Homeಅಂತರಾಷ್ಟ್ರೀಯಗಾಜಾದ ದೇರ್ ಅಲ್-ಬಾಲಾಹ್‌ನಲ್ಲಿ ಇಸ್ರೇಲ್‌ ವೈಮಾನಿಕ ದಾಳಿ; 4 ದಿನದ ಅವಳಿ ಮಕ್ಕಳು-ತಾಯಿ ಬಲಿ

ಗಾಜಾದ ದೇರ್ ಅಲ್-ಬಾಲಾಹ್‌ನಲ್ಲಿ ಇಸ್ರೇಲ್‌ ವೈಮಾನಿಕ ದಾಳಿ; 4 ದಿನದ ಅವಳಿ ಮಕ್ಕಳು-ತಾಯಿ ಬಲಿ

- Advertisement -
- Advertisement -

ನಾಲ್ಕು ದಿನಗಳ ಹಿಂದೆ ಜನಿಸಿದ ತನ್ನ ನವಜಾತ ಅವಳಿಗಳ ಜನನವನ್ನು ನೋಂದಾಯಿಸಲು ಅಬು ಅಲ್-ಕುಮ್ಸನ್ ಮಂಗಳವಾರ ಸೆಂಟ್ರಲ್ ಗಾಜಾದ ದೇರ್ ಅಲ್-ಬಾಲಾಹ್‌ನಲ್ಲಿರುವ ತನ್ನ ಮನೆಯಿಂದ ಹೊರಟಿದ್ದರು. ಅವರಿಗೆ ಅಸ್ಸರ್ ಎಂಬ ಗಂಡು ಮತ್ತು ಐಸೆಲ್ ಎಂಬ ಹೆಣ್ಣು ಮಗು ಜನಿಸಿದ್ದವು.

ಅವರು ಮನೆ ಬಿಟ್ಟ ಗಂಟೆಗಳ ನಂತರ, ತನ್ನ ನೆರೆಹೊರೆಯವರಿಂದ ಕರೆ ಸ್ವೀಕರಿಸಿದ್ದು, ಅವರ ಕುಟುಂಬವು ಆಶ್ರಯ ಪಡೆದ ಮನೆ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂಬ ವಿಷಯ ತಿಳಿದು ಆಘಾತಗೊಂಡಿದ್ದಾರೆ.

ಅವರ ಪತ್ನಿ ಜೌಮಾನ ಅರಾಫಾ, ಆಕೆಯ ತಾಯಿ ಮತ್ತು ನವಜಾತ ಅವಳಿ ಮಕ್ಕಳು ಇಸ್ರೇಲಿ ವೈಮಾನಿಕ ದಾಳಿಯಿಂದ ಸಾವನ್ನಪ್ಪಿದ್ದಾರೆ. “ಏನಾಯಿತು ಎಂದು ನನಗೆ ತಿಳಿದಿಲ್ಲ, ನನ್ನ ಮನೆಗೆ ಶೆಲ್ ದಾಳಿಯಾಗಿದೆ ಎಂದು ಮಾತ್ರ ನನಗೆ ಹೇಳಲಾಗಿದೆ” ಎಂದು ಅಲ್-ಕುಮ್ಸನ್ ಹೇಳಿದ್ದಾರೆ.

ಅರಾಫಾ ಎಂಬ ವೈದ್ಯ ತನ್ನ ನವಜಾತ ಶಿಶುಗಳ ಆಗಮನವನ್ನು ಆಗಸ್ಟ್ 10 ರಂದು ಸಾಮಾಜಿಕ ಮಾಧ್ಯಮದ ಮೂಲಕ ಘೋಷಿಸಿ, ತನ್ನ ಪೋಸ್ಟ್‌ನಲ್ಲಿ “ಪವಾಡ” ಎಂದು ಕರೆದಿದ್ದಾಳೆ. ಮಾಧ್ಯಮಗಳ ಪ್ರಕಾರ, ಯುದ್ಧ ಪ್ರಾರಂಭವಾಗುವ ತಿಂಗಳುಗಳ ಮೊದಲು ದಂಪತಿಗಳು ಕಳೆದ ಬೇಸಿಗೆಯಲ್ಲಿ ವಿವಾಹವಾಗಿದ್ದರು.

ಯುದ್ಧದ ಆರಂಭಿಕ ವಾರಗಳಲ್ಲಿ ಗಾಜಾ ನಗರವನ್ನು ಸ್ಥಳಾಂತರಿಸಲು ಇಸ್ರೇಲ್‌ನ ಆದೇಶಗಳನ್ನು ಅನುಸರಿಸಿದ ಸಾವಿರಾರು ಪ್ಯಾಲೆಸ್ಟೀನಿಯಾದವರಲ್ಲಿ ಅಲ್-ಕುಮ್ಸಾನ್ ಕೂಡ ಸೇರಿದ್ದಾನೆ. ಗಾಜಾ ಪಟ್ಟಿಯಾದ್ಯಂತ ಇಸ್ರೇಲ್‌ನ ಬಾಂಬ್ ದಾಳಿಯಿಂದ ತನ್ನ ಗರ್ಭಿಣಿ ಹೆಂಡತಿಯನ್ನು ರಕ್ಷಿಸುವ ಹತಾಶ ಪ್ರಯತ್ನದಲ್ಲಿ ಅವನು ತನ್ನ ಕುಟುಂಬವನ್ನು ಉತ್ತರ ಗಾಜಾದಿಂದ ದೇರ್ ಅಲ್-ಬಾಲಾಹ್‌ನಲ್ಲಿರುವ ಅಪಾರ್ಟ್ಮೆಂಟ್‌ಗೆ ಸ್ಥಳಾಂತರಿಸಿದ್ದನು.

ಮಂಗಳವಾರ, ಅಲ್-ಕುಮ್ಸನ್ ತನ್ನ ಮಕ್ಕಳ ಜನನ ಪ್ರಮಾಣಪತ್ರಗಳನ್ನು ಸ್ವೀಕರಿಸಲು ಸ್ಥಳೀಯ ಸರ್ಕಾರಿ ಕಚೇರಿಗೆ ಹೋದರು. ನಂತರ, ಅವರು ತಮ್ಮ ಕುಟುಂಬದ ದುರಂತ ಸಾವಿನ ತಿಳಿದುಕೊಳ್ಳಲು ಮಾತ್ರ ಸಾಧ್ಯವಾಯಿತು.

ನಂತರ ಅವರು ತಮ್ಮ ಕುಟುಂಬಸ್ಥರ ದೇಹ ಸ್ವೀಕರಿಸಲು ಸೆಂಟ್ರಲ್ ಗಾಜಾದ ಅಲ್ ಅಕ್ಸಾ ಹುತಾತ್ಮರ ಆಸ್ಪತ್ರೆಗೆ ಬಂದರು, ಅಲ್ಲಿ ಅವರು ತಮ್ಮ ಕುಟುಂಬವನ್ನು ಕೊನೆಯ ಬಾರಿಗೆ ನೋಡುವ ಹಂಬಲದಿಂದ ಅಳುತ್ತಿದ್ದರು.

“ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಅವರನ್ನು ನೋಡಲು ಅವಕಾಶ ಮಾಡಿಕೊಡಿ… ಅವಳು ಈಗಷ್ಟೇ ಜನ್ಮ ನೀಡಿದಳು. ದಯವಿಟ್ಟು ನನಗೆ ಅವಳನ್ನು ನೋಡಲು ಅವಕಾಶ ಮಾಡಿಕೊಡಿ” ಎಂದು ಅವರು ಬೇಡಿಕೊಳ್ಳುತ್ತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಲ್-ಕುಮ್ಸನ್ ಮತ್ತು ಅವರ ಕುಟುಂಬವು ಅಂತಿಮ ಪ್ರಾರ್ಥನೆ ಸಲ್ಲಿಸಿದ ನಂತರ ನವಜಾತ ಶಿಶುಗಳನ್ನು ಅವರ ತಾಯಿಯ ಜೊತೆಗೆ ಸಮಾಧಿ ಮಾಡಲಾಯಿತು.

ಅಲ್ ಜಜೀರಾ ಜೊತೆ ಮಾತನಾಡುತ್ತಾ, ದಿಗ್ಭ್ರಮೆಗೊಂಡ ಅಲ್-ಕುಮ್ಸನ್, ತನ್ನ ಮಕ್ಕಳ ಜನ್ಮವನ್ನು ಆಚರಿಸಲು ಎಂದಿಗೂ ಅವಕಾಶವನ್ನು ಹೊಂದಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.

“ನಾನು ನನ್ನ ಮಕ್ಕಳ ಜನನ ಪ್ರಮಾಣಪತ್ರವನ್ನು ಪಡೆಯಲು ಹೋಗಿದ್ದೆ, ನನ್ನ ಹೆಂಡತಿ ದಿನಗಳ ಹಿಂದೆ ಜನ್ಮ ನೀಡಿದ್ದಳು, ಅವರ ಜನ್ಮವನ್ನು ಆಚರಿಸಲು ನನಗೆ ಅವಕಾಶವಿರಲಿಲ್ಲ, ಅವಳಿಗೆ ಸಿ-ಸೆಕ್ಷನ್ ಹೆರಿಗೆಯಾಗಿತ್ತು. ದಾಳಿ ಸಂದರ್ಭದಲ್ಲಿ ಆಕೆ ತುಂಬಾ ಸುಸ್ತಾಗಿದ್ದಳು, ಅವಳು ಮನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ” ಎಂದು ಅವರು ಅಲ್ ಜಜೀರಾಗೆ ತಿಳಿಸಿದರು.

ಇಸ್ರೇಲ್‌ನ ನಿರಂತರ ಬಾಂಬ್ ದಾಳಿಯ ಕಾರ್ಯಾಚರಣೆಯಿಂದಾಗಿ ಸಾವಿರಾರು ಪೋಷಕರು ತಮ್ಮ ಮಕ್ಕಳನ್ನು ಕಳೆದುಕೊಂಡಿದ್ದಾರೆ ಮತ್ತು ಅನೇಕರು ತಮ್ಮ ಹೆಂಡತಿಯರನ್ನು ಕಳೆದುಕೊಂಡಿದ್ದಾರೆ, ಇದೀಗ ಯುದ್ಧದ 11 ನೇ ತಿಂಗಳಿನಲ್ಲಿದೆ.

ಮಂಗಳವಾರದ ಗಾಜಾ ಆರೋಗ್ಯ ಸಚಿವಾಲಯದ ಇತ್ತೀಚಿನ ನವೀಕರಿಸಿದ ವರದಿಯ ಪ್ರಕಾರ, ಯುದ್ಧದಲ್ಲಿ ಕನಿಷ್ಠ 39,929 ಜನರು ಸಾವನ್ನಪ್ಪಿದ್ದಾರೆ, ಸತ್ತವರಲ್ಲಿ ಗಮನಾರ್ಹ ಭಾಗವು ಮಹಿಳೆಯರು ಮತ್ತು ಮಕ್ಕಳೆ ಇದ್ದಾರೆ.

ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 7, 2023 ರಂದು ಯುದ್ಧ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ 115 ಶಿಶುಗಳು ಕೊಲ್ಲಲ್ಪಟ್ಟಿವೆ. ಇಸ್ರೇಲ್‌ನ ಕ್ರೂರ ಆಕ್ರಮಣವು ಸಾವಿರಾರು ಅನಾಥರನ್ನು ಬಿಟ್ಟಿದೆ. ಗಾಜಾದಲ್ಲಿ ಸುಮಾರು 17,000 ಮಕ್ಕಳು ತಮ್ಮ ಪೋಷಕರ ಜೊತೆಯಲ್ಲಿಲ್ಲ ಎಂದು ಯುಎನ್ ಫೆಬ್ರವರಿಯಲ್ಲಿ ಅಂದಾಜಿಸಿದೆ.

ಇದನ್ನೂ ಓದಿ; ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿಯಿಂದ 100ಕ್ಕೂ ಹೆಚ್ಚು ‘ಇಸ್ಲಾಮೋಫೋಬಿಕ್’ ಹೇಳಿಕೆ: ಹ್ಯೂಮನ್ ರೈಟ್ಸ್ ವಾಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ನಿಬಂಧನಗೆಳನ್ನು ಬದಲಿಸುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್),2025 (ವಿಬಿ-ಜಿ ರಾಮ್‌ ಜಿ) ಮಸೂದೆಗೆ...

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ. ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ...

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...

ತೀವ್ರ ವಿರೋಧಗಳ ನಡುವೆ ಗಣರಾಜ್ಯೋತ್ಸವ ಆಚರಣೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರ್ಧರಿಸಿದ ಕೇಂದ್ರ ಸರ್ಕಾರ 

ಗಣರಾಜ್ಯೋತ್ಸವದ ಸಂದರ್ಭದಲ್ಲಿ 'ವಂದೇ ಮಾತರಂ' ಗೀತೆಯನ್ನು ಪ್ರಧಾನವಾಗಿ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಯುರೋಪಿಯನ್ ಒಕ್ಕೂಟದ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಂದಿನ ತಿಂಗಳು ಭಾರತಕ್ಕೆ ಆಗಮಿಸುವ...

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ. ಈ ಬೆನ್ನಲ್ಲೇ...

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16...

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...