Homeಅಂತರಾಷ್ಟ್ರೀಯಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

- Advertisement -
- Advertisement -

ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಹಿರಿಯ ಸಲಹೆಗಾರ ಸಯ್ಯದ್ ರಾಜಿ ಮೌಸಾವಿ ಅವರನ್ನು ಹತ್ಯೆ ಮಾಡಿದೆ. ಈ ಬೆಳವಣಿಗೆ ಪ್ಯಾಲೆಸ್ತೀನ್‌ -ಇಸ್ರೇಲ್‌ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿ ಉಂಟು ಮಾಡಿದರೆ, ಇನ್ನೊಂದು ಕಡೆ ಗಾಝಾದ ಮೇಲೆ ನಡೆಸಿದಂತೆ ಸಿರಿಯಾ ಮತ್ತು ಲೆಬನಾನ್‌ ಮೇಲೆ ರಾಕೆಟ್ ದಾಳಿ ನಡೆಸಲು ಇಸ್ರೇಲ್‌ ಸಿದ್ದತೆ ನಡೆಸುತ್ತಿದೆ ಎಂದು ಅಮೆರಿಕದ ವರದಿಗಾರ ಬರಾಕ್ ರವಿದ್ ತಮ್ಮ ವರದಿಯಲ್ಲಿ ಇಸ್ರೇಲ್‌ ಅಧಿಕಾರಿಯ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿದ್ದಾರೆ.

ಸಯ್ಯದ್ ರಾಜಿ ಮೌಸಾವಿ IRGCನ ಹಿರಿಯ ಕಮಾಂಡರ್‌ಗಳಲ್ಲಿ ಒಬ್ಬರು. ಸಿರಿಯಾ ಮತ್ತು ಇರಾನ್ ನಡುವಿನ ಮಿಲಿಟರಿ ಮೈತ್ರಿಯನ್ನು ಸಂಘಟಿಸುವ ಜವಾಬ್ದಾರಿಯನ್ನು ಇವರು ನಿರ್ವಹಿಸುತ್ತಿದ್ದರು. ಅವರು 80 ರ ದಶಕದಿಂದಲೂ ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.  ಈ ಮೊದಲು ಕೂಡ ಇಸ್ರೇಲ್‌ ಮೌಸವಿಯ ಹತ್ಯೆಗೆ ಪ್ರಯತ್ನಿಸಿತ್ತು. ಇರಾನ್‌ನಿಂದ ಸಿರಿಯಾಕ್ಕೆ, ಇರಾಕ್‌ನಿಂದ ಸಿರಿಯಾಕ್ಕೆ ಮತ್ತು ಲೆಬನಾನ್‌ನಲ್ಲಿ ಹಿಜ್ಬುಲ್ಲಾದೊಂದಿಗೆ ಶಸ್ತ್ರಾಸ್ತ್ರಗಳ ಜಾಲದ ಜೊತೆಗೆ ಮೌಸವಿಗೆ ಸಂಬಂಧ ಇದೆ ಎಂದು ಇಸ್ರೇಲ್‌ ಆರೋಪವಾಗಿದೆ ಎಂದು ಅಲ್ ಜಜೀರಾ ವರದಿಗಾರ ಅಲಿ ಹಶೆಮ್ ದಕ್ಷಿಣ ಲೆಬನಾನ್‌ನಿಂದ ವರದಿ ಮಾಡಿದ್ದಾರೆ. 2020ರಲ್ಲಿ ಇರಾಕ್‌ ಮೇಲೆ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಕೊಲ್ಲಲ್ಪಟ್ಟ IRGCಯ  ಕುಡ್ಸ್ ಫೋರ್ಸ್‌ನ ಮುಖ್ಯಸ್ಥ ಕಾಸ್ಸೆಮ್ ಸೊಲೈಮಾನಿ ಆಪ್ತತರಲ್ಲಿ ಮೌಸವಿ ಓರ್ವರಾಗಿದ್ದರು.

ಮೌಸವಿ ಅವರು ಡಮಾಸ್ಕಸ್‌ನ ಉಪನಗರದಲ್ಲಿರುವ ಝೈನಾಬಿಯಾ ಜಿಲ್ಲೆಯಲ್ಲಿ ಕೆಲವು ಗಂಟೆಗಳ ಹಿಂದೆ ಝಿಯೋನಿಸ್ಟ್ಗಳ ದಾಳಿಯಲ್ಲಿ ಕೊಲ್ಲಲ್ಪಟ್ಟರು ಎಂದು ಇರಾನ್‌ನ ಅಧಿಕೃತ IRNA ಸುದ್ದಿ ಸಂಸ್ಥೆ ವರದಿ ಮಾಡಿದೆ.

IRGC ಈ ಕುರಿತು ಮಾದ್ಯಮಗಳಿಗೆ ಹೇಳಿಕೆಯನ್ನು ನೀಡಿದ್ದು, ಈ ಅಪರಾಧಕ್ಕೆ ಇಸ್ರೇಲ್ ಖಂಡಿತವಾಗಿಯೂ ಬೆಲೆ ತೆರುತ್ತದೆ ಎಂದು ಹೇಳಿದೆ. ಮೌಸವಿಯ ಹತ್ಯೆ ಬಗ್ಗೆ ಘೋಷಿಸಲು ಇರಾನ್‌ ದೂರದರ್ಶನವು ತನ್ನ ನಿಯಮಿತ ಸುದ್ದಿ ಪ್ರಸಾರವನ್ನು ತಡೆಹಿಡಿದಿತ್ತು. ಮೌಸವಿ ಸಿರಿಯಾದಲ್ಲಿದ್ದ ಅತ್ಯಂತ ಅನುಭವಿ IRGC ಸಲಹೆಗಾರರಲ್ಲಿ ಒಬ್ಬರು ಎಂದು ಮಾದ್ಯಮ ವರದಿಯಲ್ಲಿ ವಿವರಿಸಿದೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ಮೌಸಾವಿಯ ಹತ್ಯೆಗೆ ಸಂತಾಪ ವ್ಯಕ್ತಪಡಿಸಿದ್ದು, ಇದು ಜಿಯೋನಿಸ್ಟ್ ಆಡಳಿತದ ಹತಾಶೆ ಮತ್ತು ದೌರ್ಬಲ್ಯದ ಸಂಕೇತವಾಗಿದೆ, ಕೃತ್ಯಕ್ಕೆ ಇಸ್ರೇಲ್‌ ಖಂಡಿತವಾಗಿಯೂ ಬೆಲೆಯನ್ನು ತೆರುತ್ತದೆ ಎಂದು ಹೇಳಿದ್ದಾರೆ. ಈ ಘಟನೆ ಬಗ್ಗೆ ಇಸ್ರೇಲ್‌ನ ಮಿಲಿಟರಿಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಆದರೆ US ಸುದ್ದಿ ಸೈಟ್ ಆಕ್ಸಿಯೋಸ್‌ನ ವರದಿಗಾರ ಬರಾಕ್ ರವಿದ್ ಅವರು ಹೆಸರಿಸದ ಇಸ್ರೇಲ್‌ ಅಧಿಕಾರಿಯ ಹೇಳಿಕೆಯನ್ನು ಉಲ್ಲೇಖಿಸಿ ಇಸ್ರೇಲ್ ಸಿರಿಯಾ ಮತ್ತು ಲೆಬನಾನ್‌ ಮೇಲೆ ರಾಕೆಟ್ ದಾಳಿ ನಡೆಸಿ ಪ್ರತೀಕಾರಕ್ಕೆ ತಯಾರಿ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಇಸ್ರೇಲ್‌ ಸಿರಿಯಾದ ಮೇಲೆ ದಾಳಿ ನಡೆಸಿ ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ ಇಬ್ಬರು IRGC ಸದಸ್ಯರನ್ನು ಹತ್ಯೆ ಮಾಡಿದೆ ಎಂದು ಇರಾನ್ ಹೇಳಿತ್ತು. ಗಾಝಾ ಮೇಲೆ ಕಳೆದ ಮೂರು ತಿಂಗಳಿನಿಂದ ಬಾಂಬ್‌ ದಾಳಿ ನಡೆಸುತ್ತಿರುವ ಇಸ್ರೇಲ್‌ ಹತ್ಯಾಕಾಂಡವನ್ನು ಇರಾನ್ ವಿರೋಧವನ್ನು ವ್ಯಕ್ತಪಡಿಸುತ್ತಲೇ ಬಂದಿದೆ. ಇತ್ತೀಚೆಗೆ ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ, ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚುವುದಾಗಿ ಇರಾನ್‌ ಬೆದರಿಸಿತ್ತು. ಆ ಬಳಿಕ ಗುಜರಾತ್ ಪೋರಬಂದರ್‌ ಕರವಾಳಿಯ ಹಿಂದೂ ಮಹಾಸಾಗರದಲ್ಲಿ ರಾಸಾಯನಿಕ ಟ್ಯಾಂಕರ್ ಮೇಲೆ ಇರಾನ್‌ ಡ್ರೋನ್‌ ದಾಳಿ ನಡೆಸಿದೆ ಎಂಬ ಯುಎಸ್  ಆರೋಪಿಸಿತ್ತು. ಆದರೆ ಈ ಆರೋಪವನ್ನು ಇರಾನ್‌ ಆಧಾರ ರಹಿತ ಎಂದು ಹೇಳಿತ್ತು. ಈ ಮಧ್ಯೆಯೇ ಇರಾನ್‌ನ ಕಮಾಂಡರ್‌ ಹತ್ಯೆ ನಡೆದಿದ್ದು, ಇರಾನ್‌ ಪ್ರತಿಕಾರ ಮಾಡುವುದಾಗಿ ಹೇಳಿಕೊಂಡಿದೆ.

ಇದನ್ನು ಓದಿ: ಡ್ರೋನ್‌ ದಾಳಿ: ಅಮೆರಿಕದ ಆರೋಪವನ್ನು ‘ಆಧಾರ ರಹಿತ’ ಎಂದ ಇರಾನ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....