Homeಅಂತರಾಷ್ಟ್ರೀಯಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

- Advertisement -
- Advertisement -

ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಹಿರಿಯ ಸಲಹೆಗಾರ ಸಯ್ಯದ್ ರಾಜಿ ಮೌಸಾವಿ ಅವರನ್ನು ಹತ್ಯೆ ಮಾಡಿದೆ. ಈ ಬೆಳವಣಿಗೆ ಪ್ಯಾಲೆಸ್ತೀನ್‌ -ಇಸ್ರೇಲ್‌ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿ ಉಂಟು ಮಾಡಿದರೆ, ಇನ್ನೊಂದು ಕಡೆ ಗಾಝಾದ ಮೇಲೆ ನಡೆಸಿದಂತೆ ಸಿರಿಯಾ ಮತ್ತು ಲೆಬನಾನ್‌ ಮೇಲೆ ರಾಕೆಟ್ ದಾಳಿ ನಡೆಸಲು ಇಸ್ರೇಲ್‌ ಸಿದ್ದತೆ ನಡೆಸುತ್ತಿದೆ ಎಂದು ಅಮೆರಿಕದ ವರದಿಗಾರ ಬರಾಕ್ ರವಿದ್ ತಮ್ಮ ವರದಿಯಲ್ಲಿ ಇಸ್ರೇಲ್‌ ಅಧಿಕಾರಿಯ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿದ್ದಾರೆ.

ಸಯ್ಯದ್ ರಾಜಿ ಮೌಸಾವಿ IRGCನ ಹಿರಿಯ ಕಮಾಂಡರ್‌ಗಳಲ್ಲಿ ಒಬ್ಬರು. ಸಿರಿಯಾ ಮತ್ತು ಇರಾನ್ ನಡುವಿನ ಮಿಲಿಟರಿ ಮೈತ್ರಿಯನ್ನು ಸಂಘಟಿಸುವ ಜವಾಬ್ದಾರಿಯನ್ನು ಇವರು ನಿರ್ವಹಿಸುತ್ತಿದ್ದರು. ಅವರು 80 ರ ದಶಕದಿಂದಲೂ ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.  ಈ ಮೊದಲು ಕೂಡ ಇಸ್ರೇಲ್‌ ಮೌಸವಿಯ ಹತ್ಯೆಗೆ ಪ್ರಯತ್ನಿಸಿತ್ತು. ಇರಾನ್‌ನಿಂದ ಸಿರಿಯಾಕ್ಕೆ, ಇರಾಕ್‌ನಿಂದ ಸಿರಿಯಾಕ್ಕೆ ಮತ್ತು ಲೆಬನಾನ್‌ನಲ್ಲಿ ಹಿಜ್ಬುಲ್ಲಾದೊಂದಿಗೆ ಶಸ್ತ್ರಾಸ್ತ್ರಗಳ ಜಾಲದ ಜೊತೆಗೆ ಮೌಸವಿಗೆ ಸಂಬಂಧ ಇದೆ ಎಂದು ಇಸ್ರೇಲ್‌ ಆರೋಪವಾಗಿದೆ ಎಂದು ಅಲ್ ಜಜೀರಾ ವರದಿಗಾರ ಅಲಿ ಹಶೆಮ್ ದಕ್ಷಿಣ ಲೆಬನಾನ್‌ನಿಂದ ವರದಿ ಮಾಡಿದ್ದಾರೆ. 2020ರಲ್ಲಿ ಇರಾಕ್‌ ಮೇಲೆ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಕೊಲ್ಲಲ್ಪಟ್ಟ IRGCಯ  ಕುಡ್ಸ್ ಫೋರ್ಸ್‌ನ ಮುಖ್ಯಸ್ಥ ಕಾಸ್ಸೆಮ್ ಸೊಲೈಮಾನಿ ಆಪ್ತತರಲ್ಲಿ ಮೌಸವಿ ಓರ್ವರಾಗಿದ್ದರು.

ಮೌಸವಿ ಅವರು ಡಮಾಸ್ಕಸ್‌ನ ಉಪನಗರದಲ್ಲಿರುವ ಝೈನಾಬಿಯಾ ಜಿಲ್ಲೆಯಲ್ಲಿ ಕೆಲವು ಗಂಟೆಗಳ ಹಿಂದೆ ಝಿಯೋನಿಸ್ಟ್ಗಳ ದಾಳಿಯಲ್ಲಿ ಕೊಲ್ಲಲ್ಪಟ್ಟರು ಎಂದು ಇರಾನ್‌ನ ಅಧಿಕೃತ IRNA ಸುದ್ದಿ ಸಂಸ್ಥೆ ವರದಿ ಮಾಡಿದೆ.

IRGC ಈ ಕುರಿತು ಮಾದ್ಯಮಗಳಿಗೆ ಹೇಳಿಕೆಯನ್ನು ನೀಡಿದ್ದು, ಈ ಅಪರಾಧಕ್ಕೆ ಇಸ್ರೇಲ್ ಖಂಡಿತವಾಗಿಯೂ ಬೆಲೆ ತೆರುತ್ತದೆ ಎಂದು ಹೇಳಿದೆ. ಮೌಸವಿಯ ಹತ್ಯೆ ಬಗ್ಗೆ ಘೋಷಿಸಲು ಇರಾನ್‌ ದೂರದರ್ಶನವು ತನ್ನ ನಿಯಮಿತ ಸುದ್ದಿ ಪ್ರಸಾರವನ್ನು ತಡೆಹಿಡಿದಿತ್ತು. ಮೌಸವಿ ಸಿರಿಯಾದಲ್ಲಿದ್ದ ಅತ್ಯಂತ ಅನುಭವಿ IRGC ಸಲಹೆಗಾರರಲ್ಲಿ ಒಬ್ಬರು ಎಂದು ಮಾದ್ಯಮ ವರದಿಯಲ್ಲಿ ವಿವರಿಸಿದೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ಮೌಸಾವಿಯ ಹತ್ಯೆಗೆ ಸಂತಾಪ ವ್ಯಕ್ತಪಡಿಸಿದ್ದು, ಇದು ಜಿಯೋನಿಸ್ಟ್ ಆಡಳಿತದ ಹತಾಶೆ ಮತ್ತು ದೌರ್ಬಲ್ಯದ ಸಂಕೇತವಾಗಿದೆ, ಕೃತ್ಯಕ್ಕೆ ಇಸ್ರೇಲ್‌ ಖಂಡಿತವಾಗಿಯೂ ಬೆಲೆಯನ್ನು ತೆರುತ್ತದೆ ಎಂದು ಹೇಳಿದ್ದಾರೆ. ಈ ಘಟನೆ ಬಗ್ಗೆ ಇಸ್ರೇಲ್‌ನ ಮಿಲಿಟರಿಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಆದರೆ US ಸುದ್ದಿ ಸೈಟ್ ಆಕ್ಸಿಯೋಸ್‌ನ ವರದಿಗಾರ ಬರಾಕ್ ರವಿದ್ ಅವರು ಹೆಸರಿಸದ ಇಸ್ರೇಲ್‌ ಅಧಿಕಾರಿಯ ಹೇಳಿಕೆಯನ್ನು ಉಲ್ಲೇಖಿಸಿ ಇಸ್ರೇಲ್ ಸಿರಿಯಾ ಮತ್ತು ಲೆಬನಾನ್‌ ಮೇಲೆ ರಾಕೆಟ್ ದಾಳಿ ನಡೆಸಿ ಪ್ರತೀಕಾರಕ್ಕೆ ತಯಾರಿ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಇಸ್ರೇಲ್‌ ಸಿರಿಯಾದ ಮೇಲೆ ದಾಳಿ ನಡೆಸಿ ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ ಇಬ್ಬರು IRGC ಸದಸ್ಯರನ್ನು ಹತ್ಯೆ ಮಾಡಿದೆ ಎಂದು ಇರಾನ್ ಹೇಳಿತ್ತು. ಗಾಝಾ ಮೇಲೆ ಕಳೆದ ಮೂರು ತಿಂಗಳಿನಿಂದ ಬಾಂಬ್‌ ದಾಳಿ ನಡೆಸುತ್ತಿರುವ ಇಸ್ರೇಲ್‌ ಹತ್ಯಾಕಾಂಡವನ್ನು ಇರಾನ್ ವಿರೋಧವನ್ನು ವ್ಯಕ್ತಪಡಿಸುತ್ತಲೇ ಬಂದಿದೆ. ಇತ್ತೀಚೆಗೆ ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ, ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚುವುದಾಗಿ ಇರಾನ್‌ ಬೆದರಿಸಿತ್ತು. ಆ ಬಳಿಕ ಗುಜರಾತ್ ಪೋರಬಂದರ್‌ ಕರವಾಳಿಯ ಹಿಂದೂ ಮಹಾಸಾಗರದಲ್ಲಿ ರಾಸಾಯನಿಕ ಟ್ಯಾಂಕರ್ ಮೇಲೆ ಇರಾನ್‌ ಡ್ರೋನ್‌ ದಾಳಿ ನಡೆಸಿದೆ ಎಂಬ ಯುಎಸ್  ಆರೋಪಿಸಿತ್ತು. ಆದರೆ ಈ ಆರೋಪವನ್ನು ಇರಾನ್‌ ಆಧಾರ ರಹಿತ ಎಂದು ಹೇಳಿತ್ತು. ಈ ಮಧ್ಯೆಯೇ ಇರಾನ್‌ನ ಕಮಾಂಡರ್‌ ಹತ್ಯೆ ನಡೆದಿದ್ದು, ಇರಾನ್‌ ಪ್ರತಿಕಾರ ಮಾಡುವುದಾಗಿ ಹೇಳಿಕೊಂಡಿದೆ.

ಇದನ್ನು ಓದಿ: ಡ್ರೋನ್‌ ದಾಳಿ: ಅಮೆರಿಕದ ಆರೋಪವನ್ನು ‘ಆಧಾರ ರಹಿತ’ ಎಂದ ಇರಾನ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...