Homeಅಂತರಾಷ್ಟ್ರೀಯಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

- Advertisement -
- Advertisement -

ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಹಿರಿಯ ಸಲಹೆಗಾರ ಸಯ್ಯದ್ ರಾಜಿ ಮೌಸಾವಿ ಅವರನ್ನು ಹತ್ಯೆ ಮಾಡಿದೆ. ಈ ಬೆಳವಣಿಗೆ ಪ್ಯಾಲೆಸ್ತೀನ್‌ -ಇಸ್ರೇಲ್‌ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿ ಉಂಟು ಮಾಡಿದರೆ, ಇನ್ನೊಂದು ಕಡೆ ಗಾಝಾದ ಮೇಲೆ ನಡೆಸಿದಂತೆ ಸಿರಿಯಾ ಮತ್ತು ಲೆಬನಾನ್‌ ಮೇಲೆ ರಾಕೆಟ್ ದಾಳಿ ನಡೆಸಲು ಇಸ್ರೇಲ್‌ ಸಿದ್ದತೆ ನಡೆಸುತ್ತಿದೆ ಎಂದು ಅಮೆರಿಕದ ವರದಿಗಾರ ಬರಾಕ್ ರವಿದ್ ತಮ್ಮ ವರದಿಯಲ್ಲಿ ಇಸ್ರೇಲ್‌ ಅಧಿಕಾರಿಯ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿದ್ದಾರೆ.

ಸಯ್ಯದ್ ರಾಜಿ ಮೌಸಾವಿ IRGCನ ಹಿರಿಯ ಕಮಾಂಡರ್‌ಗಳಲ್ಲಿ ಒಬ್ಬರು. ಸಿರಿಯಾ ಮತ್ತು ಇರಾನ್ ನಡುವಿನ ಮಿಲಿಟರಿ ಮೈತ್ರಿಯನ್ನು ಸಂಘಟಿಸುವ ಜವಾಬ್ದಾರಿಯನ್ನು ಇವರು ನಿರ್ವಹಿಸುತ್ತಿದ್ದರು. ಅವರು 80 ರ ದಶಕದಿಂದಲೂ ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.  ಈ ಮೊದಲು ಕೂಡ ಇಸ್ರೇಲ್‌ ಮೌಸವಿಯ ಹತ್ಯೆಗೆ ಪ್ರಯತ್ನಿಸಿತ್ತು. ಇರಾನ್‌ನಿಂದ ಸಿರಿಯಾಕ್ಕೆ, ಇರಾಕ್‌ನಿಂದ ಸಿರಿಯಾಕ್ಕೆ ಮತ್ತು ಲೆಬನಾನ್‌ನಲ್ಲಿ ಹಿಜ್ಬುಲ್ಲಾದೊಂದಿಗೆ ಶಸ್ತ್ರಾಸ್ತ್ರಗಳ ಜಾಲದ ಜೊತೆಗೆ ಮೌಸವಿಗೆ ಸಂಬಂಧ ಇದೆ ಎಂದು ಇಸ್ರೇಲ್‌ ಆರೋಪವಾಗಿದೆ ಎಂದು ಅಲ್ ಜಜೀರಾ ವರದಿಗಾರ ಅಲಿ ಹಶೆಮ್ ದಕ್ಷಿಣ ಲೆಬನಾನ್‌ನಿಂದ ವರದಿ ಮಾಡಿದ್ದಾರೆ. 2020ರಲ್ಲಿ ಇರಾಕ್‌ ಮೇಲೆ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಕೊಲ್ಲಲ್ಪಟ್ಟ IRGCಯ  ಕುಡ್ಸ್ ಫೋರ್ಸ್‌ನ ಮುಖ್ಯಸ್ಥ ಕಾಸ್ಸೆಮ್ ಸೊಲೈಮಾನಿ ಆಪ್ತತರಲ್ಲಿ ಮೌಸವಿ ಓರ್ವರಾಗಿದ್ದರು.

ಮೌಸವಿ ಅವರು ಡಮಾಸ್ಕಸ್‌ನ ಉಪನಗರದಲ್ಲಿರುವ ಝೈನಾಬಿಯಾ ಜಿಲ್ಲೆಯಲ್ಲಿ ಕೆಲವು ಗಂಟೆಗಳ ಹಿಂದೆ ಝಿಯೋನಿಸ್ಟ್ಗಳ ದಾಳಿಯಲ್ಲಿ ಕೊಲ್ಲಲ್ಪಟ್ಟರು ಎಂದು ಇರಾನ್‌ನ ಅಧಿಕೃತ IRNA ಸುದ್ದಿ ಸಂಸ್ಥೆ ವರದಿ ಮಾಡಿದೆ.

IRGC ಈ ಕುರಿತು ಮಾದ್ಯಮಗಳಿಗೆ ಹೇಳಿಕೆಯನ್ನು ನೀಡಿದ್ದು, ಈ ಅಪರಾಧಕ್ಕೆ ಇಸ್ರೇಲ್ ಖಂಡಿತವಾಗಿಯೂ ಬೆಲೆ ತೆರುತ್ತದೆ ಎಂದು ಹೇಳಿದೆ. ಮೌಸವಿಯ ಹತ್ಯೆ ಬಗ್ಗೆ ಘೋಷಿಸಲು ಇರಾನ್‌ ದೂರದರ್ಶನವು ತನ್ನ ನಿಯಮಿತ ಸುದ್ದಿ ಪ್ರಸಾರವನ್ನು ತಡೆಹಿಡಿದಿತ್ತು. ಮೌಸವಿ ಸಿರಿಯಾದಲ್ಲಿದ್ದ ಅತ್ಯಂತ ಅನುಭವಿ IRGC ಸಲಹೆಗಾರರಲ್ಲಿ ಒಬ್ಬರು ಎಂದು ಮಾದ್ಯಮ ವರದಿಯಲ್ಲಿ ವಿವರಿಸಿದೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ಮೌಸಾವಿಯ ಹತ್ಯೆಗೆ ಸಂತಾಪ ವ್ಯಕ್ತಪಡಿಸಿದ್ದು, ಇದು ಜಿಯೋನಿಸ್ಟ್ ಆಡಳಿತದ ಹತಾಶೆ ಮತ್ತು ದೌರ್ಬಲ್ಯದ ಸಂಕೇತವಾಗಿದೆ, ಕೃತ್ಯಕ್ಕೆ ಇಸ್ರೇಲ್‌ ಖಂಡಿತವಾಗಿಯೂ ಬೆಲೆಯನ್ನು ತೆರುತ್ತದೆ ಎಂದು ಹೇಳಿದ್ದಾರೆ. ಈ ಘಟನೆ ಬಗ್ಗೆ ಇಸ್ರೇಲ್‌ನ ಮಿಲಿಟರಿಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಆದರೆ US ಸುದ್ದಿ ಸೈಟ್ ಆಕ್ಸಿಯೋಸ್‌ನ ವರದಿಗಾರ ಬರಾಕ್ ರವಿದ್ ಅವರು ಹೆಸರಿಸದ ಇಸ್ರೇಲ್‌ ಅಧಿಕಾರಿಯ ಹೇಳಿಕೆಯನ್ನು ಉಲ್ಲೇಖಿಸಿ ಇಸ್ರೇಲ್ ಸಿರಿಯಾ ಮತ್ತು ಲೆಬನಾನ್‌ ಮೇಲೆ ರಾಕೆಟ್ ದಾಳಿ ನಡೆಸಿ ಪ್ರತೀಕಾರಕ್ಕೆ ತಯಾರಿ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಇಸ್ರೇಲ್‌ ಸಿರಿಯಾದ ಮೇಲೆ ದಾಳಿ ನಡೆಸಿ ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ ಇಬ್ಬರು IRGC ಸದಸ್ಯರನ್ನು ಹತ್ಯೆ ಮಾಡಿದೆ ಎಂದು ಇರಾನ್ ಹೇಳಿತ್ತು. ಗಾಝಾ ಮೇಲೆ ಕಳೆದ ಮೂರು ತಿಂಗಳಿನಿಂದ ಬಾಂಬ್‌ ದಾಳಿ ನಡೆಸುತ್ತಿರುವ ಇಸ್ರೇಲ್‌ ಹತ್ಯಾಕಾಂಡವನ್ನು ಇರಾನ್ ವಿರೋಧವನ್ನು ವ್ಯಕ್ತಪಡಿಸುತ್ತಲೇ ಬಂದಿದೆ. ಇತ್ತೀಚೆಗೆ ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ, ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚುವುದಾಗಿ ಇರಾನ್‌ ಬೆದರಿಸಿತ್ತು. ಆ ಬಳಿಕ ಗುಜರಾತ್ ಪೋರಬಂದರ್‌ ಕರವಾಳಿಯ ಹಿಂದೂ ಮಹಾಸಾಗರದಲ್ಲಿ ರಾಸಾಯನಿಕ ಟ್ಯಾಂಕರ್ ಮೇಲೆ ಇರಾನ್‌ ಡ್ರೋನ್‌ ದಾಳಿ ನಡೆಸಿದೆ ಎಂಬ ಯುಎಸ್  ಆರೋಪಿಸಿತ್ತು. ಆದರೆ ಈ ಆರೋಪವನ್ನು ಇರಾನ್‌ ಆಧಾರ ರಹಿತ ಎಂದು ಹೇಳಿತ್ತು. ಈ ಮಧ್ಯೆಯೇ ಇರಾನ್‌ನ ಕಮಾಂಡರ್‌ ಹತ್ಯೆ ನಡೆದಿದ್ದು, ಇರಾನ್‌ ಪ್ರತಿಕಾರ ಮಾಡುವುದಾಗಿ ಹೇಳಿಕೊಂಡಿದೆ.

ಇದನ್ನು ಓದಿ: ಡ್ರೋನ್‌ ದಾಳಿ: ಅಮೆರಿಕದ ಆರೋಪವನ್ನು ‘ಆಧಾರ ರಹಿತ’ ಎಂದ ಇರಾನ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...