Homeಅಂತರಾಷ್ಟ್ರೀಯಯೆಮೆನ್ ಮೇಲೆ ಇಸ್ರೇಲ್ ವಾಯುದಾಳಿ: 35 ಜನರು ಸಾವು

ಯೆಮೆನ್ ಮೇಲೆ ಇಸ್ರೇಲ್ ವಾಯುದಾಳಿ: 35 ಜನರು ಸಾವು

- Advertisement -
- Advertisement -

ಕತಾರ್ ರಾಜಧಾನಿ ದೋಹಾದಲ್ಲಿ ಹಮಾಸ್ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ಒಂದು ದಿನದ ನಂತರ, ಯೆಮೆನ್ ರಾಜಧಾನಿ ಸನಾ ಮತ್ತು ಅಲ್-ಜಾಫ್ ಗವರ್ನರೇಟ್‌ ವ್ಯಾಪ್ತಿಯಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಿಂದ ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಲ್-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸನಾ ಮತ್ತು ಅಲ್-ಜಾಫ್ ಮೇಲೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ 131 ಜನರು ಗಾಯಗೊಂಡಿದ್ದಾರೆ ಎಂದು ಯೆಮೆನ್ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಇದು ಪ್ರಾಥಮಿಕ ಅಂಕಿ ಅಂಶಗಳಾಗಿವೆ, ರಕ್ಷಣಾ ತಂಡಗಳು ಬಲಿಪಶುಗಳಿಗಾಗಿ ಹುಡುಕಾಟ ಮುಂದುವರಿಸುವುದರಿಂದ ಸಾವು-ನೋವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದೆ.

ರಾಜಧಾನಿ ಸನಾದ ಅಲ್-ತಹ್ರಿರ್ ಪ್ರದೇಶ ಮತ್ತು ಸುತ್ತಮುತ್ತಲಿನ ಮನೆಗಳು, ನಗರದ ನೈಋತ್ಯದಲ್ಲಿರುವ 60ನೇ ಬೀದಿಯಲ್ಲಿರುವ ವೈದ್ಯಕೀಯ ಸೌಲಭ್ಯ ಅಥವಾ ಆಸ್ಪತ್ರೆ ಮತ್ತು ಅಲ್-ಜಾಫ್ ಗವರ್ನರೇಟ್‌ನ ರಾಜಧಾನಿ ಅಲ್-ಹಝ್ಮ್‌ನಲ್ಲಿರುವ ಸರ್ಕಾರಿ ಕಚೇರಿಗಳು ಸೇರಿದಂತೆ ನಾಗರಿಕ ಮತ್ತು ವಸತಿ ಪ್ರದೇಶಗಳ ಮೇಲೆ ದಾಳಿಗಳು ನಡೆದಿವೆ ಎಂದು ಸಚಿವಾಲಯ ತಿಳಿಸಿದೆ.

ಬಾಂಬ್ ದಾಳಿಯಿಂದ ಉಂಟಾದ ಬೆಂಕಿಯನ್ನು ನಂದಿಸಲು ಮತ್ತು ಅವಶೇಷಗಳಡಿಯಿಂದ ಬದುಕುಳಿದವರನ್ನು ಹೊರತೆಗೆಯಲು ನಾಗರಿಕ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿವೆ ಎಂದು ಸಚಿವಾಲಯ ಹೇಳಿದೆ.

ಹೌತಿ ನಡೆಸುತ್ತಿರುವ ಅಲ್ ಮಸಿರಾ ಟಿವಿಯ ಪ್ರಕಾರ, ನೈಋತ್ಯ ಸನಾದಲ್ಲಿನ ವೈದ್ಯಕೀಯ ಸೌಲಭ್ಯ ಮತ್ತು ಅಲ್-ಹಝ್ಮ್‌ನಲ್ಲಿರುವ ಸ್ಥಳೀಯ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.

“ನೈತಿಕ ಮಾರ್ಗದರ್ಶನ ಪ್ರಧಾನ ಕಚೇರಿ’ಯ ಮೇಲಿನ ದಾಳಿಯ ಪರಿಣಾಮವಾಗಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ, ಮನೆಗಳು ಹಾನಿಗೊಳಗಾಗಿವೆ” ಎಂದು ಅಲ್ ಮಸಿರಾ ಟಿವಿ ಬುಧವಾರ ಟೆಲಿಗ್ರಾಮ್‌ನಲ್ಲಿ ಪೋಸ್ಟ್ ಮಾಡಿದೆ.

ಹಾನಿಯ ಒಟ್ಟು ಪ್ರಮಾಣ ಅಥವಾ ನಷ್ಟ ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಇಸ್ರೇಲಿ ಜೆಟ್‌ಗಳು ಸನಾದ ಅಲ್-ಸಿತ್ತೀನ್ ಸ್ಟ್ರೀಟ್‌ನಲ್ಲಿರುವ ವೈದ್ಯಕೀಯ ಕೇಂದ್ರವನ್ನು ಗುರಿಯಾಗಿಸಿಕೊಂಡಿತ್ತು ಎಂದು ಯೆಮೆನ್ ತೈಲ ಮತ್ತು ಅನಿಲ ನಿಗಮ ಹೇಳಿದೆ.

ಇಸ್ರೇಲಿ ದಾಳಿಗೆ ಪ್ರತಿಯಾಗಿ ನಮ್ಮ ವಾಯು ರಕ್ಷಣಾ ಪಡೆಗಳು ಕ್ಷಿಪಣಿಗಳ ಮೂಲಕ ಪ್ರತಿಕ್ರಿಯೆ ನೀಡಿದೆ. ಕೆಲ ಇಸ್ರೇಲಿ ವಿಮಾನಗಳು ದಾಳಿ ನಡೆಸುವ ಮೊದಲೇ ಅವುಗಳನ್ನು ಹಿಮ್ಮೆಟ್ಟಿಸಿದ್ದೇವೆ. ಈ ಮೂಲಕ ಇಸ್ರೇಲ್‌ನ ಉದ್ದೇಶಿತ ಆಕ್ರಮಣವನ್ನು ವಿಫಲಗೊಳಿಸಿದ್ದೇವೆ ಎಂದು ಹೌತಿ ಮಿಲಿಟರಿ ವಕ್ತಾರ ಯಾಹ್ಯಾ ಸಾರಿ ಹೇಳಿದ್ದಾರೆ.

ಇಸ್ರೇಲ್ ಸೇನೆಯು ದಾಳಿಯನ್ನು ದೃಢಪಡಿಸಿದ್ದು, ಸನಾ ಮತ್ತು ಅಲ್-ಜಾಫ್‌ನ ಪ್ರದೇಶಗಳ ಮೇಲೆ ದಾಳಿ ನಡೆಸಿರುವುದಾಗಿ ತಿಳಿಸಿದೆ.

ಕೆಲವು ದಿನಗಳ ಹಿಂದೆ ಇಸ್ರೇಲ್‌ನ ರಾಮನ್ ವಿಮಾನ ನಿಲ್ದಾಣದ ಮೇಲೆ ಹೌತಿ ಬಂಡುಕೋರರು ನಡೆಸಿದ ಡ್ರೋನ್ ದಾಳಿಗೆ ಪ್ರತಿಯಾಗಿ ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

“ನಾವು ದಾಳಿಯನ್ನು ಮುಂದುವರೆಸುತ್ತೇವೆ. ನಮ್ಮ ಮೇಲೆ ದಾಳಿ ನಡೆಸುವ ಯಾರೇ ಆಗಿರಲಿ, ಅವರ ಮೇಲೆ ದಾಳಿ ನಡೆಸುತ್ತೇವೆ” ಎಂದು ನೆತನ್ಯಾಹು ಬೆದರಿಕೆ ಹಾಕಿದ್ದಾರೆ.

ಪ್ರಮುಖ ವಿಮಾನ ನಿಲ್ದಾಣ ಸೇರಿದಂತೆ ಯೆಮೆನ್ ಮೇಲೆ ಪದೇ ಪದೇ ಇಸ್ರೇಲ್ ಬಾಂಬ್ ದಾಳಿ ನಡೆಸುತ್ತಿವೆ. ಯುದ್ಧಪೀಡಿತ ದೇಶದಲ್ಲಿ ನಾಗರಿಕರನ್ನು ಕೊಂದು ಮೂಲಸೌಕರ್ಯಗಳಿಗೆ ಹಾನಿ ಮಾಡಿದೆ. ಕಳೆದ ತಿಂಗಳು, ಇಸ್ರೇಲ್ ವಾಯುದಾಳಿಯಲ್ಲಿ ಹೌತಿ ಆಡಳಿತದ ಪ್ರಧಾನಿ ಅಹ್ಮದ್ ಅಲ್-ರಹಾವಿ ಸೇರಿದಂತೆ ಉನ್ನತ ಯೆಮೆನ್ ಅಧಿಕಾರಿಗಳನ್ನು ಹತ್ಯೆಯಾಗಿದ್ದರು.

ಗಾಝಾಗೆ ಬೆಂಬಲ ನೀಡದಂತೆ ಇಸ್ರೇಲ್ ನಮ್ಮ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ನಾವು ಗಾಝಾ ಮೇಲಿನ ಜನಾಂಗೀಯ ಯುದ್ಧ ನಿಲ್ಲುವವರೆಗೂ ಇಸ್ರೇಲ್ ವಿರುದ್ಧದ ಕಾರ್ಯಾಚರಣೆ ನಡೆಸುತ್ತೇವೆ ಎಂದು ಹೌತಿ ಮಿಲಿಟರಿ ವಕ್ತಾರ ಯಾಹ್ಯಾ ಸಾರಿ ಪ್ರತಿಜ್ಞೆ ಮಾಡಿದ್ದಾರೆ.

ಹೌತಿ ಗುಂಪು ಕೆಂಪು ಸಮುದ್ರದ ಮೂಲಕ ಹಾದುಹೋಗುವ ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳ ಮೇಲೆ ಸಮುದ್ರ ದಿಗ್ಬಂಧನವನ್ನು ವಿಧಿಸಿದೆ ಮತ್ತು ಪ್ಯಾಲೆಸ್ತೀನಿಯರ ಜೊತೆ ಒಗ್ಗಟ್ಟು ಪ್ರದರ್ಶಿಸಿ ಇಸ್ರೇಲ್ ವಿರುದ್ಧ ವಾಯು ದಾಳಿಗಳನ್ನು ನಡೆಸಿದೆ.

23 ತಿಂಗಳ ನಿರಂತರ ಇಸ್ರೇಲಿ ಬಾಂಬ್ ದಾಳಿಯಿಂದ ನಾಶವಾದ ಗಾಝಾದಲ್ಲಿ ಕದನ ವಿರಾಮಕ್ಕೆ ಒಪ್ಪಿಗೆಯಾದಾಗ ಇಸ್ರೇಲ್ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸುವುದಾಗಿ ಹೌತಿಗಳು ಹೇಳಿದ್ದಾರೆ. 2023ರ ಅಕ್ಟೋಬರ್‌ನಲ್ಲಿ ಇಸ್ರೇಲ್ ಗಾಝಾ ಮೇಲೆ ದಾಳಿ ಪ್ರಾರಂಭಿಸಿದಾಗಿನಿಂದ 64,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಕೊಲ್ಲಲ್ಪಟ್ಟಿದ್ದಾರೆ.

ನೇಪಾಳ: ಹಿಂಸಾಚಾರದ ನಂತರ ಸೇನೆ ಪ್ರವೇಶ; ದೇಶಾದ್ಯಂತ ನಿಷೇಧಾಜ್ಞೆ ಮತ್ತು ಕರ್ಫ್ಯೂ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...