Homeಅಂತರಾಷ್ಟ್ರೀಯಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

- Advertisement -
- Advertisement -

ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಹಿರಿಯ ಸಲಹೆಗಾರ ಸಯ್ಯದ್ ರಾಜಿ ಮೌಸಾವಿ ಅವರನ್ನು ಹತ್ಯೆ ಮಾಡಿದೆ. ಈ ಬೆಳವಣಿಗೆ ಪ್ಯಾಲೆಸ್ತೀನ್‌ -ಇಸ್ರೇಲ್‌ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿ ಉಂಟು ಮಾಡಿದರೆ, ಇನ್ನೊಂದು ಕಡೆ ಗಾಝಾದ ಮೇಲೆ ನಡೆಸಿದಂತೆ ಸಿರಿಯಾ ಮತ್ತು ಲೆಬನಾನ್‌ ಮೇಲೆ ರಾಕೆಟ್ ದಾಳಿ ನಡೆಸಲು ಇಸ್ರೇಲ್‌ ಸಿದ್ದತೆ ನಡೆಸುತ್ತಿದೆ ಎಂದು ಅಮೆರಿಕದ ವರದಿಗಾರ ಬರಾಕ್ ರವಿದ್ ತಮ್ಮ ವರದಿಯಲ್ಲಿ ಇಸ್ರೇಲ್‌ ಅಧಿಕಾರಿಯ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿದ್ದಾರೆ.

ಸಯ್ಯದ್ ರಾಜಿ ಮೌಸಾವಿ IRGCನ ಹಿರಿಯ ಕಮಾಂಡರ್‌ಗಳಲ್ಲಿ ಒಬ್ಬರು. ಸಿರಿಯಾ ಮತ್ತು ಇರಾನ್ ನಡುವಿನ ಮಿಲಿಟರಿ ಮೈತ್ರಿಯನ್ನು ಸಂಘಟಿಸುವ ಜವಾಬ್ದಾರಿಯನ್ನು ಇವರು ನಿರ್ವಹಿಸುತ್ತಿದ್ದರು. ಅವರು 80 ರ ದಶಕದಿಂದಲೂ ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.  ಈ ಮೊದಲು ಕೂಡ ಇಸ್ರೇಲ್‌ ಮೌಸವಿಯ ಹತ್ಯೆಗೆ ಪ್ರಯತ್ನಿಸಿತ್ತು. ಇರಾನ್‌ನಿಂದ ಸಿರಿಯಾಕ್ಕೆ, ಇರಾಕ್‌ನಿಂದ ಸಿರಿಯಾಕ್ಕೆ ಮತ್ತು ಲೆಬನಾನ್‌ನಲ್ಲಿ ಹಿಜ್ಬುಲ್ಲಾದೊಂದಿಗೆ ಶಸ್ತ್ರಾಸ್ತ್ರಗಳ ಜಾಲದ ಜೊತೆಗೆ ಮೌಸವಿಗೆ ಸಂಬಂಧ ಇದೆ ಎಂದು ಇಸ್ರೇಲ್‌ ಆರೋಪವಾಗಿದೆ ಎಂದು ಅಲ್ ಜಜೀರಾ ವರದಿಗಾರ ಅಲಿ ಹಶೆಮ್ ದಕ್ಷಿಣ ಲೆಬನಾನ್‌ನಿಂದ ವರದಿ ಮಾಡಿದ್ದಾರೆ. 2020ರಲ್ಲಿ ಇರಾಕ್‌ ಮೇಲೆ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಕೊಲ್ಲಲ್ಪಟ್ಟ IRGCಯ  ಕುಡ್ಸ್ ಫೋರ್ಸ್‌ನ ಮುಖ್ಯಸ್ಥ ಕಾಸ್ಸೆಮ್ ಸೊಲೈಮಾನಿ ಆಪ್ತತರಲ್ಲಿ ಮೌಸವಿ ಓರ್ವರಾಗಿದ್ದರು.

ಮೌಸವಿ ಅವರು ಡಮಾಸ್ಕಸ್‌ನ ಉಪನಗರದಲ್ಲಿರುವ ಝೈನಾಬಿಯಾ ಜಿಲ್ಲೆಯಲ್ಲಿ ಕೆಲವು ಗಂಟೆಗಳ ಹಿಂದೆ ಝಿಯೋನಿಸ್ಟ್ಗಳ ದಾಳಿಯಲ್ಲಿ ಕೊಲ್ಲಲ್ಪಟ್ಟರು ಎಂದು ಇರಾನ್‌ನ ಅಧಿಕೃತ IRNA ಸುದ್ದಿ ಸಂಸ್ಥೆ ವರದಿ ಮಾಡಿದೆ.

IRGC ಈ ಕುರಿತು ಮಾದ್ಯಮಗಳಿಗೆ ಹೇಳಿಕೆಯನ್ನು ನೀಡಿದ್ದು, ಈ ಅಪರಾಧಕ್ಕೆ ಇಸ್ರೇಲ್ ಖಂಡಿತವಾಗಿಯೂ ಬೆಲೆ ತೆರುತ್ತದೆ ಎಂದು ಹೇಳಿದೆ. ಮೌಸವಿಯ ಹತ್ಯೆ ಬಗ್ಗೆ ಘೋಷಿಸಲು ಇರಾನ್‌ ದೂರದರ್ಶನವು ತನ್ನ ನಿಯಮಿತ ಸುದ್ದಿ ಪ್ರಸಾರವನ್ನು ತಡೆಹಿಡಿದಿತ್ತು. ಮೌಸವಿ ಸಿರಿಯಾದಲ್ಲಿದ್ದ ಅತ್ಯಂತ ಅನುಭವಿ IRGC ಸಲಹೆಗಾರರಲ್ಲಿ ಒಬ್ಬರು ಎಂದು ಮಾದ್ಯಮ ವರದಿಯಲ್ಲಿ ವಿವರಿಸಿದೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ಮೌಸಾವಿಯ ಹತ್ಯೆಗೆ ಸಂತಾಪ ವ್ಯಕ್ತಪಡಿಸಿದ್ದು, ಇದು ಜಿಯೋನಿಸ್ಟ್ ಆಡಳಿತದ ಹತಾಶೆ ಮತ್ತು ದೌರ್ಬಲ್ಯದ ಸಂಕೇತವಾಗಿದೆ, ಕೃತ್ಯಕ್ಕೆ ಇಸ್ರೇಲ್‌ ಖಂಡಿತವಾಗಿಯೂ ಬೆಲೆಯನ್ನು ತೆರುತ್ತದೆ ಎಂದು ಹೇಳಿದ್ದಾರೆ. ಈ ಘಟನೆ ಬಗ್ಗೆ ಇಸ್ರೇಲ್‌ನ ಮಿಲಿಟರಿಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಆದರೆ US ಸುದ್ದಿ ಸೈಟ್ ಆಕ್ಸಿಯೋಸ್‌ನ ವರದಿಗಾರ ಬರಾಕ್ ರವಿದ್ ಅವರು ಹೆಸರಿಸದ ಇಸ್ರೇಲ್‌ ಅಧಿಕಾರಿಯ ಹೇಳಿಕೆಯನ್ನು ಉಲ್ಲೇಖಿಸಿ ಇಸ್ರೇಲ್ ಸಿರಿಯಾ ಮತ್ತು ಲೆಬನಾನ್‌ ಮೇಲೆ ರಾಕೆಟ್ ದಾಳಿ ನಡೆಸಿ ಪ್ರತೀಕಾರಕ್ಕೆ ತಯಾರಿ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಇಸ್ರೇಲ್‌ ಸಿರಿಯಾದ ಮೇಲೆ ದಾಳಿ ನಡೆಸಿ ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ ಇಬ್ಬರು IRGC ಸದಸ್ಯರನ್ನು ಹತ್ಯೆ ಮಾಡಿದೆ ಎಂದು ಇರಾನ್ ಹೇಳಿತ್ತು. ಗಾಝಾ ಮೇಲೆ ಕಳೆದ ಮೂರು ತಿಂಗಳಿನಿಂದ ಬಾಂಬ್‌ ದಾಳಿ ನಡೆಸುತ್ತಿರುವ ಇಸ್ರೇಲ್‌ ಹತ್ಯಾಕಾಂಡವನ್ನು ಇರಾನ್ ವಿರೋಧವನ್ನು ವ್ಯಕ್ತಪಡಿಸುತ್ತಲೇ ಬಂದಿದೆ. ಇತ್ತೀಚೆಗೆ ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ, ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚುವುದಾಗಿ ಇರಾನ್‌ ಬೆದರಿಸಿತ್ತು. ಆ ಬಳಿಕ ಗುಜರಾತ್ ಪೋರಬಂದರ್‌ ಕರವಾಳಿಯ ಹಿಂದೂ ಮಹಾಸಾಗರದಲ್ಲಿ ರಾಸಾಯನಿಕ ಟ್ಯಾಂಕರ್ ಮೇಲೆ ಇರಾನ್‌ ಡ್ರೋನ್‌ ದಾಳಿ ನಡೆಸಿದೆ ಎಂಬ ಯುಎಸ್  ಆರೋಪಿಸಿತ್ತು. ಆದರೆ ಈ ಆರೋಪವನ್ನು ಇರಾನ್‌ ಆಧಾರ ರಹಿತ ಎಂದು ಹೇಳಿತ್ತು. ಈ ಮಧ್ಯೆಯೇ ಇರಾನ್‌ನ ಕಮಾಂಡರ್‌ ಹತ್ಯೆ ನಡೆದಿದ್ದು, ಇರಾನ್‌ ಪ್ರತಿಕಾರ ಮಾಡುವುದಾಗಿ ಹೇಳಿಕೊಂಡಿದೆ.

ಇದನ್ನು ಓದಿ: ಡ್ರೋನ್‌ ದಾಳಿ: ಅಮೆರಿಕದ ಆರೋಪವನ್ನು ‘ಆಧಾರ ರಹಿತ’ ಎಂದ ಇರಾನ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...