Homeಅಂತರಾಷ್ಟ್ರೀಯಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

- Advertisement -
- Advertisement -

ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಹಿರಿಯ ಸಲಹೆಗಾರ ಸಯ್ಯದ್ ರಾಜಿ ಮೌಸಾವಿ ಅವರನ್ನು ಹತ್ಯೆ ಮಾಡಿದೆ. ಈ ಬೆಳವಣಿಗೆ ಪ್ಯಾಲೆಸ್ತೀನ್‌ -ಇಸ್ರೇಲ್‌ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿ ಉಂಟು ಮಾಡಿದರೆ, ಇನ್ನೊಂದು ಕಡೆ ಗಾಝಾದ ಮೇಲೆ ನಡೆಸಿದಂತೆ ಸಿರಿಯಾ ಮತ್ತು ಲೆಬನಾನ್‌ ಮೇಲೆ ರಾಕೆಟ್ ದಾಳಿ ನಡೆಸಲು ಇಸ್ರೇಲ್‌ ಸಿದ್ದತೆ ನಡೆಸುತ್ತಿದೆ ಎಂದು ಅಮೆರಿಕದ ವರದಿಗಾರ ಬರಾಕ್ ರವಿದ್ ತಮ್ಮ ವರದಿಯಲ್ಲಿ ಇಸ್ರೇಲ್‌ ಅಧಿಕಾರಿಯ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿದ್ದಾರೆ.

ಸಯ್ಯದ್ ರಾಜಿ ಮೌಸಾವಿ IRGCನ ಹಿರಿಯ ಕಮಾಂಡರ್‌ಗಳಲ್ಲಿ ಒಬ್ಬರು. ಸಿರಿಯಾ ಮತ್ತು ಇರಾನ್ ನಡುವಿನ ಮಿಲಿಟರಿ ಮೈತ್ರಿಯನ್ನು ಸಂಘಟಿಸುವ ಜವಾಬ್ದಾರಿಯನ್ನು ಇವರು ನಿರ್ವಹಿಸುತ್ತಿದ್ದರು. ಅವರು 80 ರ ದಶಕದಿಂದಲೂ ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.  ಈ ಮೊದಲು ಕೂಡ ಇಸ್ರೇಲ್‌ ಮೌಸವಿಯ ಹತ್ಯೆಗೆ ಪ್ರಯತ್ನಿಸಿತ್ತು. ಇರಾನ್‌ನಿಂದ ಸಿರಿಯಾಕ್ಕೆ, ಇರಾಕ್‌ನಿಂದ ಸಿರಿಯಾಕ್ಕೆ ಮತ್ತು ಲೆಬನಾನ್‌ನಲ್ಲಿ ಹಿಜ್ಬುಲ್ಲಾದೊಂದಿಗೆ ಶಸ್ತ್ರಾಸ್ತ್ರಗಳ ಜಾಲದ ಜೊತೆಗೆ ಮೌಸವಿಗೆ ಸಂಬಂಧ ಇದೆ ಎಂದು ಇಸ್ರೇಲ್‌ ಆರೋಪವಾಗಿದೆ ಎಂದು ಅಲ್ ಜಜೀರಾ ವರದಿಗಾರ ಅಲಿ ಹಶೆಮ್ ದಕ್ಷಿಣ ಲೆಬನಾನ್‌ನಿಂದ ವರದಿ ಮಾಡಿದ್ದಾರೆ. 2020ರಲ್ಲಿ ಇರಾಕ್‌ ಮೇಲೆ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಕೊಲ್ಲಲ್ಪಟ್ಟ IRGCಯ  ಕುಡ್ಸ್ ಫೋರ್ಸ್‌ನ ಮುಖ್ಯಸ್ಥ ಕಾಸ್ಸೆಮ್ ಸೊಲೈಮಾನಿ ಆಪ್ತತರಲ್ಲಿ ಮೌಸವಿ ಓರ್ವರಾಗಿದ್ದರು.

ಮೌಸವಿ ಅವರು ಡಮಾಸ್ಕಸ್‌ನ ಉಪನಗರದಲ್ಲಿರುವ ಝೈನಾಬಿಯಾ ಜಿಲ್ಲೆಯಲ್ಲಿ ಕೆಲವು ಗಂಟೆಗಳ ಹಿಂದೆ ಝಿಯೋನಿಸ್ಟ್ಗಳ ದಾಳಿಯಲ್ಲಿ ಕೊಲ್ಲಲ್ಪಟ್ಟರು ಎಂದು ಇರಾನ್‌ನ ಅಧಿಕೃತ IRNA ಸುದ್ದಿ ಸಂಸ್ಥೆ ವರದಿ ಮಾಡಿದೆ.

IRGC ಈ ಕುರಿತು ಮಾದ್ಯಮಗಳಿಗೆ ಹೇಳಿಕೆಯನ್ನು ನೀಡಿದ್ದು, ಈ ಅಪರಾಧಕ್ಕೆ ಇಸ್ರೇಲ್ ಖಂಡಿತವಾಗಿಯೂ ಬೆಲೆ ತೆರುತ್ತದೆ ಎಂದು ಹೇಳಿದೆ. ಮೌಸವಿಯ ಹತ್ಯೆ ಬಗ್ಗೆ ಘೋಷಿಸಲು ಇರಾನ್‌ ದೂರದರ್ಶನವು ತನ್ನ ನಿಯಮಿತ ಸುದ್ದಿ ಪ್ರಸಾರವನ್ನು ತಡೆಹಿಡಿದಿತ್ತು. ಮೌಸವಿ ಸಿರಿಯಾದಲ್ಲಿದ್ದ ಅತ್ಯಂತ ಅನುಭವಿ IRGC ಸಲಹೆಗಾರರಲ್ಲಿ ಒಬ್ಬರು ಎಂದು ಮಾದ್ಯಮ ವರದಿಯಲ್ಲಿ ವಿವರಿಸಿದೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ಮೌಸಾವಿಯ ಹತ್ಯೆಗೆ ಸಂತಾಪ ವ್ಯಕ್ತಪಡಿಸಿದ್ದು, ಇದು ಜಿಯೋನಿಸ್ಟ್ ಆಡಳಿತದ ಹತಾಶೆ ಮತ್ತು ದೌರ್ಬಲ್ಯದ ಸಂಕೇತವಾಗಿದೆ, ಕೃತ್ಯಕ್ಕೆ ಇಸ್ರೇಲ್‌ ಖಂಡಿತವಾಗಿಯೂ ಬೆಲೆಯನ್ನು ತೆರುತ್ತದೆ ಎಂದು ಹೇಳಿದ್ದಾರೆ. ಈ ಘಟನೆ ಬಗ್ಗೆ ಇಸ್ರೇಲ್‌ನ ಮಿಲಿಟರಿಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಆದರೆ US ಸುದ್ದಿ ಸೈಟ್ ಆಕ್ಸಿಯೋಸ್‌ನ ವರದಿಗಾರ ಬರಾಕ್ ರವಿದ್ ಅವರು ಹೆಸರಿಸದ ಇಸ್ರೇಲ್‌ ಅಧಿಕಾರಿಯ ಹೇಳಿಕೆಯನ್ನು ಉಲ್ಲೇಖಿಸಿ ಇಸ್ರೇಲ್ ಸಿರಿಯಾ ಮತ್ತು ಲೆಬನಾನ್‌ ಮೇಲೆ ರಾಕೆಟ್ ದಾಳಿ ನಡೆಸಿ ಪ್ರತೀಕಾರಕ್ಕೆ ತಯಾರಿ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಇಸ್ರೇಲ್‌ ಸಿರಿಯಾದ ಮೇಲೆ ದಾಳಿ ನಡೆಸಿ ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ ಇಬ್ಬರು IRGC ಸದಸ್ಯರನ್ನು ಹತ್ಯೆ ಮಾಡಿದೆ ಎಂದು ಇರಾನ್ ಹೇಳಿತ್ತು. ಗಾಝಾ ಮೇಲೆ ಕಳೆದ ಮೂರು ತಿಂಗಳಿನಿಂದ ಬಾಂಬ್‌ ದಾಳಿ ನಡೆಸುತ್ತಿರುವ ಇಸ್ರೇಲ್‌ ಹತ್ಯಾಕಾಂಡವನ್ನು ಇರಾನ್ ವಿರೋಧವನ್ನು ವ್ಯಕ್ತಪಡಿಸುತ್ತಲೇ ಬಂದಿದೆ. ಇತ್ತೀಚೆಗೆ ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ, ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚುವುದಾಗಿ ಇರಾನ್‌ ಬೆದರಿಸಿತ್ತು. ಆ ಬಳಿಕ ಗುಜರಾತ್ ಪೋರಬಂದರ್‌ ಕರವಾಳಿಯ ಹಿಂದೂ ಮಹಾಸಾಗರದಲ್ಲಿ ರಾಸಾಯನಿಕ ಟ್ಯಾಂಕರ್ ಮೇಲೆ ಇರಾನ್‌ ಡ್ರೋನ್‌ ದಾಳಿ ನಡೆಸಿದೆ ಎಂಬ ಯುಎಸ್  ಆರೋಪಿಸಿತ್ತು. ಆದರೆ ಈ ಆರೋಪವನ್ನು ಇರಾನ್‌ ಆಧಾರ ರಹಿತ ಎಂದು ಹೇಳಿತ್ತು. ಈ ಮಧ್ಯೆಯೇ ಇರಾನ್‌ನ ಕಮಾಂಡರ್‌ ಹತ್ಯೆ ನಡೆದಿದ್ದು, ಇರಾನ್‌ ಪ್ರತಿಕಾರ ಮಾಡುವುದಾಗಿ ಹೇಳಿಕೊಂಡಿದೆ.

ಇದನ್ನು ಓದಿ: ಡ್ರೋನ್‌ ದಾಳಿ: ಅಮೆರಿಕದ ಆರೋಪವನ್ನು ‘ಆಧಾರ ರಹಿತ’ ಎಂದ ಇರಾನ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...