊತ್ತಿಗೆ (ಸೆ.24, ಬೆಳಿಗ್ಗೆ 8 ಗಂಟೆ) 492 ಜನರು ಸಾವನ್ನಪ್ಪಿದ್ದಾರೆ ಎಂದು ಬಿಬಿಸಿ ವರದಿ ಮಾಡಿತ್ತು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಸತ್ತವರಲ್ಲಿ 35 ಮಕ್ಕಳು ಮತ್ತು 58 ಮಹಿಳೆಯರು ಸೇರಿದ್ದಾರೆ. ದಾಳಿಯಲ್ಲಿ 1,645 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ. ಸತ್ತವರಲ್ಲಿ ಎಷ್ಟು ಮಂದಿ ನಾಗರಿಕರು, ಎಷ್ಟು ಮಂದಿ ಯೋಧರಿದ್ದಾರೆ ಎಂಬ ಮಾಹಿತಿ ದೊರೆತಿಲ್ಲ.

ದಾಳಿಯ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್, 2006ರ ಯುದ್ಧದ ನಂತರ ಸಶಸ್ತ್ರ ಗುಂಪು ಹೆಜ್ಬುಲ್ಲಾ ನಿರ್ಮಿಸಿದ ಮೂಲಸೌಕರ್ಯಗಳನ್ನು ನಾಶಪಡಿಸಲು, ಅದರ 1,300 ತಾಣಗಳನ್ನು ಗುರಿಯಾಗಿಸಲಾಗಿದೆ ಎಂದು ಹೇಳಿದೆ. ಆದ್ದರಿಂದ, ಸಾವಿರಾರು ಕುಟುಂಬಗಳು ತಮ್ಮ ಮನೆಗಳನ್ನು ತೊರೆದಿವೆ ಎಂದು ಬಿಬಿಸಿ ವರದಿ ಹೇಳಿದೆ.

ದಾಳಿಗೆ ಪ್ರತಿರೋಧವಾಗಿ ಉತ್ತರ ಇಸ್ರೇಲ್‌ಗೆ ಹೆಜ್ಬುಲ್ಲಾ 200ಕ್ಕೂ ಹೆಚ್ಚು ರಾಕೆಟ್‌ಗಳನ್ನು
ಉಡಾಯಿಸಿದೆ. ಇದರಿಂದ ಇಬ್ಬರು ಗಾಯಗೊಂಡಿದ್ದಾರೆ.

ಎರಡೂ ಕಡೆಯವರು ಸಂಪೂರ್ಣ ಯುದ್ದೋತ್ಸಾಹದಲ್ಲಿರುವುದರಿಂದ ಆತಂಕ ವ್ಯಕ್ತಪಡಿಸಿರುವ ವಿಶ್ವದ ಪ್ರಮುಖ ರಾಷ್ಟ್ರಗಳು ಮತ್ತು ನಾಯಕರು, ಸಂಯಮ ಪಾಲಿಸುವಂತೆ ಆಗ್ರಹಿಸಿದ್ದಾರೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಉಲ್ಬಣಗೊಳ್ಳುತ್ತಿರುವ ಯುದ್ಧ ಪರಿಸ್ಥಿತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, “ಲೆಬನಾನ್ ಮತ್ತೊಂದು ಗಾಝಾ ಅಗುವುದನ್ನು ಬಯಸುವುದಿಲ್ಲ” ಎಂದಿದ್ದಾರೆ.

“ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ವಿಶ್ವ ನಾಯಕರ ಸಭೆಗೆ ಮುಂಚಿತವಾಗಿ ಸಂಘರ್ಷ ಹೆಚ್ಚುತ್ತಿರುವುದು ಅತ್ಯಂತ ಅಪಾಯಕಾರಿ ಮತ್ತು ಆತಂಕಕಾರಿ. ನಾವು ಬಹುತೇಕ ಪೂರ್ಣ ಪ್ರಮಾಣದ ಯುದ್ಧದಲ್ಲಿದ್ದೇವೆ” ಎಂದು ಯುರೋಪಿಯನ್ ಒಕ್ಕೂಟದ ವಿದೇಶಾಂಗ ವ್ಯವಹಾರಗಳ ಮುಖ್ಯಸ್ಥ ಜೋಸೆಪ್ ಬೊರೆಲ್ ಹೇಳಿದ್ದಾರೆ.

“ಜನರು ಸುರಕ್ಷಿತವಾಗಿ ಮನೆಗೆ ಮರಳಲು ಅನುವು ಮಾಡಿಕೊಡುವ ರೀತಿಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಪೆಂಟಗನ್ ಸಣ್ಣಮಟ್ಟದ ಹೆಚ್ಚುವರಿ ಪಡೆಗಳನ್ನು ಮಧ್ಯಪ್ರಾಚ್ಯಕ್ಕೆ ಕಳುಹಿಸಲಿದೆ” ಎಂದು ಯುಎಸ್ ಅಧ್ಯಕ್ಷ ಜೋ ಬೈಡೆನ್‌ ತಿಳಿಸಿದ್ದಾರೆ.

ಇಸ್ರೇಲ್ ಗಾಝಾ ಮೇಲೆ ಆಕ್ರಮಣ ನಡೆಸುತ್ತಿರುವ ನಡುವೆಯೇ, ಕಳೆದ ಒಂದು ವರ್ಷದಿಂದ ನಿರಂತರವಾಗಿ ಇಸ್ರೇಲ್ ಮತ್ತು ಹೆಜ್ಬುಲ್ಲಾ ನಡುವೆ ಗಡಿಯಲ್ಲಿ ಸಂಘರ್ಷ ನಡೆಯುತ್ತಿತ್ತು. ಅದೀಗ ಲೆಬನಾನ್‌ ದೇಶದೊಳಗೆ ವ್ಯಾಪಿಸಿದ್ದು, ಗಾಝದಲ್ಲಿ ಇಸ್ರೇಲ್ ನಡೆಸಿರುವ ಆಕ್ರಮಣ ಮತ್ತು ನರಮೇಧ ಮತ್ತೊಂದು ರಾಷ್ಟ್ರಕ್ಕೆ ವ್ಯಾಪಿಸುವ ಆತಂಕ ಎದುರಾಗಿದೆ.

ಗಾಝಾದಲ್ಲಿ ಕದನ ವಿರಾಮ ಘೋಷಸುವವರೆಗೆ ನಾವು ಹಮಾಸ್ ಬೆಂಬಲಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಹೆಜ್ಬುಲ್ಲಾ ಹೇಳಿದೆ. ಹೆಜ್ಬುಲ್ಲಾ ಮತ್ತು ಹಮಾಸ್ ಎರಡೂ ಗುಂಪುಗಳು ಇರಾನ್‌ನ ಬೆಂಬಲಿತವಾಗಿದೆ. ಇಸ್ರೇಲ್, ಯುಕೆ ಮತ್ತು ಇತರ ಕೆಲ ದೇಶಗಳು ಈ ಎರಡೂ ಗುಂಪುಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಿ, ತಮ್ಮ ರಾಷ್ಟ್ರಗಳಲ್ಲಿ ನಿಷೇಧಿಸಿದೆ.

ಇದನ್ನೂ ಓದಿ : ಬೆಂಗಳೂರು : IIScಯಲ್ಲಿ ‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...