Homeಅಂತರಾಷ್ಟ್ರೀಯಯೆಮೆನ್ ಮೇಲೆ ಇಸ್ರೇಲ್ ವಾಯುದಾಳಿ: 35 ಜನರು ಸಾವು

ಯೆಮೆನ್ ಮೇಲೆ ಇಸ್ರೇಲ್ ವಾಯುದಾಳಿ: 35 ಜನರು ಸಾವು

- Advertisement -
- Advertisement -

ಕತಾರ್ ರಾಜಧಾನಿ ದೋಹಾದಲ್ಲಿ ಹಮಾಸ್ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ಒಂದು ದಿನದ ನಂತರ, ಯೆಮೆನ್ ರಾಜಧಾನಿ ಸನಾ ಮತ್ತು ಅಲ್-ಜಾಫ್ ಗವರ್ನರೇಟ್‌ ವ್ಯಾಪ್ತಿಯಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಿಂದ ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಲ್-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸನಾ ಮತ್ತು ಅಲ್-ಜಾಫ್ ಮೇಲೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ 131 ಜನರು ಗಾಯಗೊಂಡಿದ್ದಾರೆ ಎಂದು ಯೆಮೆನ್ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಇದು ಪ್ರಾಥಮಿಕ ಅಂಕಿ ಅಂಶಗಳಾಗಿವೆ, ರಕ್ಷಣಾ ತಂಡಗಳು ಬಲಿಪಶುಗಳಿಗಾಗಿ ಹುಡುಕಾಟ ಮುಂದುವರಿಸುವುದರಿಂದ ಸಾವು-ನೋವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದೆ.

ರಾಜಧಾನಿ ಸನಾದ ಅಲ್-ತಹ್ರಿರ್ ಪ್ರದೇಶ ಮತ್ತು ಸುತ್ತಮುತ್ತಲಿನ ಮನೆಗಳು, ನಗರದ ನೈಋತ್ಯದಲ್ಲಿರುವ 60ನೇ ಬೀದಿಯಲ್ಲಿರುವ ವೈದ್ಯಕೀಯ ಸೌಲಭ್ಯ ಅಥವಾ ಆಸ್ಪತ್ರೆ ಮತ್ತು ಅಲ್-ಜಾಫ್ ಗವರ್ನರೇಟ್‌ನ ರಾಜಧಾನಿ ಅಲ್-ಹಝ್ಮ್‌ನಲ್ಲಿರುವ ಸರ್ಕಾರಿ ಕಚೇರಿಗಳು ಸೇರಿದಂತೆ ನಾಗರಿಕ ಮತ್ತು ವಸತಿ ಪ್ರದೇಶಗಳ ಮೇಲೆ ದಾಳಿಗಳು ನಡೆದಿವೆ ಎಂದು ಸಚಿವಾಲಯ ತಿಳಿಸಿದೆ.

ಬಾಂಬ್ ದಾಳಿಯಿಂದ ಉಂಟಾದ ಬೆಂಕಿಯನ್ನು ನಂದಿಸಲು ಮತ್ತು ಅವಶೇಷಗಳಡಿಯಿಂದ ಬದುಕುಳಿದವರನ್ನು ಹೊರತೆಗೆಯಲು ನಾಗರಿಕ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿವೆ ಎಂದು ಸಚಿವಾಲಯ ಹೇಳಿದೆ.

ಹೌತಿ ನಡೆಸುತ್ತಿರುವ ಅಲ್ ಮಸಿರಾ ಟಿವಿಯ ಪ್ರಕಾರ, ನೈಋತ್ಯ ಸನಾದಲ್ಲಿನ ವೈದ್ಯಕೀಯ ಸೌಲಭ್ಯ ಮತ್ತು ಅಲ್-ಹಝ್ಮ್‌ನಲ್ಲಿರುವ ಸ್ಥಳೀಯ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.

“ನೈತಿಕ ಮಾರ್ಗದರ್ಶನ ಪ್ರಧಾನ ಕಚೇರಿ’ಯ ಮೇಲಿನ ದಾಳಿಯ ಪರಿಣಾಮವಾಗಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ, ಮನೆಗಳು ಹಾನಿಗೊಳಗಾಗಿವೆ” ಎಂದು ಅಲ್ ಮಸಿರಾ ಟಿವಿ ಬುಧವಾರ ಟೆಲಿಗ್ರಾಮ್‌ನಲ್ಲಿ ಪೋಸ್ಟ್ ಮಾಡಿದೆ.

ಹಾನಿಯ ಒಟ್ಟು ಪ್ರಮಾಣ ಅಥವಾ ನಷ್ಟ ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಇಸ್ರೇಲಿ ಜೆಟ್‌ಗಳು ಸನಾದ ಅಲ್-ಸಿತ್ತೀನ್ ಸ್ಟ್ರೀಟ್‌ನಲ್ಲಿರುವ ವೈದ್ಯಕೀಯ ಕೇಂದ್ರವನ್ನು ಗುರಿಯಾಗಿಸಿಕೊಂಡಿತ್ತು ಎಂದು ಯೆಮೆನ್ ತೈಲ ಮತ್ತು ಅನಿಲ ನಿಗಮ ಹೇಳಿದೆ.

ಇಸ್ರೇಲಿ ದಾಳಿಗೆ ಪ್ರತಿಯಾಗಿ ನಮ್ಮ ವಾಯು ರಕ್ಷಣಾ ಪಡೆಗಳು ಕ್ಷಿಪಣಿಗಳ ಮೂಲಕ ಪ್ರತಿಕ್ರಿಯೆ ನೀಡಿದೆ. ಕೆಲ ಇಸ್ರೇಲಿ ವಿಮಾನಗಳು ದಾಳಿ ನಡೆಸುವ ಮೊದಲೇ ಅವುಗಳನ್ನು ಹಿಮ್ಮೆಟ್ಟಿಸಿದ್ದೇವೆ. ಈ ಮೂಲಕ ಇಸ್ರೇಲ್‌ನ ಉದ್ದೇಶಿತ ಆಕ್ರಮಣವನ್ನು ವಿಫಲಗೊಳಿಸಿದ್ದೇವೆ ಎಂದು ಹೌತಿ ಮಿಲಿಟರಿ ವಕ್ತಾರ ಯಾಹ್ಯಾ ಸಾರಿ ಹೇಳಿದ್ದಾರೆ.

ಇಸ್ರೇಲ್ ಸೇನೆಯು ದಾಳಿಯನ್ನು ದೃಢಪಡಿಸಿದ್ದು, ಸನಾ ಮತ್ತು ಅಲ್-ಜಾಫ್‌ನ ಪ್ರದೇಶಗಳ ಮೇಲೆ ದಾಳಿ ನಡೆಸಿರುವುದಾಗಿ ತಿಳಿಸಿದೆ.

ಕೆಲವು ದಿನಗಳ ಹಿಂದೆ ಇಸ್ರೇಲ್‌ನ ರಾಮನ್ ವಿಮಾನ ನಿಲ್ದಾಣದ ಮೇಲೆ ಹೌತಿ ಬಂಡುಕೋರರು ನಡೆಸಿದ ಡ್ರೋನ್ ದಾಳಿಗೆ ಪ್ರತಿಯಾಗಿ ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

“ನಾವು ದಾಳಿಯನ್ನು ಮುಂದುವರೆಸುತ್ತೇವೆ. ನಮ್ಮ ಮೇಲೆ ದಾಳಿ ನಡೆಸುವ ಯಾರೇ ಆಗಿರಲಿ, ಅವರ ಮೇಲೆ ದಾಳಿ ನಡೆಸುತ್ತೇವೆ” ಎಂದು ನೆತನ್ಯಾಹು ಬೆದರಿಕೆ ಹಾಕಿದ್ದಾರೆ.

ಪ್ರಮುಖ ವಿಮಾನ ನಿಲ್ದಾಣ ಸೇರಿದಂತೆ ಯೆಮೆನ್ ಮೇಲೆ ಪದೇ ಪದೇ ಇಸ್ರೇಲ್ ಬಾಂಬ್ ದಾಳಿ ನಡೆಸುತ್ತಿವೆ. ಯುದ್ಧಪೀಡಿತ ದೇಶದಲ್ಲಿ ನಾಗರಿಕರನ್ನು ಕೊಂದು ಮೂಲಸೌಕರ್ಯಗಳಿಗೆ ಹಾನಿ ಮಾಡಿದೆ. ಕಳೆದ ತಿಂಗಳು, ಇಸ್ರೇಲ್ ವಾಯುದಾಳಿಯಲ್ಲಿ ಹೌತಿ ಆಡಳಿತದ ಪ್ರಧಾನಿ ಅಹ್ಮದ್ ಅಲ್-ರಹಾವಿ ಸೇರಿದಂತೆ ಉನ್ನತ ಯೆಮೆನ್ ಅಧಿಕಾರಿಗಳನ್ನು ಹತ್ಯೆಯಾಗಿದ್ದರು.

ಗಾಝಾಗೆ ಬೆಂಬಲ ನೀಡದಂತೆ ಇಸ್ರೇಲ್ ನಮ್ಮ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ನಾವು ಗಾಝಾ ಮೇಲಿನ ಜನಾಂಗೀಯ ಯುದ್ಧ ನಿಲ್ಲುವವರೆಗೂ ಇಸ್ರೇಲ್ ವಿರುದ್ಧದ ಕಾರ್ಯಾಚರಣೆ ನಡೆಸುತ್ತೇವೆ ಎಂದು ಹೌತಿ ಮಿಲಿಟರಿ ವಕ್ತಾರ ಯಾಹ್ಯಾ ಸಾರಿ ಪ್ರತಿಜ್ಞೆ ಮಾಡಿದ್ದಾರೆ.

ಹೌತಿ ಗುಂಪು ಕೆಂಪು ಸಮುದ್ರದ ಮೂಲಕ ಹಾದುಹೋಗುವ ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳ ಮೇಲೆ ಸಮುದ್ರ ದಿಗ್ಬಂಧನವನ್ನು ವಿಧಿಸಿದೆ ಮತ್ತು ಪ್ಯಾಲೆಸ್ತೀನಿಯರ ಜೊತೆ ಒಗ್ಗಟ್ಟು ಪ್ರದರ್ಶಿಸಿ ಇಸ್ರೇಲ್ ವಿರುದ್ಧ ವಾಯು ದಾಳಿಗಳನ್ನು ನಡೆಸಿದೆ.

23 ತಿಂಗಳ ನಿರಂತರ ಇಸ್ರೇಲಿ ಬಾಂಬ್ ದಾಳಿಯಿಂದ ನಾಶವಾದ ಗಾಝಾದಲ್ಲಿ ಕದನ ವಿರಾಮಕ್ಕೆ ಒಪ್ಪಿಗೆಯಾದಾಗ ಇಸ್ರೇಲ್ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸುವುದಾಗಿ ಹೌತಿಗಳು ಹೇಳಿದ್ದಾರೆ. 2023ರ ಅಕ್ಟೋಬರ್‌ನಲ್ಲಿ ಇಸ್ರೇಲ್ ಗಾಝಾ ಮೇಲೆ ದಾಳಿ ಪ್ರಾರಂಭಿಸಿದಾಗಿನಿಂದ 64,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಕೊಲ್ಲಲ್ಪಟ್ಟಿದ್ದಾರೆ.

ನೇಪಾಳ: ಹಿಂಸಾಚಾರದ ನಂತರ ಸೇನೆ ಪ್ರವೇಶ; ದೇಶಾದ್ಯಂತ ನಿಷೇಧಾಜ್ಞೆ ಮತ್ತು ಕರ್ಫ್ಯೂ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....