Homeಅಂತರಾಷ್ಟ್ರೀಯಗಾಜಾದ ದೇರ್ ಅಲ್-ಬಾಲಾಹ್‌ನಲ್ಲಿ ಇಸ್ರೇಲ್‌ ವೈಮಾನಿಕ ದಾಳಿ; 4 ದಿನದ ಅವಳಿ ಮಕ್ಕಳು-ತಾಯಿ ಬಲಿ

ಗಾಜಾದ ದೇರ್ ಅಲ್-ಬಾಲಾಹ್‌ನಲ್ಲಿ ಇಸ್ರೇಲ್‌ ವೈಮಾನಿಕ ದಾಳಿ; 4 ದಿನದ ಅವಳಿ ಮಕ್ಕಳು-ತಾಯಿ ಬಲಿ

- Advertisement -
- Advertisement -

ನಾಲ್ಕು ದಿನಗಳ ಹಿಂದೆ ಜನಿಸಿದ ತನ್ನ ನವಜಾತ ಅವಳಿಗಳ ಜನನವನ್ನು ನೋಂದಾಯಿಸಲು ಅಬು ಅಲ್-ಕುಮ್ಸನ್ ಮಂಗಳವಾರ ಸೆಂಟ್ರಲ್ ಗಾಜಾದ ದೇರ್ ಅಲ್-ಬಾಲಾಹ್‌ನಲ್ಲಿರುವ ತನ್ನ ಮನೆಯಿಂದ ಹೊರಟಿದ್ದರು. ಅವರಿಗೆ ಅಸ್ಸರ್ ಎಂಬ ಗಂಡು ಮತ್ತು ಐಸೆಲ್ ಎಂಬ ಹೆಣ್ಣು ಮಗು ಜನಿಸಿದ್ದವು.

ಅವರು ಮನೆ ಬಿಟ್ಟ ಗಂಟೆಗಳ ನಂತರ, ತನ್ನ ನೆರೆಹೊರೆಯವರಿಂದ ಕರೆ ಸ್ವೀಕರಿಸಿದ್ದು, ಅವರ ಕುಟುಂಬವು ಆಶ್ರಯ ಪಡೆದ ಮನೆ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂಬ ವಿಷಯ ತಿಳಿದು ಆಘಾತಗೊಂಡಿದ್ದಾರೆ.

ಅವರ ಪತ್ನಿ ಜೌಮಾನ ಅರಾಫಾ, ಆಕೆಯ ತಾಯಿ ಮತ್ತು ನವಜಾತ ಅವಳಿ ಮಕ್ಕಳು ಇಸ್ರೇಲಿ ವೈಮಾನಿಕ ದಾಳಿಯಿಂದ ಸಾವನ್ನಪ್ಪಿದ್ದಾರೆ. “ಏನಾಯಿತು ಎಂದು ನನಗೆ ತಿಳಿದಿಲ್ಲ, ನನ್ನ ಮನೆಗೆ ಶೆಲ್ ದಾಳಿಯಾಗಿದೆ ಎಂದು ಮಾತ್ರ ನನಗೆ ಹೇಳಲಾಗಿದೆ” ಎಂದು ಅಲ್-ಕುಮ್ಸನ್ ಹೇಳಿದ್ದಾರೆ.

ಅರಾಫಾ ಎಂಬ ವೈದ್ಯ ತನ್ನ ನವಜಾತ ಶಿಶುಗಳ ಆಗಮನವನ್ನು ಆಗಸ್ಟ್ 10 ರಂದು ಸಾಮಾಜಿಕ ಮಾಧ್ಯಮದ ಮೂಲಕ ಘೋಷಿಸಿ, ತನ್ನ ಪೋಸ್ಟ್‌ನಲ್ಲಿ “ಪವಾಡ” ಎಂದು ಕರೆದಿದ್ದಾಳೆ. ಮಾಧ್ಯಮಗಳ ಪ್ರಕಾರ, ಯುದ್ಧ ಪ್ರಾರಂಭವಾಗುವ ತಿಂಗಳುಗಳ ಮೊದಲು ದಂಪತಿಗಳು ಕಳೆದ ಬೇಸಿಗೆಯಲ್ಲಿ ವಿವಾಹವಾಗಿದ್ದರು.

ಯುದ್ಧದ ಆರಂಭಿಕ ವಾರಗಳಲ್ಲಿ ಗಾಜಾ ನಗರವನ್ನು ಸ್ಥಳಾಂತರಿಸಲು ಇಸ್ರೇಲ್‌ನ ಆದೇಶಗಳನ್ನು ಅನುಸರಿಸಿದ ಸಾವಿರಾರು ಪ್ಯಾಲೆಸ್ಟೀನಿಯಾದವರಲ್ಲಿ ಅಲ್-ಕುಮ್ಸಾನ್ ಕೂಡ ಸೇರಿದ್ದಾನೆ. ಗಾಜಾ ಪಟ್ಟಿಯಾದ್ಯಂತ ಇಸ್ರೇಲ್‌ನ ಬಾಂಬ್ ದಾಳಿಯಿಂದ ತನ್ನ ಗರ್ಭಿಣಿ ಹೆಂಡತಿಯನ್ನು ರಕ್ಷಿಸುವ ಹತಾಶ ಪ್ರಯತ್ನದಲ್ಲಿ ಅವನು ತನ್ನ ಕುಟುಂಬವನ್ನು ಉತ್ತರ ಗಾಜಾದಿಂದ ದೇರ್ ಅಲ್-ಬಾಲಾಹ್‌ನಲ್ಲಿರುವ ಅಪಾರ್ಟ್ಮೆಂಟ್‌ಗೆ ಸ್ಥಳಾಂತರಿಸಿದ್ದನು.

ಮಂಗಳವಾರ, ಅಲ್-ಕುಮ್ಸನ್ ತನ್ನ ಮಕ್ಕಳ ಜನನ ಪ್ರಮಾಣಪತ್ರಗಳನ್ನು ಸ್ವೀಕರಿಸಲು ಸ್ಥಳೀಯ ಸರ್ಕಾರಿ ಕಚೇರಿಗೆ ಹೋದರು. ನಂತರ, ಅವರು ತಮ್ಮ ಕುಟುಂಬದ ದುರಂತ ಸಾವಿನ ತಿಳಿದುಕೊಳ್ಳಲು ಮಾತ್ರ ಸಾಧ್ಯವಾಯಿತು.

ನಂತರ ಅವರು ತಮ್ಮ ಕುಟುಂಬಸ್ಥರ ದೇಹ ಸ್ವೀಕರಿಸಲು ಸೆಂಟ್ರಲ್ ಗಾಜಾದ ಅಲ್ ಅಕ್ಸಾ ಹುತಾತ್ಮರ ಆಸ್ಪತ್ರೆಗೆ ಬಂದರು, ಅಲ್ಲಿ ಅವರು ತಮ್ಮ ಕುಟುಂಬವನ್ನು ಕೊನೆಯ ಬಾರಿಗೆ ನೋಡುವ ಹಂಬಲದಿಂದ ಅಳುತ್ತಿದ್ದರು.

“ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಅವರನ್ನು ನೋಡಲು ಅವಕಾಶ ಮಾಡಿಕೊಡಿ… ಅವಳು ಈಗಷ್ಟೇ ಜನ್ಮ ನೀಡಿದಳು. ದಯವಿಟ್ಟು ನನಗೆ ಅವಳನ್ನು ನೋಡಲು ಅವಕಾಶ ಮಾಡಿಕೊಡಿ” ಎಂದು ಅವರು ಬೇಡಿಕೊಳ್ಳುತ್ತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಲ್-ಕುಮ್ಸನ್ ಮತ್ತು ಅವರ ಕುಟುಂಬವು ಅಂತಿಮ ಪ್ರಾರ್ಥನೆ ಸಲ್ಲಿಸಿದ ನಂತರ ನವಜಾತ ಶಿಶುಗಳನ್ನು ಅವರ ತಾಯಿಯ ಜೊತೆಗೆ ಸಮಾಧಿ ಮಾಡಲಾಯಿತು.

ಅಲ್ ಜಜೀರಾ ಜೊತೆ ಮಾತನಾಡುತ್ತಾ, ದಿಗ್ಭ್ರಮೆಗೊಂಡ ಅಲ್-ಕುಮ್ಸನ್, ತನ್ನ ಮಕ್ಕಳ ಜನ್ಮವನ್ನು ಆಚರಿಸಲು ಎಂದಿಗೂ ಅವಕಾಶವನ್ನು ಹೊಂದಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.

“ನಾನು ನನ್ನ ಮಕ್ಕಳ ಜನನ ಪ್ರಮಾಣಪತ್ರವನ್ನು ಪಡೆಯಲು ಹೋಗಿದ್ದೆ, ನನ್ನ ಹೆಂಡತಿ ದಿನಗಳ ಹಿಂದೆ ಜನ್ಮ ನೀಡಿದ್ದಳು, ಅವರ ಜನ್ಮವನ್ನು ಆಚರಿಸಲು ನನಗೆ ಅವಕಾಶವಿರಲಿಲ್ಲ, ಅವಳಿಗೆ ಸಿ-ಸೆಕ್ಷನ್ ಹೆರಿಗೆಯಾಗಿತ್ತು. ದಾಳಿ ಸಂದರ್ಭದಲ್ಲಿ ಆಕೆ ತುಂಬಾ ಸುಸ್ತಾಗಿದ್ದಳು, ಅವಳು ಮನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ” ಎಂದು ಅವರು ಅಲ್ ಜಜೀರಾಗೆ ತಿಳಿಸಿದರು.

ಇಸ್ರೇಲ್‌ನ ನಿರಂತರ ಬಾಂಬ್ ದಾಳಿಯ ಕಾರ್ಯಾಚರಣೆಯಿಂದಾಗಿ ಸಾವಿರಾರು ಪೋಷಕರು ತಮ್ಮ ಮಕ್ಕಳನ್ನು ಕಳೆದುಕೊಂಡಿದ್ದಾರೆ ಮತ್ತು ಅನೇಕರು ತಮ್ಮ ಹೆಂಡತಿಯರನ್ನು ಕಳೆದುಕೊಂಡಿದ್ದಾರೆ, ಇದೀಗ ಯುದ್ಧದ 11 ನೇ ತಿಂಗಳಿನಲ್ಲಿದೆ.

ಮಂಗಳವಾರದ ಗಾಜಾ ಆರೋಗ್ಯ ಸಚಿವಾಲಯದ ಇತ್ತೀಚಿನ ನವೀಕರಿಸಿದ ವರದಿಯ ಪ್ರಕಾರ, ಯುದ್ಧದಲ್ಲಿ ಕನಿಷ್ಠ 39,929 ಜನರು ಸಾವನ್ನಪ್ಪಿದ್ದಾರೆ, ಸತ್ತವರಲ್ಲಿ ಗಮನಾರ್ಹ ಭಾಗವು ಮಹಿಳೆಯರು ಮತ್ತು ಮಕ್ಕಳೆ ಇದ್ದಾರೆ.

ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 7, 2023 ರಂದು ಯುದ್ಧ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ 115 ಶಿಶುಗಳು ಕೊಲ್ಲಲ್ಪಟ್ಟಿವೆ. ಇಸ್ರೇಲ್‌ನ ಕ್ರೂರ ಆಕ್ರಮಣವು ಸಾವಿರಾರು ಅನಾಥರನ್ನು ಬಿಟ್ಟಿದೆ. ಗಾಜಾದಲ್ಲಿ ಸುಮಾರು 17,000 ಮಕ್ಕಳು ತಮ್ಮ ಪೋಷಕರ ಜೊತೆಯಲ್ಲಿಲ್ಲ ಎಂದು ಯುಎನ್ ಫೆಬ್ರವರಿಯಲ್ಲಿ ಅಂದಾಜಿಸಿದೆ.

ಇದನ್ನೂ ಓದಿ; ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿಯಿಂದ 100ಕ್ಕೂ ಹೆಚ್ಚು ‘ಇಸ್ಲಾಮೋಫೋಬಿಕ್’ ಹೇಳಿಕೆ: ಹ್ಯೂಮನ್ ರೈಟ್ಸ್ ವಾಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...