Homeಅಂತರಾಷ್ಟ್ರೀಯಯೆಮೆನ್ ಮೇಲೆ ಇಸ್ರೇಲ್ ವಾಯುದಾಳಿ: 35 ಜನರು ಸಾವು

ಯೆಮೆನ್ ಮೇಲೆ ಇಸ್ರೇಲ್ ವಾಯುದಾಳಿ: 35 ಜನರು ಸಾವು

- Advertisement -
- Advertisement -

ಕತಾರ್ ರಾಜಧಾನಿ ದೋಹಾದಲ್ಲಿ ಹಮಾಸ್ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ಒಂದು ದಿನದ ನಂತರ, ಯೆಮೆನ್ ರಾಜಧಾನಿ ಸನಾ ಮತ್ತು ಅಲ್-ಜಾಫ್ ಗವರ್ನರೇಟ್‌ ವ್ಯಾಪ್ತಿಯಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಿಂದ ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಲ್-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸನಾ ಮತ್ತು ಅಲ್-ಜಾಫ್ ಮೇಲೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ 131 ಜನರು ಗಾಯಗೊಂಡಿದ್ದಾರೆ ಎಂದು ಯೆಮೆನ್ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಇದು ಪ್ರಾಥಮಿಕ ಅಂಕಿ ಅಂಶಗಳಾಗಿವೆ, ರಕ್ಷಣಾ ತಂಡಗಳು ಬಲಿಪಶುಗಳಿಗಾಗಿ ಹುಡುಕಾಟ ಮುಂದುವರಿಸುವುದರಿಂದ ಸಾವು-ನೋವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದೆ.

ರಾಜಧಾನಿ ಸನಾದ ಅಲ್-ತಹ್ರಿರ್ ಪ್ರದೇಶ ಮತ್ತು ಸುತ್ತಮುತ್ತಲಿನ ಮನೆಗಳು, ನಗರದ ನೈಋತ್ಯದಲ್ಲಿರುವ 60ನೇ ಬೀದಿಯಲ್ಲಿರುವ ವೈದ್ಯಕೀಯ ಸೌಲಭ್ಯ ಅಥವಾ ಆಸ್ಪತ್ರೆ ಮತ್ತು ಅಲ್-ಜಾಫ್ ಗವರ್ನರೇಟ್‌ನ ರಾಜಧಾನಿ ಅಲ್-ಹಝ್ಮ್‌ನಲ್ಲಿರುವ ಸರ್ಕಾರಿ ಕಚೇರಿಗಳು ಸೇರಿದಂತೆ ನಾಗರಿಕ ಮತ್ತು ವಸತಿ ಪ್ರದೇಶಗಳ ಮೇಲೆ ದಾಳಿಗಳು ನಡೆದಿವೆ ಎಂದು ಸಚಿವಾಲಯ ತಿಳಿಸಿದೆ.

ಬಾಂಬ್ ದಾಳಿಯಿಂದ ಉಂಟಾದ ಬೆಂಕಿಯನ್ನು ನಂದಿಸಲು ಮತ್ತು ಅವಶೇಷಗಳಡಿಯಿಂದ ಬದುಕುಳಿದವರನ್ನು ಹೊರತೆಗೆಯಲು ನಾಗರಿಕ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿವೆ ಎಂದು ಸಚಿವಾಲಯ ಹೇಳಿದೆ.

ಹೌತಿ ನಡೆಸುತ್ತಿರುವ ಅಲ್ ಮಸಿರಾ ಟಿವಿಯ ಪ್ರಕಾರ, ನೈಋತ್ಯ ಸನಾದಲ್ಲಿನ ವೈದ್ಯಕೀಯ ಸೌಲಭ್ಯ ಮತ್ತು ಅಲ್-ಹಝ್ಮ್‌ನಲ್ಲಿರುವ ಸ್ಥಳೀಯ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.

“ನೈತಿಕ ಮಾರ್ಗದರ್ಶನ ಪ್ರಧಾನ ಕಚೇರಿ’ಯ ಮೇಲಿನ ದಾಳಿಯ ಪರಿಣಾಮವಾಗಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ, ಮನೆಗಳು ಹಾನಿಗೊಳಗಾಗಿವೆ” ಎಂದು ಅಲ್ ಮಸಿರಾ ಟಿವಿ ಬುಧವಾರ ಟೆಲಿಗ್ರಾಮ್‌ನಲ್ಲಿ ಪೋಸ್ಟ್ ಮಾಡಿದೆ.

ಹಾನಿಯ ಒಟ್ಟು ಪ್ರಮಾಣ ಅಥವಾ ನಷ್ಟ ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಇಸ್ರೇಲಿ ಜೆಟ್‌ಗಳು ಸನಾದ ಅಲ್-ಸಿತ್ತೀನ್ ಸ್ಟ್ರೀಟ್‌ನಲ್ಲಿರುವ ವೈದ್ಯಕೀಯ ಕೇಂದ್ರವನ್ನು ಗುರಿಯಾಗಿಸಿಕೊಂಡಿತ್ತು ಎಂದು ಯೆಮೆನ್ ತೈಲ ಮತ್ತು ಅನಿಲ ನಿಗಮ ಹೇಳಿದೆ.

ಇಸ್ರೇಲಿ ದಾಳಿಗೆ ಪ್ರತಿಯಾಗಿ ನಮ್ಮ ವಾಯು ರಕ್ಷಣಾ ಪಡೆಗಳು ಕ್ಷಿಪಣಿಗಳ ಮೂಲಕ ಪ್ರತಿಕ್ರಿಯೆ ನೀಡಿದೆ. ಕೆಲ ಇಸ್ರೇಲಿ ವಿಮಾನಗಳು ದಾಳಿ ನಡೆಸುವ ಮೊದಲೇ ಅವುಗಳನ್ನು ಹಿಮ್ಮೆಟ್ಟಿಸಿದ್ದೇವೆ. ಈ ಮೂಲಕ ಇಸ್ರೇಲ್‌ನ ಉದ್ದೇಶಿತ ಆಕ್ರಮಣವನ್ನು ವಿಫಲಗೊಳಿಸಿದ್ದೇವೆ ಎಂದು ಹೌತಿ ಮಿಲಿಟರಿ ವಕ್ತಾರ ಯಾಹ್ಯಾ ಸಾರಿ ಹೇಳಿದ್ದಾರೆ.

ಇಸ್ರೇಲ್ ಸೇನೆಯು ದಾಳಿಯನ್ನು ದೃಢಪಡಿಸಿದ್ದು, ಸನಾ ಮತ್ತು ಅಲ್-ಜಾಫ್‌ನ ಪ್ರದೇಶಗಳ ಮೇಲೆ ದಾಳಿ ನಡೆಸಿರುವುದಾಗಿ ತಿಳಿಸಿದೆ.

ಕೆಲವು ದಿನಗಳ ಹಿಂದೆ ಇಸ್ರೇಲ್‌ನ ರಾಮನ್ ವಿಮಾನ ನಿಲ್ದಾಣದ ಮೇಲೆ ಹೌತಿ ಬಂಡುಕೋರರು ನಡೆಸಿದ ಡ್ರೋನ್ ದಾಳಿಗೆ ಪ್ರತಿಯಾಗಿ ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

“ನಾವು ದಾಳಿಯನ್ನು ಮುಂದುವರೆಸುತ್ತೇವೆ. ನಮ್ಮ ಮೇಲೆ ದಾಳಿ ನಡೆಸುವ ಯಾರೇ ಆಗಿರಲಿ, ಅವರ ಮೇಲೆ ದಾಳಿ ನಡೆಸುತ್ತೇವೆ” ಎಂದು ನೆತನ್ಯಾಹು ಬೆದರಿಕೆ ಹಾಕಿದ್ದಾರೆ.

ಪ್ರಮುಖ ವಿಮಾನ ನಿಲ್ದಾಣ ಸೇರಿದಂತೆ ಯೆಮೆನ್ ಮೇಲೆ ಪದೇ ಪದೇ ಇಸ್ರೇಲ್ ಬಾಂಬ್ ದಾಳಿ ನಡೆಸುತ್ತಿವೆ. ಯುದ್ಧಪೀಡಿತ ದೇಶದಲ್ಲಿ ನಾಗರಿಕರನ್ನು ಕೊಂದು ಮೂಲಸೌಕರ್ಯಗಳಿಗೆ ಹಾನಿ ಮಾಡಿದೆ. ಕಳೆದ ತಿಂಗಳು, ಇಸ್ರೇಲ್ ವಾಯುದಾಳಿಯಲ್ಲಿ ಹೌತಿ ಆಡಳಿತದ ಪ್ರಧಾನಿ ಅಹ್ಮದ್ ಅಲ್-ರಹಾವಿ ಸೇರಿದಂತೆ ಉನ್ನತ ಯೆಮೆನ್ ಅಧಿಕಾರಿಗಳನ್ನು ಹತ್ಯೆಯಾಗಿದ್ದರು.

ಗಾಝಾಗೆ ಬೆಂಬಲ ನೀಡದಂತೆ ಇಸ್ರೇಲ್ ನಮ್ಮ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ನಾವು ಗಾಝಾ ಮೇಲಿನ ಜನಾಂಗೀಯ ಯುದ್ಧ ನಿಲ್ಲುವವರೆಗೂ ಇಸ್ರೇಲ್ ವಿರುದ್ಧದ ಕಾರ್ಯಾಚರಣೆ ನಡೆಸುತ್ತೇವೆ ಎಂದು ಹೌತಿ ಮಿಲಿಟರಿ ವಕ್ತಾರ ಯಾಹ್ಯಾ ಸಾರಿ ಪ್ರತಿಜ್ಞೆ ಮಾಡಿದ್ದಾರೆ.

ಹೌತಿ ಗುಂಪು ಕೆಂಪು ಸಮುದ್ರದ ಮೂಲಕ ಹಾದುಹೋಗುವ ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳ ಮೇಲೆ ಸಮುದ್ರ ದಿಗ್ಬಂಧನವನ್ನು ವಿಧಿಸಿದೆ ಮತ್ತು ಪ್ಯಾಲೆಸ್ತೀನಿಯರ ಜೊತೆ ಒಗ್ಗಟ್ಟು ಪ್ರದರ್ಶಿಸಿ ಇಸ್ರೇಲ್ ವಿರುದ್ಧ ವಾಯು ದಾಳಿಗಳನ್ನು ನಡೆಸಿದೆ.

23 ತಿಂಗಳ ನಿರಂತರ ಇಸ್ರೇಲಿ ಬಾಂಬ್ ದಾಳಿಯಿಂದ ನಾಶವಾದ ಗಾಝಾದಲ್ಲಿ ಕದನ ವಿರಾಮಕ್ಕೆ ಒಪ್ಪಿಗೆಯಾದಾಗ ಇಸ್ರೇಲ್ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸುವುದಾಗಿ ಹೌತಿಗಳು ಹೇಳಿದ್ದಾರೆ. 2023ರ ಅಕ್ಟೋಬರ್‌ನಲ್ಲಿ ಇಸ್ರೇಲ್ ಗಾಝಾ ಮೇಲೆ ದಾಳಿ ಪ್ರಾರಂಭಿಸಿದಾಗಿನಿಂದ 64,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಕೊಲ್ಲಲ್ಪಟ್ಟಿದ್ದಾರೆ.

ನೇಪಾಳ: ಹಿಂಸಾಚಾರದ ನಂತರ ಸೇನೆ ಪ್ರವೇಶ; ದೇಶಾದ್ಯಂತ ನಿಷೇಧಾಜ್ಞೆ ಮತ್ತು ಕರ್ಫ್ಯೂ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...