Homeಅಂತರಾಷ್ಟ್ರೀಯಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

ಇಸ್ರೇಲ್‌ ವಿಮಾನ ನಿಲ್ದಾಣದ ಮೇಲೆ ಹೂತಿ ಬಂಡುಕೋರರಿಂದ ಕ್ಷಿಪಣಿ ದಾಳಿ; 6 ಮಂದಿಗೆ ಗಾಯ

- Advertisement -
- Advertisement -

ಪ್ಯಾಲೆಸ್ತೀನಿನ ಅಕ್ರಮ ವಸಾಹತುಗಾರ ಇಸ್ರೇಲ್‌ನ ಮುಖ್ಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ ಯಮನ್‌ ದೇಶದ ಹೂತಿ ಬಂಡುಕೋರರು ನಡೆಸಿದ ದಾಳಿಯಲ್ಲಿ ಆರು ಜನರು ಗಾಯಗೊಂಡಿದ್ದಾರೆ. ದಾಳಿಯ ಪರಿಣಾಮ ಹಲವಾರು ಪ್ರಮುಖ ವಿಮಾನಯಾನ ಸಂಸ್ಥೆಗಳು ವಿಮಾನಗಳನ್ನು ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ. ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹೂತಿಗಳು ಮತ್ತು ಅವರ ಇರಾನ್‌ನ ಬೆಂಬಲಿಗರಿಗೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಬಾನುವಾರ ಪ್ರತಿಜ್ಞೆ ಮಾಡಿದ್ದಾರೆ. ಇಸ್ರೇಲ್‌ ವಿಮಾನ ನಿಲ್ದಾಣದ

ಪ್ಯಾಲೆಸ್ತೀನಿ ಪ್ರತಿರೋಧ ಪಡೆಗಳಾದ ಹಮಾಸ್ ವಿರುದ್ಧ ಗಾಜಾದಲ್ಲಿ 19 ತಿಂಗಳ ಯುದ್ಧವನ್ನು ವಿಸ್ತರಿಸಲು “ಹತ್ತಾರು ಸಾವಿರ” ಮೀಸಲು ಪಡೆಗಳ ಕರೆಯನ್ನು ಇಸ್ರೇಲ್ ಸೈನ್ಯವು ದೃಢಪಡಿಸುವ ಕೆಲವೇ ಗಂಟೆಗಳ ಮೊದಲು ಈ ದಾಳಿ ನಡೆದಿದೆ. ಅಕ್ರಮ ವಸಾಹತುಗಾರ ಇಸ್ರೇಲ್‌ನ ರಾಜಧಾನಿ ಟೆಲ್ ಅವಿವ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಈ ದಾಳಿಯನ್ನು ಹೂತಿಗಳು ನಡೆಸಿದ್ದಾರೆ. ಕ್ಷಿಪಣಿಯನ್ನು ಪ್ರತಿಬಂಧಿಸಲು ಹಲವಾರು ಪ್ರಯತ್ನಗಳು ನಡೆಸಿದ ಹೊರತಾಗಿಯೂ ದಾಳಿ ನಡೆದಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.

ಇಸ್ರೇಲ್ ಈ ಹಿಂದೆ ಕೂಡಾ ಇರಾನ್ ಬೆಂಬಲಿತ ಹೂತಿ ಬಂಡುಕೋರರ ವಿರುದ್ಧ “ಕ್ರಮ ಕೈಗೊಂಡಿದೆ” ಮತ್ತು “ಭವಿಷ್ಯದಲ್ಲಿ ಕೂಡಾ ಅವರ ವಿರುದ್ಧ ಕಾರ್ಯನಿರ್ವಹಿಸುತ್ತದೆ” ಎಂದು ಟೆಲಿಗ್ರಾಮ್‌ನಲ್ಲಿ ಪ್ರಸಾರ ಮಾಡಲಾದ ವೀಡಿಯೊದಲ್ಲಿ ನೆತನ್ಯಾಹು ಹೇಳಿದ್ದಾರೆ. “ಇದು ಒಂದೇ ಸ್ಫೋಟದಲ್ಲಿ ನಿಲ್ಲುವುದಿಲ್ಲ, ಬದಲಾಗಿ ಅನೇಕ ಸ್ಫೋಟಗಳು ಇರುತ್ತವೆ” ಎಂದು ಅವರು ಹೆಚ್ಚಿನ ವಿವರಗಳನ್ನು ನೀಡದೆ ಹೇಳಿದ್ದಾರೆ.

ನಂತರ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ನೆತನ್ಯಾಹು, ಇಸ್ರೇಲ್ ನಾವು ಆಯ್ಕೆ ಮಾಡಿದ ಸಮಯ ಮತ್ತು ಸ್ಥಳದಲ್ಲಿ ಇರಾನ್‌ಗೆ ಪ್ರತಿಕ್ರಿಯಿಸುತ್ತದೆ ಎಂದು ಹೇಳಿದ್ದಾರೆ.

ದಾಳಿಯಿಂದಾಗಿ ವಿಮಾನ ನಿಲ್ದಾಣದ ಪ್ರದೇಶದಲ್ಲಿ ದೊಡ್ಡದಾದ ಆಳವಾದ ಹೊಂಡ ಸೃಷ್ಟಿಯಾಗಿದ್ದು ವಿಡಿಯೊದಲ್ಲಿ ದಾಖಲಾಗಿದೆ. ಇದು ನಿಲ್ದಾಣದ ನಿಯಂತ್ರಣ ಗೋಪುರದ ಬಳಿಯೆ ಇದ್ದರೂ, ಅದರ ಮೂಲಸೌಕರ್ಯಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಾಗಿದೆ. ಇಸ್ರೇಲ್‌ನ ಮುಖ್ಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ “ಕ್ಷಿಪಣಿ ದಾಳಿ” ಸಂಭವಿಸಿದೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

ವಿಮಾನ ನಿಲ್ದಾಣದ ಅತಿದೊಡ್ಡ ಟರ್ಮಿನಲ್ 3 ರ ಪಾರ್ಕಿಂಗ್ ಸ್ಥಳಗಳ ಬಳಿ ಕ್ಷಿಪಣಿ ಬಡಿದಿದೆ ಎಂದು AFP ಛಾಯಾಗ್ರಾಹಕರೊಬ್ಬರು ಹೇಳಿದ್ದಾರೆ.

“ನಮ್ಮ ಹಿಂದೆ ಇರುವ ಪ್ರದೇಶವನ್ನು ನೀವು ನೋಡಬಹುದು: ಇಲ್ಲಿ ಒಂದು ಹೊಂಡ ರೂಪುಗೊಂಡಿದ್ದು, ಇದು ಹಲವಾರು ಡಜನ್ ಮೀಟರ್ ಅಗಲ ಮತ್ತು ಹಲವಾರು ಡಜನ್ ಮೀಟರ್ ಆಳವಿದೆ” ಎಂದು ಮಧ್ಯ ಇಸ್ರೇಲ್‌ನ ಪೊಲೀಸ್ ಮುಖ್ಯಸ್ಥ ಯೈರ್ ಹೆಜ್ರೋನಿ ವೀಡಿಯೊದಲ್ಲಿ ತಿಳಿಸಿದ್ದಾರೆ. ವಿಮಾನ ನಿಲ್ದಾಣದ ವ್ಯಾಪ್ತಿಯೊಳಗೆ ಕ್ಷಿಪಣಿ ನೇರವಾಗಿ ಬಿದ್ದಿರುವುದು “ಇದು ಮೊದಲ ಬಾರಿಗೆ” ಎಂದು ಇಸ್ರೇಲಿ ಮಿಲಿಟರಿ ವಕ್ತಾರರು AFP ಗೆ ತಿಳಿಸಿದ್ದಾರೆ.

ಇದಕ್ಕೂ ಮೊದಲು ದಾಳಿಯ ಜವಾಬ್ದಾರಿಯನ್ನು ಹೂತಿ ಬಂಡುಕೋರರು ವಹಿಸಿಕೊಂಡಿದ್ದಾರೆ. ಅವರು ಯುದ್ಧದಿಂದ ಹಾನಿಗೊಳಗಾದ ಗಾಜಾದಲ್ಲಿ ಪ್ಯಾಲೆಸ್ತೀನಿಯನ್ನರನ್ನು ಬೆಂಬಲಿಸಲು ಕಾರ್ಯನಿರ್ವಹಿಸುವುದಾಗಿ ನಿರಂತರವಾಗಿ ಹೇಳುತ್ತಲೆ ಬಂದಿದ್ದಾರೆ. “ಹೈಪರ್ಸಾನಿಕ್ ಬ್ಯಾಲಿಸ್ಟಿಕ್ ಕ್ಷಿಪಣಿ”ಯೊಂದಿಗೆ ತಮ್ಮ ಪಡೆಗಳು “ಬೆನ್ ಗುರಿಯನ್ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು” ಮಿಲಿಟರಿ ಕಾರ್ಯಾಚರಣೆ ನಡೆಸಿವೆ ಎಂದು ಬಂಡುಕೋರರು ಹೇಳಿದ್ದಾರೆ. ಪ್ಯಾಲೆಸ್ತೀನಿ ಪ್ರತಿರೋಧ ಸೇನೆ ಹಮಾಸ್ ಮತ್ತು ಇತರ ಬಂಡುಕೋರ ಗುಂಪುಗಳು ವಿಮಾನ ನಿಲ್ದಾಣದ ಮೇಲಿನ ದಾಳಿಯನ್ನು ಶ್ಲಾಘಿಸಿದ್ದಾರೆ.

ದಾಳಿಯ ನಂತರ ವಿಮಾನ ನಿಲ್ದಾಣವನ್ನು ಸಂಕ್ಷಿಪ್ತವಾಗಿ ಸ್ಥಗಿತಗೊಳಿಸಲಾಗಿದ್ದು, ನಂತರ ವಿಮಾನಗಳು ಪುನರಾರಂಭಗೊಂಡವು ಎಂದು ವರದಿಯಾಗಿದೆ. ವಾಯುಯಾನ ಪ್ರಾಧಿಕಾರವು ಬೆನ್ ಗುರಿಯನ್ ಈಗ “ಮುಕ್ತವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಹೇಳಿದೆ.

ಇಸ್ರೇಲ್‌ನ ಭದ್ರತಾ ಸಚಿವ ಸಂಪುಟ ಭಾನುವಾರ ಸಭೆ ಸೇರಲಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಯಾಲ್ ಜಮೀರ್ ಅವರು ಗಾಜಾ ಯುದ್ಧದ ಯೋಜಿತ ವಿಸ್ತರಣೆ ಮಾಧ್ಯಮ ವರದಿಗಳನ್ನು ದೃಢಪಡಿಸಿದ್ದಾರೆ.

“ಈ ವಾರ ನಾವು ನಮ್ಮ ಮೀಸಲು ಪಡೆಗಳಿಗೆ ಗಾಜಾದಲ್ಲಿ ನಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಮತ್ತು ವಿಸ್ತರಿಸಲು ಹತ್ತಾರು ಸಾವಿರ ಆದೇಶಗಳನ್ನು ನೀಡುತ್ತಿದ್ದೇವೆ. ಸೈನ್ಯವು ಹಮಾಸ್‌ನ ಭೂ ಮತ್ತು ಭೂಗತವಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ನಾಶಪಡಿಸುತ್ತದೆ” ಎಂದು ಜಮೀರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಸ್ತೃತ ದಾಳಿಯ ಕುರಿತು ಚರ್ಚಿಸಲು ಭದ್ರತಾ ಸಚಿವ ಸಂಪುಟ ಸಭೆ ಸೇರಲಿದೆ ಎಂದು ಇಸ್ರೇಲ್‌ನ ಸಾರ್ವಜನಿಕ ಪ್ರಸಾರಕರು ಈ ಹಿಂದೆಯೆ ಹೇಳಿದ್ದರು.

ಯೆಮೆನ್‌ನ ಗಡಿಗಳನ್ನು ನಿಯಂತ್ರಿಸುತ್ತಿರುವ ಹೂತಿ ಬಂಡುಕೋರರು, ಗಾಜಾ ಯುದ್ಧದ ವೇಳೆ ಇಸ್ರೇಲ್ ಮತ್ತು ಕೆಂಪು ಸಮುದ್ರದ ಹಡಗು ಸಾಗಣೆಯನ್ನು ಗುರಿಯಾಗಿಸಿಕೊಂಡು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹಾರಿಸಿದ್ದಾರೆ. ಈ ನಡುವೆ ಎರಡು ತಿಂಗಳ ಕದನ ವಿರಾಮದ ಕುರಿತ ಬಿಕ್ಕಟ್ಟಿನ ನಡುವೆ ಮಾರ್ಚ್ 18 ರಂದು ಅಕ್ರಮ ವಸಾಹತುಗಾರ ಇಸ್ರೇಲ್ ಗಾಜಾದಾದ್ಯಂತ ದಾಳಿಯನ್ನು ಪುನರಾರಂಭಿಸಿದೆ. ಇಸ್ರೇಲ್‌ ವಿಮಾನ ನಿಲ್ದಾಣದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

NEET: ಮತ್ತೊಬ್ಬ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರ: ಬ್ರಾಹ್ಮಣ ಸಮುದಾಯದಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...