Homeಅಂತರಾಷ್ಟ್ರೀಯಯೆಮೆನ್ ಮೇಲೆ ಇಸ್ರೇಲ್ ವಾಯುದಾಳಿ: 35 ಜನರು ಸಾವು

ಯೆಮೆನ್ ಮೇಲೆ ಇಸ್ರೇಲ್ ವಾಯುದಾಳಿ: 35 ಜನರು ಸಾವು

- Advertisement -
- Advertisement -

ಕತಾರ್ ರಾಜಧಾನಿ ದೋಹಾದಲ್ಲಿ ಹಮಾಸ್ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ಒಂದು ದಿನದ ನಂತರ, ಯೆಮೆನ್ ರಾಜಧಾನಿ ಸನಾ ಮತ್ತು ಅಲ್-ಜಾಫ್ ಗವರ್ನರೇಟ್‌ ವ್ಯಾಪ್ತಿಯಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಿಂದ ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಲ್-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸನಾ ಮತ್ತು ಅಲ್-ಜಾಫ್ ಮೇಲೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ 131 ಜನರು ಗಾಯಗೊಂಡಿದ್ದಾರೆ ಎಂದು ಯೆಮೆನ್ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಇದು ಪ್ರಾಥಮಿಕ ಅಂಕಿ ಅಂಶಗಳಾಗಿವೆ, ರಕ್ಷಣಾ ತಂಡಗಳು ಬಲಿಪಶುಗಳಿಗಾಗಿ ಹುಡುಕಾಟ ಮುಂದುವರಿಸುವುದರಿಂದ ಸಾವು-ನೋವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದೆ.

ರಾಜಧಾನಿ ಸನಾದ ಅಲ್-ತಹ್ರಿರ್ ಪ್ರದೇಶ ಮತ್ತು ಸುತ್ತಮುತ್ತಲಿನ ಮನೆಗಳು, ನಗರದ ನೈಋತ್ಯದಲ್ಲಿರುವ 60ನೇ ಬೀದಿಯಲ್ಲಿರುವ ವೈದ್ಯಕೀಯ ಸೌಲಭ್ಯ ಅಥವಾ ಆಸ್ಪತ್ರೆ ಮತ್ತು ಅಲ್-ಜಾಫ್ ಗವರ್ನರೇಟ್‌ನ ರಾಜಧಾನಿ ಅಲ್-ಹಝ್ಮ್‌ನಲ್ಲಿರುವ ಸರ್ಕಾರಿ ಕಚೇರಿಗಳು ಸೇರಿದಂತೆ ನಾಗರಿಕ ಮತ್ತು ವಸತಿ ಪ್ರದೇಶಗಳ ಮೇಲೆ ದಾಳಿಗಳು ನಡೆದಿವೆ ಎಂದು ಸಚಿವಾಲಯ ತಿಳಿಸಿದೆ.

ಬಾಂಬ್ ದಾಳಿಯಿಂದ ಉಂಟಾದ ಬೆಂಕಿಯನ್ನು ನಂದಿಸಲು ಮತ್ತು ಅವಶೇಷಗಳಡಿಯಿಂದ ಬದುಕುಳಿದವರನ್ನು ಹೊರತೆಗೆಯಲು ನಾಗರಿಕ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿವೆ ಎಂದು ಸಚಿವಾಲಯ ಹೇಳಿದೆ.

ಹೌತಿ ನಡೆಸುತ್ತಿರುವ ಅಲ್ ಮಸಿರಾ ಟಿವಿಯ ಪ್ರಕಾರ, ನೈಋತ್ಯ ಸನಾದಲ್ಲಿನ ವೈದ್ಯಕೀಯ ಸೌಲಭ್ಯ ಮತ್ತು ಅಲ್-ಹಝ್ಮ್‌ನಲ್ಲಿರುವ ಸ್ಥಳೀಯ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.

“ನೈತಿಕ ಮಾರ್ಗದರ್ಶನ ಪ್ರಧಾನ ಕಚೇರಿ’ಯ ಮೇಲಿನ ದಾಳಿಯ ಪರಿಣಾಮವಾಗಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ, ಮನೆಗಳು ಹಾನಿಗೊಳಗಾಗಿವೆ” ಎಂದು ಅಲ್ ಮಸಿರಾ ಟಿವಿ ಬುಧವಾರ ಟೆಲಿಗ್ರಾಮ್‌ನಲ್ಲಿ ಪೋಸ್ಟ್ ಮಾಡಿದೆ.

ಹಾನಿಯ ಒಟ್ಟು ಪ್ರಮಾಣ ಅಥವಾ ನಷ್ಟ ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಇಸ್ರೇಲಿ ಜೆಟ್‌ಗಳು ಸನಾದ ಅಲ್-ಸಿತ್ತೀನ್ ಸ್ಟ್ರೀಟ್‌ನಲ್ಲಿರುವ ವೈದ್ಯಕೀಯ ಕೇಂದ್ರವನ್ನು ಗುರಿಯಾಗಿಸಿಕೊಂಡಿತ್ತು ಎಂದು ಯೆಮೆನ್ ತೈಲ ಮತ್ತು ಅನಿಲ ನಿಗಮ ಹೇಳಿದೆ.

ಇಸ್ರೇಲಿ ದಾಳಿಗೆ ಪ್ರತಿಯಾಗಿ ನಮ್ಮ ವಾಯು ರಕ್ಷಣಾ ಪಡೆಗಳು ಕ್ಷಿಪಣಿಗಳ ಮೂಲಕ ಪ್ರತಿಕ್ರಿಯೆ ನೀಡಿದೆ. ಕೆಲ ಇಸ್ರೇಲಿ ವಿಮಾನಗಳು ದಾಳಿ ನಡೆಸುವ ಮೊದಲೇ ಅವುಗಳನ್ನು ಹಿಮ್ಮೆಟ್ಟಿಸಿದ್ದೇವೆ. ಈ ಮೂಲಕ ಇಸ್ರೇಲ್‌ನ ಉದ್ದೇಶಿತ ಆಕ್ರಮಣವನ್ನು ವಿಫಲಗೊಳಿಸಿದ್ದೇವೆ ಎಂದು ಹೌತಿ ಮಿಲಿಟರಿ ವಕ್ತಾರ ಯಾಹ್ಯಾ ಸಾರಿ ಹೇಳಿದ್ದಾರೆ.

ಇಸ್ರೇಲ್ ಸೇನೆಯು ದಾಳಿಯನ್ನು ದೃಢಪಡಿಸಿದ್ದು, ಸನಾ ಮತ್ತು ಅಲ್-ಜಾಫ್‌ನ ಪ್ರದೇಶಗಳ ಮೇಲೆ ದಾಳಿ ನಡೆಸಿರುವುದಾಗಿ ತಿಳಿಸಿದೆ.

ಕೆಲವು ದಿನಗಳ ಹಿಂದೆ ಇಸ್ರೇಲ್‌ನ ರಾಮನ್ ವಿಮಾನ ನಿಲ್ದಾಣದ ಮೇಲೆ ಹೌತಿ ಬಂಡುಕೋರರು ನಡೆಸಿದ ಡ್ರೋನ್ ದಾಳಿಗೆ ಪ್ರತಿಯಾಗಿ ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

“ನಾವು ದಾಳಿಯನ್ನು ಮುಂದುವರೆಸುತ್ತೇವೆ. ನಮ್ಮ ಮೇಲೆ ದಾಳಿ ನಡೆಸುವ ಯಾರೇ ಆಗಿರಲಿ, ಅವರ ಮೇಲೆ ದಾಳಿ ನಡೆಸುತ್ತೇವೆ” ಎಂದು ನೆತನ್ಯಾಹು ಬೆದರಿಕೆ ಹಾಕಿದ್ದಾರೆ.

ಪ್ರಮುಖ ವಿಮಾನ ನಿಲ್ದಾಣ ಸೇರಿದಂತೆ ಯೆಮೆನ್ ಮೇಲೆ ಪದೇ ಪದೇ ಇಸ್ರೇಲ್ ಬಾಂಬ್ ದಾಳಿ ನಡೆಸುತ್ತಿವೆ. ಯುದ್ಧಪೀಡಿತ ದೇಶದಲ್ಲಿ ನಾಗರಿಕರನ್ನು ಕೊಂದು ಮೂಲಸೌಕರ್ಯಗಳಿಗೆ ಹಾನಿ ಮಾಡಿದೆ. ಕಳೆದ ತಿಂಗಳು, ಇಸ್ರೇಲ್ ವಾಯುದಾಳಿಯಲ್ಲಿ ಹೌತಿ ಆಡಳಿತದ ಪ್ರಧಾನಿ ಅಹ್ಮದ್ ಅಲ್-ರಹಾವಿ ಸೇರಿದಂತೆ ಉನ್ನತ ಯೆಮೆನ್ ಅಧಿಕಾರಿಗಳನ್ನು ಹತ್ಯೆಯಾಗಿದ್ದರು.

ಗಾಝಾಗೆ ಬೆಂಬಲ ನೀಡದಂತೆ ಇಸ್ರೇಲ್ ನಮ್ಮ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ನಾವು ಗಾಝಾ ಮೇಲಿನ ಜನಾಂಗೀಯ ಯುದ್ಧ ನಿಲ್ಲುವವರೆಗೂ ಇಸ್ರೇಲ್ ವಿರುದ್ಧದ ಕಾರ್ಯಾಚರಣೆ ನಡೆಸುತ್ತೇವೆ ಎಂದು ಹೌತಿ ಮಿಲಿಟರಿ ವಕ್ತಾರ ಯಾಹ್ಯಾ ಸಾರಿ ಪ್ರತಿಜ್ಞೆ ಮಾಡಿದ್ದಾರೆ.

ಹೌತಿ ಗುಂಪು ಕೆಂಪು ಸಮುದ್ರದ ಮೂಲಕ ಹಾದುಹೋಗುವ ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳ ಮೇಲೆ ಸಮುದ್ರ ದಿಗ್ಬಂಧನವನ್ನು ವಿಧಿಸಿದೆ ಮತ್ತು ಪ್ಯಾಲೆಸ್ತೀನಿಯರ ಜೊತೆ ಒಗ್ಗಟ್ಟು ಪ್ರದರ್ಶಿಸಿ ಇಸ್ರೇಲ್ ವಿರುದ್ಧ ವಾಯು ದಾಳಿಗಳನ್ನು ನಡೆಸಿದೆ.

23 ತಿಂಗಳ ನಿರಂತರ ಇಸ್ರೇಲಿ ಬಾಂಬ್ ದಾಳಿಯಿಂದ ನಾಶವಾದ ಗಾಝಾದಲ್ಲಿ ಕದನ ವಿರಾಮಕ್ಕೆ ಒಪ್ಪಿಗೆಯಾದಾಗ ಇಸ್ರೇಲ್ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸುವುದಾಗಿ ಹೌತಿಗಳು ಹೇಳಿದ್ದಾರೆ. 2023ರ ಅಕ್ಟೋಬರ್‌ನಲ್ಲಿ ಇಸ್ರೇಲ್ ಗಾಝಾ ಮೇಲೆ ದಾಳಿ ಪ್ರಾರಂಭಿಸಿದಾಗಿನಿಂದ 64,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಕೊಲ್ಲಲ್ಪಟ್ಟಿದ್ದಾರೆ.

ನೇಪಾಳ: ಹಿಂಸಾಚಾರದ ನಂತರ ಸೇನೆ ಪ್ರವೇಶ; ದೇಶಾದ್ಯಂತ ನಿಷೇಧಾಜ್ಞೆ ಮತ್ತು ಕರ್ಫ್ಯೂ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...