Homeಅಂತರಾಷ್ಟ್ರೀಯದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

- Advertisement -
- Advertisement -

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ ಸ್ಪಷ್ಟ ಗುರುತುಗಳಿದ್ದ ಮಾಧ್ಯಮ ವಾಹನದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಅಲ್ ಮಯಾದೀನ್ ವಾಹಿನಿಯ ಫಾತಿಮಾ ಫ್ತೂನಿ, ಆಕೆಯ ಸಹೋದರ ಹಾಗೂ ಸಹೋದ್ಯೋಗಿ ಮೊಹಮ್ಮದ್, ಮತ್ತು ಅಲ್-ಮನಾರ್ ವಾಹಿನಿಯ ಅಲಿ ಶುವೈಬ್ ಅವರು ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ.

ಪತ್ರಕರ್ತರಿದ್ದ ವಾಹನದ ಮೇಲೆ ನಾಲ್ಕು ನಿಖರ ಕ್ಷಿಪಣಿಗಳು (precision missiles) ಅಪ್ಪಳಿಸಿವೆ ಎಂದು ಅಲ್ ಮಯಾದೀನ್ ಮಾಧ್ಯಮ ಸಂಸ್ಥೆ ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಪತ್ರಕರ್ತರ ಮೇಲಿನ ಈ ದಾಳಿಯಲ್ಲಿ ಇತರ ಹಲವಾರು ಪತ್ರಕರ್ತರು ಗಾಯಗೊಂಡಿದ್ದಾರೆ. ಅಲ್ಲದೆ, ಸ್ಥಳಕ್ಕೆ ಧಾವಿಸಿದ ಆಂಬ್ಯುಲೆನ್ಸ್‌ಗಳನ್ನೂ ಗುರಿಯಾಗಿಸಿ ದಾಳಿ ನಡೆಸಲಾಗಿದ್ದು, ಈ ವೇಳೆ ಓರ್ವ ಅರೆ ವೈದ್ಯಕೀಯ ಸಿಬ್ಬಂದಿ (ತುರ್ತು ಚಿಕಿತ್ಸಾ ಸಹಾಯಕ) ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಲೆಬನಾನ್‌ನಲ್ಲಿ ಆರೋಗ್ಯ ರಕ್ಷಣಾ ವ್ಯವಸ್ಥೆಯ ಮೇಲೆ ನಡೆದ ಐದು ಪ್ರತ್ಯೇಕ ದಾಳಿಗಳಲ್ಲಿ ಶನಿವಾರ ಇತರ ಎಂಟು ಅರೆ ವೈದ್ಯಕೀಯ ಸಿಬ್ಬಂದಿ ಕೊಲ್ಲಲ್ಪಟ್ಟಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಇಸ್ರೇಲ್ ಮಿಲಿಟರಿ ಪತ್ರಕರ್ತರನ್ನು ಕೊಂದ ದಾಳಿಯನ್ನು ಒಪ್ಪಿಕೊಂಡಿದೆ. ಪತ್ರಕರ್ತ ಅಲಿ ಶುವೈಬ್ ಹಿಜ್ಬುಲ್ಲಾ ಗುಪ್ತಚರ ಘಟಕದ ಭಾಗವಾಗಿದ್ದರು ಮತ್ತು ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲಿ ಸೈನಿಕರ ಚಲನವಲನಗಳನ್ನು ಪತ್ತೆಹಚ್ಚುತ್ತಿದ್ದರು ಎಂದು ಅದು ಪ್ರತಿಪಾದಿಸಿದೆ. ಅಷ್ಟೇ ಅಲ್ಲದೆ, ಅವರು ಹಿಜ್ಬುಲ್ಲಾದ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು ಎಂದು ಕೂಡ ಆರೋಪಿಸಿದೆ.

ಅಲಿ ಶುವೈಬ್ ಅವರ ಉದ್ಯೋಗದಾತ ಸಂಸ್ಥೆಯಾದ ಅಲ್-ಮನಾರ್, ಶುವೈಬ್ ಅವರನ್ನು ತಮ್ಮ ಅತ್ಯಂತ ಪ್ರಮುಖ ಯುದ್ಧ ವರದಿಗಾರರಲ್ಲಿ ಒಬ್ಬರೆಂದು ಬಣ್ಣಿಸಿದೆ. ಅವರು ದಶಕಗಳಿಂದ ಲೆಬನಾನ್ ಮೇಲೆ ನಡೆದ ಇಸ್ರೇಲಿ ದಾಳಿಗಳ ಬಗ್ಗೆ ವರದಿ ಮಾಡುತ್ತಿದ್ದರು ಎಂದು ಸಂಸ್ಥೆ ತಿಳಿಸಿದೆ.

ಗಾಝಾದಲ್ಲಿ 270ಕ್ಕೂ ಹೆಚ್ಚು ಪತ್ರಕರ್ತರನ್ನು ಕೊಂದಿರುವ ಇಸ್ರೇಲ್, ತಾನು ಗುರಿಯಾಗಿಸುವ ವರದಿಗಾರರು ಸಶಸ್ತ್ರ ಗುಂಪುಗಳ ಸದಸ್ಯರು ಅಥವಾ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಯಾವುದೇ ಸಾರ್ವಜನಿಕ ಸಾಕ್ಷ್ಯವನ್ನು ನೀಡದೆ ಪದೇ ಪದೇ ಆರೋಪಿಸುತ್ತಿದೆ.

ಇಸ್ರೇಲ್‌ನ ಈ ಆರೋಪಗಳನ್ನು ಶನಿವಾರ ತಮ್ಮ ಸಿಬ್ಬಂದಿಯನ್ನು ಕಳೆದುಕೊಂಡ ಎರಡೂ ಮಾಧ್ಯಮ ಸಂಸ್ಥೆಗಳು ಒಪ್ಪಿಲ್ಲ.

ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಅವರು, ತಮ್ಮ ವೃತ್ತಿಪರ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ನಾಗರಿಕರನ್ನು ಗುರಿಯಾಗಿಸುವ ಮೂಲಕ ಇಸ್ರೇಲ್ ಮತ್ತೊಮ್ಮೆ “ಅಂತಾರಾಷ್ಟ್ರೀಯ ಕಾನೂನಿನ ಅತ್ಯಂತ ಮೂಲಭೂತ ನಿಯಮಗಳನ್ನು” ಉಲ್ಲಂಘಿಸಿದೆ ಎಂದು ಹೇಳಿದ್ದಾರೆ.

ಪತ್ರಕರ್ತರಿಗೆ ಸಶಸ್ತ್ರ ಸಂಘರ್ಷದ ಸಮಯದಲ್ಲಿ ಅಂತಾರಾಷ್ಟ್ರೀಯ ರಕ್ಷಣೆ ನೀಡುವ ಎಲ್ಲಾ ನಿಯಮಗಳು ಮತ್ತು ಒಪ್ಪಂದಗಳನ್ನು ಉಲ್ಲಂಘಿಸುವ ಇಸ್ರೇಲ್‌ನ ಈ ಕೃತ್ಯ ಒಂದು ಬಹಿರಂಗ ಅಪರಾಧ ಎಂದಿದ್ದಾರೆ.

ಪ್ರಧಾನ ಮಂತ್ರಿ ನವಾಫ್ ಸಲಾಮ್ ಅವರು ಈ ದಾಳಿಯನ್ನು “ಅಂತಾರಾಷ್ಟ್ರೀಯ ಮಾನವೀಯ ಕಾನೂನಿನ ಘೋರ ಉಲ್ಲಂಘನೆ” ಎಂದು ಖಂಡಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...