Homeಅಂತರಾಷ್ಟ್ರೀಯದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

- Advertisement -
- Advertisement -

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ ಸ್ಪಷ್ಟ ಗುರುತುಗಳಿದ್ದ ಮಾಧ್ಯಮ ವಾಹನದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಅಲ್ ಮಯಾದೀನ್ ವಾಹಿನಿಯ ಫಾತಿಮಾ ಫ್ತೂನಿ, ಆಕೆಯ ಸಹೋದರ ಹಾಗೂ ಸಹೋದ್ಯೋಗಿ ಮೊಹಮ್ಮದ್, ಮತ್ತು ಅಲ್-ಮನಾರ್ ವಾಹಿನಿಯ ಅಲಿ ಶುವೈಬ್ ಅವರು ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ.

ಪತ್ರಕರ್ತರಿದ್ದ ವಾಹನದ ಮೇಲೆ ನಾಲ್ಕು ನಿಖರ ಕ್ಷಿಪಣಿಗಳು (precision missiles) ಅಪ್ಪಳಿಸಿವೆ ಎಂದು ಅಲ್ ಮಯಾದೀನ್ ಮಾಧ್ಯಮ ಸಂಸ್ಥೆ ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಪತ್ರಕರ್ತರ ಮೇಲಿನ ಈ ದಾಳಿಯಲ್ಲಿ ಇತರ ಹಲವಾರು ಪತ್ರಕರ್ತರು ಗಾಯಗೊಂಡಿದ್ದಾರೆ. ಅಲ್ಲದೆ, ಸ್ಥಳಕ್ಕೆ ಧಾವಿಸಿದ ಆಂಬ್ಯುಲೆನ್ಸ್‌ಗಳನ್ನೂ ಗುರಿಯಾಗಿಸಿ ದಾಳಿ ನಡೆಸಲಾಗಿದ್ದು, ಈ ವೇಳೆ ಓರ್ವ ಅರೆ ವೈದ್ಯಕೀಯ ಸಿಬ್ಬಂದಿ (ತುರ್ತು ಚಿಕಿತ್ಸಾ ಸಹಾಯಕ) ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಲೆಬನಾನ್‌ನಲ್ಲಿ ಆರೋಗ್ಯ ರಕ್ಷಣಾ ವ್ಯವಸ್ಥೆಯ ಮೇಲೆ ನಡೆದ ಐದು ಪ್ರತ್ಯೇಕ ದಾಳಿಗಳಲ್ಲಿ ಶನಿವಾರ ಇತರ ಎಂಟು ಅರೆ ವೈದ್ಯಕೀಯ ಸಿಬ್ಬಂದಿ ಕೊಲ್ಲಲ್ಪಟ್ಟಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಇಸ್ರೇಲ್ ಮಿಲಿಟರಿ ಪತ್ರಕರ್ತರನ್ನು ಕೊಂದ ದಾಳಿಯನ್ನು ಒಪ್ಪಿಕೊಂಡಿದೆ. ಪತ್ರಕರ್ತ ಅಲಿ ಶುವೈಬ್ ಹಿಜ್ಬುಲ್ಲಾ ಗುಪ್ತಚರ ಘಟಕದ ಭಾಗವಾಗಿದ್ದರು ಮತ್ತು ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲಿ ಸೈನಿಕರ ಚಲನವಲನಗಳನ್ನು ಪತ್ತೆಹಚ್ಚುತ್ತಿದ್ದರು ಎಂದು ಅದು ಪ್ರತಿಪಾದಿಸಿದೆ. ಅಷ್ಟೇ ಅಲ್ಲದೆ, ಅವರು ಹಿಜ್ಬುಲ್ಲಾದ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು ಎಂದು ಕೂಡ ಆರೋಪಿಸಿದೆ.

ಅಲಿ ಶುವೈಬ್ ಅವರ ಉದ್ಯೋಗದಾತ ಸಂಸ್ಥೆಯಾದ ಅಲ್-ಮನಾರ್, ಶುವೈಬ್ ಅವರನ್ನು ತಮ್ಮ ಅತ್ಯಂತ ಪ್ರಮುಖ ಯುದ್ಧ ವರದಿಗಾರರಲ್ಲಿ ಒಬ್ಬರೆಂದು ಬಣ್ಣಿಸಿದೆ. ಅವರು ದಶಕಗಳಿಂದ ಲೆಬನಾನ್ ಮೇಲೆ ನಡೆದ ಇಸ್ರೇಲಿ ದಾಳಿಗಳ ಬಗ್ಗೆ ವರದಿ ಮಾಡುತ್ತಿದ್ದರು ಎಂದು ಸಂಸ್ಥೆ ತಿಳಿಸಿದೆ.

ಗಾಝಾದಲ್ಲಿ 270ಕ್ಕೂ ಹೆಚ್ಚು ಪತ್ರಕರ್ತರನ್ನು ಕೊಂದಿರುವ ಇಸ್ರೇಲ್, ತಾನು ಗುರಿಯಾಗಿಸುವ ವರದಿಗಾರರು ಸಶಸ್ತ್ರ ಗುಂಪುಗಳ ಸದಸ್ಯರು ಅಥವಾ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಯಾವುದೇ ಸಾರ್ವಜನಿಕ ಸಾಕ್ಷ್ಯವನ್ನು ನೀಡದೆ ಪದೇ ಪದೇ ಆರೋಪಿಸುತ್ತಿದೆ.

ಇಸ್ರೇಲ್‌ನ ಈ ಆರೋಪಗಳನ್ನು ಶನಿವಾರ ತಮ್ಮ ಸಿಬ್ಬಂದಿಯನ್ನು ಕಳೆದುಕೊಂಡ ಎರಡೂ ಮಾಧ್ಯಮ ಸಂಸ್ಥೆಗಳು ಒಪ್ಪಿಲ್ಲ.

ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಅವರು, ತಮ್ಮ ವೃತ್ತಿಪರ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ನಾಗರಿಕರನ್ನು ಗುರಿಯಾಗಿಸುವ ಮೂಲಕ ಇಸ್ರೇಲ್ ಮತ್ತೊಮ್ಮೆ “ಅಂತಾರಾಷ್ಟ್ರೀಯ ಕಾನೂನಿನ ಅತ್ಯಂತ ಮೂಲಭೂತ ನಿಯಮಗಳನ್ನು” ಉಲ್ಲಂಘಿಸಿದೆ ಎಂದು ಹೇಳಿದ್ದಾರೆ.

ಪತ್ರಕರ್ತರಿಗೆ ಸಶಸ್ತ್ರ ಸಂಘರ್ಷದ ಸಮಯದಲ್ಲಿ ಅಂತಾರಾಷ್ಟ್ರೀಯ ರಕ್ಷಣೆ ನೀಡುವ ಎಲ್ಲಾ ನಿಯಮಗಳು ಮತ್ತು ಒಪ್ಪಂದಗಳನ್ನು ಉಲ್ಲಂಘಿಸುವ ಇಸ್ರೇಲ್‌ನ ಈ ಕೃತ್ಯ ಒಂದು ಬಹಿರಂಗ ಅಪರಾಧ ಎಂದಿದ್ದಾರೆ.

ಪ್ರಧಾನ ಮಂತ್ರಿ ನವಾಫ್ ಸಲಾಮ್ ಅವರು ಈ ದಾಳಿಯನ್ನು “ಅಂತಾರಾಷ್ಟ್ರೀಯ ಮಾನವೀಯ ಕಾನೂನಿನ ಘೋರ ಉಲ್ಲಂಘನೆ” ಎಂದು ಖಂಡಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...