Homeಅಂತರಾಷ್ಟ್ರೀಯಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

ಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

- Advertisement -
- Advertisement -

ಪ್ಯಾಲೆಸ್ತೀನಿನ ಅಕ್ರಮ ವಸಾಹತುಗಾರ ಇಸ್ರೇಲ್‌ನ ಮುಖ್ಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ ಯಮನ್‌ ದೇಶದ ಹೂತಿ ಬಂಡುಕೋರರು ನಡೆಸಿದ ದಾಳಿಯಲ್ಲಿ ಆರು ಜನರು ಗಾಯಗೊಂಡಿದ್ದಾರೆ. ದಾಳಿಯ ಪರಿಣಾಮ ಹಲವಾರು ಪ್ರಮುಖ ವಿಮಾನಯಾನ ಸಂಸ್ಥೆಗಳು ವಿಮಾನಗಳನ್ನು ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ. ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹೂತಿಗಳು ಮತ್ತು ಅವರ ಇರಾನ್‌ನ ಬೆಂಬಲಿಗರಿಗೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಬಾನುವಾರ ಪ್ರತಿಜ್ಞೆ ಮಾಡಿದ್ದಾರೆ. ಇಸ್ರೇಲ್‌ ವಿಮಾನ ನಿಲ್ದಾಣದ

ಪ್ಯಾಲೆಸ್ತೀನಿ ಪ್ರತಿರೋಧ ಪಡೆಗಳಾದ ಹಮಾಸ್ ವಿರುದ್ಧ ಗಾಜಾದಲ್ಲಿ 19 ತಿಂಗಳ ಯುದ್ಧವನ್ನು ವಿಸ್ತರಿಸಲು “ಹತ್ತಾರು ಸಾವಿರ” ಮೀಸಲು ಪಡೆಗಳ ಕರೆಯನ್ನು ಇಸ್ರೇಲ್ ಸೈನ್ಯವು ದೃಢಪಡಿಸುವ ಕೆಲವೇ ಗಂಟೆಗಳ ಮೊದಲು ಈ ದಾಳಿ ನಡೆದಿದೆ. ಅಕ್ರಮ ವಸಾಹತುಗಾರ ಇಸ್ರೇಲ್‌ನ ರಾಜಧಾನಿ ಟೆಲ್ ಅವಿವ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಈ ದಾಳಿಯನ್ನು ಹೂತಿಗಳು ನಡೆಸಿದ್ದಾರೆ. ಕ್ಷಿಪಣಿಯನ್ನು ಪ್ರತಿಬಂಧಿಸಲು ಹಲವಾರು ಪ್ರಯತ್ನಗಳು ನಡೆಸಿದ ಹೊರತಾಗಿಯೂ ದಾಳಿ ನಡೆದಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.

ಇಸ್ರೇಲ್ ಈ ಹಿಂದೆ ಕೂಡಾ ಇರಾನ್ ಬೆಂಬಲಿತ ಹೂತಿ ಬಂಡುಕೋರರ ವಿರುದ್ಧ “ಕ್ರಮ ಕೈಗೊಂಡಿದೆ” ಮತ್ತು “ಭವಿಷ್ಯದಲ್ಲಿ ಕೂಡಾ ಅವರ ವಿರುದ್ಧ ಕಾರ್ಯನಿರ್ವಹಿಸುತ್ತದೆ” ಎಂದು ಟೆಲಿಗ್ರಾಮ್‌ನಲ್ಲಿ ಪ್ರಸಾರ ಮಾಡಲಾದ ವೀಡಿಯೊದಲ್ಲಿ ನೆತನ್ಯಾಹು ಹೇಳಿದ್ದಾರೆ. “ಇದು ಒಂದೇ ಸ್ಫೋಟದಲ್ಲಿ ನಿಲ್ಲುವುದಿಲ್ಲ, ಬದಲಾಗಿ ಅನೇಕ ಸ್ಫೋಟಗಳು ಇರುತ್ತವೆ” ಎಂದು ಅವರು ಹೆಚ್ಚಿನ ವಿವರಗಳನ್ನು ನೀಡದೆ ಹೇಳಿದ್ದಾರೆ.

ನಂತರ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ನೆತನ್ಯಾಹು, ಇಸ್ರೇಲ್ ನಾವು ಆಯ್ಕೆ ಮಾಡಿದ ಸಮಯ ಮತ್ತು ಸ್ಥಳದಲ್ಲಿ ಇರಾನ್‌ಗೆ ಪ್ರತಿಕ್ರಿಯಿಸುತ್ತದೆ ಎಂದು ಹೇಳಿದ್ದಾರೆ.

ದಾಳಿಯಿಂದಾಗಿ ವಿಮಾನ ನಿಲ್ದಾಣದ ಪ್ರದೇಶದಲ್ಲಿ ದೊಡ್ಡದಾದ ಆಳವಾದ ಹೊಂಡ ಸೃಷ್ಟಿಯಾಗಿದ್ದು ವಿಡಿಯೊದಲ್ಲಿ ದಾಖಲಾಗಿದೆ. ಇದು ನಿಲ್ದಾಣದ ನಿಯಂತ್ರಣ ಗೋಪುರದ ಬಳಿಯೆ ಇದ್ದರೂ, ಅದರ ಮೂಲಸೌಕರ್ಯಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಾಗಿದೆ. ಇಸ್ರೇಲ್‌ನ ಮುಖ್ಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ “ಕ್ಷಿಪಣಿ ದಾಳಿ” ಸಂಭವಿಸಿದೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

ವಿಮಾನ ನಿಲ್ದಾಣದ ಅತಿದೊಡ್ಡ ಟರ್ಮಿನಲ್ 3 ರ ಪಾರ್ಕಿಂಗ್ ಸ್ಥಳಗಳ ಬಳಿ ಕ್ಷಿಪಣಿ ಬಡಿದಿದೆ ಎಂದು AFP ಛಾಯಾಗ್ರಾಹಕರೊಬ್ಬರು ಹೇಳಿದ್ದಾರೆ.

“ನಮ್ಮ ಹಿಂದೆ ಇರುವ ಪ್ರದೇಶವನ್ನು ನೀವು ನೋಡಬಹುದು: ಇಲ್ಲಿ ಒಂದು ಹೊಂಡ ರೂಪುಗೊಂಡಿದ್ದು, ಇದು ಹಲವಾರು ಡಜನ್ ಮೀಟರ್ ಅಗಲ ಮತ್ತು ಹಲವಾರು ಡಜನ್ ಮೀಟರ್ ಆಳವಿದೆ” ಎಂದು ಮಧ್ಯ ಇಸ್ರೇಲ್‌ನ ಪೊಲೀಸ್ ಮುಖ್ಯಸ್ಥ ಯೈರ್ ಹೆಜ್ರೋನಿ ವೀಡಿಯೊದಲ್ಲಿ ತಿಳಿಸಿದ್ದಾರೆ. ವಿಮಾನ ನಿಲ್ದಾಣದ ವ್ಯಾಪ್ತಿಯೊಳಗೆ ಕ್ಷಿಪಣಿ ನೇರವಾಗಿ ಬಿದ್ದಿರುವುದು “ಇದು ಮೊದಲ ಬಾರಿಗೆ” ಎಂದು ಇಸ್ರೇಲಿ ಮಿಲಿಟರಿ ವಕ್ತಾರರು AFP ಗೆ ತಿಳಿಸಿದ್ದಾರೆ.

ಇದಕ್ಕೂ ಮೊದಲು ದಾಳಿಯ ಜವಾಬ್ದಾರಿಯನ್ನು ಹೂತಿ ಬಂಡುಕೋರರು ವಹಿಸಿಕೊಂಡಿದ್ದಾರೆ. ಅವರು ಯುದ್ಧದಿಂದ ಹಾನಿಗೊಳಗಾದ ಗಾಜಾದಲ್ಲಿ ಪ್ಯಾಲೆಸ್ತೀನಿಯನ್ನರನ್ನು ಬೆಂಬಲಿಸಲು ಕಾರ್ಯನಿರ್ವಹಿಸುವುದಾಗಿ ನಿರಂತರವಾಗಿ ಹೇಳುತ್ತಲೆ ಬಂದಿದ್ದಾರೆ. “ಹೈಪರ್ಸಾನಿಕ್ ಬ್ಯಾಲಿಸ್ಟಿಕ್ ಕ್ಷಿಪಣಿ”ಯೊಂದಿಗೆ ತಮ್ಮ ಪಡೆಗಳು “ಬೆನ್ ಗುರಿಯನ್ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು” ಮಿಲಿಟರಿ ಕಾರ್ಯಾಚರಣೆ ನಡೆಸಿವೆ ಎಂದು ಬಂಡುಕೋರರು ಹೇಳಿದ್ದಾರೆ. ಪ್ಯಾಲೆಸ್ತೀನಿ ಪ್ರತಿರೋಧ ಸೇನೆ ಹಮಾಸ್ ಮತ್ತು ಇತರ ಬಂಡುಕೋರ ಗುಂಪುಗಳು ವಿಮಾನ ನಿಲ್ದಾಣದ ಮೇಲಿನ ದಾಳಿಯನ್ನು ಶ್ಲಾಘಿಸಿದ್ದಾರೆ.

ದಾಳಿಯ ನಂತರ ವಿಮಾನ ನಿಲ್ದಾಣವನ್ನು ಸಂಕ್ಷಿಪ್ತವಾಗಿ ಸ್ಥಗಿತಗೊಳಿಸಲಾಗಿದ್ದು, ನಂತರ ವಿಮಾನಗಳು ಪುನರಾರಂಭಗೊಂಡವು ಎಂದು ವರದಿಯಾಗಿದೆ. ವಾಯುಯಾನ ಪ್ರಾಧಿಕಾರವು ಬೆನ್ ಗುರಿಯನ್ ಈಗ “ಮುಕ್ತವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಹೇಳಿದೆ.

ಇಸ್ರೇಲ್‌ನ ಭದ್ರತಾ ಸಚಿವ ಸಂಪುಟ ಭಾನುವಾರ ಸಭೆ ಸೇರಲಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಯಾಲ್ ಜಮೀರ್ ಅವರು ಗಾಜಾ ಯುದ್ಧದ ಯೋಜಿತ ವಿಸ್ತರಣೆ ಮಾಧ್ಯಮ ವರದಿಗಳನ್ನು ದೃಢಪಡಿಸಿದ್ದಾರೆ.

“ಈ ವಾರ ನಾವು ನಮ್ಮ ಮೀಸಲು ಪಡೆಗಳಿಗೆ ಗಾಜಾದಲ್ಲಿ ನಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಮತ್ತು ವಿಸ್ತರಿಸಲು ಹತ್ತಾರು ಸಾವಿರ ಆದೇಶಗಳನ್ನು ನೀಡುತ್ತಿದ್ದೇವೆ. ಸೈನ್ಯವು ಹಮಾಸ್‌ನ ಭೂ ಮತ್ತು ಭೂಗತವಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ನಾಶಪಡಿಸುತ್ತದೆ” ಎಂದು ಜಮೀರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಸ್ತೃತ ದಾಳಿಯ ಕುರಿತು ಚರ್ಚಿಸಲು ಭದ್ರತಾ ಸಚಿವ ಸಂಪುಟ ಸಭೆ ಸೇರಲಿದೆ ಎಂದು ಇಸ್ರೇಲ್‌ನ ಸಾರ್ವಜನಿಕ ಪ್ರಸಾರಕರು ಈ ಹಿಂದೆಯೆ ಹೇಳಿದ್ದರು.

ಯೆಮೆನ್‌ನ ಗಡಿಗಳನ್ನು ನಿಯಂತ್ರಿಸುತ್ತಿರುವ ಹೂತಿ ಬಂಡುಕೋರರು, ಗಾಜಾ ಯುದ್ಧದ ವೇಳೆ ಇಸ್ರೇಲ್ ಮತ್ತು ಕೆಂಪು ಸಮುದ್ರದ ಹಡಗು ಸಾಗಣೆಯನ್ನು ಗುರಿಯಾಗಿಸಿಕೊಂಡು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹಾರಿಸಿದ್ದಾರೆ. ಈ ನಡುವೆ ಎರಡು ತಿಂಗಳ ಕದನ ವಿರಾಮದ ಕುರಿತ ಬಿಕ್ಕಟ್ಟಿನ ನಡುವೆ ಮಾರ್ಚ್ 18 ರಂದು ಅಕ್ರಮ ವಸಾಹತುಗಾರ ಇಸ್ರೇಲ್ ಗಾಜಾದಾದ್ಯಂತ ದಾಳಿಯನ್ನು ಪುನರಾರಂಭಿಸಿದೆ. ಇಸ್ರೇಲ್‌ ವಿಮಾನ ನಿಲ್ದಾಣದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...