Homeಅಂತರಾಷ್ಟ್ರೀಯಯೆಮೆನ್ ಮೇಲೆ ಇಸ್ರೇಲ್ ವಾಯುದಾಳಿ: 35 ಜನರು ಸಾವು

ಯೆಮೆನ್ ಮೇಲೆ ಇಸ್ರೇಲ್ ವಾಯುದಾಳಿ: 35 ಜನರು ಸಾವು

- Advertisement -
- Advertisement -

ಕತಾರ್ ರಾಜಧಾನಿ ದೋಹಾದಲ್ಲಿ ಹಮಾಸ್ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ಒಂದು ದಿನದ ನಂತರ, ಯೆಮೆನ್ ರಾಜಧಾನಿ ಸನಾ ಮತ್ತು ಅಲ್-ಜಾಫ್ ಗವರ್ನರೇಟ್‌ ವ್ಯಾಪ್ತಿಯಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಿಂದ ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಲ್-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸನಾ ಮತ್ತು ಅಲ್-ಜಾಫ್ ಮೇಲೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ 131 ಜನರು ಗಾಯಗೊಂಡಿದ್ದಾರೆ ಎಂದು ಯೆಮೆನ್ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಇದು ಪ್ರಾಥಮಿಕ ಅಂಕಿ ಅಂಶಗಳಾಗಿವೆ, ರಕ್ಷಣಾ ತಂಡಗಳು ಬಲಿಪಶುಗಳಿಗಾಗಿ ಹುಡುಕಾಟ ಮುಂದುವರಿಸುವುದರಿಂದ ಸಾವು-ನೋವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದೆ.

ರಾಜಧಾನಿ ಸನಾದ ಅಲ್-ತಹ್ರಿರ್ ಪ್ರದೇಶ ಮತ್ತು ಸುತ್ತಮುತ್ತಲಿನ ಮನೆಗಳು, ನಗರದ ನೈಋತ್ಯದಲ್ಲಿರುವ 60ನೇ ಬೀದಿಯಲ್ಲಿರುವ ವೈದ್ಯಕೀಯ ಸೌಲಭ್ಯ ಅಥವಾ ಆಸ್ಪತ್ರೆ ಮತ್ತು ಅಲ್-ಜಾಫ್ ಗವರ್ನರೇಟ್‌ನ ರಾಜಧಾನಿ ಅಲ್-ಹಝ್ಮ್‌ನಲ್ಲಿರುವ ಸರ್ಕಾರಿ ಕಚೇರಿಗಳು ಸೇರಿದಂತೆ ನಾಗರಿಕ ಮತ್ತು ವಸತಿ ಪ್ರದೇಶಗಳ ಮೇಲೆ ದಾಳಿಗಳು ನಡೆದಿವೆ ಎಂದು ಸಚಿವಾಲಯ ತಿಳಿಸಿದೆ.

ಬಾಂಬ್ ದಾಳಿಯಿಂದ ಉಂಟಾದ ಬೆಂಕಿಯನ್ನು ನಂದಿಸಲು ಮತ್ತು ಅವಶೇಷಗಳಡಿಯಿಂದ ಬದುಕುಳಿದವರನ್ನು ಹೊರತೆಗೆಯಲು ನಾಗರಿಕ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿವೆ ಎಂದು ಸಚಿವಾಲಯ ಹೇಳಿದೆ.

ಹೌತಿ ನಡೆಸುತ್ತಿರುವ ಅಲ್ ಮಸಿರಾ ಟಿವಿಯ ಪ್ರಕಾರ, ನೈಋತ್ಯ ಸನಾದಲ್ಲಿನ ವೈದ್ಯಕೀಯ ಸೌಲಭ್ಯ ಮತ್ತು ಅಲ್-ಹಝ್ಮ್‌ನಲ್ಲಿರುವ ಸ್ಥಳೀಯ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.

“ನೈತಿಕ ಮಾರ್ಗದರ್ಶನ ಪ್ರಧಾನ ಕಚೇರಿ’ಯ ಮೇಲಿನ ದಾಳಿಯ ಪರಿಣಾಮವಾಗಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ, ಮನೆಗಳು ಹಾನಿಗೊಳಗಾಗಿವೆ” ಎಂದು ಅಲ್ ಮಸಿರಾ ಟಿವಿ ಬುಧವಾರ ಟೆಲಿಗ್ರಾಮ್‌ನಲ್ಲಿ ಪೋಸ್ಟ್ ಮಾಡಿದೆ.

ಹಾನಿಯ ಒಟ್ಟು ಪ್ರಮಾಣ ಅಥವಾ ನಷ್ಟ ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಇಸ್ರೇಲಿ ಜೆಟ್‌ಗಳು ಸನಾದ ಅಲ್-ಸಿತ್ತೀನ್ ಸ್ಟ್ರೀಟ್‌ನಲ್ಲಿರುವ ವೈದ್ಯಕೀಯ ಕೇಂದ್ರವನ್ನು ಗುರಿಯಾಗಿಸಿಕೊಂಡಿತ್ತು ಎಂದು ಯೆಮೆನ್ ತೈಲ ಮತ್ತು ಅನಿಲ ನಿಗಮ ಹೇಳಿದೆ.

ಇಸ್ರೇಲಿ ದಾಳಿಗೆ ಪ್ರತಿಯಾಗಿ ನಮ್ಮ ವಾಯು ರಕ್ಷಣಾ ಪಡೆಗಳು ಕ್ಷಿಪಣಿಗಳ ಮೂಲಕ ಪ್ರತಿಕ್ರಿಯೆ ನೀಡಿದೆ. ಕೆಲ ಇಸ್ರೇಲಿ ವಿಮಾನಗಳು ದಾಳಿ ನಡೆಸುವ ಮೊದಲೇ ಅವುಗಳನ್ನು ಹಿಮ್ಮೆಟ್ಟಿಸಿದ್ದೇವೆ. ಈ ಮೂಲಕ ಇಸ್ರೇಲ್‌ನ ಉದ್ದೇಶಿತ ಆಕ್ರಮಣವನ್ನು ವಿಫಲಗೊಳಿಸಿದ್ದೇವೆ ಎಂದು ಹೌತಿ ಮಿಲಿಟರಿ ವಕ್ತಾರ ಯಾಹ್ಯಾ ಸಾರಿ ಹೇಳಿದ್ದಾರೆ.

ಇಸ್ರೇಲ್ ಸೇನೆಯು ದಾಳಿಯನ್ನು ದೃಢಪಡಿಸಿದ್ದು, ಸನಾ ಮತ್ತು ಅಲ್-ಜಾಫ್‌ನ ಪ್ರದೇಶಗಳ ಮೇಲೆ ದಾಳಿ ನಡೆಸಿರುವುದಾಗಿ ತಿಳಿಸಿದೆ.

ಕೆಲವು ದಿನಗಳ ಹಿಂದೆ ಇಸ್ರೇಲ್‌ನ ರಾಮನ್ ವಿಮಾನ ನಿಲ್ದಾಣದ ಮೇಲೆ ಹೌತಿ ಬಂಡುಕೋರರು ನಡೆಸಿದ ಡ್ರೋನ್ ದಾಳಿಗೆ ಪ್ರತಿಯಾಗಿ ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

“ನಾವು ದಾಳಿಯನ್ನು ಮುಂದುವರೆಸುತ್ತೇವೆ. ನಮ್ಮ ಮೇಲೆ ದಾಳಿ ನಡೆಸುವ ಯಾರೇ ಆಗಿರಲಿ, ಅವರ ಮೇಲೆ ದಾಳಿ ನಡೆಸುತ್ತೇವೆ” ಎಂದು ನೆತನ್ಯಾಹು ಬೆದರಿಕೆ ಹಾಕಿದ್ದಾರೆ.

ಪ್ರಮುಖ ವಿಮಾನ ನಿಲ್ದಾಣ ಸೇರಿದಂತೆ ಯೆಮೆನ್ ಮೇಲೆ ಪದೇ ಪದೇ ಇಸ್ರೇಲ್ ಬಾಂಬ್ ದಾಳಿ ನಡೆಸುತ್ತಿವೆ. ಯುದ್ಧಪೀಡಿತ ದೇಶದಲ್ಲಿ ನಾಗರಿಕರನ್ನು ಕೊಂದು ಮೂಲಸೌಕರ್ಯಗಳಿಗೆ ಹಾನಿ ಮಾಡಿದೆ. ಕಳೆದ ತಿಂಗಳು, ಇಸ್ರೇಲ್ ವಾಯುದಾಳಿಯಲ್ಲಿ ಹೌತಿ ಆಡಳಿತದ ಪ್ರಧಾನಿ ಅಹ್ಮದ್ ಅಲ್-ರಹಾವಿ ಸೇರಿದಂತೆ ಉನ್ನತ ಯೆಮೆನ್ ಅಧಿಕಾರಿಗಳನ್ನು ಹತ್ಯೆಯಾಗಿದ್ದರು.

ಗಾಝಾಗೆ ಬೆಂಬಲ ನೀಡದಂತೆ ಇಸ್ರೇಲ್ ನಮ್ಮ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ನಾವು ಗಾಝಾ ಮೇಲಿನ ಜನಾಂಗೀಯ ಯುದ್ಧ ನಿಲ್ಲುವವರೆಗೂ ಇಸ್ರೇಲ್ ವಿರುದ್ಧದ ಕಾರ್ಯಾಚರಣೆ ನಡೆಸುತ್ತೇವೆ ಎಂದು ಹೌತಿ ಮಿಲಿಟರಿ ವಕ್ತಾರ ಯಾಹ್ಯಾ ಸಾರಿ ಪ್ರತಿಜ್ಞೆ ಮಾಡಿದ್ದಾರೆ.

ಹೌತಿ ಗುಂಪು ಕೆಂಪು ಸಮುದ್ರದ ಮೂಲಕ ಹಾದುಹೋಗುವ ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳ ಮೇಲೆ ಸಮುದ್ರ ದಿಗ್ಬಂಧನವನ್ನು ವಿಧಿಸಿದೆ ಮತ್ತು ಪ್ಯಾಲೆಸ್ತೀನಿಯರ ಜೊತೆ ಒಗ್ಗಟ್ಟು ಪ್ರದರ್ಶಿಸಿ ಇಸ್ರೇಲ್ ವಿರುದ್ಧ ವಾಯು ದಾಳಿಗಳನ್ನು ನಡೆಸಿದೆ.

23 ತಿಂಗಳ ನಿರಂತರ ಇಸ್ರೇಲಿ ಬಾಂಬ್ ದಾಳಿಯಿಂದ ನಾಶವಾದ ಗಾಝಾದಲ್ಲಿ ಕದನ ವಿರಾಮಕ್ಕೆ ಒಪ್ಪಿಗೆಯಾದಾಗ ಇಸ್ರೇಲ್ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸುವುದಾಗಿ ಹೌತಿಗಳು ಹೇಳಿದ್ದಾರೆ. 2023ರ ಅಕ್ಟೋಬರ್‌ನಲ್ಲಿ ಇಸ್ರೇಲ್ ಗಾಝಾ ಮೇಲೆ ದಾಳಿ ಪ್ರಾರಂಭಿಸಿದಾಗಿನಿಂದ 64,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಕೊಲ್ಲಲ್ಪಟ್ಟಿದ್ದಾರೆ.

ನೇಪಾಳ: ಹಿಂಸಾಚಾರದ ನಂತರ ಸೇನೆ ಪ್ರವೇಶ; ದೇಶಾದ್ಯಂತ ನಿಷೇಧಾಜ್ಞೆ ಮತ್ತು ಕರ್ಫ್ಯೂ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...