Homeಅಂತರಾಷ್ಟ್ರೀಯಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

- Advertisement -
- Advertisement -

ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಹಿರಿಯ ಸಲಹೆಗಾರ ಸಯ್ಯದ್ ರಾಜಿ ಮೌಸಾವಿ ಅವರನ್ನು ಹತ್ಯೆ ಮಾಡಿದೆ. ಈ ಬೆಳವಣಿಗೆ ಪ್ಯಾಲೆಸ್ತೀನ್‌ -ಇಸ್ರೇಲ್‌ ಯುದ್ಧದ ಮಧ್ಯೆ ಪ್ರಾದೇಶಿಕ ಸಂಘರ್ಷದ ಭೀತಿ ಉಂಟು ಮಾಡಿದರೆ, ಇನ್ನೊಂದು ಕಡೆ ಗಾಝಾದ ಮೇಲೆ ನಡೆಸಿದಂತೆ ಸಿರಿಯಾ ಮತ್ತು ಲೆಬನಾನ್‌ ಮೇಲೆ ರಾಕೆಟ್ ದಾಳಿ ನಡೆಸಲು ಇಸ್ರೇಲ್‌ ಸಿದ್ದತೆ ನಡೆಸುತ್ತಿದೆ ಎಂದು ಅಮೆರಿಕದ ವರದಿಗಾರ ಬರಾಕ್ ರವಿದ್ ತಮ್ಮ ವರದಿಯಲ್ಲಿ ಇಸ್ರೇಲ್‌ ಅಧಿಕಾರಿಯ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿದ್ದಾರೆ.

ಸಯ್ಯದ್ ರಾಜಿ ಮೌಸಾವಿ IRGCನ ಹಿರಿಯ ಕಮಾಂಡರ್‌ಗಳಲ್ಲಿ ಒಬ್ಬರು. ಸಿರಿಯಾ ಮತ್ತು ಇರಾನ್ ನಡುವಿನ ಮಿಲಿಟರಿ ಮೈತ್ರಿಯನ್ನು ಸಂಘಟಿಸುವ ಜವಾಬ್ದಾರಿಯನ್ನು ಇವರು ನಿರ್ವಹಿಸುತ್ತಿದ್ದರು. ಅವರು 80 ರ ದಶಕದಿಂದಲೂ ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.  ಈ ಮೊದಲು ಕೂಡ ಇಸ್ರೇಲ್‌ ಮೌಸವಿಯ ಹತ್ಯೆಗೆ ಪ್ರಯತ್ನಿಸಿತ್ತು. ಇರಾನ್‌ನಿಂದ ಸಿರಿಯಾಕ್ಕೆ, ಇರಾಕ್‌ನಿಂದ ಸಿರಿಯಾಕ್ಕೆ ಮತ್ತು ಲೆಬನಾನ್‌ನಲ್ಲಿ ಹಿಜ್ಬುಲ್ಲಾದೊಂದಿಗೆ ಶಸ್ತ್ರಾಸ್ತ್ರಗಳ ಜಾಲದ ಜೊತೆಗೆ ಮೌಸವಿಗೆ ಸಂಬಂಧ ಇದೆ ಎಂದು ಇಸ್ರೇಲ್‌ ಆರೋಪವಾಗಿದೆ ಎಂದು ಅಲ್ ಜಜೀರಾ ವರದಿಗಾರ ಅಲಿ ಹಶೆಮ್ ದಕ್ಷಿಣ ಲೆಬನಾನ್‌ನಿಂದ ವರದಿ ಮಾಡಿದ್ದಾರೆ. 2020ರಲ್ಲಿ ಇರಾಕ್‌ ಮೇಲೆ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಕೊಲ್ಲಲ್ಪಟ್ಟ IRGCಯ  ಕುಡ್ಸ್ ಫೋರ್ಸ್‌ನ ಮುಖ್ಯಸ್ಥ ಕಾಸ್ಸೆಮ್ ಸೊಲೈಮಾನಿ ಆಪ್ತತರಲ್ಲಿ ಮೌಸವಿ ಓರ್ವರಾಗಿದ್ದರು.

ಮೌಸವಿ ಅವರು ಡಮಾಸ್ಕಸ್‌ನ ಉಪನಗರದಲ್ಲಿರುವ ಝೈನಾಬಿಯಾ ಜಿಲ್ಲೆಯಲ್ಲಿ ಕೆಲವು ಗಂಟೆಗಳ ಹಿಂದೆ ಝಿಯೋನಿಸ್ಟ್ಗಳ ದಾಳಿಯಲ್ಲಿ ಕೊಲ್ಲಲ್ಪಟ್ಟರು ಎಂದು ಇರಾನ್‌ನ ಅಧಿಕೃತ IRNA ಸುದ್ದಿ ಸಂಸ್ಥೆ ವರದಿ ಮಾಡಿದೆ.

IRGC ಈ ಕುರಿತು ಮಾದ್ಯಮಗಳಿಗೆ ಹೇಳಿಕೆಯನ್ನು ನೀಡಿದ್ದು, ಈ ಅಪರಾಧಕ್ಕೆ ಇಸ್ರೇಲ್ ಖಂಡಿತವಾಗಿಯೂ ಬೆಲೆ ತೆರುತ್ತದೆ ಎಂದು ಹೇಳಿದೆ. ಮೌಸವಿಯ ಹತ್ಯೆ ಬಗ್ಗೆ ಘೋಷಿಸಲು ಇರಾನ್‌ ದೂರದರ್ಶನವು ತನ್ನ ನಿಯಮಿತ ಸುದ್ದಿ ಪ್ರಸಾರವನ್ನು ತಡೆಹಿಡಿದಿತ್ತು. ಮೌಸವಿ ಸಿರಿಯಾದಲ್ಲಿದ್ದ ಅತ್ಯಂತ ಅನುಭವಿ IRGC ಸಲಹೆಗಾರರಲ್ಲಿ ಒಬ್ಬರು ಎಂದು ಮಾದ್ಯಮ ವರದಿಯಲ್ಲಿ ವಿವರಿಸಿದೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ಮೌಸಾವಿಯ ಹತ್ಯೆಗೆ ಸಂತಾಪ ವ್ಯಕ್ತಪಡಿಸಿದ್ದು, ಇದು ಜಿಯೋನಿಸ್ಟ್ ಆಡಳಿತದ ಹತಾಶೆ ಮತ್ತು ದೌರ್ಬಲ್ಯದ ಸಂಕೇತವಾಗಿದೆ, ಕೃತ್ಯಕ್ಕೆ ಇಸ್ರೇಲ್‌ ಖಂಡಿತವಾಗಿಯೂ ಬೆಲೆಯನ್ನು ತೆರುತ್ತದೆ ಎಂದು ಹೇಳಿದ್ದಾರೆ. ಈ ಘಟನೆ ಬಗ್ಗೆ ಇಸ್ರೇಲ್‌ನ ಮಿಲಿಟರಿಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಆದರೆ US ಸುದ್ದಿ ಸೈಟ್ ಆಕ್ಸಿಯೋಸ್‌ನ ವರದಿಗಾರ ಬರಾಕ್ ರವಿದ್ ಅವರು ಹೆಸರಿಸದ ಇಸ್ರೇಲ್‌ ಅಧಿಕಾರಿಯ ಹೇಳಿಕೆಯನ್ನು ಉಲ್ಲೇಖಿಸಿ ಇಸ್ರೇಲ್ ಸಿರಿಯಾ ಮತ್ತು ಲೆಬನಾನ್‌ ಮೇಲೆ ರಾಕೆಟ್ ದಾಳಿ ನಡೆಸಿ ಪ್ರತೀಕಾರಕ್ಕೆ ತಯಾರಿ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಇಸ್ರೇಲ್‌ ಸಿರಿಯಾದ ಮೇಲೆ ದಾಳಿ ನಡೆಸಿ ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ ಇಬ್ಬರು IRGC ಸದಸ್ಯರನ್ನು ಹತ್ಯೆ ಮಾಡಿದೆ ಎಂದು ಇರಾನ್ ಹೇಳಿತ್ತು. ಗಾಝಾ ಮೇಲೆ ಕಳೆದ ಮೂರು ತಿಂಗಳಿನಿಂದ ಬಾಂಬ್‌ ದಾಳಿ ನಡೆಸುತ್ತಿರುವ ಇಸ್ರೇಲ್‌ ಹತ್ಯಾಕಾಂಡವನ್ನು ಇರಾನ್ ವಿರೋಧವನ್ನು ವ್ಯಕ್ತಪಡಿಸುತ್ತಲೇ ಬಂದಿದೆ. ಇತ್ತೀಚೆಗೆ ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ, ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚುವುದಾಗಿ ಇರಾನ್‌ ಬೆದರಿಸಿತ್ತು. ಆ ಬಳಿಕ ಗುಜರಾತ್ ಪೋರಬಂದರ್‌ ಕರವಾಳಿಯ ಹಿಂದೂ ಮಹಾಸಾಗರದಲ್ಲಿ ರಾಸಾಯನಿಕ ಟ್ಯಾಂಕರ್ ಮೇಲೆ ಇರಾನ್‌ ಡ್ರೋನ್‌ ದಾಳಿ ನಡೆಸಿದೆ ಎಂಬ ಯುಎಸ್  ಆರೋಪಿಸಿತ್ತು. ಆದರೆ ಈ ಆರೋಪವನ್ನು ಇರಾನ್‌ ಆಧಾರ ರಹಿತ ಎಂದು ಹೇಳಿತ್ತು. ಈ ಮಧ್ಯೆಯೇ ಇರಾನ್‌ನ ಕಮಾಂಡರ್‌ ಹತ್ಯೆ ನಡೆದಿದ್ದು, ಇರಾನ್‌ ಪ್ರತಿಕಾರ ಮಾಡುವುದಾಗಿ ಹೇಳಿಕೊಂಡಿದೆ.

ಇದನ್ನು ಓದಿ: ಡ್ರೋನ್‌ ದಾಳಿ: ಅಮೆರಿಕದ ಆರೋಪವನ್ನು ‘ಆಧಾರ ರಹಿತ’ ಎಂದ ಇರಾನ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...