Homeಅಂತರಾಷ್ಟ್ರೀಯಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

ಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

- Advertisement -
- Advertisement -

ಪ್ಯಾಲೆಸ್ತೀನಿನ ಅಕ್ರಮ ವಸಾಹತುಗಾರ ಇಸ್ರೇಲ್‌ನ ಮುಖ್ಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ ಯಮನ್‌ ದೇಶದ ಹೂತಿ ಬಂಡುಕೋರರು ನಡೆಸಿದ ದಾಳಿಯಲ್ಲಿ ಆರು ಜನರು ಗಾಯಗೊಂಡಿದ್ದಾರೆ. ದಾಳಿಯ ಪರಿಣಾಮ ಹಲವಾರು ಪ್ರಮುಖ ವಿಮಾನಯಾನ ಸಂಸ್ಥೆಗಳು ವಿಮಾನಗಳನ್ನು ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ. ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹೂತಿಗಳು ಮತ್ತು ಅವರ ಇರಾನ್‌ನ ಬೆಂಬಲಿಗರಿಗೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಬಾನುವಾರ ಪ್ರತಿಜ್ಞೆ ಮಾಡಿದ್ದಾರೆ. ಇಸ್ರೇಲ್‌ ವಿಮಾನ ನಿಲ್ದಾಣದ

ಪ್ಯಾಲೆಸ್ತೀನಿ ಪ್ರತಿರೋಧ ಪಡೆಗಳಾದ ಹಮಾಸ್ ವಿರುದ್ಧ ಗಾಜಾದಲ್ಲಿ 19 ತಿಂಗಳ ಯುದ್ಧವನ್ನು ವಿಸ್ತರಿಸಲು “ಹತ್ತಾರು ಸಾವಿರ” ಮೀಸಲು ಪಡೆಗಳ ಕರೆಯನ್ನು ಇಸ್ರೇಲ್ ಸೈನ್ಯವು ದೃಢಪಡಿಸುವ ಕೆಲವೇ ಗಂಟೆಗಳ ಮೊದಲು ಈ ದಾಳಿ ನಡೆದಿದೆ. ಅಕ್ರಮ ವಸಾಹತುಗಾರ ಇಸ್ರೇಲ್‌ನ ರಾಜಧಾನಿ ಟೆಲ್ ಅವಿವ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಈ ದಾಳಿಯನ್ನು ಹೂತಿಗಳು ನಡೆಸಿದ್ದಾರೆ. ಕ್ಷಿಪಣಿಯನ್ನು ಪ್ರತಿಬಂಧಿಸಲು ಹಲವಾರು ಪ್ರಯತ್ನಗಳು ನಡೆಸಿದ ಹೊರತಾಗಿಯೂ ದಾಳಿ ನಡೆದಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.

ಇಸ್ರೇಲ್ ಈ ಹಿಂದೆ ಕೂಡಾ ಇರಾನ್ ಬೆಂಬಲಿತ ಹೂತಿ ಬಂಡುಕೋರರ ವಿರುದ್ಧ “ಕ್ರಮ ಕೈಗೊಂಡಿದೆ” ಮತ್ತು “ಭವಿಷ್ಯದಲ್ಲಿ ಕೂಡಾ ಅವರ ವಿರುದ್ಧ ಕಾರ್ಯನಿರ್ವಹಿಸುತ್ತದೆ” ಎಂದು ಟೆಲಿಗ್ರಾಮ್‌ನಲ್ಲಿ ಪ್ರಸಾರ ಮಾಡಲಾದ ವೀಡಿಯೊದಲ್ಲಿ ನೆತನ್ಯಾಹು ಹೇಳಿದ್ದಾರೆ. “ಇದು ಒಂದೇ ಸ್ಫೋಟದಲ್ಲಿ ನಿಲ್ಲುವುದಿಲ್ಲ, ಬದಲಾಗಿ ಅನೇಕ ಸ್ಫೋಟಗಳು ಇರುತ್ತವೆ” ಎಂದು ಅವರು ಹೆಚ್ಚಿನ ವಿವರಗಳನ್ನು ನೀಡದೆ ಹೇಳಿದ್ದಾರೆ.

ನಂತರ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ನೆತನ್ಯಾಹು, ಇಸ್ರೇಲ್ ನಾವು ಆಯ್ಕೆ ಮಾಡಿದ ಸಮಯ ಮತ್ತು ಸ್ಥಳದಲ್ಲಿ ಇರಾನ್‌ಗೆ ಪ್ರತಿಕ್ರಿಯಿಸುತ್ತದೆ ಎಂದು ಹೇಳಿದ್ದಾರೆ.

ದಾಳಿಯಿಂದಾಗಿ ವಿಮಾನ ನಿಲ್ದಾಣದ ಪ್ರದೇಶದಲ್ಲಿ ದೊಡ್ಡದಾದ ಆಳವಾದ ಹೊಂಡ ಸೃಷ್ಟಿಯಾಗಿದ್ದು ವಿಡಿಯೊದಲ್ಲಿ ದಾಖಲಾಗಿದೆ. ಇದು ನಿಲ್ದಾಣದ ನಿಯಂತ್ರಣ ಗೋಪುರದ ಬಳಿಯೆ ಇದ್ದರೂ, ಅದರ ಮೂಲಸೌಕರ್ಯಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಾಗಿದೆ. ಇಸ್ರೇಲ್‌ನ ಮುಖ್ಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ “ಕ್ಷಿಪಣಿ ದಾಳಿ” ಸಂಭವಿಸಿದೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

ವಿಮಾನ ನಿಲ್ದಾಣದ ಅತಿದೊಡ್ಡ ಟರ್ಮಿನಲ್ 3 ರ ಪಾರ್ಕಿಂಗ್ ಸ್ಥಳಗಳ ಬಳಿ ಕ್ಷಿಪಣಿ ಬಡಿದಿದೆ ಎಂದು AFP ಛಾಯಾಗ್ರಾಹಕರೊಬ್ಬರು ಹೇಳಿದ್ದಾರೆ.

“ನಮ್ಮ ಹಿಂದೆ ಇರುವ ಪ್ರದೇಶವನ್ನು ನೀವು ನೋಡಬಹುದು: ಇಲ್ಲಿ ಒಂದು ಹೊಂಡ ರೂಪುಗೊಂಡಿದ್ದು, ಇದು ಹಲವಾರು ಡಜನ್ ಮೀಟರ್ ಅಗಲ ಮತ್ತು ಹಲವಾರು ಡಜನ್ ಮೀಟರ್ ಆಳವಿದೆ” ಎಂದು ಮಧ್ಯ ಇಸ್ರೇಲ್‌ನ ಪೊಲೀಸ್ ಮುಖ್ಯಸ್ಥ ಯೈರ್ ಹೆಜ್ರೋನಿ ವೀಡಿಯೊದಲ್ಲಿ ತಿಳಿಸಿದ್ದಾರೆ. ವಿಮಾನ ನಿಲ್ದಾಣದ ವ್ಯಾಪ್ತಿಯೊಳಗೆ ಕ್ಷಿಪಣಿ ನೇರವಾಗಿ ಬಿದ್ದಿರುವುದು “ಇದು ಮೊದಲ ಬಾರಿಗೆ” ಎಂದು ಇಸ್ರೇಲಿ ಮಿಲಿಟರಿ ವಕ್ತಾರರು AFP ಗೆ ತಿಳಿಸಿದ್ದಾರೆ.

ಇದಕ್ಕೂ ಮೊದಲು ದಾಳಿಯ ಜವಾಬ್ದಾರಿಯನ್ನು ಹೂತಿ ಬಂಡುಕೋರರು ವಹಿಸಿಕೊಂಡಿದ್ದಾರೆ. ಅವರು ಯುದ್ಧದಿಂದ ಹಾನಿಗೊಳಗಾದ ಗಾಜಾದಲ್ಲಿ ಪ್ಯಾಲೆಸ್ತೀನಿಯನ್ನರನ್ನು ಬೆಂಬಲಿಸಲು ಕಾರ್ಯನಿರ್ವಹಿಸುವುದಾಗಿ ನಿರಂತರವಾಗಿ ಹೇಳುತ್ತಲೆ ಬಂದಿದ್ದಾರೆ. “ಹೈಪರ್ಸಾನಿಕ್ ಬ್ಯಾಲಿಸ್ಟಿಕ್ ಕ್ಷಿಪಣಿ”ಯೊಂದಿಗೆ ತಮ್ಮ ಪಡೆಗಳು “ಬೆನ್ ಗುರಿಯನ್ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು” ಮಿಲಿಟರಿ ಕಾರ್ಯಾಚರಣೆ ನಡೆಸಿವೆ ಎಂದು ಬಂಡುಕೋರರು ಹೇಳಿದ್ದಾರೆ. ಪ್ಯಾಲೆಸ್ತೀನಿ ಪ್ರತಿರೋಧ ಸೇನೆ ಹಮಾಸ್ ಮತ್ತು ಇತರ ಬಂಡುಕೋರ ಗುಂಪುಗಳು ವಿಮಾನ ನಿಲ್ದಾಣದ ಮೇಲಿನ ದಾಳಿಯನ್ನು ಶ್ಲಾಘಿಸಿದ್ದಾರೆ.

ದಾಳಿಯ ನಂತರ ವಿಮಾನ ನಿಲ್ದಾಣವನ್ನು ಸಂಕ್ಷಿಪ್ತವಾಗಿ ಸ್ಥಗಿತಗೊಳಿಸಲಾಗಿದ್ದು, ನಂತರ ವಿಮಾನಗಳು ಪುನರಾರಂಭಗೊಂಡವು ಎಂದು ವರದಿಯಾಗಿದೆ. ವಾಯುಯಾನ ಪ್ರಾಧಿಕಾರವು ಬೆನ್ ಗುರಿಯನ್ ಈಗ “ಮುಕ್ತವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಹೇಳಿದೆ.

ಇಸ್ರೇಲ್‌ನ ಭದ್ರತಾ ಸಚಿವ ಸಂಪುಟ ಭಾನುವಾರ ಸಭೆ ಸೇರಲಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಯಾಲ್ ಜಮೀರ್ ಅವರು ಗಾಜಾ ಯುದ್ಧದ ಯೋಜಿತ ವಿಸ್ತರಣೆ ಮಾಧ್ಯಮ ವರದಿಗಳನ್ನು ದೃಢಪಡಿಸಿದ್ದಾರೆ.

“ಈ ವಾರ ನಾವು ನಮ್ಮ ಮೀಸಲು ಪಡೆಗಳಿಗೆ ಗಾಜಾದಲ್ಲಿ ನಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಮತ್ತು ವಿಸ್ತರಿಸಲು ಹತ್ತಾರು ಸಾವಿರ ಆದೇಶಗಳನ್ನು ನೀಡುತ್ತಿದ್ದೇವೆ. ಸೈನ್ಯವು ಹಮಾಸ್‌ನ ಭೂ ಮತ್ತು ಭೂಗತವಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ನಾಶಪಡಿಸುತ್ತದೆ” ಎಂದು ಜಮೀರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಸ್ತೃತ ದಾಳಿಯ ಕುರಿತು ಚರ್ಚಿಸಲು ಭದ್ರತಾ ಸಚಿವ ಸಂಪುಟ ಸಭೆ ಸೇರಲಿದೆ ಎಂದು ಇಸ್ರೇಲ್‌ನ ಸಾರ್ವಜನಿಕ ಪ್ರಸಾರಕರು ಈ ಹಿಂದೆಯೆ ಹೇಳಿದ್ದರು.

ಯೆಮೆನ್‌ನ ಗಡಿಗಳನ್ನು ನಿಯಂತ್ರಿಸುತ್ತಿರುವ ಹೂತಿ ಬಂಡುಕೋರರು, ಗಾಜಾ ಯುದ್ಧದ ವೇಳೆ ಇಸ್ರೇಲ್ ಮತ್ತು ಕೆಂಪು ಸಮುದ್ರದ ಹಡಗು ಸಾಗಣೆಯನ್ನು ಗುರಿಯಾಗಿಸಿಕೊಂಡು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹಾರಿಸಿದ್ದಾರೆ. ಈ ನಡುವೆ ಎರಡು ತಿಂಗಳ ಕದನ ವಿರಾಮದ ಕುರಿತ ಬಿಕ್ಕಟ್ಟಿನ ನಡುವೆ ಮಾರ್ಚ್ 18 ರಂದು ಅಕ್ರಮ ವಸಾಹತುಗಾರ ಇಸ್ರೇಲ್ ಗಾಜಾದಾದ್ಯಂತ ದಾಳಿಯನ್ನು ಪುನರಾರಂಭಿಸಿದೆ. ಇಸ್ರೇಲ್‌ ವಿಮಾನ ನಿಲ್ದಾಣದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....