Homeಅಂತರಾಷ್ಟ್ರೀಯಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

ಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

- Advertisement -
- Advertisement -

ಪ್ಯಾಲೆಸ್ತೀನಿನ ಅಕ್ರಮ ವಸಾಹತುಗಾರ ಇಸ್ರೇಲ್‌ನ ಮುಖ್ಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ ಯಮನ್‌ ದೇಶದ ಹೂತಿ ಬಂಡುಕೋರರು ನಡೆಸಿದ ದಾಳಿಯಲ್ಲಿ ಆರು ಜನರು ಗಾಯಗೊಂಡಿದ್ದಾರೆ. ದಾಳಿಯ ಪರಿಣಾಮ ಹಲವಾರು ಪ್ರಮುಖ ವಿಮಾನಯಾನ ಸಂಸ್ಥೆಗಳು ವಿಮಾನಗಳನ್ನು ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ. ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹೂತಿಗಳು ಮತ್ತು ಅವರ ಇರಾನ್‌ನ ಬೆಂಬಲಿಗರಿಗೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಬಾನುವಾರ ಪ್ರತಿಜ್ಞೆ ಮಾಡಿದ್ದಾರೆ. ಇಸ್ರೇಲ್‌ ವಿಮಾನ ನಿಲ್ದಾಣದ

ಪ್ಯಾಲೆಸ್ತೀನಿ ಪ್ರತಿರೋಧ ಪಡೆಗಳಾದ ಹಮಾಸ್ ವಿರುದ್ಧ ಗಾಜಾದಲ್ಲಿ 19 ತಿಂಗಳ ಯುದ್ಧವನ್ನು ವಿಸ್ತರಿಸಲು “ಹತ್ತಾರು ಸಾವಿರ” ಮೀಸಲು ಪಡೆಗಳ ಕರೆಯನ್ನು ಇಸ್ರೇಲ್ ಸೈನ್ಯವು ದೃಢಪಡಿಸುವ ಕೆಲವೇ ಗಂಟೆಗಳ ಮೊದಲು ಈ ದಾಳಿ ನಡೆದಿದೆ. ಅಕ್ರಮ ವಸಾಹತುಗಾರ ಇಸ್ರೇಲ್‌ನ ರಾಜಧಾನಿ ಟೆಲ್ ಅವಿವ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಈ ದಾಳಿಯನ್ನು ಹೂತಿಗಳು ನಡೆಸಿದ್ದಾರೆ. ಕ್ಷಿಪಣಿಯನ್ನು ಪ್ರತಿಬಂಧಿಸಲು ಹಲವಾರು ಪ್ರಯತ್ನಗಳು ನಡೆಸಿದ ಹೊರತಾಗಿಯೂ ದಾಳಿ ನಡೆದಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.

ಇಸ್ರೇಲ್ ಈ ಹಿಂದೆ ಕೂಡಾ ಇರಾನ್ ಬೆಂಬಲಿತ ಹೂತಿ ಬಂಡುಕೋರರ ವಿರುದ್ಧ “ಕ್ರಮ ಕೈಗೊಂಡಿದೆ” ಮತ್ತು “ಭವಿಷ್ಯದಲ್ಲಿ ಕೂಡಾ ಅವರ ವಿರುದ್ಧ ಕಾರ್ಯನಿರ್ವಹಿಸುತ್ತದೆ” ಎಂದು ಟೆಲಿಗ್ರಾಮ್‌ನಲ್ಲಿ ಪ್ರಸಾರ ಮಾಡಲಾದ ವೀಡಿಯೊದಲ್ಲಿ ನೆತನ್ಯಾಹು ಹೇಳಿದ್ದಾರೆ. “ಇದು ಒಂದೇ ಸ್ಫೋಟದಲ್ಲಿ ನಿಲ್ಲುವುದಿಲ್ಲ, ಬದಲಾಗಿ ಅನೇಕ ಸ್ಫೋಟಗಳು ಇರುತ್ತವೆ” ಎಂದು ಅವರು ಹೆಚ್ಚಿನ ವಿವರಗಳನ್ನು ನೀಡದೆ ಹೇಳಿದ್ದಾರೆ.

ನಂತರ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ನೆತನ್ಯಾಹು, ಇಸ್ರೇಲ್ ನಾವು ಆಯ್ಕೆ ಮಾಡಿದ ಸಮಯ ಮತ್ತು ಸ್ಥಳದಲ್ಲಿ ಇರಾನ್‌ಗೆ ಪ್ರತಿಕ್ರಿಯಿಸುತ್ತದೆ ಎಂದು ಹೇಳಿದ್ದಾರೆ.

ದಾಳಿಯಿಂದಾಗಿ ವಿಮಾನ ನಿಲ್ದಾಣದ ಪ್ರದೇಶದಲ್ಲಿ ದೊಡ್ಡದಾದ ಆಳವಾದ ಹೊಂಡ ಸೃಷ್ಟಿಯಾಗಿದ್ದು ವಿಡಿಯೊದಲ್ಲಿ ದಾಖಲಾಗಿದೆ. ಇದು ನಿಲ್ದಾಣದ ನಿಯಂತ್ರಣ ಗೋಪುರದ ಬಳಿಯೆ ಇದ್ದರೂ, ಅದರ ಮೂಲಸೌಕರ್ಯಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಾಗಿದೆ. ಇಸ್ರೇಲ್‌ನ ಮುಖ್ಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ “ಕ್ಷಿಪಣಿ ದಾಳಿ” ಸಂಭವಿಸಿದೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

ವಿಮಾನ ನಿಲ್ದಾಣದ ಅತಿದೊಡ್ಡ ಟರ್ಮಿನಲ್ 3 ರ ಪಾರ್ಕಿಂಗ್ ಸ್ಥಳಗಳ ಬಳಿ ಕ್ಷಿಪಣಿ ಬಡಿದಿದೆ ಎಂದು AFP ಛಾಯಾಗ್ರಾಹಕರೊಬ್ಬರು ಹೇಳಿದ್ದಾರೆ.

“ನಮ್ಮ ಹಿಂದೆ ಇರುವ ಪ್ರದೇಶವನ್ನು ನೀವು ನೋಡಬಹುದು: ಇಲ್ಲಿ ಒಂದು ಹೊಂಡ ರೂಪುಗೊಂಡಿದ್ದು, ಇದು ಹಲವಾರು ಡಜನ್ ಮೀಟರ್ ಅಗಲ ಮತ್ತು ಹಲವಾರು ಡಜನ್ ಮೀಟರ್ ಆಳವಿದೆ” ಎಂದು ಮಧ್ಯ ಇಸ್ರೇಲ್‌ನ ಪೊಲೀಸ್ ಮುಖ್ಯಸ್ಥ ಯೈರ್ ಹೆಜ್ರೋನಿ ವೀಡಿಯೊದಲ್ಲಿ ತಿಳಿಸಿದ್ದಾರೆ. ವಿಮಾನ ನಿಲ್ದಾಣದ ವ್ಯಾಪ್ತಿಯೊಳಗೆ ಕ್ಷಿಪಣಿ ನೇರವಾಗಿ ಬಿದ್ದಿರುವುದು “ಇದು ಮೊದಲ ಬಾರಿಗೆ” ಎಂದು ಇಸ್ರೇಲಿ ಮಿಲಿಟರಿ ವಕ್ತಾರರು AFP ಗೆ ತಿಳಿಸಿದ್ದಾರೆ.

ಇದಕ್ಕೂ ಮೊದಲು ದಾಳಿಯ ಜವಾಬ್ದಾರಿಯನ್ನು ಹೂತಿ ಬಂಡುಕೋರರು ವಹಿಸಿಕೊಂಡಿದ್ದಾರೆ. ಅವರು ಯುದ್ಧದಿಂದ ಹಾನಿಗೊಳಗಾದ ಗಾಜಾದಲ್ಲಿ ಪ್ಯಾಲೆಸ್ತೀನಿಯನ್ನರನ್ನು ಬೆಂಬಲಿಸಲು ಕಾರ್ಯನಿರ್ವಹಿಸುವುದಾಗಿ ನಿರಂತರವಾಗಿ ಹೇಳುತ್ತಲೆ ಬಂದಿದ್ದಾರೆ. “ಹೈಪರ್ಸಾನಿಕ್ ಬ್ಯಾಲಿಸ್ಟಿಕ್ ಕ್ಷಿಪಣಿ”ಯೊಂದಿಗೆ ತಮ್ಮ ಪಡೆಗಳು “ಬೆನ್ ಗುರಿಯನ್ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು” ಮಿಲಿಟರಿ ಕಾರ್ಯಾಚರಣೆ ನಡೆಸಿವೆ ಎಂದು ಬಂಡುಕೋರರು ಹೇಳಿದ್ದಾರೆ. ಪ್ಯಾಲೆಸ್ತೀನಿ ಪ್ರತಿರೋಧ ಸೇನೆ ಹಮಾಸ್ ಮತ್ತು ಇತರ ಬಂಡುಕೋರ ಗುಂಪುಗಳು ವಿಮಾನ ನಿಲ್ದಾಣದ ಮೇಲಿನ ದಾಳಿಯನ್ನು ಶ್ಲಾಘಿಸಿದ್ದಾರೆ.

ದಾಳಿಯ ನಂತರ ವಿಮಾನ ನಿಲ್ದಾಣವನ್ನು ಸಂಕ್ಷಿಪ್ತವಾಗಿ ಸ್ಥಗಿತಗೊಳಿಸಲಾಗಿದ್ದು, ನಂತರ ವಿಮಾನಗಳು ಪುನರಾರಂಭಗೊಂಡವು ಎಂದು ವರದಿಯಾಗಿದೆ. ವಾಯುಯಾನ ಪ್ರಾಧಿಕಾರವು ಬೆನ್ ಗುರಿಯನ್ ಈಗ “ಮುಕ್ತವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಹೇಳಿದೆ.

ಇಸ್ರೇಲ್‌ನ ಭದ್ರತಾ ಸಚಿವ ಸಂಪುಟ ಭಾನುವಾರ ಸಭೆ ಸೇರಲಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಯಾಲ್ ಜಮೀರ್ ಅವರು ಗಾಜಾ ಯುದ್ಧದ ಯೋಜಿತ ವಿಸ್ತರಣೆ ಮಾಧ್ಯಮ ವರದಿಗಳನ್ನು ದೃಢಪಡಿಸಿದ್ದಾರೆ.

“ಈ ವಾರ ನಾವು ನಮ್ಮ ಮೀಸಲು ಪಡೆಗಳಿಗೆ ಗಾಜಾದಲ್ಲಿ ನಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಮತ್ತು ವಿಸ್ತರಿಸಲು ಹತ್ತಾರು ಸಾವಿರ ಆದೇಶಗಳನ್ನು ನೀಡುತ್ತಿದ್ದೇವೆ. ಸೈನ್ಯವು ಹಮಾಸ್‌ನ ಭೂ ಮತ್ತು ಭೂಗತವಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ನಾಶಪಡಿಸುತ್ತದೆ” ಎಂದು ಜಮೀರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಸ್ತೃತ ದಾಳಿಯ ಕುರಿತು ಚರ್ಚಿಸಲು ಭದ್ರತಾ ಸಚಿವ ಸಂಪುಟ ಸಭೆ ಸೇರಲಿದೆ ಎಂದು ಇಸ್ರೇಲ್‌ನ ಸಾರ್ವಜನಿಕ ಪ್ರಸಾರಕರು ಈ ಹಿಂದೆಯೆ ಹೇಳಿದ್ದರು.

ಯೆಮೆನ್‌ನ ಗಡಿಗಳನ್ನು ನಿಯಂತ್ರಿಸುತ್ತಿರುವ ಹೂತಿ ಬಂಡುಕೋರರು, ಗಾಜಾ ಯುದ್ಧದ ವೇಳೆ ಇಸ್ರೇಲ್ ಮತ್ತು ಕೆಂಪು ಸಮುದ್ರದ ಹಡಗು ಸಾಗಣೆಯನ್ನು ಗುರಿಯಾಗಿಸಿಕೊಂಡು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹಾರಿಸಿದ್ದಾರೆ. ಈ ನಡುವೆ ಎರಡು ತಿಂಗಳ ಕದನ ವಿರಾಮದ ಕುರಿತ ಬಿಕ್ಕಟ್ಟಿನ ನಡುವೆ ಮಾರ್ಚ್ 18 ರಂದು ಅಕ್ರಮ ವಸಾಹತುಗಾರ ಇಸ್ರೇಲ್ ಗಾಜಾದಾದ್ಯಂತ ದಾಳಿಯನ್ನು ಪುನರಾರಂಭಿಸಿದೆ. ಇಸ್ರೇಲ್‌ ವಿಮಾನ ನಿಲ್ದಾಣದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...